Homeಅಂತರಾಷ್ಟ್ರೀಯನ್ಯೂಯಾರ್ಕ್ ಪೊಲೀಸರಿಂದ ಮತ್ತೊಬ್ಬ ಕಪ್ಪು ವ್ಯಕ್ತಿಯ ಹತ್ಯೆ : ಸಾಕ್ಷ್ಯ ಬಿಡುಗಡೆ ಮಾಡಿದ ಮೃತನ ಕುಟುಂಬ

ನ್ಯೂಯಾರ್ಕ್ ಪೊಲೀಸರಿಂದ ಮತ್ತೊಬ್ಬ ಕಪ್ಪು ವ್ಯಕ್ತಿಯ ಹತ್ಯೆ : ಸಾಕ್ಷ್ಯ ಬಿಡುಗಡೆ ಮಾಡಿದ ಮೃತನ ಕುಟುಂಬ

ಮಾರ್ಚ್ 30 ರಂದು ಸಂಭವಿಸಿದ್ದ ಈ ಸಾವು, ಮೃತನ ಕುಟುಂಬ ನಿನ್ನೆಯ ಸುದ್ಧಿಗೋಷ್ಟಿಯಲ್ಲಿ ಈ ಕುರಿತು ದಾಖಲೆಗಳು ಮತ್ತು ವಿಡಿಯೋವೊಂದನ್ನು ಬಿಡುಗಡೆ ಮಾಡುವ ತನಕ ಇದು ಒಂದು ಹತ್ಯೆಯಾಗಿ ಸಾರ್ವಜನಿಕರ ಗಮನ ಸೆಳೆದಿರಲಿಲ್ಲ.

- Advertisement -
- Advertisement -

ಪಶ್ಚಿಮ ನ್ಯೂಯಾರ್ಕ್ ನಗರದಲ್ಲಿ ಬೆತ್ತಲೆಯಾಗಿ ಓಡಿಬರುತ್ತಿರುವ ಕಪ್ಪು ವ್ಯಕ್ತಿಯೊಬ್ಬನನ್ನು ಪೊಲೀಸರು ಉಸಿರುಗಟ್ಟುವಂತೆ ಮಾಡಿ ಹತ್ಯೆಗೈದಿದ್ದಾರೆ. ಈ ಕುರಿತು ಮೃತ ವ್ಯಕ್ತಿಯ ಕುಟುಂಬ ಬುಧವಾರ ವೀಡಿಯೋವೊಂದನ್ನು ಬಿಡುಗಡೆ ಮಾಡಿದೆ.

ಮೃತ ವ್ಯಕ್ತಿಯ ಕುಟುಂಬ ಬಿಡುಗಡೆ ಮಾಡಿದ ದಾಖಲೆ ಮತ್ತು ವಿಡಿಯೋ ದೃಶ್ಯದಲ್ಲಿ, ಪೊಲೀಸ್ ಅಧಿಕಾರಿಗಳ ಗುಂಪೊಂದು ಆತನ ತಲೆಗೆ ಮುಂಗಡಿಯೊಂದನ್ನು (Hood) ಹಾಕಿ, ಮುಖವನ್ನು ಎರಡು ನಿಮಿಷಗಳ ಕಾಲ ರಸ್ತೆಗೆ ಒತ್ತಿ, ಉಸಿರುಗಟ್ಟುವಂತೆ ಮಾಡಿ ಹತ್ಯೆ ಮಾಡಿದ್ದಾರೆ ಎಂಬುದು ತಿಳಿದುಬಂದಿದೆ.

ಮಾರ್ಚ್ 30 ರಂದು ಸಂಭವಿಸಿದ್ದ ಈ ಸಾವು, ಮೃತನ ಕುಟುಂಬ ನಿನ್ನೆಯ ಸುದ್ಧಿಗೋಷ್ಟಿಯಲ್ಲಿ ಈ ಕುರಿತು ದಾಖಲೆಗಳು ಮತ್ತು ವಿಡಿಯೋವೊಂದನ್ನು ಬಿಡುಗಡೆ ಮಾಡುವ ತನಕ ಇದು ಒಂದು ಹತ್ಯೆಯಾಗಿ ಸಾರ್ವಜನಿಕರ ಗಮನ ಸೆಳೆದಿರಲಿಲ್ಲ.

ರೋಚೆಸ್ಟರ್‌ನಲ್ಲಿ ಪೊಲೀಸರಿಂದ ಎನ್ ಕೌಂಟರ್ ಆದ ಏಳು ದಿನಗಳ ನಂತರ, ಡೇನಿಯಲ್ ಪ್ರೂಡ್ ಕೃತಕ ಉಸಿರಾಟದಲ್ಲಿದ್ದರು. ನಂತರ ಮಾರ್ಚ್ 30 ರಂದು ಸಾವನ್ನಪ್ಪಿದ್ದರು.

ಸುದ್ಧಿಗೋಷ್ಟಿಯಲ್ಲಿ ಮಾತನಾಡಿದ ಡೇನಿಯಲ್ ಪ್ರೂಡ್ ಅವರ ಸಹೋದರ ಜೋ ಪ್ರೂಡ್, “ನೀವು ಅವನನ್ನು  ಹೇಗೆ ನೋಡಿದಿರಿ. ರಕ್ಷಣೆಯಿಲ್ಲದ ಮನುಷ್ಯ ನೆಲೆದ ಮೇಲೆ ಬೆತ್ತಲೆಯಾಗಿ ಬಿದ್ದಿದ್ದಾನೆ. ಅವನ ಕೈಗೆ ಕೋಳ ತೊಡಿಸಲಾಗಿದೆ. ಈ ಸಮಾಜ ಇದನ್ನು ಅರ್ಥಮಾಡಿಕೊಳ್ಳಲು ಇನ್ನೂ ಎಷ್ಟು ಜನ ಸಹೋದರರು ಹೀಗೆ ಸಾಯಬೇಕು?” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮೃತನ ಸಹೋದರ ಬಿಡುಗಡೆ ಮಾಡಿರುವ ವೀಡಿಯೋದಲ್ಲಿ ಪೋಲಿಸರ ಕ್ರೂರತೆ ಮತ್ತು ಹತ್ಯೆ, ಪೊಲೀಸ್ ಮತ್ತು ಡೇನಿಯಲ್ ಫ್ರೂಡ್ ನ ಸಂಭಾಷಣೆಯ ಸಮೇತ ಸ್ಪಷ್ಟವಾಗಿ ದಾಖಲಾಗಿದೆ ಎಂದು ಹಿಂದೂಸ್ಥಾನ್ ಟೈಮ್ಸ್ ವರದಿ ಮಾಡಿದೆ.

ಇದನ್ನೂ ಓದಿ: ಪ್ರತಿಭಟನಾಕಾರರಿಗೆ ಹೆದರಿ ಶ್ವೇತಭವನದ ಬಂಕರ್ ನಲ್ಲಿ ಅಡಗಿದ ಡೊನಾಲ್ಡ್ ಟ್ರಂಪ್

ಅಮೆರಿಕದಲ್ಲಿ ಇತ್ತೀಚೆಗೆ ಜಾರ್ಜ್ ಫ್ಲಾಯ್ಡ್ ಎಂಬ ಕಪ್ಪು ಜನಾಂಗದ ವ್ಯಕ್ತಿಯನ್ನು ಪೊಲೀಸ್ ಓರ್ವ ಕತ್ತಿನ ಮೇಲೆ ತುಳಿದು ಅಮಾನವೀಯವಾಗಿ ಕೊಂದ ಘಟನೆ, ಅಲ್ಲಿ ದೊಡ್ಡ ಹೋರಾಟಕ್ಕೆ ಕಾರಣವಾಗಿತ್ತು.

ಪ್ರೂಡ್ ಚಿಕಾಗೊ ಮೂಲದವನಾಗಿದ್ದು, ತನ್ನ ಕುಟುಂಬದ ಭೇಟಿಗಾಗಿ ನ್ಯೂಯಾರ್ಕ್ ನ ರೋಚೆಸ್ಟರ್‌ಗೆ ಬಂದಿದ್ದನು. ಜೋ ಪ್ರೂಡ್, “911 ಗೆ ಕರೆ ಮಾಡಿ, ಮನೆಯಿಂದ ಹೊರಹೋಗಿರುವ ತನ್ನ ಸಹೋದರ ಮಾನಸಿಕ ಆರೋಗ್ಯ ಸಮಸ್ಯೆಗಳನ್ನು ಎದುರಿಸುತ್ತಿದ್ದಾನೆ ಎಂದು ಹೇಳಿದ ನಂತರ ಪೊಲೀಸರು ಪ್ರತಿಕ್ರಿಯಿಸಿದ್ದರು” ಎಂದು ಹೇಳಿದ್ದಾರೆ.

ಏಪ್ರಿಲ್ ನಲ್ಲಿ ರಾಜ್ಯ ಅಟಾರ್ನಿ ಜನರಲ್ ಲೆಟಿಟಿಯಾ ಜೇಮ್ಸ್ ಕಚೇರಿ ಸ್ವಯಂ ತನಿಖೆಯನ್ನು ಪ್ರಾರಂಭಿಸಿದಾಗ, ನಗರವು ಪ್ರೂಡ್ ಸಾವಿನ ತನಿಖೆಯನ್ನು ನಿಲ್ಲಿಸಿತು. ನ್ಯೂಯಾರ್ಕ್ ಕಾನೂನಿನ ಪ್ರಕಾರ, ಪೊಲೀಸ್ ಕಸ್ಟಡಿಯಲ್ಲಿರುವ ನಿರಾಯುಧ ಜನರ ಸಾವುಗಳನ್ನು ಸ್ಥಳೀಯ ಅಧಿಕಾರಿಗಳು ನಿರ್ವಹಿಸುವ ಬದಲು ಅಟಾರ್ನಿ ಜನರಲ್ ಕಚೇರಿಗೆ ವರ್ಗಾಯಿಸಲಾಗುತ್ತದೆ. ತನಿಖೆ ಮುಂದುವರೆದಿದೆ ಎಂದು ಜೇಮ್ಸ್ ಬುಧವಾರ ಹೇಳಿದ್ದಾರೆ.

ಇದನ್ನೂ ಓದಿ: ತಮಿಳುನಾಡು ಲಾಕಪ್ ಡೆತ್: ಭಾರತದ ಜಾರ್ಜ್ ಫ್ಲಾಯ್ಡ್ ಎಂದು ಆಕ್ರೋಶ ವ್ಯಕ್ತಪಡಿಸಿದ ನೆಟ್ವಿಗರು.

ಇತ್ತೀಚಿನ ವರ್ಷಗಳಲ್ಲಿ ಅಮೇರಿಕಾ ಮತ್ತು ಇತರ ದೇಶಗಳಲ್ಲಿ ಹಲವಾರು ಕೈದಿಗಳ ಸಾವಿಗೆ ಸ್ಪಿಟ್ ಹುಡ್ ಗಳು ಪ್ರಮುಖ ಅಂಶವೆಂದು ಪರಿಶೀಲಿಸಲಾಗಿದೆ.

“ಆತ ನಿರಂತರವಾಗಿ ಉಗುಳುತ್ತಿದ್ದ. ಹಾಗಾಗಿ ಕೊರೊನಾ ಬಗ್ಗೆ ಕಾಳಜಿ ವಹಿಸುತ್ತಿರುವುದರಿಂದ ಅಧಿಕಾರಿಗಳ ನಿರ್ದೇಶನದಲ್ಲಿ ಅವರು ಪ್ರೂಡ್ ಮೇಲೆ ಹುಡ್ ಹಾಕಿದ್ದಾರೆ” ಎಂದು ಒಬ್ಬ ಅಧಿಕಾರಿ ಹೇಳಿದ್ದಾರೆ.

ಇನ್ನೂ, ಹಲವು ಹೋರಾಟಗಾರರು ಮತ್ತು ಕಾರ್ಯಕರ್ತರು “ಪ್ರೂಡ್ ಅವರ ಸಾವಿಗೆ ಸಂಬಂಧಿಸಿದ ಅಧಿಕಾರಿಗಳ ಮೇಲೆ ಕೊಲೆ ಆರೋಪದಲ್ಲಿ ಕಾನೂನು ಕ್ರಮ ಜರುಗಿಸಬೇಕು. ಅವರನ್ನು ಇಲಾಖೆಯಿಂದ ವಜಾಗೊಳಿಸಬೇಕು” ಎಂದು ಒತ್ತಾಯಿಸಿದ್ದಾರೆ.

“ಮಾನಸಿಕ ಆರೋಗ್ಯ ಸಮಸ್ಯೆಯನ್ನು ಹೊಂದಿರುವ ವ್ಯಕ್ತಿಗಳನ್ನು ನಿಭಾಯಿಸಲು ಅವರು ಸಜ್ಜುಗೊಂಡಿಲ್ಲ ಎಂದು ಪೊಲೀಸರು ಮತ್ತೆ ಮತ್ತೆ ನಮಗೆ ತೋರಿಸಿದ್ದಾರೆ. ಈ ಅಧಿಕಾರಿಗಳಿಗೆ ಕೊಲ್ಲಲು ತರಬೇತಿ ನೀಡಲಾಗುತ್ತದೆ. ಡೇನಿಯಲ್ ಪ್ರೂಡ್ ಅವರನ್ನು ರಕ್ಷಿಸುವ ಬದಲು ಅಪಹಾಸ್ಯ ಮಾಡಲು ಈ ಅಧಿಕಾರಿಗಳಿಗೆ ತರಬೇತಿ ನೀಡಲಾಗಿದೆ” ಎಂದು ಸುದ್ದಿಗೋಷ್ಠಿಯಲ್ಲಿ ಫ್ರೀ ದಿ ಪೀಪಲ್ ಆರ್ ಒ ಸಿಯ ಆಶ್ಲೇ ಗ್ಯಾಂಟ್ ಹೇಳಿದರು.

ಪೊಲೀಸ್ ಪ್ರಧಾನ ಕಚೇರಿಯಾಗಿ ಕಾರ್ಯನಿರ್ವಹಿಸುವ ರೋಚೆಸ್ಟರ್‌ನ ಸಾರ್ವಜನಿಕ ಸುರಕ್ಷತಾ ಕಟ್ಟಡದ ಹೊರಗೆ ಹಲವು ಪ್ರತಿಭಟನಾಕಾರರು ಬುಧವಾರ ಜಮಾಯಿಸಿದರು. “ವಾರೆನ್ ಮಾಧ್ಯಮಗಳೊಂದಿಗೆ ಮಾತನಾಡುತ್ತಿರುವಾಗ ಕಟ್ಟಡವನ್ನು ಪ್ರವೇಶಿಸಿದ ನಂತರ ಹಲವಾರು ಸಂಘಟಕರನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ” ಎಂದು ಫ್ರೀ ದಿ ಪೀಪಲ್ ಆರ್ ಒ ಸಿ ಹೇಳಿದೆ.


ಇದನ್ನೂ ಓದಿ: ಟ್ರಂಪ್ ‌ಟವರ್‌ ಮುಂದೆ ’ಬ್ಲ್ಯಾಕ್ ಲೈವ್ಸ್ ಮ್ಯಾಟರ್‌’ ಎಂದು ಬರೆದ ಚಳವಳಿಗಾರರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...

Lazarus To World Leaks : ಆತಂಕ ಸೃಷ್ಟಿಸಿದ ಕೂಡಂಕುಳಂ ಸೈಬರ್ ದಾಳಿಗಳು

ಭಾರತದ ಅತಿ ದೊಡ್ಡ ಪರಮಾಣು ವಿದ್ಯುತ್ ಕೇಂದ್ರವಾದ ತಮಿಳುನಾಡಿನ  ತಿರುನೆಲ್ವೇಲಿಯ ಕೂಡಂಕುಳಂ, ಕಳೆದ ಏಳು ವರ್ಷಗಳ ಅವಧಿಯಲ್ಲಿ ಎರಡು ಬಾರಿ ಪ್ರಮುಖ ಸೈಬರ್ ಭದ್ರತಾ ಆತಂಕಗಳಿಗೆ ಕೇಂದ್ರ ಬಿಂದುವಾಗಿದೆ. 2019ರ ಮೊದಲ ಘಟನೆಯು...

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಪ್ರಶ್ನೆಗಳನ್ನು ಖರೀದಿಸಲು 5 ಲಕ್ಷ ರೂ. ಪಾವತಿಸಿದ್ದ ಲಾತೂರ್ ಕೋಚಿಂಗ್ ಮಾಲೀಕ: ನ್ಯಾಯಾಲಯಕ್ಕೆ ಸಿಬಿಐ ಮಾಹಿತಿ

ದೇಶಾದ್ಯಂತ ಕೋಟ್ಯಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲಿಗೆ ತಳ್ಳಿದ ನೀಟ್ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ದಿನಕ್ಕೊಂದು ಆಘಾತಕಾರಿ ಸತ್ಯಗಳು ಹೊರಬರುತ್ತಿದ್ದು, ಇಡೀ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಈ ದಂಧೆಯ ಆಳ ಎಷ್ಟು...

ನಾನು ಸತ್ತರೂ ಪರ್ವಾಗಿಲ್ಲ, ಉಪವಾಸ ಹಿಂಪಡೆಯಲ್ಲ: ಜುಲೈ 20ರ ಸಂಸತ್ ಚಲೋಗೆ ವಾಂಗ್‌ಚುಕ್ ಕರೆ

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿನ ಸರಣಿ ಪರೀಕ್ಷಾ ಅಕ್ರಮ ಹಾಗೂ ನೀಟ್ (NEET) ಹಗರಣದ ವಿರುದ್ಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ತಕ್ಷಣವೇ...

ಉತ್ತರ ಪ್ರದೇಶ : ಮೊಹಮ್ಮದ್ ಅಲಿ ಜೌಹರ್ ವಿವಿಯ 38 ಕಟ್ಟಡಗಳನ್ನು ಕೆಡವಲು ಮುಂದಾದ ಸರ್ಕಾರ!

ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡ ಆಝಂ ಖಾನ್ ಅವರಿಗೆ ಸೇರಿದ ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯದ 38 ಕಟ್ಟಡಗಳನ್ನು ಕೆಡವಲು ಉತ್ತರ ಪ್ರದೇಶದ ರಾಂಪುರ ನಗರಾಭಿವೃದ್ಧಿ ಪ್ರಾಧಿಕಾರ (ಆರ್‌ಡಿಎ) ಆದೇಶಿಸಿದೆ ಎಂದು ಬುಧವಾರ...