Homeಅಂತರಾಷ್ಟ್ರೀಯ‘ಮತ್ತೊಂದು ದೊಡ್ಡ ತಪ್ಪು’: ನ್ಯಾಟೊ ಸೇರುತ್ತಿರುವ ಫಿನ್‌ಲ್ಯಾಂಡ್‌ & ಸ್ವೀಡನ್‌ಗೆ ರಷ್ಯಾ ಎಚ್ಚರಿಕೆ

‘ಮತ್ತೊಂದು ದೊಡ್ಡ ತಪ್ಪು’: ನ್ಯಾಟೊ ಸೇರುತ್ತಿರುವ ಫಿನ್‌ಲ್ಯಾಂಡ್‌ & ಸ್ವೀಡನ್‌ಗೆ ರಷ್ಯಾ ಎಚ್ಚರಿಕೆ

- Advertisement -
- Advertisement -

ನ್ಯಾಟೋ ಮಿಲಿಟರಿ ಮೈತ್ರಿಗೆ ಸೇರುವ ಮೂಲಕ ಫಿನ್‌ಲ್ಯಾಂಡ್ ಮತ್ತು ಸ್ವೀಡನ್‌ ದೇಶಗಳು ಗಂಭೀರ ತಪ್ಪುಗಳನ್ನು ಮಾಡುತ್ತಿದ್ದು, ಇದರ ವಿರುದ್ಧ ಕ್ರಮಗಳನ್ನು ತೆಗೆದುಕೊಳ್ಳುತ್ತೇವೆ ಎಂದು ರಷ್ಯಾ ಸೋಮವಾರ ಎಚ್ಚರಿಸಿದೆ.

“ಇದು ದೂರಗಾಮಿ ಪರಿಣಾಮಗಳಿಂದ ಕೂಡಿರುವ ಮತ್ತೊಂದು ಗಂಭೀರ ತಪ್ಪು” ಎಂದು ಉಪ ವಿದೇಶಾಂಗ ಸಚಿವ ಸೆರ್ಗೆಯ್ ರಿಯಾಬ್ಕೋವ್ ಸುದ್ದಿಗಾರರಿಗೆ ತಿಳಿಸಿದ್ದಾರೆ. ಇದರಿಂದಾಗಿ “ಸೇನಾ ಉದ್ವಿಗ್ನತೆಯ ಸಾಮಾನ್ಯ ಮಟ್ಟವು ಹೆಚ್ಚಾಗುತ್ತದೆ” ಎಂದು ಅವರು ಹೇಳಿದ್ದಾರೆ ಎಂದು ರಷ್ಯಾದ ಸುದ್ದಿ ಸಂಸ್ಥೆಗಳು ವರದಿ ಮಾಡಿವೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಪ್ರಸ್ತುತ ಪರಿಸ್ಥಿತಿಯಲ್ಲಿ ಏನು ಮಾಡಬೇಕು ಎಂಬ ಕೆಲವು ಫ್ಯಾಂಟಮ್ ಕಲ್ಪನೆಗಳಿಗೆ ಸಾಮಾನ್ಯ ಜ್ಞಾನವನ್ನು ಬಲಿಕೊಡುತ್ತಿರುವುದು ವಿಷಾದನೀಯ. ಈ ಕ್ರಮದಿಂದ ಉಭಯ ದೇಶಗಳ ಭದ್ರತೆಯು ಬಲಗೊಳ್ಳುವುದಿಲ್ಲ ಮತ್ತು ಇದರ ವಿರುದ್ದ ರಷ್ಯಾ ಕ್ರಮಗಳನ್ನು ತೆಗೆದುಕೊಳ್ಳುತ್ತದೆ” ಎಂದು ರಿಯಾಬ್ಕೋವ್ ಹೇಳಿದ್ದಾರೆ.

ಇದನ್ನೂ ಓದಿ: ಪೊನ್ನಂಪೇಟೆಯಲ್ಲಿ ಕೊಟ್ಟಿದ್ದು ಏರ್‌ಗನ್‌ ತರಬೇತಿ- ಸಿ.ಟಿ.ರವಿ; ನಡೆದದ್ದು ಯೋಗ ತರಬೇತಿ ಎಂದ ಹಿಂಜಾವೇ ಮುಖಂಡ

ಇದನ್ನು ನಾವು ಸಹಿಸಿಕೊಳ್ಳುತ್ತೇವೆ ಎಂಬ ಭ್ರಮೆ ಅವರಿಗೆ ಇರಬಾರದು ಎಂದು ಅವರು ಹೇಳಿದ್ದಾರೆ.

ದಶಕಗಳ ಕಾಲ ಪಾಲಿಸಿಕೊಂಡು ಬಂದಿದ್ದ ಮಿಲಿಟರಿ ಅಲಿಪ್ತ ನೀತಿಯನ್ನು ತೊಡೆದುಹಾಕಲು ಫಿನ್‌ಲ್ಯಾಂಡ್ ಮತ್ತು ಸ್ವೀಡನ್ ದೇಶಗಳು ಸಿದ್ಧವಾಗಿವೆ. ರಶಿಯಾದ ಆಕ್ರಮಣದ ವಿರುದ್ಧ ರಕ್ಷಣೆಯಾಗಿ ಈ ದೇಶಗಳು NATO ಪಡೆಗೆ ಸೇರುತ್ತಿದೆ ಎಂದು ವರದಿಯಾಗಿದೆ.

ತನ್ನ ಜೊತೆಗೆ 1,300 ಕಿಲೋಮೀಟರ್ (800 ಮೈಲಿ) ಗಡಿಯನ್ನು ಹಂಚಿಕೊಂಡಿರುವಗ ಫಿನ್‌ಲ್ಯಾಂಡ್‌ಗೆ ‘ಬದಲಿ ಕ್ರಮಗಳನ್ನು’ ತೆಗೆದುಕೊಳ್ಳಲಾಗುವುದು ಎಂದು ರಷ್ಯಾ ಎಚ್ಚರಿಸಿದೆ.

ನ್ಯಾಟೊ ಸದಸ್ಯತ್ವಕ್ಕಾಗಿ ದೇಶವು ಅರ್ಜಿ ಸಲ್ಲಿಸಿರುವ ಕುರಿತು ಫಿನ್ನಿಷ್ ಅಧ್ಯಕ್ಷ ಸೌಲಿ ನಿನಿಸ್ಟೊ ಶನಿವಾರ ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಅವರೊಂದಿಗೆ ಮಾತನಾಡಿದ್ದಾರೆ. ಫಿನ್‌ಲ್ಯಾಂಡ್‌ನ ಮಿಲಿಟರಿ ಆಲಿಪ್ತ ನೀತಿಯನ್ನು ಕಿತ್ತೊಗೆಯುವುದನ್ನು ಪುಟಿನ್ ‘ತಪ್ಪು’ ಎಂಬಂತೆ ನೋಡಿದ್ದಾರೆ ಎಂದು ರಷ್ಯಾ ಹೇಳಿದೆ.

ಇದನ್ನೂ ಓದಿ: ಬಜರಂಗದಳದಿಂದ ತ್ರಿಶೂಲ, ಬಂದೂಕು ತರಬೇತಿ; ರಾಜಕಾರಣಿಗಳ ಮಕ್ಕಳೂ ಇದ್ದರೆ? 

ಸ್ವೀಡನ್‌ನ ಆಡಳಿತ ಪಕ್ಷವು ಸದಸ್ಯತ್ವವನ್ನು ಬೆಂಬಲಿಸುತ್ತದೆ ಎಂದು ಹೇಳಿದ್ದರಿಂದ ಫಿನ್‌ಲ್ಯಾಂಡ್ ಭಾನುವಾರ NATO ಗೆ ಸೇರುವ ತನ್ನ ತೀರ್ಮಾನವನ್ನು ಘೋಷಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....