Homeಮುಖಪುಟಮತ್ತೊಬ್ಬರು ಬಿಎಲ್‌ಒ ಆತ್ಮಹತ್ಯೆ : ಎಸ್‌ಐಆರ್ ಒತ್ತಡ ಆರೋಪ

ಮತ್ತೊಬ್ಬರು ಬಿಎಲ್‌ಒ ಆತ್ಮಹತ್ಯೆ : ಎಸ್‌ಐಆರ್ ಒತ್ತಡ ಆರೋಪ

- Advertisement -
- Advertisement -

ಗುಜರಾತ್‌ನ ಗಿರ್ ಸೋಮನಾಥ್ ಜಿಲ್ಲೆಯಲ್ಲಿ 40 ವರ್ಷದ ಶಿಕ್ಷಕ ಹಾಗೂ ಬೂತ್ ಮಟ್ಟದ ಅಧಿಕಾರಿ (ಬಿಎಲ್‌ಒ) ಅರವಿಂದ ಮುಲ್ಜಿ ವಾಧೇರ್ ಎಂಬವರು ತಮ್ಮ ಹುಟ್ಟೂರು ದೇವ್ಲಿ ಗ್ರಾಮದಲ್ಲಿ ಶುಕ್ರವಾರ (ನವೆಂಬರ್ 21) ಆತ್ಮಹತ್ಯೆ ಮಾಡಿಕೊಂಡಿದ್ದು, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಕೆಲಸದ ಹೊರೆಯಿಂದ ಮಾನಸಿಕ ಒತ್ತಡಕ್ಕೆ ಒಳಗಾಗಿದ್ದೆ ಎಂಬುವುದಾಗಿ ಡೆತ್ ಬರೆದಿಟ್ಟಿದ್ದಾರೆ ಎಂದು ವರದಿಯಾಗಿದೆ.

ಪೊಲೀಸರ ಪ್ರಕಾರ, ಗಿರ್ ಸೋಮನಾಥ್ ಜಿಲ್ಲೆಯ ಕೋಡಿನಾರ್‌ನ ಛರಾ ಕನ್ಯಾ ಪ್ರಾಥಮಿಕ ಶಾಲೆಯ ಶಿಕ್ಷಕ ಅರವಿಂದ್ ಅವರ ಶವ ಬೆಳಗಿನ ಜಾವ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಸಾವಿಗೂ ಮುನ್ನ ಅರವಿಂದ್ ತನ್ನ ಪತ್ನಿಗೆ ಬರೆದಿರುವ ಪತ್ರದಲ್ಲಿ ಅಥವಾ ಡೆತ್‌ನೋಟ್‌ನಲ್ಲಿ, ” ನಾನು ಈ ಎಸ್‌ಐಆರ್ ಕೆಲಸವನ್ನು ಇನ್ನು ಮುಂದೆ ಮಾಡಲು ಸಾಧ್ಯವಿಲ್ಲ. ಕಳೆದ ಕೆಲವು ದಿನಗಳಿಂದ ನಿರಂತರ ಕೆಲಸದಿಂದ ನಾನು ದಣಿದಿದ್ದೇನೆ ಮತ್ತು ಮಾನಸಿಕವಾಗಿ ಒತ್ತಡಕ್ಕೊಳಗಾಗಿದ್ದೇನೆ. ನಿನ್ನ ಮತ್ತು ಮಗನ ಬಗ್ಗೆ ಕಾಳಜಿವಹಿಸು. ನಾನು ನಿಮ್ಮಿಬ್ಬರನ್ನೂ ತುಂಬಾ ಪ್ರೀತಿಸುತ್ತೇನೆ. ಆದರೆ, ಈಗ ಈ ಅಂತಿಮ ಹೆಜ್ಜೆ ಇಡುವುದನ್ನು ಬಿಟ್ಟು ನನಗೆ ಬೇರೆ ದಾರಿಯಿಲ್ಲ” ಎಂದು ತಿಳಿಸಿದ್ದಾರೆ. ತನ್ನ ಕೆಲಸದ ದಾಖಲೆಗಳನ್ನು ಶಾಲೆಗೆ ಹಸ್ತಾಂತರಿಸಲು ಸೂಚಿಸಿದ್ದಾರೆ ಎಂದು ದಿ ನ್ಯೂ ಇಂಡಿಯನ್‌ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಅರವಿಂದ್ ಅವರ ಡೆತ್ ನೋಟ್‌ ಬಿಎಲ್‌ಒಗಳ ಗ್ರೂಪ್‌ಗಳಲ್ಲಿ ಹರಿದಾಡಿದ್ದು, ಅರವಿಂದ್ ಅವರ ಸಾವಿನ ಬಗ್ಗೆ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ಈ ವಿಷಯ ಚರ್ಚೆಯಾಗುತ್ತಿದೆ. ಹಲವರು ಎಸ್‌ಐಆರ್‌ ಪ್ರಕ್ರಿಯೆ ಪೂರ್ಣಗೊಳಿಸಲು ಬಿಎಲ್‌ಒಗಳು ಮಧ್ಯರಾತ್ರಿಯವರೆಗೆ ಕೆಲಸ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ ಎಂದು ವರದಿ ತಿಳಿಸಿದೆ.

ಎಸ್‌ಐಆರ್‌ ಕೆಲಸದಿಂದ ಈಗಾಗಲೇ ಒತ್ತಡಕ್ಕೆ ಒಳಗಾಗಿರುವ, ತಾಂತ್ರಿಕ ಸಮಸ್ಯೆಗಳಿಂದ ಬೇಸತ್ತು ಹೋಗಿರುವ, ಗಡುವಿನೊಳಗೆ ಕೆಲಸ ಮುಗಿಸುವ ಅನಿವಾರ್ಯತೆಯಲ್ಲಿರುವ ಬಿಎಲ್‌ಒಗಳು ಅರವಿಂದ್ ಅವರ ಸಾವಿನಿಂದ ಇನ್ನಷ್ಟು ಆತಂಕಕ್ಕೆ ಒಳಗಾಗಿದ್ದಾರೆ. ಅರವಿಂದ್ ಅವರ ಸಾವು ಒಂದು ಪ್ರತ್ಯೇಕ ದುರಂತವಲ್ಲ, ಬದಲಾಗಿ ವ್ಯವಸ್ಥಿತ ಆಡಳಿತಾತ್ಮಕ ಒತ್ತಡದ ನೇರ ಪರಿಣಾಮ ಎಂದು ಶಿಕ್ಷಕರ ಸಂಘಗಳು ಆರೋಪಿಸಿವೆ ಎಂದು ವರದಿ ಹೇಳಿದೆ.

“ಅರವಿಂದ್ ಅವರ ಸಾವಿನಿಂದ ಇಡೀ ಶಿಕ್ಷಕ ಸಮುದಾಯ ಆಘಾತಕ್ಕೊಳಗಾಗಿದೆ. ಎಸ್‌ಐಆರ್‌ನ ಕೆಲಸದ ಹೊರೆಯಿಂದಾಗಿ, ಅರವಿಂದ್‌ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರು ಕೋಡಿನಾರ್‌ನ ಅತ್ಯುತ್ತಮ ಶಿಕ್ಷಕರಲ್ಲಿ ಒಬ್ಬರು” ಎಂದು ಗಿರ್‌ ಸೋಮನಾಥ್ ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ವಿನೋದ್ ಬರದ್ ಹೇಳಿದ್ದಾರೆ ಎಂದು ವರದಿ ತಿಳಿಸಿದೆ.

ಅಖಿಲ ಭಾರತ ಶೈಕ್ಷಣಿಕ ಮಹಾಸಂಘ ಮೃತ ಶಿಕ್ಷಕನ ಕುಟುಂಬದ ಜವಾಬ್ದಾರಿಯನ್ನು ಸರ್ಕಾರ ಹೊತ್ತುಕೊಳ್ಳಬೇಕು. ಆರ್ಥಿಕ ನೆರವು ನೀಡಬೇಕು ಎಂದು ಒತ್ತಾಯಿಸಿದೆ.

“ಗಿರ್ ಸೋಮನಾಥ್‌ನ ಶಿಕ್ಷಕನ ಡೆತ್‌ನೋಟ್‌ ನೋಡುವಾಗ ಅವರ ಮೇಲೆ ಹೇರಲಾದ್ದ ತೀವ್ರ ಒತ್ತಡ ಸ್ಪಷ್ಟವಾಗಿ ಗೊತ್ತಾಗುತ್ತದೆ. ನಮ್ಮ ಸಂಘವು ಈ ವ್ಯವಸ್ಥೆಯನ್ನು ಬಲವಾಗಿ ವಿರೋಧಿಸುತ್ತದೆ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಮತ್ತು ಮೃತ ಶಿಕ್ಷಕನ ಕುಟುಂಬಕ್ಕೆ ಒಂದು ಕೋಟಿ ರೂಪಾಯಿ ಪರಿಹಾರ ನೀಡಬೇಕು” ಎಂದು ಅದರ ಸಂಘದ ರಾಜ್ಯಾಧ್ಯಕ್ಷ ಮಿತೇಶ್ ಭಟ್ ಆಗ್ರಹಿಸಿದ್ದಾರೆ.

ಎಸ್‌ಐಆರ್ ಕೆಲಸದ ಅಸಹನೀಯ ಹೊರೆಯ ಬಗ್ಗೆ ಒಕ್ಕೂಟವು ಈಗಾಗಲೇ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದೆ ಎಂದು ಭಟ್ ಹೇಳಿದ್ದಾರೆ.

ಅರವಿಂದ್ ಅವರ ಸಾವಿನ ಬಗ್ಗೆ ಆಕ್ರೋಶ ಹೆಚ್ಚಾದಂತೆ ಬಿಎಲ್‌ಒಗಳು ಮತ್ತು ಎಸ್‌ಐಆರ್ ಪ್ರಗತಿಯನ್ನು ನೋಡಿಕೊಳ್ಳುವ ಗಿರ್ ಸೋಮನಾಥ್ ಕಲೆಕ್ಟರ್ ಎನ್.ವಿ. ಉಪಾಧ್ಯಾಯ ಪ್ರತಿಕ್ರಿಯೆ ನೀಡಿದ್ದು, “ಅರವಿಂದ್ ಅವರು ಯಾವುದೇ ಕೆಲಸದ ಒತ್ತಡದ ಬಗ್ಗೆ ನನಗೆ ವರದಿ ಮಾಡಿರಲಿಲ್ಲ. ಅವರ ಸಾವಿನ ಸುದ್ದಿ ತಿಳಿದು ಆಘಾತವಾಗಿದೆ” ಎಂದು ಹೇಳಿದ್ದಾರೆ.

ಎಸ್‌ಐಆರ್‌ನಲ್ಲಿ ಅರವಿಂದ್ ಅವರ ಕಾರ್ಯಕ್ಷಮತೆಯ ಬಗ್ಗೆ ಮಾತನಾಡಿದ ಕಲೆಕ್ಟರ್, “ಅವರು ಅಸಾಧಾರಣರು. ಒಂದೇ ಒಂದು ದೂರು ಅವರ ವಿರುದ್ದ ಬಂದಿರಲಿಲ್ಲ. ಅವರು ಈಗಾಗಲೇ ತಮ್ಮ ಕೆಲಸದ ಶೇಕಡ 43ರಷ್ಟು ಪೂರ್ಣಗೊಳಿಸಿದ್ದರು. ಒತ್ತಡಕ್ಕೊಳಗಾಗಿರುವುದಾಗಿ ಅವರು ನನಗೆ ಎಂದಿಗೂ ತಿಳಿಸಿರಲಿಲ್ಲ. ಪೊಲೀಸ್ ತನಿಖಾ ವರದಿಯ ನಂತರವೇ ಪ್ರಕರಣದ ಸತ್ಯಾಸತ್ಯತೆ ತಿಳಿಯಬೇಕಿದೆ ಎಂದು ಕಲೆಕ್ಟರ್ ತಿಳಿಸಿದ್ದಾರೆ.

ಎಸ್‌ಐಆರ್ ಒತ್ತಡದಿಂದ ಈ ತಿಂಗಳಲ್ಲಿ 10 ಮಂದಿಯ ಆತ್ಮಹತ್ಯೆ ಸೇರಿದಂತೆ 20ಕ್ಕೂ ಹೆಚ್ಚು ಜನರು ಸಾವಿಗೀಡಾಗಿರುವ ಬಗ್ಗೆ ವರದಿಯಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ಪೊಲೀಸರಿಂದ ಬೈಕ್ ಸೀಝ್‌; ಠಾಣೆ ಮುಂದೆ ಬೆಂಕಿ ಹಚ್ಚಿಕೊಂಡ ‘ಗಿಗ್’ ಕಾರ್ಮಿಕ

ಪೊಲೀಸರು ತನ್ನ ಬೈಕ್‌ ವಶಪಡಿಸಿಕೊಂಡ ನಂತರ 32 ವರ್ಷದ ಗಿಗ್ ಕಾರ್ಮಿಕನೊಬ್ಬ ಠಾಣೆಯ ಹೊರಗೆ ಬೆಂಕಿಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಉತ್ತರ ಪ್ರದೇಶದ ಬರೇಲಿಯಲ್ಲಿ ನಡೆದಿದೆ. ಅಕ್ಷಯ್ ಕಶ್ಯಪ್ ಎಂದು ಗುರುತಿಸಲ್ಪಟ್ಟ ಯುವಕನಿಗೆ ದೇಹದ...

ಎಪ್‌ಸ್ಟೀನ್ ಫೈಲ್ಸ್ ನಲ್ಲಿ ಹೆಸರು ಪ್ರಸ್ತಾಪ; ಗೇಟ್ಸ್ ಫೌಂಡೇಶನ್ ಸಿಬ್ಬಂದಿಗೆ ಕ್ಷಮೆಯಾಚಿಸಿದ ಬಿಲ್ ಗೇಟ್ಸ್: ವರದಿ 

ನ್ಯೂಯಾರ್ಕ್: ಅಮೆರಿಕದ ತಂತ್ರಜ್ಞಾನ ಉದ್ಯಮಿ ಬಿಲ್ ಗೇಟ್ಸ್, ಲೈಂಗಿಕ ಅಪರಾಧಿ ಜೆಫ್ರಿ ಎಪ್‌ಸ್ಟೈನ್‌ನೊಂದಿಗಿನ ಹಳೆಯ ಸಂಪರ್ಕಕ್ಕಾಗಿ ಗೇಟ್ಸ್ ಫೌಂಡೇಶನ್ ಸಿಬ್ಬಂದಿಗೆ ಕ್ಷಮೆಯಾಚಿಸಿದ್ದಾರೆ ಎಂದು ವರದಿಯಾಗಿದೆ. ವಾಲ್ ಸ್ಟ್ರೀಟ್ ಜರ್ನಲ್ ವರದಿಯ ಪ್ರಕಾರ, ಫೌಂಡೇಶನ್‌ನ ಟೌನ್...

ಕೆಎಸ್‌ಯು-ಐಯುಎಂಎಲ್ ಪ್ರತಿಭಟನೆಯಲ್ಲಿ ಘರ್ಷಣೆ; ಗಾಯಗೊಂಡ ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್

ಕಣ್ಣೂರು ರೈಲ್ವೆ ನಿಲ್ದಾಣದಲ್ಲಿ ಬುಧವಾರ ಪೊಲೀಸರು ಮತ್ತು ಕೇರಳ ವಿದ್ಯಾರ್ಥಿ ಸಂಘ (ಕೆಎಸ್‌ಯು)-ಐಯುಎಂಎಲ್ ಯುವ ಘಟಕದ ಪ್ರತಿಭಟನಾಕಾರರ ನಡುವೆ ನಡೆದ ಘರ್ಷಣೆಯಲ್ಲಿ ಆರೋಗ್ಯ ಸಚಿವೆ ವೀಣಾ ಜಾರ್ಜ್ ಕುತ್ತಿಗೆ ಮತ್ತು ಕೈಗೆ ಗಾಯಗಳಾಗಿದೆ. ಕಾಂಗ್ರೆಸ್-ಕೆಎಸ್‌ಯು...

ಉತ್ತರಾಖಂಡ| ದೇವಸ್ಥಾನದ ಸಮೀಪ ಖಾಲಿ ಜಾಗದಲ್ಲಿ ನಮಾಜ್; ವೃದ್ಧ ಮುಸ್ಲಿಂ ವ್ಯಕ್ತಿಯ ಮೇಲೆ ಹಲ್ಲೆ

ಉತ್ತರಾಖಂಡದ ಜಗತ್ಪುರದ ಅತ್ರಿಯ ದೇವಸ್ಥಾನದ ಮುಂಭಾಗದಲ್ಲಿರುವ ಖಾಲಿ ಜಾಗದಲ್ಲಿ ನಮಾಜ್ ಮಾಡಿದ ನಂತರ ಶಾಹಿದ್ ಎಂದು ಗುರುತಿಸಲಾದ ವೃದ್ಧ ಮುಸ್ಲಿಂ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿ ಧಾರ್ಮಿಕ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು...

ಮುಝಫ್ಫರ್‌ನಗರ ಗಲಭೆ ಪ್ರಕರಣ : 37 ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

ಉತ್ತರ ಪ್ರದೇಶದ ಮುಝಫ್ಫರ್‌ನಗರದ ನ್ಯಾಯಾಲಯ 2013ರ ಕೋಮು ಗಲಭೆಗೆ ಸಂಬಂಧಿಸಿದ ಎಂಟು ಜನರ ಹತ್ಯೆ ಪ್ರಕರಣದಲ್ಲಿ ಸಾಕ್ಷ್ಯಗಳ ಕೊರತೆಯನ್ನು ಉಲ್ಲೇಖಿಸಿ 37 ಆರೋಪಿಗಳನ್ನು ಮಂಗಳವಾರ (ಫೆ.25) ಖುಲಾಸೆಗೊಳಿಸಿದೆ ಎಂದು ವರದಿಯಾಗಿದೆ. ತೀರ್ಪು ಪ್ರಕಟಿಸಿದ ಹೆಚ್ಚುವರಿ...

ಇಸ್ರೇಲ್ ಸಂಸತ್ತಿನಲ್ಲಿ ಭಾಷಣದ ವೇಳೆ ಪ್ರಧಾನಿ ಮೋದಿ ಗಾಝಾ ನರಮೇಧ ಉಲ್ಲೇಖಿಸಲಿ : ಪ್ರಿಯಾಂಕಾ ಗಾಂಧಿ ಆಗ್ರಹ

ಇಸ್ರೇಲ್‌ಗೆ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ, ಅಲ್ಲಿನ ಸಂಸತ್ತಾದ ನೆಸೆಟ್ ಅನ್ನು ಉದ್ದೇಶಿಸಿ ಮಾತನಾಡುವಾಗ ಗಾಝಾ ನರಮೇಧವನ್ನು ಉಲ್ಲೇಖಿಸಿ ನ್ಯಾಯಕ್ಕಾಗಿ ಆಗ್ರಹಿಸಬೇಕು ಎಂದು ಎಐಸಿಸಿ ಕಾರ್ಯದರ್ಶಿ ಹಾಗೂ ವಯನಾಡ್ ಸಂಸದೆ ಪ್ರಿಯಾಂಕಾ...

ಕೇಂದ್ರ ಸಚಿವರ ಸಮ್ಮುಖದಲ್ಲಿ ‘ಮುಸ್ಲಿಂ ವಿರೋಧಿ ಹೇಳಿಕೆ’ ನೀಡಿದ ಹಿಂದುತ್ವವಾದಿ ವ್ಯಕ್ತಿ

ಉತ್ತರಾಖಂಡದಲ್ಲಿ ನಡೆದ ಸಾರ್ವಜನಿಕ ಹಿಂದೂ ಧಾರ್ಮಿಕ ಕಾರ್ಯಕ್ರಮದಲ್ಲಿ, ಕೇಂದ್ರ ಸಚಿವರ ಸಮ್ಮುಖದಲ್ಲಿಯೇ ಹಿಂದುತ್ವವಾದಿ ಮುಖಂಡನೊಬ್ಬ ಮುಸ್ಲಿಮರ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿದ್ದು ರಾಜಕೀಯ ಮತ್ತು ಸಾಮಾಜಿಕ ವಿವಾದಕ್ಕೆ ಕಾರಣವಾಗಿದೆ. ಇದು ಪೊಲೀಸ್ ಕ್ರಮ...

ಎನ್‌ಸಿಇಆರ್‌ಟಿ ಪಠ್ಯಪುಸ್ತಕದ ‘ನ್ಯಾಯಾಂಗದಲ್ಲಿನ ಭ್ರಷ್ಟಾಚಾರ’ ವಿಷಯಕ್ಕೆ ಸುಪ್ರೀಂ ಕೋರ್ಟ್ ತೀವ್ರ ಆಕ್ಷೇಪ

ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಪ್ರಕಟಿಸಿದ 8ನೇ ತರಗತಿಯ ಹೊಸ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ "ನ್ಯಾಯಾಂಗದಲ್ಲಿನ ಭ್ರಷ್ಟಾಚಾರ" ಎಂಬ ವಿಷಯ ಉಲ್ಲೇಖಿಸಿರುವುದಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಫೆ.25) ತೀವ್ರ...

ಮಧ್ಯಪ್ರದೇಶ: ಡಾ. ಹರಿಸಿಂಗ್ ಗೌರ್ ವಿವಿಯಲ್ಲಿ ಎಬಿವಿಪಿ-ಆರ್‌ಎಸ್‌ಎಸ್‌ ದುಷ್ಕರ್ಮಿಗಳಿಂದ ವಿದ್ಯಾರ್ಥಿಗಳ ಮೇಲೆ ದಾಳಿ, ಜೀವಬೆದರಿಕೆ;  ಎಫ್‌ಐಆರ್ ದಾಖಲು

ಮಧ್ಯಪ್ರದೇಶದ ಸಾಗರ್‌ನಲ್ಲಿರುವ ಡಾ. ಹರಿ ಸಿಂಗ್ ಗೌರ್ ವಿಶ್ವವಿದ್ಯಾಲಯದಲ್ಲಿ ನಡೆದ ಸರಣಿ ಹಿಂಸಾತ್ಮಕ ಘಟನೆಗಳು ಕ್ಯಾಂಪಸ್ ಸುರಕ್ಷತೆಯ ಬಗ್ಗೆ ಗಂಭೀರ ಕಳವಳವನ್ನು ಉಂಟುಮಾಡಿವೆ. ಐದು ದಿನಗಳಲ್ಲಿ ಎಬಿವಿಪಿ-ಆರ್‌ಎಸ್‌ಎಸ್‌ಗೆ ಸಂಬಂಧಿಸಿದ ವ್ಯಕ್ತಿಗಳಿಂದ ಎರಡು ಜೀವ...

ಅಜೀಂ ಪ್ರೇಮ್‌ ಜಿ ವಿವಿಯಲ್ಲಿ ದಾಂಧಲೆ : ಎಬಿವಿಪಿ ಸದಸ್ಯರ ವಿರುದ್ಧ ಕಠಿಣ ಕ್ರಮಕ್ಕೆ ಕೆವಿಎಸ್‌ ಆಗ್ರಹ

ಅಜೀಂ ಪ್ರೇಮ್‌ ಜಿ ವಿಶ್ವವಿದ್ಯಾಲಯಕ್ಕೆ ನುಗ್ಗಿ ದಾಂಧಲೆ ನಡೆಸಿದ ಎಬಿವಿಪಿ ಸದಸ್ಯರ ವಿರುದ್ದ ಕಠಿಣ ಕ್ರಮ ಕೈಗೊಳ್ಳುವಂತೆ ಕರ್ನಾಟಕ ವಿದ್ಯಾರ್ಥಿ ಸಂಘಟನೆ (ಕೆವಿಎಸ್‌) ಆಗ್ರಹಿಸಿದೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಸಂಘಟನೆಯ ರಾಜ್ಯ...