Homeಕರ್ನಾಟಕ'ನ್ಯಾಯಯುತ ಬೇಡಿಕೆ ಮುಂದಕ್ಕೆ ಹಾಕುವ ಮತ್ತೊಂದು ಪ್ರಯತ್ನ..'; ನಾಗಮೋಹನ್‌ದಾಸ್‌ ಸಮಿತಿ ಮಧ್ಯಂತರ ವರದಿಗೆ ಎನ್.ಮೂರ್ತಿ ವಿರೋಧ

‘ನ್ಯಾಯಯುತ ಬೇಡಿಕೆ ಮುಂದಕ್ಕೆ ಹಾಕುವ ಮತ್ತೊಂದು ಪ್ರಯತ್ನ..’; ನಾಗಮೋಹನ್‌ದಾಸ್‌ ಸಮಿತಿ ಮಧ್ಯಂತರ ವರದಿಗೆ ಎನ್.ಮೂರ್ತಿ ವಿರೋಧ

- Advertisement -
- Advertisement -

ಜಸ್ಟೀಸ್ ನಾಗಮೋಹನ್ ದಾಸ್ ಏಕಸದಸ್ಯ ಸಮಿತಿ ಒಳ ಮೀಸಲಾತಿ ಕುರಿತು ಗುರುವಾರ ಸಲ್ಲಿಸಿರುವ ಮಧ್ಯಂತರ ವರದಿ ಸಹ ನಮ್ಮ ನ್ಯಾಯಯುತ ಬೇಡಿಕೆಯನ್ನು ಮುಂದಕ್ಕೆ ಹಾಕುವ ಮತ್ತೊಂದು ಪ್ರಯತ್ನವಾಗಿದೆ ಎಂದು ಹಿರಿಯ ದಲಿತ ಮುಖಂಡರಾದ ಎನ್.ಮೂರ್ತಿ ತಿಳಿಸಿದ್ದಾರೆ.

ತುಮಕೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಸುಪ್ರೀಂಕೋರ್ಟಿನ ಏಳು ಮಂದಿ ನ್ಯಾಯಮೂರ್ತಿಗಳ ತೀರ್ಪಿನಂತೆ ಒಳಮೀಸಲಾತಿ ಜಾರಿಗಾಗಿ ಕರ್ನಾಟಕ ಸರಕಾರ ರಚಿಸಿರುವ ನ್ಯಾ. ನಾಗಮೋಹನ್‌ದಾಸ್ ಏಕಸದಸ್ಯ ಆಯೋಗ ನೀಡಿರುವ ಮಧ್ಯಂತರ ವರದಿ ಮಾದಿಗ ವಿರೋಧಿಯಾಗಿದೆ. ಮಧ್ಯಂತರ ವರದಿಯನ್ನು ಸರ್ಕಾರವೇ ಹೇಳಿ ಬರೆಸಿದೆ. ಸರ್ಕಾರದ ಮಾದಿಗ ವಿರೊಧಿ ನಡೆ ಖಂಡಿಸಿ ಹೋರಾಟ ರೂಪಿಸಲು 2025ರ ಏಪ್ರಿಲ್ 9 ರಂದು ಸಮುದಾಯದ ಮುಖಂಡರ ಸಭೆ ನಡೆಸಲಾಗುವುದು” ಎಂದು ಹೇಳಿದರು.

“ಪರಿಶಿಷ್ಟ ಜಾತಿಯಲ್ಲಿ ಅತಿ ಹಿಂದುಳಿದಿರುವ ಮಾದಿಗ ಸಮುದಾಯದ ಮೂರು ದಶಕಗಳ ಹೋರಾಟಕ್ಕೆ ನ್ಯಾಯ ದೊರಯಬಹುದು ಎಂದು ನಾವೆಲ್ಲಾ ಚಾತಕ ಪಕ್ಷಿಗಳಂತೆ ಕಾಯುತ್ತಲೇ ಇದ್ದೇವೆ. ಕಾಂಗ್ರೆಸ್ ಸರ್ಕಾರ ಮಾತ್ರ ಕುಂಟು ನೆಪ ಮುಂದೆ ಮಾಡಿ ಮುಂದೂಡುತ್ತಲೇ ಬಂದಿದೆ. ಗುರುವಾರ ಸಲ್ಲಿಕೆಯಾಗಿರುವ ಮಧ್ಯಂತರ ವರದಿ ಸಹ ನಮ್ಮ ನ್ಯಾಯಯುತ ಬೇಡಿಕೆಯನ್ನು ಮುಂದಕ್ಕೆ ಹಾಕುವ ಮತ್ತೊಂದು ಪ್ರಯತ್ನವಾಗಿದೆ” ಎಂದು ಆರೋಪಿಸಿದರು.

“ಪರಿಶಿಷ್ಟ ಜಾತಿಯಲ್ಲಿನ 101 ಸಮುದಾಯಗಳಲ್ಲಿ ಅತಿ ಹಿಂದುಳಿದಿರುವ ಮಾದಿಗ, ಮೋಚಿ, ದಕ್ಕಲಿಗ, ಸಮಗಾರ, ಜಾಡಮಾಲಿಗಳಿಗೆ ಸಾಕಷ್ಟು ವಂಚನೆಯಾಗಿದೆ. ಎಂಪರಿಕಲ್ ಡೇಟಾ ಪಡೆಯಲು ಮತ್ತೊಂದು ಸಮೀಕ್ಷೆ ಮಾಡುವಂತಿದ್ದರೆ ನ್ಯಾ.ನಾಗಮೋಹನ್ ದಾಸ್ ಸಮಿತಿಯ ಅಗತ್ಯವಾದರೂ ಏನಿತ್ತು” ಎಂದು ಅವರು ಪ್ರಶ್ನಿಸಿದರು.

“ನಿಖರವಾದ ದಾಖಲೆಗಾಗಿ ಈಗಾಗಲೇ ನಮ್ಮ ಬಳಿ ನ್ಯಾ.ಸದಾಶಿವ ಆಯೋಗ, ಕಾಂತರಾಜು ವರದಿ, ನ್ಯಾ. ನಾಗಮೋಹನ್ ದಾಸ್ ವರದಿಗಳಿವೆ. ಇವುಗಳನ್ನು ಕ್ರೂಢೀಕರಿಸಿ 101 ಜಾತಿಗಳಿಗೂ ನ್ಯಾಯ ಒದಗಿಸಬಹುದಾಗಿತ್ತು. ಆದರೆ, ನಮಗೆ ನ್ಯಾಯ ನಿರಾಕರಿಸುವ ಉದ್ದೇಶದಿಂದಲೇ, ಒಳಮೀಸಲಾತಿ ವಿರೋಧಿಸುವ ಸಮುದಾಯಗಳ ಬೆದರಿಕೆ ನೀಡಿದ ವರದಿಯಾಗಿದೆ. ಮಾದಿಗರಿಗೆ ಮೀಸಲಾತಿ ನಿರಾಕರಿಸುವ ರಾಜಕೀಯ ಷಡ್ಯಂತ್ರ; ಹೋರಾಟವನ್ನು ತಣ್ಣಗಾಗಿಸುವ ಕುತಂತ್ರವಾಗಿದೆ. ಇದರ ವಿರುದ್ದ ಉಗ್ರ ಹೋರಾಟವನ್ನು ಮುಂದಿನ ದಿನಗಳಲ್ಲಿ ಮಾಡಲಿದ್ದು, ಈ ವೇಳೆ ಆಗುವ ಆಗುಹೋಗುಗಳಿಗೆ ರಾಜ್ಯ ಸರ್ಕಾರವೇ ಹೊಣೆಯಾಗಬೇಕಾಗುತ್ತದೆ” ಎಂದು ಎನ್.ಮೂರ್ತಿ ಎಚ್ಚರಿಕೆ ನೀಡಿದ್ದಾರೆ.

ಮಾದಿಗ ವಿರೋಧಿ ಸಿದ್ದರಾಮಯ್ಯ ಸರ್ಕಾರ

“ಕರ್ನಾಟಕದಲ್ಲಿ ಅಧಿಕಾರದಲ್ಲಿರುವ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಮಾದಿಗ ವಿರೋಧಿಯಾಗಿದೆ ಎಂಬುದಕ್ಕೆ ಈ ಮಧ್ಯಂತರ ವರದಿಯೇ ಸಾಕ್ಷಿ; ಸಾಮಾಜಿಕ ನ್ಯಾಯದ ಹರಿಕಾರ ಎಂಬುದು ಒಂದು ಮುಖವಾಡವಷ್ಟೇ. ಕಾಂಗ್ರೆಸ್ ಪಕ್ಷದ ಈ ನಡೆಗೆ ಮುಂದಿನ ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಹಾಗೂ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಮಾದಿಗ ಸಮುದಾಯ ತಕ್ಕ ಪಾಠ ಕಲಿಸುತ್ತದೆ. ಕಾಂಗ್ರೆಸ್‌ ಮುಕ್ತ ಕರ್ನಾಟಕ ನಮ್ಮಿಂದಲೇ ಆರಂಭ. ಕಾಂಗ್ರೆಸ್ ಸರ್ಕಾರಕ್ಕೆ 138 ಶಾಸಕ ಜನಬೆಂಬಲವಿದೆಯೇ ಹೊರತು, ಜನರ ಕಷ್ಟ, ಸುಖಗಳಿಗೆ ಸ್ಪಂದಿಸುವ ಬದ್ದತೆ ಇಲ್ಲ; ಇದೊಂದು ಹೊಣೆಗೇಡಿ ಸರ್ಕಾರ” ಎಂದು ಕಿಡಿ ಕಾರಿದರು.

“ನ್ಯಾ. ನಾಗಮೋಹನ್ ದಾಸ್ ಅವರ ಮಧ್ಯಂತರ ವರದಿಯನ್ನು ವಿರೋಧಿಸಿ, 2025ರ ಏಪ್ರಿಲ್ 9 ರಂದು ನಡೆಯುವ ಸಭೆಗೆ ಮಾದಿಗ ಮತ್ತು ಪರಿಶಿಷ್ಟ ಜಾತಿ ಪಟ್ಟಿಯಲ್ಲಿನ ಸಂತ್ರಸ್ಥ ಜಾತಿಗಳ, ಸಂಘಟನಗಳ ಎಲ್ಲ ಮುಖಂಡರನ್ನು ಕರೆದು, ಮುಂದಿನ ಹೋರಾಟದ ರೂಪುರೇಷೆಗಳನ್ನು ಸಿದ್ದಪಡಿಸಲಾಗುವುದು. ಇದು ಒಂದು ನಿರ್ಣಾಯಕ ಹೋರಾಟವಾಗಲಿದೆ” ಎಂದು ಘೋಷಣೆ ಮಾಡಿದರು.

ಒಳ ಮೀಸಲಾತಿ: ಜಸ್ಟೀಸ್ ನಾಗಮೋಹನದಾಸ್ ಆಯೋಗ ‘ಹೊಸ ಸಮೀಕ್ಷೆ’ಗೆ ಶಿಫಾರಸ್ಸು ಮಾಡಿದ್ದೇಕೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...

ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಜಾರಿಯ ಜೊತೆಯಲ್ಲೆ ಸುಪ್ರೀಂ ಕೋರ್ಟ್‌ಗೆ ಹೋಗಲು ಕರ್ನಾಟಕ ಸಜ್ಜು

ಕೇಂದ್ರ ಸರ್ಕಾರದ ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ‘ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ)’ (VB-G RAM G) ಕಾಯ್ದೆಯ ಹಲವು ನಿಯಮಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರೂ...

ಉತ್ತರ ಪ್ರದೇಶ: ಮದುವೆ ರಿಸೆಪ್ಷನ್‌ನಲ್ಲಿ ಗೋಮಾಂಸ ಬಡಿಸಿದ ಆರೋಪ; ವರನ ತಂದೆ ಸೇರಿ ಏಳು ಮಂದಿ ಬಂಧನ, ಮಂಟಪ ಸೀಲ್

ಶಾಮ್ಲಿ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ಕೈರಾನಾ ಪಟ್ಟಣದಲ್ಲಿ ನಡೆದ ಮದುವೆ ಆರತಕ್ಷತೆ (ವಲೀಮಾ) ಸಮಾರಂಭವೊಂದು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಸಮಾರಂಭದಲ್ಲಿ ಅತಿಥಿಗಳಿಗೆ ಗೋಮಾಂಸವನ್ನು ಬೇಯಿಸಿ ಬಡಿಸಲಾಗಿದೆ ಎಂಬ...

ರಾಮ ಮಂದಿರ ದೇಣಿಗೆ ವಿವಾದ: ಎಫ್‌ಐಆರ್ ದಾಖಲಿಸಿ ತ್ವರಿತ ನ್ಯಾಯಾಲಯದ ವಿಚಾರಣೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ

ರಾಮ ದೇಣಿಗೆ ವಿವಾದ ದುರುಪಯೋಗ ಕುರಿತು ಎಸ್‌ಐಟಿ ತನ್ನ ಪ್ರಾಥಮಿಕ ವರದಿಯನ್ನು ಸಲ್ಲಿಸಿದ ಕೂಡಲೇ, ಬಲಪಂಥೀಯ ಹಿಂದುತ್ವ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಬೇಕೆಂದು ಒತ್ತಾಯಿಸಿದೆ. ವಿಎಚ್‌ಪಿ ಅಂತರರಾಷ್ಟ್ರೀಯ...

ಪಾಸ್‌ಪೋರ್ಟ್ ಪೌರತ್ವದ ದಾಖಲೆಯಲ್ಲ: ವಿದೇಶಾಂಗ ಸಚಿವಾಲಯ

ಪಾಸ್‌ಪೋರ್ಟ್ ಒಂದು ಪ್ರಯಾಣದ ದಾಖಲೆಯಾಗಿದೆಯೇ ಹೊರತು, ಪೌರತ್ವದ ದಾಖಲೆಯಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ (ಎಂಇಎ) ಅಧಿಕಾರಿಗಳು ಬುಧವಾರ (ಜೂನ್ 24) ತಿಳಿಸಿದ್ದಾರೆ. ಈ ಮೂಲಕ ಅವರು ಭಾರತೀಯ ಪೌರತ್ವವನ್ನು ಖಚಿತವಾಗಿ ಸಾಬೀತುಪಡಿಸುವ...

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...