Homeಅಂತರಾಷ್ಟ್ರೀಯನ್ಯೂಯಾರ್ಕ್ ಪೊಲೀಸರಿಂದ ಮತ್ತೊಬ್ಬ ಕಪ್ಪು ವ್ಯಕ್ತಿಯ ಹತ್ಯೆ : ಸಾಕ್ಷ್ಯ ಬಿಡುಗಡೆ ಮಾಡಿದ ಮೃತನ ಕುಟುಂಬ

ನ್ಯೂಯಾರ್ಕ್ ಪೊಲೀಸರಿಂದ ಮತ್ತೊಬ್ಬ ಕಪ್ಪು ವ್ಯಕ್ತಿಯ ಹತ್ಯೆ : ಸಾಕ್ಷ್ಯ ಬಿಡುಗಡೆ ಮಾಡಿದ ಮೃತನ ಕುಟುಂಬ

ಮಾರ್ಚ್ 30 ರಂದು ಸಂಭವಿಸಿದ್ದ ಈ ಸಾವು, ಮೃತನ ಕುಟುಂಬ ನಿನ್ನೆಯ ಸುದ್ಧಿಗೋಷ್ಟಿಯಲ್ಲಿ ಈ ಕುರಿತು ದಾಖಲೆಗಳು ಮತ್ತು ವಿಡಿಯೋವೊಂದನ್ನು ಬಿಡುಗಡೆ ಮಾಡುವ ತನಕ ಇದು ಒಂದು ಹತ್ಯೆಯಾಗಿ ಸಾರ್ವಜನಿಕರ ಗಮನ ಸೆಳೆದಿರಲಿಲ್ಲ.

- Advertisement -
- Advertisement -

ಪಶ್ಚಿಮ ನ್ಯೂಯಾರ್ಕ್ ನಗರದಲ್ಲಿ ಬೆತ್ತಲೆಯಾಗಿ ಓಡಿಬರುತ್ತಿರುವ ಕಪ್ಪು ವ್ಯಕ್ತಿಯೊಬ್ಬನನ್ನು ಪೊಲೀಸರು ಉಸಿರುಗಟ್ಟುವಂತೆ ಮಾಡಿ ಹತ್ಯೆಗೈದಿದ್ದಾರೆ. ಈ ಕುರಿತು ಮೃತ ವ್ಯಕ್ತಿಯ ಕುಟುಂಬ ಬುಧವಾರ ವೀಡಿಯೋವೊಂದನ್ನು ಬಿಡುಗಡೆ ಮಾಡಿದೆ.

ಮೃತ ವ್ಯಕ್ತಿಯ ಕುಟುಂಬ ಬಿಡುಗಡೆ ಮಾಡಿದ ದಾಖಲೆ ಮತ್ತು ವಿಡಿಯೋ ದೃಶ್ಯದಲ್ಲಿ, ಪೊಲೀಸ್ ಅಧಿಕಾರಿಗಳ ಗುಂಪೊಂದು ಆತನ ತಲೆಗೆ ಮುಂಗಡಿಯೊಂದನ್ನು (Hood) ಹಾಕಿ, ಮುಖವನ್ನು ಎರಡು ನಿಮಿಷಗಳ ಕಾಲ ರಸ್ತೆಗೆ ಒತ್ತಿ, ಉಸಿರುಗಟ್ಟುವಂತೆ ಮಾಡಿ ಹತ್ಯೆ ಮಾಡಿದ್ದಾರೆ ಎಂಬುದು ತಿಳಿದುಬಂದಿದೆ.

ಮಾರ್ಚ್ 30 ರಂದು ಸಂಭವಿಸಿದ್ದ ಈ ಸಾವು, ಮೃತನ ಕುಟುಂಬ ನಿನ್ನೆಯ ಸುದ್ಧಿಗೋಷ್ಟಿಯಲ್ಲಿ ಈ ಕುರಿತು ದಾಖಲೆಗಳು ಮತ್ತು ವಿಡಿಯೋವೊಂದನ್ನು ಬಿಡುಗಡೆ ಮಾಡುವ ತನಕ ಇದು ಒಂದು ಹತ್ಯೆಯಾಗಿ ಸಾರ್ವಜನಿಕರ ಗಮನ ಸೆಳೆದಿರಲಿಲ್ಲ.

ರೋಚೆಸ್ಟರ್‌ನಲ್ಲಿ ಪೊಲೀಸರಿಂದ ಎನ್ ಕೌಂಟರ್ ಆದ ಏಳು ದಿನಗಳ ನಂತರ, ಡೇನಿಯಲ್ ಪ್ರೂಡ್ ಕೃತಕ ಉಸಿರಾಟದಲ್ಲಿದ್ದರು. ನಂತರ ಮಾರ್ಚ್ 30 ರಂದು ಸಾವನ್ನಪ್ಪಿದ್ದರು.

ಸುದ್ಧಿಗೋಷ್ಟಿಯಲ್ಲಿ ಮಾತನಾಡಿದ ಡೇನಿಯಲ್ ಪ್ರೂಡ್ ಅವರ ಸಹೋದರ ಜೋ ಪ್ರೂಡ್, “ನೀವು ಅವನನ್ನು  ಹೇಗೆ ನೋಡಿದಿರಿ. ರಕ್ಷಣೆಯಿಲ್ಲದ ಮನುಷ್ಯ ನೆಲೆದ ಮೇಲೆ ಬೆತ್ತಲೆಯಾಗಿ ಬಿದ್ದಿದ್ದಾನೆ. ಅವನ ಕೈಗೆ ಕೋಳ ತೊಡಿಸಲಾಗಿದೆ. ಈ ಸಮಾಜ ಇದನ್ನು ಅರ್ಥಮಾಡಿಕೊಳ್ಳಲು ಇನ್ನೂ ಎಷ್ಟು ಜನ ಸಹೋದರರು ಹೀಗೆ ಸಾಯಬೇಕು?” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮೃತನ ಸಹೋದರ ಬಿಡುಗಡೆ ಮಾಡಿರುವ ವೀಡಿಯೋದಲ್ಲಿ ಪೋಲಿಸರ ಕ್ರೂರತೆ ಮತ್ತು ಹತ್ಯೆ, ಪೊಲೀಸ್ ಮತ್ತು ಡೇನಿಯಲ್ ಫ್ರೂಡ್ ನ ಸಂಭಾಷಣೆಯ ಸಮೇತ ಸ್ಪಷ್ಟವಾಗಿ ದಾಖಲಾಗಿದೆ ಎಂದು ಹಿಂದೂಸ್ಥಾನ್ ಟೈಮ್ಸ್ ವರದಿ ಮಾಡಿದೆ.

ಇದನ್ನೂ ಓದಿ: ಪ್ರತಿಭಟನಾಕಾರರಿಗೆ ಹೆದರಿ ಶ್ವೇತಭವನದ ಬಂಕರ್ ನಲ್ಲಿ ಅಡಗಿದ ಡೊನಾಲ್ಡ್ ಟ್ರಂಪ್

ಅಮೆರಿಕದಲ್ಲಿ ಇತ್ತೀಚೆಗೆ ಜಾರ್ಜ್ ಫ್ಲಾಯ್ಡ್ ಎಂಬ ಕಪ್ಪು ಜನಾಂಗದ ವ್ಯಕ್ತಿಯನ್ನು ಪೊಲೀಸ್ ಓರ್ವ ಕತ್ತಿನ ಮೇಲೆ ತುಳಿದು ಅಮಾನವೀಯವಾಗಿ ಕೊಂದ ಘಟನೆ, ಅಲ್ಲಿ ದೊಡ್ಡ ಹೋರಾಟಕ್ಕೆ ಕಾರಣವಾಗಿತ್ತು.

ಪ್ರೂಡ್ ಚಿಕಾಗೊ ಮೂಲದವನಾಗಿದ್ದು, ತನ್ನ ಕುಟುಂಬದ ಭೇಟಿಗಾಗಿ ನ್ಯೂಯಾರ್ಕ್ ನ ರೋಚೆಸ್ಟರ್‌ಗೆ ಬಂದಿದ್ದನು. ಜೋ ಪ್ರೂಡ್, “911 ಗೆ ಕರೆ ಮಾಡಿ, ಮನೆಯಿಂದ ಹೊರಹೋಗಿರುವ ತನ್ನ ಸಹೋದರ ಮಾನಸಿಕ ಆರೋಗ್ಯ ಸಮಸ್ಯೆಗಳನ್ನು ಎದುರಿಸುತ್ತಿದ್ದಾನೆ ಎಂದು ಹೇಳಿದ ನಂತರ ಪೊಲೀಸರು ಪ್ರತಿಕ್ರಿಯಿಸಿದ್ದರು” ಎಂದು ಹೇಳಿದ್ದಾರೆ.

ಏಪ್ರಿಲ್ ನಲ್ಲಿ ರಾಜ್ಯ ಅಟಾರ್ನಿ ಜನರಲ್ ಲೆಟಿಟಿಯಾ ಜೇಮ್ಸ್ ಕಚೇರಿ ಸ್ವಯಂ ತನಿಖೆಯನ್ನು ಪ್ರಾರಂಭಿಸಿದಾಗ, ನಗರವು ಪ್ರೂಡ್ ಸಾವಿನ ತನಿಖೆಯನ್ನು ನಿಲ್ಲಿಸಿತು. ನ್ಯೂಯಾರ್ಕ್ ಕಾನೂನಿನ ಪ್ರಕಾರ, ಪೊಲೀಸ್ ಕಸ್ಟಡಿಯಲ್ಲಿರುವ ನಿರಾಯುಧ ಜನರ ಸಾವುಗಳನ್ನು ಸ್ಥಳೀಯ ಅಧಿಕಾರಿಗಳು ನಿರ್ವಹಿಸುವ ಬದಲು ಅಟಾರ್ನಿ ಜನರಲ್ ಕಚೇರಿಗೆ ವರ್ಗಾಯಿಸಲಾಗುತ್ತದೆ. ತನಿಖೆ ಮುಂದುವರೆದಿದೆ ಎಂದು ಜೇಮ್ಸ್ ಬುಧವಾರ ಹೇಳಿದ್ದಾರೆ.

ಇದನ್ನೂ ಓದಿ: ತಮಿಳುನಾಡು ಲಾಕಪ್ ಡೆತ್: ಭಾರತದ ಜಾರ್ಜ್ ಫ್ಲಾಯ್ಡ್ ಎಂದು ಆಕ್ರೋಶ ವ್ಯಕ್ತಪಡಿಸಿದ ನೆಟ್ವಿಗರು.

ಇತ್ತೀಚಿನ ವರ್ಷಗಳಲ್ಲಿ ಅಮೇರಿಕಾ ಮತ್ತು ಇತರ ದೇಶಗಳಲ್ಲಿ ಹಲವಾರು ಕೈದಿಗಳ ಸಾವಿಗೆ ಸ್ಪಿಟ್ ಹುಡ್ ಗಳು ಪ್ರಮುಖ ಅಂಶವೆಂದು ಪರಿಶೀಲಿಸಲಾಗಿದೆ.

“ಆತ ನಿರಂತರವಾಗಿ ಉಗುಳುತ್ತಿದ್ದ. ಹಾಗಾಗಿ ಕೊರೊನಾ ಬಗ್ಗೆ ಕಾಳಜಿ ವಹಿಸುತ್ತಿರುವುದರಿಂದ ಅಧಿಕಾರಿಗಳ ನಿರ್ದೇಶನದಲ್ಲಿ ಅವರು ಪ್ರೂಡ್ ಮೇಲೆ ಹುಡ್ ಹಾಕಿದ್ದಾರೆ” ಎಂದು ಒಬ್ಬ ಅಧಿಕಾರಿ ಹೇಳಿದ್ದಾರೆ.

ಇನ್ನೂ, ಹಲವು ಹೋರಾಟಗಾರರು ಮತ್ತು ಕಾರ್ಯಕರ್ತರು “ಪ್ರೂಡ್ ಅವರ ಸಾವಿಗೆ ಸಂಬಂಧಿಸಿದ ಅಧಿಕಾರಿಗಳ ಮೇಲೆ ಕೊಲೆ ಆರೋಪದಲ್ಲಿ ಕಾನೂನು ಕ್ರಮ ಜರುಗಿಸಬೇಕು. ಅವರನ್ನು ಇಲಾಖೆಯಿಂದ ವಜಾಗೊಳಿಸಬೇಕು” ಎಂದು ಒತ್ತಾಯಿಸಿದ್ದಾರೆ.

“ಮಾನಸಿಕ ಆರೋಗ್ಯ ಸಮಸ್ಯೆಯನ್ನು ಹೊಂದಿರುವ ವ್ಯಕ್ತಿಗಳನ್ನು ನಿಭಾಯಿಸಲು ಅವರು ಸಜ್ಜುಗೊಂಡಿಲ್ಲ ಎಂದು ಪೊಲೀಸರು ಮತ್ತೆ ಮತ್ತೆ ನಮಗೆ ತೋರಿಸಿದ್ದಾರೆ. ಈ ಅಧಿಕಾರಿಗಳಿಗೆ ಕೊಲ್ಲಲು ತರಬೇತಿ ನೀಡಲಾಗುತ್ತದೆ. ಡೇನಿಯಲ್ ಪ್ರೂಡ್ ಅವರನ್ನು ರಕ್ಷಿಸುವ ಬದಲು ಅಪಹಾಸ್ಯ ಮಾಡಲು ಈ ಅಧಿಕಾರಿಗಳಿಗೆ ತರಬೇತಿ ನೀಡಲಾಗಿದೆ” ಎಂದು ಸುದ್ದಿಗೋಷ್ಠಿಯಲ್ಲಿ ಫ್ರೀ ದಿ ಪೀಪಲ್ ಆರ್ ಒ ಸಿಯ ಆಶ್ಲೇ ಗ್ಯಾಂಟ್ ಹೇಳಿದರು.

ಪೊಲೀಸ್ ಪ್ರಧಾನ ಕಚೇರಿಯಾಗಿ ಕಾರ್ಯನಿರ್ವಹಿಸುವ ರೋಚೆಸ್ಟರ್‌ನ ಸಾರ್ವಜನಿಕ ಸುರಕ್ಷತಾ ಕಟ್ಟಡದ ಹೊರಗೆ ಹಲವು ಪ್ರತಿಭಟನಾಕಾರರು ಬುಧವಾರ ಜಮಾಯಿಸಿದರು. “ವಾರೆನ್ ಮಾಧ್ಯಮಗಳೊಂದಿಗೆ ಮಾತನಾಡುತ್ತಿರುವಾಗ ಕಟ್ಟಡವನ್ನು ಪ್ರವೇಶಿಸಿದ ನಂತರ ಹಲವಾರು ಸಂಘಟಕರನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ” ಎಂದು ಫ್ರೀ ದಿ ಪೀಪಲ್ ಆರ್ ಒ ಸಿ ಹೇಳಿದೆ.


ಇದನ್ನೂ ಓದಿ: ಟ್ರಂಪ್ ‌ಟವರ್‌ ಮುಂದೆ ’ಬ್ಲ್ಯಾಕ್ ಲೈವ್ಸ್ ಮ್ಯಾಟರ್‌’ ಎಂದು ಬರೆದ ಚಳವಳಿಗಾರರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾತ್ಯತೀತ ತಾಣ ಬಾಬಾ ಬುಡನ್‌ ಗಿರಿಯಲ್ಲಿ ‘ವೈದಿಕ ಆಚರಣೆ’ಗೆ ವಿರೋಧ; ಕಾಂಗ್ರೆಸ್‌ ಸರ್ಕಾರದ ವಿರುದ್ದ ಪ್ರತಿಭಟನೆ

ಕೋಮುವಾದಿಗಳು ಎಷ್ಟೇ ವಿಷಯ ತಿರುಚುವ ಕೆಲಸ ಮಾಡಿದರೂ ಬಾಬಾ ಬುಡನ್ ಗಿರಿಯ ಜಾತ್ಯತೀತ ಹಿನ್ನೆಲೆಯನ್ನು ಮುಚ್ಚಿಡುವುದಕ್ಕೆ ಸಾಧ್ಯವಿಲ್ಲ. ಅಲ್ಲಿನ ಸೌಹಾರ್ಧ ಪರಂಪರೆಯನ್ನು ಬದಿಗೆ ಸರಿಸಿ, ವೈದಿಕ ಆಚರಣೆಗೆ ಅನುಮತಿ ನೀಡುವ ಮೂಲಕ ಹಿಂದುತ್ವ...

ಶ್ರೀಲಂಕಾ ಕರಾವಳಿಯಲ್ಲಿ ಇರಾನ್ ಯುದ್ಧನೌಕೆ ಮೇಲೆ ಜಲಾಂತರ್ಗಾಮಿ ದಾಳಿ: ಸಮುದ್ರದಲ್ಲಿ ಶವಗಳು ಪತ್ತೆ

ಶ್ರೀಲಂಕಾದ ದಕ್ಷಿಣ ಕರಾವಳಿಯಲ್ಲಿ ಬುಧವಾರ ಜಲಾಂತರ್ಗಾಮಿ ದಾಳಿಯ ನಂತರ ಇರಾನ್ ನೌಕಾ ಯುದ್ಧನೌಕೆ ಐರಿಸ್ ದೇನಾ ಮುಳುಗಿದೆ ಎಂದು ವರದಿಯಾಗಿದೆ.  ಈ ದಾಳಿಯಲ್ಲಿ ಕನಿಷ್ಠ 101 ಜನರು ಕಾಣೆಯಾಗಿದ್ದಾರೆ ಮತ್ತು 78 ಜನರು ಗಾಯಗೊಂಡಿದ್ದಾರೆ,...

ಹೆದ್ದಾರಿಯಲ್ಲಿ ದ್ವೇಷ ಬರಹ : ಮುಸ್ಲಿಮರು ಭಾರತದಲ್ಲಿ ‘ಬಾಡಿಗೆದಾರರು’ ಅವರು ಹಾಗೆಯೇ ಬದುಕಬೇಕು ಎಂದ ಹಿಂದೂ ರಕ್ಷಾ ದಳದ ಸದಸ್ಯರು

2026ರ ಫೆಬ್ರವರಿ 26 ಮತ್ತು 27ರ ನಡುವಿನ ಮಧ್ಯರಾತ್ರಿ ಉತ್ತರ ಪ್ರದೇಶದ ದೆಹಲಿ–ಡೆಹ್ರಾಡೂನ್ ರಾಷ್ಟ್ರೀಯ ಹೆದ್ದಾರಿಯ ತಡೆಗೋಡೆಯ ಮೇಲೆ ಹಿಂದೂ ರಕ್ಷಾ ದಳಕ್ಕೆ (ಹೆಚ್‌ಆರ್‌ಡಿ) ಸೇರಿದ ಮಹಿಳೆಯರು ಹಿಂದಿಯಲ್ಲಿ “मुसलमान के लिए...

ಇರಾನ್‌ನ ಮುಂದಿನ ಸರ್ವೋಚ್ಚ ನಾಯಕ ಯಾರೇ ಆದರೂ ಹತ್ಯೆಗೆ ಗುರಿಯಾಗುತ್ತಾನೆ: ಇಸ್ರೇಲ್ ರಕ್ಷಣಾ ಸಚಿವನಿಂದ ಬೆದರಿಕೆ

ದುಬೈ: ‘ಅಯತೊಲ್ಲಾ ಅಲಿ ಖಮೇನಿ ಉತ್ತರಾಧಿಕಾರಿಯಾಗಿ ಯಾರೇ ಆಯ್ಕೆಯಾದರೂ ಅವರನ್ನು ಹತ್ಯೆ ಮಾಡುತ್ತೇವೆ’ ಎಂದು ಇಸ್ರೇಲ್ ರಕ್ಷಣಾ ಸಚಿವ ಕಾಟ್ಜ್ ಬುಧವಾರ ಪರೋಕ್ಷವಾಗಿ ಬೆದರಿಕೆ ಹಾಕಿದ್ದಾರೆ. ಈ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿರುವ...

ಇರಾನ್ ಮೇಲಿನ ಇಸ್ರೇಲ್-ಅಮೆರಿಕ ದಾಳಿಗಳು ಅಂತರರಾಷ್ಟ್ರೀಯ ಕಾನೂನಿಗೆ ಸರಿ ಹೊಂದುವುದಿಲ್ಲ: ಕೆನಡಾ ಪ್ರಧಾನಿ ಮಾರ್ಕ್ ಕಾರ್ನಿ

ಸಿಡ್ನಿ: ಇರಾನ್ ಮೇಲಿನ ಅಮೆರಿಕ ಮತ್ತು ಇಸ್ರೇಲ್ ದಾಳಿಗಳನ್ನು "ವಿಷಾದದಿಂದ" ಬೆಂಬಲಿಸುವುದಾಗಿ ಕೆನಡಾ ಪ್ರಧಾನಿ ಮಾರ್ಕ್ ಕಾರ್ನಿ ಹೇಳಿದ್ದಾರೆ. ಆದರೆ ಈ ಸಂಘರ್ಷವು ಅಂತರರಾಷ್ಟ್ರೀಯ ಕ್ರಮದ ವೈಫಲ್ಯವನ್ನು ಪ್ರತಿಬಿಂಬಿಸುತ್ತದೆ ಎಂದು ಅವರು...

ಉತ್ತರ ಪ್ರದೇಶ | ಅತ್ಯಾಚಾರ ಸಂತ್ರಸ್ತೆಯನ್ನು ಗುಂಡಿಕ್ಕಿ ಕೊಂದ ಆರೋಪಿ

ಸುಮಾರು 17 ವರ್ಷದ ಅತ್ಯಾಚಾರ ಸಂತ್ರಸ್ತೆಯನ್ನು 22 ವರ್ಷದ ಆರೋಪಿ ಗುಂಡಿಕ್ಕಿ ಕೊಂದು ಪರಾರಿಯಾಗಿರುವ ಘಟನೆ ಉತ್ತರ ಪ್ರದೇಶದ ಬಸ್ತಿ ಜಿಲ್ಲೆಯಲ್ಲಿ ನಡೆದಿದೆ. ಸದ್ಯ ತಲೆಮರೆಸಿಕೊಂಡಿರುವ ಆರೋಪಿಯ ಹುಡುಕಾಟ ನಡೆಯುತ್ತಿದೆ ಎಂದು ಪೊಲೀಸರು...

ಹಾರ್ಮುಜ್ ಜಲಸಂಧಿ ಮುಚ್ಚಿದ ಇರಾನ್; ಪರ್ಷಿಯನ್ ಕೊಲ್ಲಿಯಲ್ಲಿ ಸಿಲುಕಿಸಿದ 37 ಭಾರತೀಯ ಹಡಗುಗಳು

ಇಸ್ರೇಲ್-ಯುಎಸ್ ಜಂಟಿ ದಾಳಿಯ ನಂತರ, ಇರಾನ್ ಹಾರ್ಮುಜ್ ಜಲಸಂಧಿಯನ್ನು ಮುಚ್ಚಿರುವುದರಿಂದ ಭಾರತೀಯ ಹಡಗುಗಳು ಬಿಕ್ಕಟ್ಟಿನಲ್ಲಿ ಸಿಲುಕಿಕೊಂಡಿವೆ. ಭಾರತೀಯ ಧ್ವಜ ಹೊಂದಿರುವ 37 ಹಡಗುಗಳು ಪರ್ಷಿಯನ್ ಕೊಲ್ಲಿ ಮತ್ತು ಒಮಾನ್ ನೀರಿನಲ್ಲಿ ಸಿಲುಕಿಕೊಂಡಿವೆ. 37 ಹಡಗುಗಳು...

ಪಾಲ್ಘರ್: ಮುಂಬೈ-ಅಹಮದಾಬಾದ್ ಹೆದ್ದಾರಿಯಲ್ಲಿ ಹೊತ್ತಿ ಉರಿದ ಟೆಂಪೋ: 28 ವರ್ಷದ ಚಾಲಕ ಸಜೀವ ದಹನ, ಕ್ಲೀನರ್ ಗೆ ಗಾಯ

ಪಾಲ್ಘರ್: ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ಮುಂಬೈ-ಅಹಮದಾಬಾದ್ ಹೆದ್ದಾರಿಯಲ್ಲಿ ಟೆಂಪೋಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ಪಂಜಾಬ್‌ನ 28 ವರ್ಷದ ಚಾಲಕ ಸುಟ್ಟು ಕರಕಲಾಗಿದ್ದು, ಕ್ಲೀನರ್ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ಘಟನೆಯ ಬಗ್ಗೆ ಜನನಿಬಿಡ...

ಗುಜರಾತ್| ಅಂತರ್ಧರ್ಮೀಯ ದಂಪತಿಗೆ ಪೊಲೀಸರ ರಕ್ಷಣೆ; ‘ಲವ್ ಜಿಹಾದ್’ ಎಂದು ಕೂಗಿದ ವಿಎಚ್‌ಪಿ

ಮಾರ್ಚ್ 3 ರಂದು ಗುಜರಾತ್‌ನ ಅಹಮದಾಬಾದ್‌ನ ಮೆಟ್ರೋ ನ್ಯಾಯಾಲಯದ ಸಂಕೀರ್ಣದೊಳಗಿನ ವಿವಾಹ ನೋಂದಣಿ ಕಚೇರಿಯು ಅವ್ಯವಸ್ಥೆಯ ತಾಣವಾಯಿತು. ಗಾಂಧಿನಗರದ ಹಿಂದೂ ಮಹಿಳೆಯೊಬ್ಬರು ನಗರದ ಮುಸ್ಲಿಂ ವ್ಯಕ್ತಿಯನ್ನು ಮದುವೆಯಾಗಲು ಬಂದ ನಂತರ ಹಿಂದುತ್ವ ಸಂಘಟನೆಯ...

ಖಮೇನಿ ಹತ್ಯೆ ಕುರಿತು ಪೋಸ್ಟ್‌ : ನ್ಯಾಷನಲ್ ಕಾನ್ಫರೆನ್ಸ್ ಸಂಸದ, ಶ್ರೀನಗರದ ಮಾಜಿ ಮೇಯರ್ ವಿರುದ್ಧ ಎಫ್‌ಐಆರ್

ದಾರಿತಪ್ಪಿಸುವ ಆನ್‌ಲೈನ್ ವಿಷಯವನ್ನು ಹಂಚಿಕೊಂಡ ಆರೋಪದ ಮೇಲೆ ಜಮ್ಮು ಕಾಶ್ಮೀರದ ಆಡಳಿತಾರೂಢ ನ್ಯಾಷನಲ್ ಕಾನ್ಫರೆನ್ಸ್ ಸಂಸದ ಅಗಾ ಸೈಯದ್ ರೂಹುಲ್ಲಾ ಮೆಹದಿ ಮತ್ತು ಶ್ರೀನಗರದ ಮಾಜಿ ಮೇಯರ್ ಜುನೈದ್ ಅಝೀಂ ಮಟ್ಟು ವಿರುದ್ಧ...