Homeಮುಖಪುಟಮಣಿಪುರದಲ್ಲಿ ಮತ್ತೊಂದು ಕ್ರೌರ್ಯ: ಸ್ವಾತಂತ್ರ್ಯ ಹೋರಾಟಗಾರನ ಪತ್ನಿಯ ಸಜೀವ ದಹನ

ಮಣಿಪುರದಲ್ಲಿ ಮತ್ತೊಂದು ಕ್ರೌರ್ಯ: ಸ್ವಾತಂತ್ರ್ಯ ಹೋರಾಟಗಾರನ ಪತ್ನಿಯ ಸಜೀವ ದಹನ

- Advertisement -
- Advertisement -

ಇಬ್ಬರು ಬುಡಕಟ್ಟು ಮಹಿಳೆಯರನ್ನು ಬೆತ್ತಲೆ ಮೆರವಣಿಗೆ ಮಾಡಿದ ವೀಡಿಯೊ ಸಾಮಾಜಿಕ ಜಾಲ ತಾಣದಲ್ಲಿ ವೈರಲ್ ಆದ ಒಂದು ದಿನಗಳ ಬಳಕ ಜನಾಂಗೀಯ ಹಿಂಸಾಚಾರ ಪೀಡಿತ ಮಣಿಪುರದಲ್ಲಿ ಊಹಿಸಲು ಸಾಧ್ಯವಾಗದ ಅಮಾನವೀಯ ಘಟನೆಗಳು ಬೆಳಕಿಗೆ ಬರುತ್ತಿವೆ.

ಮಣಿಪುರ ಹಿಂಸಾಚಾರದ ಸಂದರ್ಭದಲ್ಲಿ ಗುಂಪೊಂದು ಸ್ವಾತಂತ್ರ್ಯ ಹೋರಾಟಗಾರರೊಬ್ಬರ ಪತ್ನಿಯನ್ನು ಮನೆಯೊಳಗೆ ಕೂಡಿ ಹಾಕಿ ಬೆಂಕಿ ಹಚ್ಚಿರುವುದು ಇದೀಗ ಬಹಿರಂಗವಾಗಿದೆ. ಈ ಬಗ್ಗೆ ಸರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕ್ಲಿಂಗ್ ಜಿಲ್ಲೆಯ ಸೆರೋವ್‌ ಗ್ರಾಮದಲ್ಲಿ ಸಂಸ್ತ್ರಧಾರಿಗಳ ಗುಂಪೊಂದು ಸ್ವಾತಂತ್ರ್ಯ ಹೋರಾಟಗಾರರೋರ್ವರ 80 ವರ್ಷದ ಪತ್ನಿಯನ್ನು ಮನೆಯ ಒಳಗೆ ಕೂಡಿ ಹಾಕಿ ಬೆಂಕಿ ಹಚ್ಚಿ ಜೀವಂತವಾಗಿ ದಹಿಸಿದೆ ಎಂದು ಸೆರೋವ್‌ ಪೊಲೀಸ್‌ ಠಾಣೆಯಲ್ಲಿ ದಾಖಲಿಸಲಾದ ಎಫ್‌ಐಆರ್ ನಲ್ಲಿ ಹೇಳಲಾಗಿದೆ. ಮೇ 28ರಂದು ಸೆರೋವ್‌ನಲ್ಲಿ ಸಾಮೂಹಿಕ ಹಿಂಸಾಚಾರ ಹಾಗೂ ಗುಂಡಿನ ಕಾಳಗ ನಡೆದ ಸಮಯದಲ್ಲಿ ಈ ಘಟನೆ ನಡೆದಿದೆ.

ಇಂಪಾಲ್‌ನಿಂದ ಸುಮಾರು 45 ಕಿಮೀ ದೂರದಲ್ಲಿರುವ ಸರ ಗ್ರಾಮದಲ್ಲಿ ಮೇ 28ರಂದು ಈ ಘಟನೆ ನಡೆದಿದೆ. 80 ವರ್ಷದ ಇಚಿತೊಂಬಿ ಮನೆಯೊಳಗೆ ಇದ್ದಾಗ ದಾಳಿಕೋರರು ಹೊರಗಿನಿಂದ ಬೀಗ ಹಾಕಿದ್ದರು. ಅನಂತರ ಮನೆಗೆ ಬೆಂಕಿ ಹಚ್ಚಲಾಗಿದೆ. ಕುಟುಂಬದವರು ರಕ್ಷಿಸಲು ಬರುವಷ್ಟರಲ್ಲಿ ಬೆಂಕಿಯು ಸಂಪೂರ್ಣ ಕಟ್ಟಡವನ್ನು ಆವರಿಸಿದ. ನಂತರ ಇಬೆಟೊಂಬಿಯು ಸಜೀವವಾಗಿ ಸುಟ್ಟು ಕರಕಲಾಗಿದ್ದರು ಎಂದು ಅವರು ಕುಟುಂಬದವರು ಹೇಳಿದ್ದಾರೆ.

ಈ ಮಹಿಳೆಯ ಪತಿ ಎಸ್ ಚುರಚಂದ್ ಸಿಂಗ್ ಸ್ವಾತಂತ್ರ್ಯ ಹೋರಾಟಗಾರರಾಗಿದ್ದರು, ಅವರನ್ನು ಮಾಜಿ ರಾಷ್ಟ್ರಪತಿ ಎಪಿಜೆ ಅಬ್ದುಲ್ ಕಲಾಂ ಗೌರವಿಸಿದ್ದರು ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಗ್ರಾಮದ ಮೇಲೆ ದಾಳಿ ನಡೆಸಿದ ಸಶಸ್ತ್ರಧಾರಿಗಳ ಗುಂಪು ಸ್ವಾತಂತ್ರ್ಯ ಹೋರಾಟಗಾರರ ಪತ್ನಿಯಾಗಿಯರುವ 80 ವರ್ಷದ ಇತೊಂಬಿ ಮನೆಯಲ್ಲಿರುವಾಗ ಹೊರಗಿ ನಿಂದ ಚಿಲಕ ಹಾಕಿ ಬೆಂಕಿ ಹಚ್ಚಿದ್ದರು. ಅವರನ್ನು ರಕ್ಷಿಸಲು ಕುಟುಂಬದವರು ಬಂದ ಸಂದರ್ಭದಲ್ಲಿ ಮನೆ ಸಂಪೂರ್ಣ ಸುಟ್ಟು ಹೋಗಿತ್ತು ಎಂದು ಇಬೆತೊಂಬಿ ಅವರ ಮೊಮ್ಮಗ ಪ್ರೇಮಕಾಂತ್ ಹೇಳಿದ್ದಾರೆ.

”ನಾನು ಅಜ್ಜಿಯನ್ನು ರಕ್ಷಿಸಲು ಪ್ರಯತ್ನಿಸಿದ ಸಂದರ್ಭ ಗುಂಡಿನ ದಾಳಿಯಿಂದ ಸ್ವಲ್ಪದರಲ್ಲೇ ತಪ್ಪಿಸಿಕೊಂಡೆ” ಎಂದು ಪ್ರೇಮಕಾಂತ್‌ ತಿಳಿಸಿದ್ದಾರೆ.

ದೇಶಾದ್ಯಂತ ಅಲ್ಲೋಲ ಕಲ್ಲೋಲ ಉಂಟು ಮಾಡಿರುವ ಮಣಿಪುರ ಮಹಿಳೆಯರ ಬೆತ್ತಲೆ ಮೆರವಣಿಗೆ , ಅತ್ಯಾಚಾರ ರೀತಿಯ ನೂರಾರು ಪ್ರಕರಣಗಳು ನಡೆದಿವೆ, ಹಾಗಾಗಿ ಇಂಟರ್ನೆಟ್ ಬಂದ್ ಮಾಡಿದ್ದೇವೆ ಎಂದು ಮಣಿಪುರ ಸಿಎಂ ಬಿರೇನ್ ಸಿಂಗ್ ಹೇಳಿದ್ದರು. ಇದೀಗ ದಿನಕ್ಕೊಂಡು ಇಂತಹ ಕ್ರೌರ್ಯಗಳು ಬೆಳಕಿಗೆ ಬರುತ್ತಿವೆ.

ಇದನ್ನೂ ಓದಿ: ಮಣಿಪುರ ಕ್ರೌರ್ಯ: ಬೆತ್ತಲೆ ಮೆರವಣಿಗೆ ದಿನವೇ ಮತ್ತಿಬ್ಬರು ಮಹಿಳೆಯರ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....