Homeಕರ್ನಾಟಕ'ನ್ಯಾಯಯುತ ಬೇಡಿಕೆ ಮುಂದಕ್ಕೆ ಹಾಕುವ ಮತ್ತೊಂದು ಪ್ರಯತ್ನ..'; ನಾಗಮೋಹನ್‌ದಾಸ್‌ ಸಮಿತಿ ಮಧ್ಯಂತರ ವರದಿಗೆ ಎನ್.ಮೂರ್ತಿ ವಿರೋಧ

‘ನ್ಯಾಯಯುತ ಬೇಡಿಕೆ ಮುಂದಕ್ಕೆ ಹಾಕುವ ಮತ್ತೊಂದು ಪ್ರಯತ್ನ..’; ನಾಗಮೋಹನ್‌ದಾಸ್‌ ಸಮಿತಿ ಮಧ್ಯಂತರ ವರದಿಗೆ ಎನ್.ಮೂರ್ತಿ ವಿರೋಧ

- Advertisement -
- Advertisement -

ಜಸ್ಟೀಸ್ ನಾಗಮೋಹನ್ ದಾಸ್ ಏಕಸದಸ್ಯ ಸಮಿತಿ ಒಳ ಮೀಸಲಾತಿ ಕುರಿತು ಗುರುವಾರ ಸಲ್ಲಿಸಿರುವ ಮಧ್ಯಂತರ ವರದಿ ಸಹ ನಮ್ಮ ನ್ಯಾಯಯುತ ಬೇಡಿಕೆಯನ್ನು ಮುಂದಕ್ಕೆ ಹಾಕುವ ಮತ್ತೊಂದು ಪ್ರಯತ್ನವಾಗಿದೆ ಎಂದು ಹಿರಿಯ ದಲಿತ ಮುಖಂಡರಾದ ಎನ್.ಮೂರ್ತಿ ತಿಳಿಸಿದ್ದಾರೆ.

ತುಮಕೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಸುಪ್ರೀಂಕೋರ್ಟಿನ ಏಳು ಮಂದಿ ನ್ಯಾಯಮೂರ್ತಿಗಳ ತೀರ್ಪಿನಂತೆ ಒಳಮೀಸಲಾತಿ ಜಾರಿಗಾಗಿ ಕರ್ನಾಟಕ ಸರಕಾರ ರಚಿಸಿರುವ ನ್ಯಾ. ನಾಗಮೋಹನ್‌ದಾಸ್ ಏಕಸದಸ್ಯ ಆಯೋಗ ನೀಡಿರುವ ಮಧ್ಯಂತರ ವರದಿ ಮಾದಿಗ ವಿರೋಧಿಯಾಗಿದೆ. ಮಧ್ಯಂತರ ವರದಿಯನ್ನು ಸರ್ಕಾರವೇ ಹೇಳಿ ಬರೆಸಿದೆ. ಸರ್ಕಾರದ ಮಾದಿಗ ವಿರೊಧಿ ನಡೆ ಖಂಡಿಸಿ ಹೋರಾಟ ರೂಪಿಸಲು 2025ರ ಏಪ್ರಿಲ್ 9 ರಂದು ಸಮುದಾಯದ ಮುಖಂಡರ ಸಭೆ ನಡೆಸಲಾಗುವುದು” ಎಂದು ಹೇಳಿದರು.

“ಪರಿಶಿಷ್ಟ ಜಾತಿಯಲ್ಲಿ ಅತಿ ಹಿಂದುಳಿದಿರುವ ಮಾದಿಗ ಸಮುದಾಯದ ಮೂರು ದಶಕಗಳ ಹೋರಾಟಕ್ಕೆ ನ್ಯಾಯ ದೊರಯಬಹುದು ಎಂದು ನಾವೆಲ್ಲಾ ಚಾತಕ ಪಕ್ಷಿಗಳಂತೆ ಕಾಯುತ್ತಲೇ ಇದ್ದೇವೆ. ಕಾಂಗ್ರೆಸ್ ಸರ್ಕಾರ ಮಾತ್ರ ಕುಂಟು ನೆಪ ಮುಂದೆ ಮಾಡಿ ಮುಂದೂಡುತ್ತಲೇ ಬಂದಿದೆ. ಗುರುವಾರ ಸಲ್ಲಿಕೆಯಾಗಿರುವ ಮಧ್ಯಂತರ ವರದಿ ಸಹ ನಮ್ಮ ನ್ಯಾಯಯುತ ಬೇಡಿಕೆಯನ್ನು ಮುಂದಕ್ಕೆ ಹಾಕುವ ಮತ್ತೊಂದು ಪ್ರಯತ್ನವಾಗಿದೆ” ಎಂದು ಆರೋಪಿಸಿದರು.

“ಪರಿಶಿಷ್ಟ ಜಾತಿಯಲ್ಲಿನ 101 ಸಮುದಾಯಗಳಲ್ಲಿ ಅತಿ ಹಿಂದುಳಿದಿರುವ ಮಾದಿಗ, ಮೋಚಿ, ದಕ್ಕಲಿಗ, ಸಮಗಾರ, ಜಾಡಮಾಲಿಗಳಿಗೆ ಸಾಕಷ್ಟು ವಂಚನೆಯಾಗಿದೆ. ಎಂಪರಿಕಲ್ ಡೇಟಾ ಪಡೆಯಲು ಮತ್ತೊಂದು ಸಮೀಕ್ಷೆ ಮಾಡುವಂತಿದ್ದರೆ ನ್ಯಾ.ನಾಗಮೋಹನ್ ದಾಸ್ ಸಮಿತಿಯ ಅಗತ್ಯವಾದರೂ ಏನಿತ್ತು” ಎಂದು ಅವರು ಪ್ರಶ್ನಿಸಿದರು.

“ನಿಖರವಾದ ದಾಖಲೆಗಾಗಿ ಈಗಾಗಲೇ ನಮ್ಮ ಬಳಿ ನ್ಯಾ.ಸದಾಶಿವ ಆಯೋಗ, ಕಾಂತರಾಜು ವರದಿ, ನ್ಯಾ. ನಾಗಮೋಹನ್ ದಾಸ್ ವರದಿಗಳಿವೆ. ಇವುಗಳನ್ನು ಕ್ರೂಢೀಕರಿಸಿ 101 ಜಾತಿಗಳಿಗೂ ನ್ಯಾಯ ಒದಗಿಸಬಹುದಾಗಿತ್ತು. ಆದರೆ, ನಮಗೆ ನ್ಯಾಯ ನಿರಾಕರಿಸುವ ಉದ್ದೇಶದಿಂದಲೇ, ಒಳಮೀಸಲಾತಿ ವಿರೋಧಿಸುವ ಸಮುದಾಯಗಳ ಬೆದರಿಕೆ ನೀಡಿದ ವರದಿಯಾಗಿದೆ. ಮಾದಿಗರಿಗೆ ಮೀಸಲಾತಿ ನಿರಾಕರಿಸುವ ರಾಜಕೀಯ ಷಡ್ಯಂತ್ರ; ಹೋರಾಟವನ್ನು ತಣ್ಣಗಾಗಿಸುವ ಕುತಂತ್ರವಾಗಿದೆ. ಇದರ ವಿರುದ್ದ ಉಗ್ರ ಹೋರಾಟವನ್ನು ಮುಂದಿನ ದಿನಗಳಲ್ಲಿ ಮಾಡಲಿದ್ದು, ಈ ವೇಳೆ ಆಗುವ ಆಗುಹೋಗುಗಳಿಗೆ ರಾಜ್ಯ ಸರ್ಕಾರವೇ ಹೊಣೆಯಾಗಬೇಕಾಗುತ್ತದೆ” ಎಂದು ಎನ್.ಮೂರ್ತಿ ಎಚ್ಚರಿಕೆ ನೀಡಿದ್ದಾರೆ.

ಮಾದಿಗ ವಿರೋಧಿ ಸಿದ್ದರಾಮಯ್ಯ ಸರ್ಕಾರ

“ಕರ್ನಾಟಕದಲ್ಲಿ ಅಧಿಕಾರದಲ್ಲಿರುವ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಮಾದಿಗ ವಿರೋಧಿಯಾಗಿದೆ ಎಂಬುದಕ್ಕೆ ಈ ಮಧ್ಯಂತರ ವರದಿಯೇ ಸಾಕ್ಷಿ; ಸಾಮಾಜಿಕ ನ್ಯಾಯದ ಹರಿಕಾರ ಎಂಬುದು ಒಂದು ಮುಖವಾಡವಷ್ಟೇ. ಕಾಂಗ್ರೆಸ್ ಪಕ್ಷದ ಈ ನಡೆಗೆ ಮುಂದಿನ ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಹಾಗೂ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಮಾದಿಗ ಸಮುದಾಯ ತಕ್ಕ ಪಾಠ ಕಲಿಸುತ್ತದೆ. ಕಾಂಗ್ರೆಸ್‌ ಮುಕ್ತ ಕರ್ನಾಟಕ ನಮ್ಮಿಂದಲೇ ಆರಂಭ. ಕಾಂಗ್ರೆಸ್ ಸರ್ಕಾರಕ್ಕೆ 138 ಶಾಸಕ ಜನಬೆಂಬಲವಿದೆಯೇ ಹೊರತು, ಜನರ ಕಷ್ಟ, ಸುಖಗಳಿಗೆ ಸ್ಪಂದಿಸುವ ಬದ್ದತೆ ಇಲ್ಲ; ಇದೊಂದು ಹೊಣೆಗೇಡಿ ಸರ್ಕಾರ” ಎಂದು ಕಿಡಿ ಕಾರಿದರು.

“ನ್ಯಾ. ನಾಗಮೋಹನ್ ದಾಸ್ ಅವರ ಮಧ್ಯಂತರ ವರದಿಯನ್ನು ವಿರೋಧಿಸಿ, 2025ರ ಏಪ್ರಿಲ್ 9 ರಂದು ನಡೆಯುವ ಸಭೆಗೆ ಮಾದಿಗ ಮತ್ತು ಪರಿಶಿಷ್ಟ ಜಾತಿ ಪಟ್ಟಿಯಲ್ಲಿನ ಸಂತ್ರಸ್ಥ ಜಾತಿಗಳ, ಸಂಘಟನಗಳ ಎಲ್ಲ ಮುಖಂಡರನ್ನು ಕರೆದು, ಮುಂದಿನ ಹೋರಾಟದ ರೂಪುರೇಷೆಗಳನ್ನು ಸಿದ್ದಪಡಿಸಲಾಗುವುದು. ಇದು ಒಂದು ನಿರ್ಣಾಯಕ ಹೋರಾಟವಾಗಲಿದೆ” ಎಂದು ಘೋಷಣೆ ಮಾಡಿದರು.

ಒಳ ಮೀಸಲಾತಿ: ಜಸ್ಟೀಸ್ ನಾಗಮೋಹನದಾಸ್ ಆಯೋಗ ‘ಹೊಸ ಸಮೀಕ್ಷೆ’ಗೆ ಶಿಫಾರಸ್ಸು ಮಾಡಿದ್ದೇಕೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...