Homeಮುಖಪುಟಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ ಸಂವಿಧಾನ ಬದಲಾವಣೆ: ವಿವಾದ ಸೃಷ್ಟಿಸಿದ ಬಿಜೆಪಿ ನಾಯಕಿ

ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ ಸಂವಿಧಾನ ಬದಲಾವಣೆ: ವಿವಾದ ಸೃಷ್ಟಿಸಿದ ಬಿಜೆಪಿ ನಾಯಕಿ

- Advertisement -
- Advertisement -

ದೇಶದ ಹಿತಾಸಕ್ತಿಯಿಂದ ಹಲವಾರು ಕಠಿಣ ನಿರ್ಧಾರಗಳನ್ನು ಕೈಗೊಳ್ಳಬೇಕಿದ್ದು, ಅದಕ್ಕಾಗಿ ಸಂವಿಧಾನಕ್ಕೆ ಬದಲಾವಣೆ ಮಾಡಬೇಕಿದೆ. ನಾವು ಸಂವಿಧಾನ ಬದಲಾವಣೆ ಮಾಡಬೇಕಿದ್ದರೆ ಲೋಕಸಭೆ ಹಾಗೂ ರಾಜ್ಯಸಭೆಗಳೆರಡರಲ್ಲೂ ಅಂಗೀಕಾರದ ಅಗತ್ಯವಿದೆ, ಅದಕ್ಕೆ ಬಹುಮತ ಬೇಕಾಗಿದೆ ಎಂದು ಬಿಜೆಪಿ ನಾಯಕಿ ಜ್ಯೋತಿ ಮಿರ್ಧಾ ಸಂವಿಧಾನ ಬದಲಾಯಿಸುವ ಬಗ್ಗೆ ಹೇಳಿಕೆಯನ್ನು ನೀಡಿ ವಿವಾದವನ್ನು ಸೃಷ್ಟಿಸಿದ್ದಾರೆ.

ಮಾರ್ಚ್ 30ರಂದು ರಾಜಸ್ಥಾನದ ರಾಜಾಶನ ನಗೌರ್‌ನಲ್ಲಿ ಮಾತನಾಡಿ ಬಿಜೆಪಿ ನಾಯಕಿ ಜ್ಯೋತಿ ಮಿರ್ಧಾ ಸಂವಿಧಾನ ಬದಲಾಯಿಸುವ ಬಗ್ಗೆ ಉಲ್ಲೇಖಿಸಿದ್ದು, ಸಂವಿಧಾನವನ್ನು ಬದಲಾಯಿಸುವ ಕುರಿತು ಬಿಜೆಪಿ ನಾಯಕಿಯ ಹೇಳಿಕೆ ಪ್ರತಿಪಕ್ಷಗಳ ಟೀಕೆಗೆ ಕಾರಣವಾಗಿದೆ. ಇದಲ್ಲದೆ ಇದು ಬಿಜೆಪಿಯ ಉದ್ದೇಶಪೂರ್ವಕ ಕಾರ್ಯತಂತ್ರದ ಭಾಗವಾಗಿದೆ ಎಂದು ವರದಿಯಾಗಿದೆ.

ಜ್ಯೋತಿ ಮಿರ್ಧಾ ಭಾಷಣವನ್ನು ಎಕ್ಸ್‌ನಲ್ಲಿ ಹಂಚಿಕೊಂಡ ಕಾಂಗ್ರೆಸ್, “ಇದು ರಾಜಸ್ಥಾನದ ನಾಗೌರ್‌ನಿಂದ ಸ್ಪರ್ಧಿಸುತ್ತಿರುವ ಬಿಜೆಪಿ ಅಭ್ಯರ್ಥಿ ಜ್ಯೋತಿ ಮಿರ್ಧಾ, ಸಂವಿಧಾನವನ್ನು ಬದಲಾಯಿಸಲು ನಮಗೆ ಉಭಯ ಸದನಗಳಲ್ಲಿ ಅತ್ಯಧಿಕ ಬಹುಮತ ಬೇಕು ಎಂದು ಜ್ಯೋತಿ ಮಿರ್ಧಾ ಹೇಳುತ್ತಾರೆ. ಲೋಕಸಭೆ ಚುನಾವಣೆಯಲ್ಲಿ 400 ಸ್ಥಾನ ಪಡೆದರೆ ಸಂವಿಧಾನ ಬದಲಿಸುತ್ತೇವೆ ಎಂದು ಬಿಜೆಪಿ ಸಂಸದ ಅನಂತ ಹೆಗಡೆ ಕೂಡ ಹೇಳಿದ್ದಾರೆ. ಬಿಜೆಪಿ ಮತ್ತು ಪ್ರಧಾನಿ ಮೋದಿಯವರು ಸಂವಿಧಾನ ಮತ್ತು ಪ್ರಜಾಪ್ರಭುತ್ವವನ್ನು ದ್ವೇಷಿಸುತ್ತಾರೆ ಎಂಬುದು ಈ ಹೇಳಿಕೆಗಳಿಂದ ಸ್ಪಷ್ಟವಾಗಿದೆ. ಬಾಬಾಸಾಹೇಬರು ನೀಡಿದ ಸಂವಿಧಾನವನ್ನು ರದ್ದುಪಡಿಸುವ ಮೂಲಕ ಬಿಜೆಪಿ ಜನರ ಹಕ್ಕುಗಳನ್ನು ಕಿತ್ತುಕೊಳ್ಳಲು ಹೊರಟಿದೆ ಎಂದು ಹೇಳಿದೆ.

ಲೋಕಸಭೆಯಲ್ಲಿ, ಬಿಜೆಪಿ ಮತ್ತು ಎನ್‌ಡಿಎಗೆ ಭಾರಿ ಜನಾದೇಶವಿದೆ, ಆದರೆ ರಾಜ್ಯಸಭೆಯಲ್ಲಿ ನಮಗೆ ಇನ್ನೂ ಬಹುಮತವಿಲ್ಲ. ಎನ್‌ಡಿಎ ಸರ್ಕಾರ ಮೂರನೇ ಬಾರಿಗೆ ಅಧಿಕಾರಕ್ಕೆ ಬಂದರೆ ನಾವು ಸಂವಿಧಾನಕ್ಕೆ ತಿದ್ದುಪಡಿ ಮಾಡಬೇಕಿದ್ದರೆ ಲೋಕಸಭೆ ಹಾಗೂ ರಾಜ್ಯಸಭೆಗಳೆರಡರಲ್ಲೂ ಅಂಗೀಕಾರದ ಅಗತ್ಯವಿದೆ ಎಂದು ಮಿರ್ಧಾ ಹೇಳುವುದನ್ನು ಕೇಳಬಹುದು.

ಕಾಂಗ್ರೆಸ್ ಸಂಸದ ಶಶಿ ತರೂರ್ ಮಿರ್ಧಾ ಹೇಳಿಕೆಗೆ ಪ್ರತಿಕ್ರಿಯಿಸಿ, ಅನಂತ್ ಕುಮಾರ್‌ ಹೆಗಡೆ ಸಂವಿಧಾನ ಬದಲಾಯಿಸುವ ಬಗ್ಗೆ ಹೇಳಿದರು, ಬಿಜೆಪಿ ನಾಯಕರು ಅಭ್ಯರ್ಥಿ ಪಟ್ಟಿಯಿಂದ ಅವರನ್ನು ಕೈಬಿಟ್ಟಿದ್ದರು. ಈಗ ಮತ್ತೊಬ್ಬ ಬಿಜೆಪಿ ಅಭ್ಯರ್ಥಿ ಬಹಿರಂಗವಾಗಿ ಬಿಜೆಪಿಯ ಉದ್ದೇಶ ಸಂವಿಧಾನವನ್ನು ಬದಲಿಸುವುದಾಗಿದೆ ಎಂದು ಹೇಳಿದ್ದಾರೆ. ಸತ್ಯವನ್ನು ಬಹಿರಂಗಪಡಿಸಿದ್ದಕ್ಕಾಗಿ ಬಿಜೆಪಿ ಇನ್ನೂ ಎಷ್ಟು ಅಭ್ಯರ್ಥಿಗಳಿಗೆ ಟಿಕೆಟ್‌ ನಿರಾಕರಿಸಬಹುದು ಎಂದು ಪ್ರಶ್ನಿಸಿದ್ದಾರೆ.

ತರೂರ್ ಅವರ ಟ್ವೀಟ್‌ನ್ನು ಉಲ್ಲೇಖಿಸಿ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಪ್ರತಿಕ್ರಿಯೆ ನೀಡಿದ್ದು, ಇವೆಲ್ಲವನ್ನೂ ಮಹಾಸೂತ್ರದಾರರೇ ಆಯೋಜಿಸಿದ್ದಾರೆ. ಇದು ಉದ್ದೇಶಪೂರ್ವಕ ತಂತ್ರವಾಗಿದೆ ಎಂದು ಹೇಳಿದ್ದಾರೆ.

ಈ ಕ್ಷೇತ್ರದಲ್ಲಿ ಇಂಡಿಯಾ ಮೈತ್ರಿಕೂಟದ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ‘ರಾಷ್ಟ್ರೀಯ ಲೋಕತಾಂತ್ರಿಕ ಪಕ್ಷದ ಮುಖ್ಯಸ್ಥ ಹನುಮಾನ್ ಬೇನಿವಾಲ್ ಈ ಬಗ್ಗೆ ಪ್ರತಿಕ್ರಿಯಿಸಿದ್ದು, ಬಾಬಾಸಾಹೇಬರ ಸಂವಿಧಾನವನ್ನು ಮುಗಿಸಲು ಬಿಜೆಪಿ ಮುಂದಾಗಿದೆ ಎಂಬುದನ್ನು ಈ ಹೇಳಿಕೆ ಸ್ಪಷ್ಟಪಡಿಸುತ್ತದೆ ಎಂದು ಹೇಳಿದ್ದಾರೆ.

1950ರಿಂದ ಸಂವಿಧಾನಕ್ಕೆ 106 ತಿದ್ದುಪಡಿಗಳನ್ನು ಮಾಡಲಾಗಿದೆ. ನಮ್ಮ ಪವಿತ್ರ ಸಂವಿಧಾನವು ಜೀವಂತ ದಾಖಲೆಯಾಗಿದೆ. ಜನರು ಮತ್ತು ದೇಶದ ಕಲ್ಯಾಣವನ್ನು ಪರಿಗಣಿಸಿ ಕಾಲಕಾಲಕ್ಕೆ ತಿದ್ದುಪಡಿ ಮಾಡಲಾಗುತ್ತದೆ ಎಂದು ಮಿರ್ಧಾ ತನ್ನ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ.

ಇದನ್ನು ಓದಿ: ಮಹುವಾ ಮೊಯಿತ್ರಾ ವಿರುದ್ಧ ಮನಿ ಲಾಂಡರಿಂಗ್ ಕೇಸ್ ದಾಖಲಿಸಿದ ಜಾರಿ ನಿರ್ದೇಶನಾಲಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಪರೇಷನ್ ಡೆಮಾಲಿಶ್‌ಮೆಂಟ್ ಅಡಿಯಲ್ಲಿ 200ಕ್ಕೂ ಹೆಚ್ಚು ನಕ್ಸಲ್ ಸ್ಮಾರಕಗಳನ್ನು ನೆಲಸಮಗೊಳಿಸಿದ ಭದ್ರತಾ ಪಡೆಗಳು 

ನವದೆಹಲಿ: ನಕ್ಸಲ್ ಚಟುವಟಿಕೆಗಳ ವಿರುದ್ಧ ತೀವ್ರಗೊಂಡ ಕಾರ್ಯಾಚರಣೆ ನಿರ್ಣಾಯಕ ಹಂತವನ್ನು ಪ್ರವೇಶಿಸಿರುವುದಾಗಿ ಭದ್ರತಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.  ಆಪರೇಷನ್ ಡೆಮಾಲಿಶ್‌ಮೆಂಟ್ ಎಂದು ಕರೆಯಲ್ಪಡುವ ಇತ್ತೀಚಿನ ಕಾರ್ಯಾಚರಣೆಯ ಅಡಿಯಲ್ಲಿ ನಕ್ಸಲ್ ಕಾರ್ಯಕರ್ತರು ತಮ್ಮ ನಾಯಕರನ್ನು ಸ್ಮರಿಸಲು ಮತ್ತು...

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....

ಕೋಝಿಕ್ಕೋಡ್‌: ಆಹಾರ ಸೇವಿಸಿ, ಬಿಲ್ ಪಾವತಿಸಲು ನಿರಾಕರಿಸಿದ ಮೂವರ ತಂಡದಿಂದ ರೆಸ್ಟೋರೆಂಟ್ ಧ್ವಂಸ

ಕೋಝಿಕ್ಕೋಡ್ (ಕೇರಳ): ಆಹಾರ ಸೇವಿಸಿ, ಹಣ ನೀಡಲು ನಿರಾಕರಿಸಿದ ಮೂವರು ಸದಸ್ಯರ ಗುಂಪೊಂದು ಬಿಲ್ ಕೇಳಿದ್ದಕ್ಕೆ ರೆಸ್ಟೋರೆಂಟ್ ಅನ್ನು ಧ್ವಂಸಗೊಳಿಸಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪ್ರಕರಣ ಸಂಬಂಧ ಒಬ್ಬ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು,...

ಲೈಂಗಿಕ ದೌರ್ಜನ್ಯ ಆರೋಪ : ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜ್ಯೋತಿಷ್ ಪೀಠದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ವಿಶೇಷ ಪೋಕ್ಸೋ ನ್ಯಾಯಾಲಯ...

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...

ಚಿಕ್ಕಮಗಳೂರಿನಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ ಎರಡನೇ ಸಾವು; ಆನೆ ಸೆರೆ; ಸರ್ಕಾರದ ವಿರುದ್ಧ ಸ್ಥಳೀಯರ ಪ್ರತಿಭಟನೆ

ಚಿಕ್ಕಮಗಳೂರಿನ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಮಾನವ ಹಾಗೂ ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದ್ದು, ಒಂದೇ ವಾರದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟಿದ್ದಾರೆ. ಭಾನುವಾರ ಬೆಳಗ್ಗೆ ತೋಟದ ಕೆಲಸಕ್ಕೆ ತೆರಳಿದಾಗ ಹೊಸಪೇಟೆ ಮೂಲದ ಬೋರಮ್ಮ(34), ಕಾಡಾನೆ...

ಬಿಜೆಪಿ ಸೇರ್ಪಡೆಯಾದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೋರಾ ಭಾನುವಾರ (ಫೆ.22) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೋರಾ ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ...

ದೆಹಲಿಯಲ್ಲಿ ಭಯೋತ್ಪಾದನಾ ಸಂಚು ಆರೋಪ: ಬಾಂಗ್ಲಾದೇಶಿ ಪ್ರಜೆಗಳು ಸೇರಿ ಎಂಟು ಮಂದಿ ಬಂಧನ

ನವದೆಹಲಿ: ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಉಗ್ರಗಾಮಿ ಸಂಘಟನೆಗಳ ಸೂಚನೆಯ ಮೇರೆಗೆ ದೆಹಲಿಯಲ್ಲಿ ಪ್ರಮುಖ ಭಯೋತ್ಪಾದಕ ಪಿತೂರಿ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಎಂಟು ಶಂಕಿತರನ್ನು ಬಂಧಿಸಲಾಗಿದೆ ಎಂದು ಪೊಲೀಸ್...