Homeಅಂತರಾಷ್ಟ್ರೀಯನ್ಯೂಯಾರ್ಕ್ ಪೊಲೀಸರಿಂದ ಮತ್ತೊಬ್ಬ ಕಪ್ಪು ವ್ಯಕ್ತಿಯ ಹತ್ಯೆ : ಸಾಕ್ಷ್ಯ ಬಿಡುಗಡೆ ಮಾಡಿದ ಮೃತನ ಕುಟುಂಬ

ನ್ಯೂಯಾರ್ಕ್ ಪೊಲೀಸರಿಂದ ಮತ್ತೊಬ್ಬ ಕಪ್ಪು ವ್ಯಕ್ತಿಯ ಹತ್ಯೆ : ಸಾಕ್ಷ್ಯ ಬಿಡುಗಡೆ ಮಾಡಿದ ಮೃತನ ಕುಟುಂಬ

ಮಾರ್ಚ್ 30 ರಂದು ಸಂಭವಿಸಿದ್ದ ಈ ಸಾವು, ಮೃತನ ಕುಟುಂಬ ನಿನ್ನೆಯ ಸುದ್ಧಿಗೋಷ್ಟಿಯಲ್ಲಿ ಈ ಕುರಿತು ದಾಖಲೆಗಳು ಮತ್ತು ವಿಡಿಯೋವೊಂದನ್ನು ಬಿಡುಗಡೆ ಮಾಡುವ ತನಕ ಇದು ಒಂದು ಹತ್ಯೆಯಾಗಿ ಸಾರ್ವಜನಿಕರ ಗಮನ ಸೆಳೆದಿರಲಿಲ್ಲ.

- Advertisement -
- Advertisement -

ಪಶ್ಚಿಮ ನ್ಯೂಯಾರ್ಕ್ ನಗರದಲ್ಲಿ ಬೆತ್ತಲೆಯಾಗಿ ಓಡಿಬರುತ್ತಿರುವ ಕಪ್ಪು ವ್ಯಕ್ತಿಯೊಬ್ಬನನ್ನು ಪೊಲೀಸರು ಉಸಿರುಗಟ್ಟುವಂತೆ ಮಾಡಿ ಹತ್ಯೆಗೈದಿದ್ದಾರೆ. ಈ ಕುರಿತು ಮೃತ ವ್ಯಕ್ತಿಯ ಕುಟುಂಬ ಬುಧವಾರ ವೀಡಿಯೋವೊಂದನ್ನು ಬಿಡುಗಡೆ ಮಾಡಿದೆ.

ಮೃತ ವ್ಯಕ್ತಿಯ ಕುಟುಂಬ ಬಿಡುಗಡೆ ಮಾಡಿದ ದಾಖಲೆ ಮತ್ತು ವಿಡಿಯೋ ದೃಶ್ಯದಲ್ಲಿ, ಪೊಲೀಸ್ ಅಧಿಕಾರಿಗಳ ಗುಂಪೊಂದು ಆತನ ತಲೆಗೆ ಮುಂಗಡಿಯೊಂದನ್ನು (Hood) ಹಾಕಿ, ಮುಖವನ್ನು ಎರಡು ನಿಮಿಷಗಳ ಕಾಲ ರಸ್ತೆಗೆ ಒತ್ತಿ, ಉಸಿರುಗಟ್ಟುವಂತೆ ಮಾಡಿ ಹತ್ಯೆ ಮಾಡಿದ್ದಾರೆ ಎಂಬುದು ತಿಳಿದುಬಂದಿದೆ.

ಮಾರ್ಚ್ 30 ರಂದು ಸಂಭವಿಸಿದ್ದ ಈ ಸಾವು, ಮೃತನ ಕುಟುಂಬ ನಿನ್ನೆಯ ಸುದ್ಧಿಗೋಷ್ಟಿಯಲ್ಲಿ ಈ ಕುರಿತು ದಾಖಲೆಗಳು ಮತ್ತು ವಿಡಿಯೋವೊಂದನ್ನು ಬಿಡುಗಡೆ ಮಾಡುವ ತನಕ ಇದು ಒಂದು ಹತ್ಯೆಯಾಗಿ ಸಾರ್ವಜನಿಕರ ಗಮನ ಸೆಳೆದಿರಲಿಲ್ಲ.

ರೋಚೆಸ್ಟರ್‌ನಲ್ಲಿ ಪೊಲೀಸರಿಂದ ಎನ್ ಕೌಂಟರ್ ಆದ ಏಳು ದಿನಗಳ ನಂತರ, ಡೇನಿಯಲ್ ಪ್ರೂಡ್ ಕೃತಕ ಉಸಿರಾಟದಲ್ಲಿದ್ದರು. ನಂತರ ಮಾರ್ಚ್ 30 ರಂದು ಸಾವನ್ನಪ್ಪಿದ್ದರು.

ಸುದ್ಧಿಗೋಷ್ಟಿಯಲ್ಲಿ ಮಾತನಾಡಿದ ಡೇನಿಯಲ್ ಪ್ರೂಡ್ ಅವರ ಸಹೋದರ ಜೋ ಪ್ರೂಡ್, “ನೀವು ಅವನನ್ನು  ಹೇಗೆ ನೋಡಿದಿರಿ. ರಕ್ಷಣೆಯಿಲ್ಲದ ಮನುಷ್ಯ ನೆಲೆದ ಮೇಲೆ ಬೆತ್ತಲೆಯಾಗಿ ಬಿದ್ದಿದ್ದಾನೆ. ಅವನ ಕೈಗೆ ಕೋಳ ತೊಡಿಸಲಾಗಿದೆ. ಈ ಸಮಾಜ ಇದನ್ನು ಅರ್ಥಮಾಡಿಕೊಳ್ಳಲು ಇನ್ನೂ ಎಷ್ಟು ಜನ ಸಹೋದರರು ಹೀಗೆ ಸಾಯಬೇಕು?” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮೃತನ ಸಹೋದರ ಬಿಡುಗಡೆ ಮಾಡಿರುವ ವೀಡಿಯೋದಲ್ಲಿ ಪೋಲಿಸರ ಕ್ರೂರತೆ ಮತ್ತು ಹತ್ಯೆ, ಪೊಲೀಸ್ ಮತ್ತು ಡೇನಿಯಲ್ ಫ್ರೂಡ್ ನ ಸಂಭಾಷಣೆಯ ಸಮೇತ ಸ್ಪಷ್ಟವಾಗಿ ದಾಖಲಾಗಿದೆ ಎಂದು ಹಿಂದೂಸ್ಥಾನ್ ಟೈಮ್ಸ್ ವರದಿ ಮಾಡಿದೆ.

ಇದನ್ನೂ ಓದಿ: ಪ್ರತಿಭಟನಾಕಾರರಿಗೆ ಹೆದರಿ ಶ್ವೇತಭವನದ ಬಂಕರ್ ನಲ್ಲಿ ಅಡಗಿದ ಡೊನಾಲ್ಡ್ ಟ್ರಂಪ್

ಅಮೆರಿಕದಲ್ಲಿ ಇತ್ತೀಚೆಗೆ ಜಾರ್ಜ್ ಫ್ಲಾಯ್ಡ್ ಎಂಬ ಕಪ್ಪು ಜನಾಂಗದ ವ್ಯಕ್ತಿಯನ್ನು ಪೊಲೀಸ್ ಓರ್ವ ಕತ್ತಿನ ಮೇಲೆ ತುಳಿದು ಅಮಾನವೀಯವಾಗಿ ಕೊಂದ ಘಟನೆ, ಅಲ್ಲಿ ದೊಡ್ಡ ಹೋರಾಟಕ್ಕೆ ಕಾರಣವಾಗಿತ್ತು.

ಪ್ರೂಡ್ ಚಿಕಾಗೊ ಮೂಲದವನಾಗಿದ್ದು, ತನ್ನ ಕುಟುಂಬದ ಭೇಟಿಗಾಗಿ ನ್ಯೂಯಾರ್ಕ್ ನ ರೋಚೆಸ್ಟರ್‌ಗೆ ಬಂದಿದ್ದನು. ಜೋ ಪ್ರೂಡ್, “911 ಗೆ ಕರೆ ಮಾಡಿ, ಮನೆಯಿಂದ ಹೊರಹೋಗಿರುವ ತನ್ನ ಸಹೋದರ ಮಾನಸಿಕ ಆರೋಗ್ಯ ಸಮಸ್ಯೆಗಳನ್ನು ಎದುರಿಸುತ್ತಿದ್ದಾನೆ ಎಂದು ಹೇಳಿದ ನಂತರ ಪೊಲೀಸರು ಪ್ರತಿಕ್ರಿಯಿಸಿದ್ದರು” ಎಂದು ಹೇಳಿದ್ದಾರೆ.

ಏಪ್ರಿಲ್ ನಲ್ಲಿ ರಾಜ್ಯ ಅಟಾರ್ನಿ ಜನರಲ್ ಲೆಟಿಟಿಯಾ ಜೇಮ್ಸ್ ಕಚೇರಿ ಸ್ವಯಂ ತನಿಖೆಯನ್ನು ಪ್ರಾರಂಭಿಸಿದಾಗ, ನಗರವು ಪ್ರೂಡ್ ಸಾವಿನ ತನಿಖೆಯನ್ನು ನಿಲ್ಲಿಸಿತು. ನ್ಯೂಯಾರ್ಕ್ ಕಾನೂನಿನ ಪ್ರಕಾರ, ಪೊಲೀಸ್ ಕಸ್ಟಡಿಯಲ್ಲಿರುವ ನಿರಾಯುಧ ಜನರ ಸಾವುಗಳನ್ನು ಸ್ಥಳೀಯ ಅಧಿಕಾರಿಗಳು ನಿರ್ವಹಿಸುವ ಬದಲು ಅಟಾರ್ನಿ ಜನರಲ್ ಕಚೇರಿಗೆ ವರ್ಗಾಯಿಸಲಾಗುತ್ತದೆ. ತನಿಖೆ ಮುಂದುವರೆದಿದೆ ಎಂದು ಜೇಮ್ಸ್ ಬುಧವಾರ ಹೇಳಿದ್ದಾರೆ.

ಇದನ್ನೂ ಓದಿ: ತಮಿಳುನಾಡು ಲಾಕಪ್ ಡೆತ್: ಭಾರತದ ಜಾರ್ಜ್ ಫ್ಲಾಯ್ಡ್ ಎಂದು ಆಕ್ರೋಶ ವ್ಯಕ್ತಪಡಿಸಿದ ನೆಟ್ವಿಗರು.

ಇತ್ತೀಚಿನ ವರ್ಷಗಳಲ್ಲಿ ಅಮೇರಿಕಾ ಮತ್ತು ಇತರ ದೇಶಗಳಲ್ಲಿ ಹಲವಾರು ಕೈದಿಗಳ ಸಾವಿಗೆ ಸ್ಪಿಟ್ ಹುಡ್ ಗಳು ಪ್ರಮುಖ ಅಂಶವೆಂದು ಪರಿಶೀಲಿಸಲಾಗಿದೆ.

“ಆತ ನಿರಂತರವಾಗಿ ಉಗುಳುತ್ತಿದ್ದ. ಹಾಗಾಗಿ ಕೊರೊನಾ ಬಗ್ಗೆ ಕಾಳಜಿ ವಹಿಸುತ್ತಿರುವುದರಿಂದ ಅಧಿಕಾರಿಗಳ ನಿರ್ದೇಶನದಲ್ಲಿ ಅವರು ಪ್ರೂಡ್ ಮೇಲೆ ಹುಡ್ ಹಾಕಿದ್ದಾರೆ” ಎಂದು ಒಬ್ಬ ಅಧಿಕಾರಿ ಹೇಳಿದ್ದಾರೆ.

ಇನ್ನೂ, ಹಲವು ಹೋರಾಟಗಾರರು ಮತ್ತು ಕಾರ್ಯಕರ್ತರು “ಪ್ರೂಡ್ ಅವರ ಸಾವಿಗೆ ಸಂಬಂಧಿಸಿದ ಅಧಿಕಾರಿಗಳ ಮೇಲೆ ಕೊಲೆ ಆರೋಪದಲ್ಲಿ ಕಾನೂನು ಕ್ರಮ ಜರುಗಿಸಬೇಕು. ಅವರನ್ನು ಇಲಾಖೆಯಿಂದ ವಜಾಗೊಳಿಸಬೇಕು” ಎಂದು ಒತ್ತಾಯಿಸಿದ್ದಾರೆ.

“ಮಾನಸಿಕ ಆರೋಗ್ಯ ಸಮಸ್ಯೆಯನ್ನು ಹೊಂದಿರುವ ವ್ಯಕ್ತಿಗಳನ್ನು ನಿಭಾಯಿಸಲು ಅವರು ಸಜ್ಜುಗೊಂಡಿಲ್ಲ ಎಂದು ಪೊಲೀಸರು ಮತ್ತೆ ಮತ್ತೆ ನಮಗೆ ತೋರಿಸಿದ್ದಾರೆ. ಈ ಅಧಿಕಾರಿಗಳಿಗೆ ಕೊಲ್ಲಲು ತರಬೇತಿ ನೀಡಲಾಗುತ್ತದೆ. ಡೇನಿಯಲ್ ಪ್ರೂಡ್ ಅವರನ್ನು ರಕ್ಷಿಸುವ ಬದಲು ಅಪಹಾಸ್ಯ ಮಾಡಲು ಈ ಅಧಿಕಾರಿಗಳಿಗೆ ತರಬೇತಿ ನೀಡಲಾಗಿದೆ” ಎಂದು ಸುದ್ದಿಗೋಷ್ಠಿಯಲ್ಲಿ ಫ್ರೀ ದಿ ಪೀಪಲ್ ಆರ್ ಒ ಸಿಯ ಆಶ್ಲೇ ಗ್ಯಾಂಟ್ ಹೇಳಿದರು.

ಪೊಲೀಸ್ ಪ್ರಧಾನ ಕಚೇರಿಯಾಗಿ ಕಾರ್ಯನಿರ್ವಹಿಸುವ ರೋಚೆಸ್ಟರ್‌ನ ಸಾರ್ವಜನಿಕ ಸುರಕ್ಷತಾ ಕಟ್ಟಡದ ಹೊರಗೆ ಹಲವು ಪ್ರತಿಭಟನಾಕಾರರು ಬುಧವಾರ ಜಮಾಯಿಸಿದರು. “ವಾರೆನ್ ಮಾಧ್ಯಮಗಳೊಂದಿಗೆ ಮಾತನಾಡುತ್ತಿರುವಾಗ ಕಟ್ಟಡವನ್ನು ಪ್ರವೇಶಿಸಿದ ನಂತರ ಹಲವಾರು ಸಂಘಟಕರನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ” ಎಂದು ಫ್ರೀ ದಿ ಪೀಪಲ್ ಆರ್ ಒ ಸಿ ಹೇಳಿದೆ.


ಇದನ್ನೂ ಓದಿ: ಟ್ರಂಪ್ ‌ಟವರ್‌ ಮುಂದೆ ’ಬ್ಲ್ಯಾಕ್ ಲೈವ್ಸ್ ಮ್ಯಾಟರ್‌’ ಎಂದು ಬರೆದ ಚಳವಳಿಗಾರರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...