Homeಮುಖಪುಟಮತ್ತೊಬ್ಬರು ಬಿಎಲ್‌ಒ ಆತ್ಮಹತ್ಯೆ : ಎಸ್‌ಐಆರ್ ಒತ್ತಡ ಆರೋಪ

ಮತ್ತೊಬ್ಬರು ಬಿಎಲ್‌ಒ ಆತ್ಮಹತ್ಯೆ : ಎಸ್‌ಐಆರ್ ಒತ್ತಡ ಆರೋಪ

- Advertisement -
- Advertisement -

ಗುಜರಾತ್‌ನ ಗಿರ್ ಸೋಮನಾಥ್ ಜಿಲ್ಲೆಯಲ್ಲಿ 40 ವರ್ಷದ ಶಿಕ್ಷಕ ಹಾಗೂ ಬೂತ್ ಮಟ್ಟದ ಅಧಿಕಾರಿ (ಬಿಎಲ್‌ಒ) ಅರವಿಂದ ಮುಲ್ಜಿ ವಾಧೇರ್ ಎಂಬವರು ತಮ್ಮ ಹುಟ್ಟೂರು ದೇವ್ಲಿ ಗ್ರಾಮದಲ್ಲಿ ಶುಕ್ರವಾರ (ನವೆಂಬರ್ 21) ಆತ್ಮಹತ್ಯೆ ಮಾಡಿಕೊಂಡಿದ್ದು, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಕೆಲಸದ ಹೊರೆಯಿಂದ ಮಾನಸಿಕ ಒತ್ತಡಕ್ಕೆ ಒಳಗಾಗಿದ್ದೆ ಎಂಬುವುದಾಗಿ ಡೆತ್ ಬರೆದಿಟ್ಟಿದ್ದಾರೆ ಎಂದು ವರದಿಯಾಗಿದೆ.

ಪೊಲೀಸರ ಪ್ರಕಾರ, ಗಿರ್ ಸೋಮನಾಥ್ ಜಿಲ್ಲೆಯ ಕೋಡಿನಾರ್‌ನ ಛರಾ ಕನ್ಯಾ ಪ್ರಾಥಮಿಕ ಶಾಲೆಯ ಶಿಕ್ಷಕ ಅರವಿಂದ್ ಅವರ ಶವ ಬೆಳಗಿನ ಜಾವ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಸಾವಿಗೂ ಮುನ್ನ ಅರವಿಂದ್ ತನ್ನ ಪತ್ನಿಗೆ ಬರೆದಿರುವ ಪತ್ರದಲ್ಲಿ ಅಥವಾ ಡೆತ್‌ನೋಟ್‌ನಲ್ಲಿ, ” ನಾನು ಈ ಎಸ್‌ಐಆರ್ ಕೆಲಸವನ್ನು ಇನ್ನು ಮುಂದೆ ಮಾಡಲು ಸಾಧ್ಯವಿಲ್ಲ. ಕಳೆದ ಕೆಲವು ದಿನಗಳಿಂದ ನಿರಂತರ ಕೆಲಸದಿಂದ ನಾನು ದಣಿದಿದ್ದೇನೆ ಮತ್ತು ಮಾನಸಿಕವಾಗಿ ಒತ್ತಡಕ್ಕೊಳಗಾಗಿದ್ದೇನೆ. ನಿನ್ನ ಮತ್ತು ಮಗನ ಬಗ್ಗೆ ಕಾಳಜಿವಹಿಸು. ನಾನು ನಿಮ್ಮಿಬ್ಬರನ್ನೂ ತುಂಬಾ ಪ್ರೀತಿಸುತ್ತೇನೆ. ಆದರೆ, ಈಗ ಈ ಅಂತಿಮ ಹೆಜ್ಜೆ ಇಡುವುದನ್ನು ಬಿಟ್ಟು ನನಗೆ ಬೇರೆ ದಾರಿಯಿಲ್ಲ” ಎಂದು ತಿಳಿಸಿದ್ದಾರೆ. ತನ್ನ ಕೆಲಸದ ದಾಖಲೆಗಳನ್ನು ಶಾಲೆಗೆ ಹಸ್ತಾಂತರಿಸಲು ಸೂಚಿಸಿದ್ದಾರೆ ಎಂದು ದಿ ನ್ಯೂ ಇಂಡಿಯನ್‌ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಅರವಿಂದ್ ಅವರ ಡೆತ್ ನೋಟ್‌ ಬಿಎಲ್‌ಒಗಳ ಗ್ರೂಪ್‌ಗಳಲ್ಲಿ ಹರಿದಾಡಿದ್ದು, ಅರವಿಂದ್ ಅವರ ಸಾವಿನ ಬಗ್ಗೆ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ಈ ವಿಷಯ ಚರ್ಚೆಯಾಗುತ್ತಿದೆ. ಹಲವರು ಎಸ್‌ಐಆರ್‌ ಪ್ರಕ್ರಿಯೆ ಪೂರ್ಣಗೊಳಿಸಲು ಬಿಎಲ್‌ಒಗಳು ಮಧ್ಯರಾತ್ರಿಯವರೆಗೆ ಕೆಲಸ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ ಎಂದು ವರದಿ ತಿಳಿಸಿದೆ.

ಎಸ್‌ಐಆರ್‌ ಕೆಲಸದಿಂದ ಈಗಾಗಲೇ ಒತ್ತಡಕ್ಕೆ ಒಳಗಾಗಿರುವ, ತಾಂತ್ರಿಕ ಸಮಸ್ಯೆಗಳಿಂದ ಬೇಸತ್ತು ಹೋಗಿರುವ, ಗಡುವಿನೊಳಗೆ ಕೆಲಸ ಮುಗಿಸುವ ಅನಿವಾರ್ಯತೆಯಲ್ಲಿರುವ ಬಿಎಲ್‌ಒಗಳು ಅರವಿಂದ್ ಅವರ ಸಾವಿನಿಂದ ಇನ್ನಷ್ಟು ಆತಂಕಕ್ಕೆ ಒಳಗಾಗಿದ್ದಾರೆ. ಅರವಿಂದ್ ಅವರ ಸಾವು ಒಂದು ಪ್ರತ್ಯೇಕ ದುರಂತವಲ್ಲ, ಬದಲಾಗಿ ವ್ಯವಸ್ಥಿತ ಆಡಳಿತಾತ್ಮಕ ಒತ್ತಡದ ನೇರ ಪರಿಣಾಮ ಎಂದು ಶಿಕ್ಷಕರ ಸಂಘಗಳು ಆರೋಪಿಸಿವೆ ಎಂದು ವರದಿ ಹೇಳಿದೆ.

“ಅರವಿಂದ್ ಅವರ ಸಾವಿನಿಂದ ಇಡೀ ಶಿಕ್ಷಕ ಸಮುದಾಯ ಆಘಾತಕ್ಕೊಳಗಾಗಿದೆ. ಎಸ್‌ಐಆರ್‌ನ ಕೆಲಸದ ಹೊರೆಯಿಂದಾಗಿ, ಅರವಿಂದ್‌ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರು ಕೋಡಿನಾರ್‌ನ ಅತ್ಯುತ್ತಮ ಶಿಕ್ಷಕರಲ್ಲಿ ಒಬ್ಬರು” ಎಂದು ಗಿರ್‌ ಸೋಮನಾಥ್ ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ವಿನೋದ್ ಬರದ್ ಹೇಳಿದ್ದಾರೆ ಎಂದು ವರದಿ ತಿಳಿಸಿದೆ.

ಅಖಿಲ ಭಾರತ ಶೈಕ್ಷಣಿಕ ಮಹಾಸಂಘ ಮೃತ ಶಿಕ್ಷಕನ ಕುಟುಂಬದ ಜವಾಬ್ದಾರಿಯನ್ನು ಸರ್ಕಾರ ಹೊತ್ತುಕೊಳ್ಳಬೇಕು. ಆರ್ಥಿಕ ನೆರವು ನೀಡಬೇಕು ಎಂದು ಒತ್ತಾಯಿಸಿದೆ.

“ಗಿರ್ ಸೋಮನಾಥ್‌ನ ಶಿಕ್ಷಕನ ಡೆತ್‌ನೋಟ್‌ ನೋಡುವಾಗ ಅವರ ಮೇಲೆ ಹೇರಲಾದ್ದ ತೀವ್ರ ಒತ್ತಡ ಸ್ಪಷ್ಟವಾಗಿ ಗೊತ್ತಾಗುತ್ತದೆ. ನಮ್ಮ ಸಂಘವು ಈ ವ್ಯವಸ್ಥೆಯನ್ನು ಬಲವಾಗಿ ವಿರೋಧಿಸುತ್ತದೆ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಮತ್ತು ಮೃತ ಶಿಕ್ಷಕನ ಕುಟುಂಬಕ್ಕೆ ಒಂದು ಕೋಟಿ ರೂಪಾಯಿ ಪರಿಹಾರ ನೀಡಬೇಕು” ಎಂದು ಅದರ ಸಂಘದ ರಾಜ್ಯಾಧ್ಯಕ್ಷ ಮಿತೇಶ್ ಭಟ್ ಆಗ್ರಹಿಸಿದ್ದಾರೆ.

ಎಸ್‌ಐಆರ್ ಕೆಲಸದ ಅಸಹನೀಯ ಹೊರೆಯ ಬಗ್ಗೆ ಒಕ್ಕೂಟವು ಈಗಾಗಲೇ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದೆ ಎಂದು ಭಟ್ ಹೇಳಿದ್ದಾರೆ.

ಅರವಿಂದ್ ಅವರ ಸಾವಿನ ಬಗ್ಗೆ ಆಕ್ರೋಶ ಹೆಚ್ಚಾದಂತೆ ಬಿಎಲ್‌ಒಗಳು ಮತ್ತು ಎಸ್‌ಐಆರ್ ಪ್ರಗತಿಯನ್ನು ನೋಡಿಕೊಳ್ಳುವ ಗಿರ್ ಸೋಮನಾಥ್ ಕಲೆಕ್ಟರ್ ಎನ್.ವಿ. ಉಪಾಧ್ಯಾಯ ಪ್ರತಿಕ್ರಿಯೆ ನೀಡಿದ್ದು, “ಅರವಿಂದ್ ಅವರು ಯಾವುದೇ ಕೆಲಸದ ಒತ್ತಡದ ಬಗ್ಗೆ ನನಗೆ ವರದಿ ಮಾಡಿರಲಿಲ್ಲ. ಅವರ ಸಾವಿನ ಸುದ್ದಿ ತಿಳಿದು ಆಘಾತವಾಗಿದೆ” ಎಂದು ಹೇಳಿದ್ದಾರೆ.

ಎಸ್‌ಐಆರ್‌ನಲ್ಲಿ ಅರವಿಂದ್ ಅವರ ಕಾರ್ಯಕ್ಷಮತೆಯ ಬಗ್ಗೆ ಮಾತನಾಡಿದ ಕಲೆಕ್ಟರ್, “ಅವರು ಅಸಾಧಾರಣರು. ಒಂದೇ ಒಂದು ದೂರು ಅವರ ವಿರುದ್ದ ಬಂದಿರಲಿಲ್ಲ. ಅವರು ಈಗಾಗಲೇ ತಮ್ಮ ಕೆಲಸದ ಶೇಕಡ 43ರಷ್ಟು ಪೂರ್ಣಗೊಳಿಸಿದ್ದರು. ಒತ್ತಡಕ್ಕೊಳಗಾಗಿರುವುದಾಗಿ ಅವರು ನನಗೆ ಎಂದಿಗೂ ತಿಳಿಸಿರಲಿಲ್ಲ. ಪೊಲೀಸ್ ತನಿಖಾ ವರದಿಯ ನಂತರವೇ ಪ್ರಕರಣದ ಸತ್ಯಾಸತ್ಯತೆ ತಿಳಿಯಬೇಕಿದೆ ಎಂದು ಕಲೆಕ್ಟರ್ ತಿಳಿಸಿದ್ದಾರೆ.

ಎಸ್‌ಐಆರ್ ಒತ್ತಡದಿಂದ ಈ ತಿಂಗಳಲ್ಲಿ 10 ಮಂದಿಯ ಆತ್ಮಹತ್ಯೆ ಸೇರಿದಂತೆ 20ಕ್ಕೂ ಹೆಚ್ಚು ಜನರು ಸಾವಿಗೀಡಾಗಿರುವ ಬಗ್ಗೆ ವರದಿಯಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...