Homeಅಂತರಾಷ್ಟ್ರೀಯನ್ಯೂಯಾರ್ಕ್ ಪೊಲೀಸರಿಂದ ಮತ್ತೊಬ್ಬ ಕಪ್ಪು ವ್ಯಕ್ತಿಯ ಹತ್ಯೆ : ಸಾಕ್ಷ್ಯ ಬಿಡುಗಡೆ ಮಾಡಿದ ಮೃತನ ಕುಟುಂಬ

ನ್ಯೂಯಾರ್ಕ್ ಪೊಲೀಸರಿಂದ ಮತ್ತೊಬ್ಬ ಕಪ್ಪು ವ್ಯಕ್ತಿಯ ಹತ್ಯೆ : ಸಾಕ್ಷ್ಯ ಬಿಡುಗಡೆ ಮಾಡಿದ ಮೃತನ ಕುಟುಂಬ

ಮಾರ್ಚ್ 30 ರಂದು ಸಂಭವಿಸಿದ್ದ ಈ ಸಾವು, ಮೃತನ ಕುಟುಂಬ ನಿನ್ನೆಯ ಸುದ್ಧಿಗೋಷ್ಟಿಯಲ್ಲಿ ಈ ಕುರಿತು ದಾಖಲೆಗಳು ಮತ್ತು ವಿಡಿಯೋವೊಂದನ್ನು ಬಿಡುಗಡೆ ಮಾಡುವ ತನಕ ಇದು ಒಂದು ಹತ್ಯೆಯಾಗಿ ಸಾರ್ವಜನಿಕರ ಗಮನ ಸೆಳೆದಿರಲಿಲ್ಲ.

- Advertisement -
- Advertisement -

ಪಶ್ಚಿಮ ನ್ಯೂಯಾರ್ಕ್ ನಗರದಲ್ಲಿ ಬೆತ್ತಲೆಯಾಗಿ ಓಡಿಬರುತ್ತಿರುವ ಕಪ್ಪು ವ್ಯಕ್ತಿಯೊಬ್ಬನನ್ನು ಪೊಲೀಸರು ಉಸಿರುಗಟ್ಟುವಂತೆ ಮಾಡಿ ಹತ್ಯೆಗೈದಿದ್ದಾರೆ. ಈ ಕುರಿತು ಮೃತ ವ್ಯಕ್ತಿಯ ಕುಟುಂಬ ಬುಧವಾರ ವೀಡಿಯೋವೊಂದನ್ನು ಬಿಡುಗಡೆ ಮಾಡಿದೆ.

ಮೃತ ವ್ಯಕ್ತಿಯ ಕುಟುಂಬ ಬಿಡುಗಡೆ ಮಾಡಿದ ದಾಖಲೆ ಮತ್ತು ವಿಡಿಯೋ ದೃಶ್ಯದಲ್ಲಿ, ಪೊಲೀಸ್ ಅಧಿಕಾರಿಗಳ ಗುಂಪೊಂದು ಆತನ ತಲೆಗೆ ಮುಂಗಡಿಯೊಂದನ್ನು (Hood) ಹಾಕಿ, ಮುಖವನ್ನು ಎರಡು ನಿಮಿಷಗಳ ಕಾಲ ರಸ್ತೆಗೆ ಒತ್ತಿ, ಉಸಿರುಗಟ್ಟುವಂತೆ ಮಾಡಿ ಹತ್ಯೆ ಮಾಡಿದ್ದಾರೆ ಎಂಬುದು ತಿಳಿದುಬಂದಿದೆ.

ಮಾರ್ಚ್ 30 ರಂದು ಸಂಭವಿಸಿದ್ದ ಈ ಸಾವು, ಮೃತನ ಕುಟುಂಬ ನಿನ್ನೆಯ ಸುದ್ಧಿಗೋಷ್ಟಿಯಲ್ಲಿ ಈ ಕುರಿತು ದಾಖಲೆಗಳು ಮತ್ತು ವಿಡಿಯೋವೊಂದನ್ನು ಬಿಡುಗಡೆ ಮಾಡುವ ತನಕ ಇದು ಒಂದು ಹತ್ಯೆಯಾಗಿ ಸಾರ್ವಜನಿಕರ ಗಮನ ಸೆಳೆದಿರಲಿಲ್ಲ.

ರೋಚೆಸ್ಟರ್‌ನಲ್ಲಿ ಪೊಲೀಸರಿಂದ ಎನ್ ಕೌಂಟರ್ ಆದ ಏಳು ದಿನಗಳ ನಂತರ, ಡೇನಿಯಲ್ ಪ್ರೂಡ್ ಕೃತಕ ಉಸಿರಾಟದಲ್ಲಿದ್ದರು. ನಂತರ ಮಾರ್ಚ್ 30 ರಂದು ಸಾವನ್ನಪ್ಪಿದ್ದರು.

ಸುದ್ಧಿಗೋಷ್ಟಿಯಲ್ಲಿ ಮಾತನಾಡಿದ ಡೇನಿಯಲ್ ಪ್ರೂಡ್ ಅವರ ಸಹೋದರ ಜೋ ಪ್ರೂಡ್, “ನೀವು ಅವನನ್ನು  ಹೇಗೆ ನೋಡಿದಿರಿ. ರಕ್ಷಣೆಯಿಲ್ಲದ ಮನುಷ್ಯ ನೆಲೆದ ಮೇಲೆ ಬೆತ್ತಲೆಯಾಗಿ ಬಿದ್ದಿದ್ದಾನೆ. ಅವನ ಕೈಗೆ ಕೋಳ ತೊಡಿಸಲಾಗಿದೆ. ಈ ಸಮಾಜ ಇದನ್ನು ಅರ್ಥಮಾಡಿಕೊಳ್ಳಲು ಇನ್ನೂ ಎಷ್ಟು ಜನ ಸಹೋದರರು ಹೀಗೆ ಸಾಯಬೇಕು?” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮೃತನ ಸಹೋದರ ಬಿಡುಗಡೆ ಮಾಡಿರುವ ವೀಡಿಯೋದಲ್ಲಿ ಪೋಲಿಸರ ಕ್ರೂರತೆ ಮತ್ತು ಹತ್ಯೆ, ಪೊಲೀಸ್ ಮತ್ತು ಡೇನಿಯಲ್ ಫ್ರೂಡ್ ನ ಸಂಭಾಷಣೆಯ ಸಮೇತ ಸ್ಪಷ್ಟವಾಗಿ ದಾಖಲಾಗಿದೆ ಎಂದು ಹಿಂದೂಸ್ಥಾನ್ ಟೈಮ್ಸ್ ವರದಿ ಮಾಡಿದೆ.

ಇದನ್ನೂ ಓದಿ: ಪ್ರತಿಭಟನಾಕಾರರಿಗೆ ಹೆದರಿ ಶ್ವೇತಭವನದ ಬಂಕರ್ ನಲ್ಲಿ ಅಡಗಿದ ಡೊನಾಲ್ಡ್ ಟ್ರಂಪ್

ಅಮೆರಿಕದಲ್ಲಿ ಇತ್ತೀಚೆಗೆ ಜಾರ್ಜ್ ಫ್ಲಾಯ್ಡ್ ಎಂಬ ಕಪ್ಪು ಜನಾಂಗದ ವ್ಯಕ್ತಿಯನ್ನು ಪೊಲೀಸ್ ಓರ್ವ ಕತ್ತಿನ ಮೇಲೆ ತುಳಿದು ಅಮಾನವೀಯವಾಗಿ ಕೊಂದ ಘಟನೆ, ಅಲ್ಲಿ ದೊಡ್ಡ ಹೋರಾಟಕ್ಕೆ ಕಾರಣವಾಗಿತ್ತು.

ಪ್ರೂಡ್ ಚಿಕಾಗೊ ಮೂಲದವನಾಗಿದ್ದು, ತನ್ನ ಕುಟುಂಬದ ಭೇಟಿಗಾಗಿ ನ್ಯೂಯಾರ್ಕ್ ನ ರೋಚೆಸ್ಟರ್‌ಗೆ ಬಂದಿದ್ದನು. ಜೋ ಪ್ರೂಡ್, “911 ಗೆ ಕರೆ ಮಾಡಿ, ಮನೆಯಿಂದ ಹೊರಹೋಗಿರುವ ತನ್ನ ಸಹೋದರ ಮಾನಸಿಕ ಆರೋಗ್ಯ ಸಮಸ್ಯೆಗಳನ್ನು ಎದುರಿಸುತ್ತಿದ್ದಾನೆ ಎಂದು ಹೇಳಿದ ನಂತರ ಪೊಲೀಸರು ಪ್ರತಿಕ್ರಿಯಿಸಿದ್ದರು” ಎಂದು ಹೇಳಿದ್ದಾರೆ.

ಏಪ್ರಿಲ್ ನಲ್ಲಿ ರಾಜ್ಯ ಅಟಾರ್ನಿ ಜನರಲ್ ಲೆಟಿಟಿಯಾ ಜೇಮ್ಸ್ ಕಚೇರಿ ಸ್ವಯಂ ತನಿಖೆಯನ್ನು ಪ್ರಾರಂಭಿಸಿದಾಗ, ನಗರವು ಪ್ರೂಡ್ ಸಾವಿನ ತನಿಖೆಯನ್ನು ನಿಲ್ಲಿಸಿತು. ನ್ಯೂಯಾರ್ಕ್ ಕಾನೂನಿನ ಪ್ರಕಾರ, ಪೊಲೀಸ್ ಕಸ್ಟಡಿಯಲ್ಲಿರುವ ನಿರಾಯುಧ ಜನರ ಸಾವುಗಳನ್ನು ಸ್ಥಳೀಯ ಅಧಿಕಾರಿಗಳು ನಿರ್ವಹಿಸುವ ಬದಲು ಅಟಾರ್ನಿ ಜನರಲ್ ಕಚೇರಿಗೆ ವರ್ಗಾಯಿಸಲಾಗುತ್ತದೆ. ತನಿಖೆ ಮುಂದುವರೆದಿದೆ ಎಂದು ಜೇಮ್ಸ್ ಬುಧವಾರ ಹೇಳಿದ್ದಾರೆ.

ಇದನ್ನೂ ಓದಿ: ತಮಿಳುನಾಡು ಲಾಕಪ್ ಡೆತ್: ಭಾರತದ ಜಾರ್ಜ್ ಫ್ಲಾಯ್ಡ್ ಎಂದು ಆಕ್ರೋಶ ವ್ಯಕ್ತಪಡಿಸಿದ ನೆಟ್ವಿಗರು.

ಇತ್ತೀಚಿನ ವರ್ಷಗಳಲ್ಲಿ ಅಮೇರಿಕಾ ಮತ್ತು ಇತರ ದೇಶಗಳಲ್ಲಿ ಹಲವಾರು ಕೈದಿಗಳ ಸಾವಿಗೆ ಸ್ಪಿಟ್ ಹುಡ್ ಗಳು ಪ್ರಮುಖ ಅಂಶವೆಂದು ಪರಿಶೀಲಿಸಲಾಗಿದೆ.

“ಆತ ನಿರಂತರವಾಗಿ ಉಗುಳುತ್ತಿದ್ದ. ಹಾಗಾಗಿ ಕೊರೊನಾ ಬಗ್ಗೆ ಕಾಳಜಿ ವಹಿಸುತ್ತಿರುವುದರಿಂದ ಅಧಿಕಾರಿಗಳ ನಿರ್ದೇಶನದಲ್ಲಿ ಅವರು ಪ್ರೂಡ್ ಮೇಲೆ ಹುಡ್ ಹಾಕಿದ್ದಾರೆ” ಎಂದು ಒಬ್ಬ ಅಧಿಕಾರಿ ಹೇಳಿದ್ದಾರೆ.

ಇನ್ನೂ, ಹಲವು ಹೋರಾಟಗಾರರು ಮತ್ತು ಕಾರ್ಯಕರ್ತರು “ಪ್ರೂಡ್ ಅವರ ಸಾವಿಗೆ ಸಂಬಂಧಿಸಿದ ಅಧಿಕಾರಿಗಳ ಮೇಲೆ ಕೊಲೆ ಆರೋಪದಲ್ಲಿ ಕಾನೂನು ಕ್ರಮ ಜರುಗಿಸಬೇಕು. ಅವರನ್ನು ಇಲಾಖೆಯಿಂದ ವಜಾಗೊಳಿಸಬೇಕು” ಎಂದು ಒತ್ತಾಯಿಸಿದ್ದಾರೆ.

“ಮಾನಸಿಕ ಆರೋಗ್ಯ ಸಮಸ್ಯೆಯನ್ನು ಹೊಂದಿರುವ ವ್ಯಕ್ತಿಗಳನ್ನು ನಿಭಾಯಿಸಲು ಅವರು ಸಜ್ಜುಗೊಂಡಿಲ್ಲ ಎಂದು ಪೊಲೀಸರು ಮತ್ತೆ ಮತ್ತೆ ನಮಗೆ ತೋರಿಸಿದ್ದಾರೆ. ಈ ಅಧಿಕಾರಿಗಳಿಗೆ ಕೊಲ್ಲಲು ತರಬೇತಿ ನೀಡಲಾಗುತ್ತದೆ. ಡೇನಿಯಲ್ ಪ್ರೂಡ್ ಅವರನ್ನು ರಕ್ಷಿಸುವ ಬದಲು ಅಪಹಾಸ್ಯ ಮಾಡಲು ಈ ಅಧಿಕಾರಿಗಳಿಗೆ ತರಬೇತಿ ನೀಡಲಾಗಿದೆ” ಎಂದು ಸುದ್ದಿಗೋಷ್ಠಿಯಲ್ಲಿ ಫ್ರೀ ದಿ ಪೀಪಲ್ ಆರ್ ಒ ಸಿಯ ಆಶ್ಲೇ ಗ್ಯಾಂಟ್ ಹೇಳಿದರು.

ಪೊಲೀಸ್ ಪ್ರಧಾನ ಕಚೇರಿಯಾಗಿ ಕಾರ್ಯನಿರ್ವಹಿಸುವ ರೋಚೆಸ್ಟರ್‌ನ ಸಾರ್ವಜನಿಕ ಸುರಕ್ಷತಾ ಕಟ್ಟಡದ ಹೊರಗೆ ಹಲವು ಪ್ರತಿಭಟನಾಕಾರರು ಬುಧವಾರ ಜಮಾಯಿಸಿದರು. “ವಾರೆನ್ ಮಾಧ್ಯಮಗಳೊಂದಿಗೆ ಮಾತನಾಡುತ್ತಿರುವಾಗ ಕಟ್ಟಡವನ್ನು ಪ್ರವೇಶಿಸಿದ ನಂತರ ಹಲವಾರು ಸಂಘಟಕರನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ” ಎಂದು ಫ್ರೀ ದಿ ಪೀಪಲ್ ಆರ್ ಒ ಸಿ ಹೇಳಿದೆ.


ಇದನ್ನೂ ಓದಿ: ಟ್ರಂಪ್ ‌ಟವರ್‌ ಮುಂದೆ ’ಬ್ಲ್ಯಾಕ್ ಲೈವ್ಸ್ ಮ್ಯಾಟರ್‌’ ಎಂದು ಬರೆದ ಚಳವಳಿಗಾರರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...