Homeಅಂತರಾಷ್ಟ್ರೀಯ‘ಮತ್ತೊಂದು ದೊಡ್ಡ ತಪ್ಪು’: ನ್ಯಾಟೊ ಸೇರುತ್ತಿರುವ ಫಿನ್‌ಲ್ಯಾಂಡ್‌ & ಸ್ವೀಡನ್‌ಗೆ ರಷ್ಯಾ ಎಚ್ಚರಿಕೆ

‘ಮತ್ತೊಂದು ದೊಡ್ಡ ತಪ್ಪು’: ನ್ಯಾಟೊ ಸೇರುತ್ತಿರುವ ಫಿನ್‌ಲ್ಯಾಂಡ್‌ & ಸ್ವೀಡನ್‌ಗೆ ರಷ್ಯಾ ಎಚ್ಚರಿಕೆ

- Advertisement -
- Advertisement -

ನ್ಯಾಟೋ ಮಿಲಿಟರಿ ಮೈತ್ರಿಗೆ ಸೇರುವ ಮೂಲಕ ಫಿನ್‌ಲ್ಯಾಂಡ್ ಮತ್ತು ಸ್ವೀಡನ್‌ ದೇಶಗಳು ಗಂಭೀರ ತಪ್ಪುಗಳನ್ನು ಮಾಡುತ್ತಿದ್ದು, ಇದರ ವಿರುದ್ಧ ಕ್ರಮಗಳನ್ನು ತೆಗೆದುಕೊಳ್ಳುತ್ತೇವೆ ಎಂದು ರಷ್ಯಾ ಸೋಮವಾರ ಎಚ್ಚರಿಸಿದೆ.

“ಇದು ದೂರಗಾಮಿ ಪರಿಣಾಮಗಳಿಂದ ಕೂಡಿರುವ ಮತ್ತೊಂದು ಗಂಭೀರ ತಪ್ಪು” ಎಂದು ಉಪ ವಿದೇಶಾಂಗ ಸಚಿವ ಸೆರ್ಗೆಯ್ ರಿಯಾಬ್ಕೋವ್ ಸುದ್ದಿಗಾರರಿಗೆ ತಿಳಿಸಿದ್ದಾರೆ. ಇದರಿಂದಾಗಿ “ಸೇನಾ ಉದ್ವಿಗ್ನತೆಯ ಸಾಮಾನ್ಯ ಮಟ್ಟವು ಹೆಚ್ಚಾಗುತ್ತದೆ” ಎಂದು ಅವರು ಹೇಳಿದ್ದಾರೆ ಎಂದು ರಷ್ಯಾದ ಸುದ್ದಿ ಸಂಸ್ಥೆಗಳು ವರದಿ ಮಾಡಿವೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಪ್ರಸ್ತುತ ಪರಿಸ್ಥಿತಿಯಲ್ಲಿ ಏನು ಮಾಡಬೇಕು ಎಂಬ ಕೆಲವು ಫ್ಯಾಂಟಮ್ ಕಲ್ಪನೆಗಳಿಗೆ ಸಾಮಾನ್ಯ ಜ್ಞಾನವನ್ನು ಬಲಿಕೊಡುತ್ತಿರುವುದು ವಿಷಾದನೀಯ. ಈ ಕ್ರಮದಿಂದ ಉಭಯ ದೇಶಗಳ ಭದ್ರತೆಯು ಬಲಗೊಳ್ಳುವುದಿಲ್ಲ ಮತ್ತು ಇದರ ವಿರುದ್ದ ರಷ್ಯಾ ಕ್ರಮಗಳನ್ನು ತೆಗೆದುಕೊಳ್ಳುತ್ತದೆ” ಎಂದು ರಿಯಾಬ್ಕೋವ್ ಹೇಳಿದ್ದಾರೆ.

ಇದನ್ನೂ ಓದಿ: ಪೊನ್ನಂಪೇಟೆಯಲ್ಲಿ ಕೊಟ್ಟಿದ್ದು ಏರ್‌ಗನ್‌ ತರಬೇತಿ- ಸಿ.ಟಿ.ರವಿ; ನಡೆದದ್ದು ಯೋಗ ತರಬೇತಿ ಎಂದ ಹಿಂಜಾವೇ ಮುಖಂಡ

ಇದನ್ನು ನಾವು ಸಹಿಸಿಕೊಳ್ಳುತ್ತೇವೆ ಎಂಬ ಭ್ರಮೆ ಅವರಿಗೆ ಇರಬಾರದು ಎಂದು ಅವರು ಹೇಳಿದ್ದಾರೆ.

ದಶಕಗಳ ಕಾಲ ಪಾಲಿಸಿಕೊಂಡು ಬಂದಿದ್ದ ಮಿಲಿಟರಿ ಅಲಿಪ್ತ ನೀತಿಯನ್ನು ತೊಡೆದುಹಾಕಲು ಫಿನ್‌ಲ್ಯಾಂಡ್ ಮತ್ತು ಸ್ವೀಡನ್ ದೇಶಗಳು ಸಿದ್ಧವಾಗಿವೆ. ರಶಿಯಾದ ಆಕ್ರಮಣದ ವಿರುದ್ಧ ರಕ್ಷಣೆಯಾಗಿ ಈ ದೇಶಗಳು NATO ಪಡೆಗೆ ಸೇರುತ್ತಿದೆ ಎಂದು ವರದಿಯಾಗಿದೆ.

ತನ್ನ ಜೊತೆಗೆ 1,300 ಕಿಲೋಮೀಟರ್ (800 ಮೈಲಿ) ಗಡಿಯನ್ನು ಹಂಚಿಕೊಂಡಿರುವಗ ಫಿನ್‌ಲ್ಯಾಂಡ್‌ಗೆ ‘ಬದಲಿ ಕ್ರಮಗಳನ್ನು’ ತೆಗೆದುಕೊಳ್ಳಲಾಗುವುದು ಎಂದು ರಷ್ಯಾ ಎಚ್ಚರಿಸಿದೆ.

ನ್ಯಾಟೊ ಸದಸ್ಯತ್ವಕ್ಕಾಗಿ ದೇಶವು ಅರ್ಜಿ ಸಲ್ಲಿಸಿರುವ ಕುರಿತು ಫಿನ್ನಿಷ್ ಅಧ್ಯಕ್ಷ ಸೌಲಿ ನಿನಿಸ್ಟೊ ಶನಿವಾರ ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಅವರೊಂದಿಗೆ ಮಾತನಾಡಿದ್ದಾರೆ. ಫಿನ್‌ಲ್ಯಾಂಡ್‌ನ ಮಿಲಿಟರಿ ಆಲಿಪ್ತ ನೀತಿಯನ್ನು ಕಿತ್ತೊಗೆಯುವುದನ್ನು ಪುಟಿನ್ ‘ತಪ್ಪು’ ಎಂಬಂತೆ ನೋಡಿದ್ದಾರೆ ಎಂದು ರಷ್ಯಾ ಹೇಳಿದೆ.

ಇದನ್ನೂ ಓದಿ: ಬಜರಂಗದಳದಿಂದ ತ್ರಿಶೂಲ, ಬಂದೂಕು ತರಬೇತಿ; ರಾಜಕಾರಣಿಗಳ ಮಕ್ಕಳೂ ಇದ್ದರೆ? 

ಸ್ವೀಡನ್‌ನ ಆಡಳಿತ ಪಕ್ಷವು ಸದಸ್ಯತ್ವವನ್ನು ಬೆಂಬಲಿಸುತ್ತದೆ ಎಂದು ಹೇಳಿದ್ದರಿಂದ ಫಿನ್‌ಲ್ಯಾಂಡ್ ಭಾನುವಾರ NATO ಗೆ ಸೇರುವ ತನ್ನ ತೀರ್ಮಾನವನ್ನು ಘೋಷಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...