Homeಮುಖಪುಟಮತ್ತೊಬ್ಬರು ಬಿಎಲ್‌ಒ ಆತ್ಮಹತ್ಯೆ : ಎಸ್‌ಐಆರ್ ಒತ್ತಡ ಆರೋಪ

ಮತ್ತೊಬ್ಬರು ಬಿಎಲ್‌ಒ ಆತ್ಮಹತ್ಯೆ : ಎಸ್‌ಐಆರ್ ಒತ್ತಡ ಆರೋಪ

- Advertisement -
- Advertisement -

ಗುಜರಾತ್‌ನ ಗಿರ್ ಸೋಮನಾಥ್ ಜಿಲ್ಲೆಯಲ್ಲಿ 40 ವರ್ಷದ ಶಿಕ್ಷಕ ಹಾಗೂ ಬೂತ್ ಮಟ್ಟದ ಅಧಿಕಾರಿ (ಬಿಎಲ್‌ಒ) ಅರವಿಂದ ಮುಲ್ಜಿ ವಾಧೇರ್ ಎಂಬವರು ತಮ್ಮ ಹುಟ್ಟೂರು ದೇವ್ಲಿ ಗ್ರಾಮದಲ್ಲಿ ಶುಕ್ರವಾರ (ನವೆಂಬರ್ 21) ಆತ್ಮಹತ್ಯೆ ಮಾಡಿಕೊಂಡಿದ್ದು, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಕೆಲಸದ ಹೊರೆಯಿಂದ ಮಾನಸಿಕ ಒತ್ತಡಕ್ಕೆ ಒಳಗಾಗಿದ್ದೆ ಎಂಬುವುದಾಗಿ ಡೆತ್ ಬರೆದಿಟ್ಟಿದ್ದಾರೆ ಎಂದು ವರದಿಯಾಗಿದೆ.

ಪೊಲೀಸರ ಪ್ರಕಾರ, ಗಿರ್ ಸೋಮನಾಥ್ ಜಿಲ್ಲೆಯ ಕೋಡಿನಾರ್‌ನ ಛರಾ ಕನ್ಯಾ ಪ್ರಾಥಮಿಕ ಶಾಲೆಯ ಶಿಕ್ಷಕ ಅರವಿಂದ್ ಅವರ ಶವ ಬೆಳಗಿನ ಜಾವ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಸಾವಿಗೂ ಮುನ್ನ ಅರವಿಂದ್ ತನ್ನ ಪತ್ನಿಗೆ ಬರೆದಿರುವ ಪತ್ರದಲ್ಲಿ ಅಥವಾ ಡೆತ್‌ನೋಟ್‌ನಲ್ಲಿ, ” ನಾನು ಈ ಎಸ್‌ಐಆರ್ ಕೆಲಸವನ್ನು ಇನ್ನು ಮುಂದೆ ಮಾಡಲು ಸಾಧ್ಯವಿಲ್ಲ. ಕಳೆದ ಕೆಲವು ದಿನಗಳಿಂದ ನಿರಂತರ ಕೆಲಸದಿಂದ ನಾನು ದಣಿದಿದ್ದೇನೆ ಮತ್ತು ಮಾನಸಿಕವಾಗಿ ಒತ್ತಡಕ್ಕೊಳಗಾಗಿದ್ದೇನೆ. ನಿನ್ನ ಮತ್ತು ಮಗನ ಬಗ್ಗೆ ಕಾಳಜಿವಹಿಸು. ನಾನು ನಿಮ್ಮಿಬ್ಬರನ್ನೂ ತುಂಬಾ ಪ್ರೀತಿಸುತ್ತೇನೆ. ಆದರೆ, ಈಗ ಈ ಅಂತಿಮ ಹೆಜ್ಜೆ ಇಡುವುದನ್ನು ಬಿಟ್ಟು ನನಗೆ ಬೇರೆ ದಾರಿಯಿಲ್ಲ” ಎಂದು ತಿಳಿಸಿದ್ದಾರೆ. ತನ್ನ ಕೆಲಸದ ದಾಖಲೆಗಳನ್ನು ಶಾಲೆಗೆ ಹಸ್ತಾಂತರಿಸಲು ಸೂಚಿಸಿದ್ದಾರೆ ಎಂದು ದಿ ನ್ಯೂ ಇಂಡಿಯನ್‌ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಅರವಿಂದ್ ಅವರ ಡೆತ್ ನೋಟ್‌ ಬಿಎಲ್‌ಒಗಳ ಗ್ರೂಪ್‌ಗಳಲ್ಲಿ ಹರಿದಾಡಿದ್ದು, ಅರವಿಂದ್ ಅವರ ಸಾವಿನ ಬಗ್ಗೆ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ಈ ವಿಷಯ ಚರ್ಚೆಯಾಗುತ್ತಿದೆ. ಹಲವರು ಎಸ್‌ಐಆರ್‌ ಪ್ರಕ್ರಿಯೆ ಪೂರ್ಣಗೊಳಿಸಲು ಬಿಎಲ್‌ಒಗಳು ಮಧ್ಯರಾತ್ರಿಯವರೆಗೆ ಕೆಲಸ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ ಎಂದು ವರದಿ ತಿಳಿಸಿದೆ.

ಎಸ್‌ಐಆರ್‌ ಕೆಲಸದಿಂದ ಈಗಾಗಲೇ ಒತ್ತಡಕ್ಕೆ ಒಳಗಾಗಿರುವ, ತಾಂತ್ರಿಕ ಸಮಸ್ಯೆಗಳಿಂದ ಬೇಸತ್ತು ಹೋಗಿರುವ, ಗಡುವಿನೊಳಗೆ ಕೆಲಸ ಮುಗಿಸುವ ಅನಿವಾರ್ಯತೆಯಲ್ಲಿರುವ ಬಿಎಲ್‌ಒಗಳು ಅರವಿಂದ್ ಅವರ ಸಾವಿನಿಂದ ಇನ್ನಷ್ಟು ಆತಂಕಕ್ಕೆ ಒಳಗಾಗಿದ್ದಾರೆ. ಅರವಿಂದ್ ಅವರ ಸಾವು ಒಂದು ಪ್ರತ್ಯೇಕ ದುರಂತವಲ್ಲ, ಬದಲಾಗಿ ವ್ಯವಸ್ಥಿತ ಆಡಳಿತಾತ್ಮಕ ಒತ್ತಡದ ನೇರ ಪರಿಣಾಮ ಎಂದು ಶಿಕ್ಷಕರ ಸಂಘಗಳು ಆರೋಪಿಸಿವೆ ಎಂದು ವರದಿ ಹೇಳಿದೆ.

“ಅರವಿಂದ್ ಅವರ ಸಾವಿನಿಂದ ಇಡೀ ಶಿಕ್ಷಕ ಸಮುದಾಯ ಆಘಾತಕ್ಕೊಳಗಾಗಿದೆ. ಎಸ್‌ಐಆರ್‌ನ ಕೆಲಸದ ಹೊರೆಯಿಂದಾಗಿ, ಅರವಿಂದ್‌ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರು ಕೋಡಿನಾರ್‌ನ ಅತ್ಯುತ್ತಮ ಶಿಕ್ಷಕರಲ್ಲಿ ಒಬ್ಬರು” ಎಂದು ಗಿರ್‌ ಸೋಮನಾಥ್ ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ವಿನೋದ್ ಬರದ್ ಹೇಳಿದ್ದಾರೆ ಎಂದು ವರದಿ ತಿಳಿಸಿದೆ.

ಅಖಿಲ ಭಾರತ ಶೈಕ್ಷಣಿಕ ಮಹಾಸಂಘ ಮೃತ ಶಿಕ್ಷಕನ ಕುಟುಂಬದ ಜವಾಬ್ದಾರಿಯನ್ನು ಸರ್ಕಾರ ಹೊತ್ತುಕೊಳ್ಳಬೇಕು. ಆರ್ಥಿಕ ನೆರವು ನೀಡಬೇಕು ಎಂದು ಒತ್ತಾಯಿಸಿದೆ.

“ಗಿರ್ ಸೋಮನಾಥ್‌ನ ಶಿಕ್ಷಕನ ಡೆತ್‌ನೋಟ್‌ ನೋಡುವಾಗ ಅವರ ಮೇಲೆ ಹೇರಲಾದ್ದ ತೀವ್ರ ಒತ್ತಡ ಸ್ಪಷ್ಟವಾಗಿ ಗೊತ್ತಾಗುತ್ತದೆ. ನಮ್ಮ ಸಂಘವು ಈ ವ್ಯವಸ್ಥೆಯನ್ನು ಬಲವಾಗಿ ವಿರೋಧಿಸುತ್ತದೆ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಮತ್ತು ಮೃತ ಶಿಕ್ಷಕನ ಕುಟುಂಬಕ್ಕೆ ಒಂದು ಕೋಟಿ ರೂಪಾಯಿ ಪರಿಹಾರ ನೀಡಬೇಕು” ಎಂದು ಅದರ ಸಂಘದ ರಾಜ್ಯಾಧ್ಯಕ್ಷ ಮಿತೇಶ್ ಭಟ್ ಆಗ್ರಹಿಸಿದ್ದಾರೆ.

ಎಸ್‌ಐಆರ್ ಕೆಲಸದ ಅಸಹನೀಯ ಹೊರೆಯ ಬಗ್ಗೆ ಒಕ್ಕೂಟವು ಈಗಾಗಲೇ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದೆ ಎಂದು ಭಟ್ ಹೇಳಿದ್ದಾರೆ.

ಅರವಿಂದ್ ಅವರ ಸಾವಿನ ಬಗ್ಗೆ ಆಕ್ರೋಶ ಹೆಚ್ಚಾದಂತೆ ಬಿಎಲ್‌ಒಗಳು ಮತ್ತು ಎಸ್‌ಐಆರ್ ಪ್ರಗತಿಯನ್ನು ನೋಡಿಕೊಳ್ಳುವ ಗಿರ್ ಸೋಮನಾಥ್ ಕಲೆಕ್ಟರ್ ಎನ್.ವಿ. ಉಪಾಧ್ಯಾಯ ಪ್ರತಿಕ್ರಿಯೆ ನೀಡಿದ್ದು, “ಅರವಿಂದ್ ಅವರು ಯಾವುದೇ ಕೆಲಸದ ಒತ್ತಡದ ಬಗ್ಗೆ ನನಗೆ ವರದಿ ಮಾಡಿರಲಿಲ್ಲ. ಅವರ ಸಾವಿನ ಸುದ್ದಿ ತಿಳಿದು ಆಘಾತವಾಗಿದೆ” ಎಂದು ಹೇಳಿದ್ದಾರೆ.

ಎಸ್‌ಐಆರ್‌ನಲ್ಲಿ ಅರವಿಂದ್ ಅವರ ಕಾರ್ಯಕ್ಷಮತೆಯ ಬಗ್ಗೆ ಮಾತನಾಡಿದ ಕಲೆಕ್ಟರ್, “ಅವರು ಅಸಾಧಾರಣರು. ಒಂದೇ ಒಂದು ದೂರು ಅವರ ವಿರುದ್ದ ಬಂದಿರಲಿಲ್ಲ. ಅವರು ಈಗಾಗಲೇ ತಮ್ಮ ಕೆಲಸದ ಶೇಕಡ 43ರಷ್ಟು ಪೂರ್ಣಗೊಳಿಸಿದ್ದರು. ಒತ್ತಡಕ್ಕೊಳಗಾಗಿರುವುದಾಗಿ ಅವರು ನನಗೆ ಎಂದಿಗೂ ತಿಳಿಸಿರಲಿಲ್ಲ. ಪೊಲೀಸ್ ತನಿಖಾ ವರದಿಯ ನಂತರವೇ ಪ್ರಕರಣದ ಸತ್ಯಾಸತ್ಯತೆ ತಿಳಿಯಬೇಕಿದೆ ಎಂದು ಕಲೆಕ್ಟರ್ ತಿಳಿಸಿದ್ದಾರೆ.

ಎಸ್‌ಐಆರ್ ಒತ್ತಡದಿಂದ ಈ ತಿಂಗಳಲ್ಲಿ 10 ಮಂದಿಯ ಆತ್ಮಹತ್ಯೆ ಸೇರಿದಂತೆ 20ಕ್ಕೂ ಹೆಚ್ಚು ಜನರು ಸಾವಿಗೀಡಾಗಿರುವ ಬಗ್ಗೆ ವರದಿಯಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...