Homeಎಕಾನಮಿಮತ್ತೊಬ್ಬ ಬ್ಯಾಂಕ್ ವಂಚಕ ದೇಶದಿಂದ ಪಲಾಯನ: 4 ವರ್ಷಗಳ ನಂತರ ದೂರು ನೀಡಿದ ಎಸ್‌ಬಿಐ

ಮತ್ತೊಬ್ಬ ಬ್ಯಾಂಕ್ ವಂಚಕ ದೇಶದಿಂದ ಪಲಾಯನ: 4 ವರ್ಷಗಳ ನಂತರ ದೂರು ನೀಡಿದ ಎಸ್‌ಬಿಐ

- Advertisement -
- Advertisement -

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ಮತ್ತು ಇತರ ಬ್ಯಾಂಕುಗಳಿಂದ 400 ಕೋಟಿ ರೂ. ಸಾಲ ಪಡೆದಿದ್ದ ಬ್ಯಾಂಕ್‌ ಸುಸ್ತಿದಾರ ದೆಹಲಿ ಮೂಲದ ಬಾಸ್ಮತಿ ಅಕ್ಕಿ ರಫ್ತುದಾರ ’ರಾಮ್ ದೇವ್ ಇಂಟರ್‌ನ್ಯಾಷನಲ್‌ ಲಿಮಿಟೆಡ್‌’‌ ಮಾಲೀಕರು 2016 ರಿಂದ ಕಾಣೆಯಾಗಿದ್ದು ದೇಶ ಬಿಟ್ಟು ಪಲಾಯನ ಮಾಡಿದ್ದಾರೆ ಎಂದು ಎಸ್‌ಬಿಐ ದೂರು ದಾಖಲಿಸಿದೆ.

ಕಂಪನಿಯು 2016 ರಲ್ಲಿ ಕಾರ್ಯನಿರ್ವಹಿಸದ ಆಸ್ತಿ ಎಂದು ವರ್ಗೀಕರಿಸಲ್ಪಟ್ಟಿತು. ನಾಲ್ಕು ವರ್ಷಗಳ ನಂತರ, ಫೆಬ್ರವರಿ 25 ರಂದು ಎಸ್‌ಬಿಐ ನೀಡಿದ ದೂರಿನ ನಂತರ, ಸಿಬಿಐ ಕಳೆದ ವಾರ ಏಪ್ರಿಲ್ 28 ರಂದು ಪ್ರಕರಣವನ್ನು ದಾಖಲಿಸಿತು.

ರಾಮ್ ದೇವ್ ಇಂಟರ್ನ್ಯಾಷನಲ್ 414 ಕೋಟಿ ರೂ ಸಾಲ ಉಳಿಸಿಕೊಂಡಿದೆ. ಎಸ್‌ಬಿಐನಿಂದ 173.11 ಕೋಟಿ, ಕೆನರಾ ಬ್ಯಾಂಕ್‌ನಿಂದ 76.09 ಕೋಟಿ, ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದಿಂದ 64.31 ಕೋಟಿ ರೂ., ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಿಂದ 51.31 ಕೋಟಿ ರೂ., ಕಾರ್ಪೊರೇಷನ್ ಬ್ಯಾಂಕಿನಿಂದ 36.91 ಕೋಟಿ ಮತ್ತು ಐಡಿಬಿಐ ಬ್ಯಾಂಕಿನಿಂದ 12.27 ಕೋಟಿ ರೂ ಸಾಲ ಉಳಿಸಿಕೊಂಡಿದೆ.

ಸಿಬಿಐ ಏಪ್ರಿಲ್ 28 ರಂದು ಪ್ರಕರಣ ದಾಖಲಿಸಿದ್ದು, ಮಾಲೀಕರಾದ ಸುರೇಶ್ ಕುಮಾರ್, ನರೇಶ್ ಕುಮಾರ್ ಸಂಗಿತಾ ಮತ್ತು ಇತರರ ವಿರುದ್ಧ ದೂರು ದಾಖಲಿಸಲಾಗಿದೆ. 2018 ರಲ್ಲಿ ರಾಷ್ಟ್ರೀಯ ಕಂಪನಿ ಕಾನೂನು ನ್ಯಾಯಮಂಡಳಿ (ಎನ್‌ಸಿಎಲ್‌ಟಿ) ಆದೇಶದ ಪ್ರಕಾರ, ಪ್ರವರ್ತಕರು ದುಬೈಗೆ ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ.

“ಜಂಟಿ ತಪಾಸಣೆಯ ಸಮಯದಲ್ಲಿ ಸಾಲಗಾರರು ಲಭ್ಯವಿರಲಿಲ್ಲ ಮತ್ತು ಹರಿಯಾಣ ಪೊಲೀಸ್ ಭದ್ರತಾ ಸಿಬ್ಬಂದಿಯನ್ನು ಅಲ್ಲಿ ನಿಯೋಜಿಸಲಾಗಿತ್ತು. ವಿಚಾರಣೆಯಲ್ಲಿ ಸಾಲಗಾರರು ಪರಾರಿಯಾಗಿದ್ದಾರೆ ಮತ್ತು ದೇಶವನ್ನು ತೊರೆದಿದ್ದಾರೆ ಎಂದು ನಾವು ತಿಳಿದುಕೊಂಡೆವು” ಎಂದು ದೂರಿನಲ್ಲಿ ತಿಳಿಸಲಾಗಿದೆ.

ಆರೋಪಿಗಳು ದೇಶದಿಂದ ಪಲಾಯನ ಮಾಡುವ ಮೊದಲು ತಮ್ಮ ಹೆಚ್ಚಿನ ಆಸ್ತಿಯನ್ನು ಮಾರಾಟ ಮಾಡಿದ್ದರಿಂದ ಎಸ್‌ಬಿಐ ತನ್ನ ಬಾಕಿ ಮೊತ್ತವನ್ನು ವಸೂಲಿ ಮಾಡುವುದು ಸಾಧ್ಯವಿಲ್ಲ ಎಂದು ತಿಳಿದ ನಂತರ ಅಂತಿಮವಾಗಿ ಸಿಬಿಐ ದೂರು ದಾಖಲಿಸಿದೆ ಎಂದು ಹೇಳಲಾಗುತ್ತಿದೆ.


ಇದನ್ನೂ ಓದಿ: ಉದ್ದಿಮೆದಾರರ 68,607 ಕೋಟಿ ರೂ ಸಾಲ ಮನ್ನಾ: ಮೋದಿ ಸರ್ಕಾರ ಸಂಸತ್ತಿನಿಂದ ಸತ್ಯ ಮರೆಮಾಚಿದೆ – ರಾಹುಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...