Homeಮುಖಪುಟಮತ್ತೊಬ್ಬರು ಬಿಎಲ್‌ಒ ಆತ್ಮಹತ್ಯೆ : ಎಸ್‌ಐಆರ್ ಒತ್ತಡ ಆರೋಪ

ಮತ್ತೊಬ್ಬರು ಬಿಎಲ್‌ಒ ಆತ್ಮಹತ್ಯೆ : ಎಸ್‌ಐಆರ್ ಒತ್ತಡ ಆರೋಪ

- Advertisement -
- Advertisement -

ಗುಜರಾತ್‌ನ ಗಿರ್ ಸೋಮನಾಥ್ ಜಿಲ್ಲೆಯಲ್ಲಿ 40 ವರ್ಷದ ಶಿಕ್ಷಕ ಹಾಗೂ ಬೂತ್ ಮಟ್ಟದ ಅಧಿಕಾರಿ (ಬಿಎಲ್‌ಒ) ಅರವಿಂದ ಮುಲ್ಜಿ ವಾಧೇರ್ ಎಂಬವರು ತಮ್ಮ ಹುಟ್ಟೂರು ದೇವ್ಲಿ ಗ್ರಾಮದಲ್ಲಿ ಶುಕ್ರವಾರ (ನವೆಂಬರ್ 21) ಆತ್ಮಹತ್ಯೆ ಮಾಡಿಕೊಂಡಿದ್ದು, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಕೆಲಸದ ಹೊರೆಯಿಂದ ಮಾನಸಿಕ ಒತ್ತಡಕ್ಕೆ ಒಳಗಾಗಿದ್ದೆ ಎಂಬುವುದಾಗಿ ಡೆತ್ ಬರೆದಿಟ್ಟಿದ್ದಾರೆ ಎಂದು ವರದಿಯಾಗಿದೆ.

ಪೊಲೀಸರ ಪ್ರಕಾರ, ಗಿರ್ ಸೋಮನಾಥ್ ಜಿಲ್ಲೆಯ ಕೋಡಿನಾರ್‌ನ ಛರಾ ಕನ್ಯಾ ಪ್ರಾಥಮಿಕ ಶಾಲೆಯ ಶಿಕ್ಷಕ ಅರವಿಂದ್ ಅವರ ಶವ ಬೆಳಗಿನ ಜಾವ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಸಾವಿಗೂ ಮುನ್ನ ಅರವಿಂದ್ ತನ್ನ ಪತ್ನಿಗೆ ಬರೆದಿರುವ ಪತ್ರದಲ್ಲಿ ಅಥವಾ ಡೆತ್‌ನೋಟ್‌ನಲ್ಲಿ, ” ನಾನು ಈ ಎಸ್‌ಐಆರ್ ಕೆಲಸವನ್ನು ಇನ್ನು ಮುಂದೆ ಮಾಡಲು ಸಾಧ್ಯವಿಲ್ಲ. ಕಳೆದ ಕೆಲವು ದಿನಗಳಿಂದ ನಿರಂತರ ಕೆಲಸದಿಂದ ನಾನು ದಣಿದಿದ್ದೇನೆ ಮತ್ತು ಮಾನಸಿಕವಾಗಿ ಒತ್ತಡಕ್ಕೊಳಗಾಗಿದ್ದೇನೆ. ನಿನ್ನ ಮತ್ತು ಮಗನ ಬಗ್ಗೆ ಕಾಳಜಿವಹಿಸು. ನಾನು ನಿಮ್ಮಿಬ್ಬರನ್ನೂ ತುಂಬಾ ಪ್ರೀತಿಸುತ್ತೇನೆ. ಆದರೆ, ಈಗ ಈ ಅಂತಿಮ ಹೆಜ್ಜೆ ಇಡುವುದನ್ನು ಬಿಟ್ಟು ನನಗೆ ಬೇರೆ ದಾರಿಯಿಲ್ಲ” ಎಂದು ತಿಳಿಸಿದ್ದಾರೆ. ತನ್ನ ಕೆಲಸದ ದಾಖಲೆಗಳನ್ನು ಶಾಲೆಗೆ ಹಸ್ತಾಂತರಿಸಲು ಸೂಚಿಸಿದ್ದಾರೆ ಎಂದು ದಿ ನ್ಯೂ ಇಂಡಿಯನ್‌ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಅರವಿಂದ್ ಅವರ ಡೆತ್ ನೋಟ್‌ ಬಿಎಲ್‌ಒಗಳ ಗ್ರೂಪ್‌ಗಳಲ್ಲಿ ಹರಿದಾಡಿದ್ದು, ಅರವಿಂದ್ ಅವರ ಸಾವಿನ ಬಗ್ಗೆ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ಈ ವಿಷಯ ಚರ್ಚೆಯಾಗುತ್ತಿದೆ. ಹಲವರು ಎಸ್‌ಐಆರ್‌ ಪ್ರಕ್ರಿಯೆ ಪೂರ್ಣಗೊಳಿಸಲು ಬಿಎಲ್‌ಒಗಳು ಮಧ್ಯರಾತ್ರಿಯವರೆಗೆ ಕೆಲಸ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ ಎಂದು ವರದಿ ತಿಳಿಸಿದೆ.

ಎಸ್‌ಐಆರ್‌ ಕೆಲಸದಿಂದ ಈಗಾಗಲೇ ಒತ್ತಡಕ್ಕೆ ಒಳಗಾಗಿರುವ, ತಾಂತ್ರಿಕ ಸಮಸ್ಯೆಗಳಿಂದ ಬೇಸತ್ತು ಹೋಗಿರುವ, ಗಡುವಿನೊಳಗೆ ಕೆಲಸ ಮುಗಿಸುವ ಅನಿವಾರ್ಯತೆಯಲ್ಲಿರುವ ಬಿಎಲ್‌ಒಗಳು ಅರವಿಂದ್ ಅವರ ಸಾವಿನಿಂದ ಇನ್ನಷ್ಟು ಆತಂಕಕ್ಕೆ ಒಳಗಾಗಿದ್ದಾರೆ. ಅರವಿಂದ್ ಅವರ ಸಾವು ಒಂದು ಪ್ರತ್ಯೇಕ ದುರಂತವಲ್ಲ, ಬದಲಾಗಿ ವ್ಯವಸ್ಥಿತ ಆಡಳಿತಾತ್ಮಕ ಒತ್ತಡದ ನೇರ ಪರಿಣಾಮ ಎಂದು ಶಿಕ್ಷಕರ ಸಂಘಗಳು ಆರೋಪಿಸಿವೆ ಎಂದು ವರದಿ ಹೇಳಿದೆ.

“ಅರವಿಂದ್ ಅವರ ಸಾವಿನಿಂದ ಇಡೀ ಶಿಕ್ಷಕ ಸಮುದಾಯ ಆಘಾತಕ್ಕೊಳಗಾಗಿದೆ. ಎಸ್‌ಐಆರ್‌ನ ಕೆಲಸದ ಹೊರೆಯಿಂದಾಗಿ, ಅರವಿಂದ್‌ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರು ಕೋಡಿನಾರ್‌ನ ಅತ್ಯುತ್ತಮ ಶಿಕ್ಷಕರಲ್ಲಿ ಒಬ್ಬರು” ಎಂದು ಗಿರ್‌ ಸೋಮನಾಥ್ ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ವಿನೋದ್ ಬರದ್ ಹೇಳಿದ್ದಾರೆ ಎಂದು ವರದಿ ತಿಳಿಸಿದೆ.

ಅಖಿಲ ಭಾರತ ಶೈಕ್ಷಣಿಕ ಮಹಾಸಂಘ ಮೃತ ಶಿಕ್ಷಕನ ಕುಟುಂಬದ ಜವಾಬ್ದಾರಿಯನ್ನು ಸರ್ಕಾರ ಹೊತ್ತುಕೊಳ್ಳಬೇಕು. ಆರ್ಥಿಕ ನೆರವು ನೀಡಬೇಕು ಎಂದು ಒತ್ತಾಯಿಸಿದೆ.

“ಗಿರ್ ಸೋಮನಾಥ್‌ನ ಶಿಕ್ಷಕನ ಡೆತ್‌ನೋಟ್‌ ನೋಡುವಾಗ ಅವರ ಮೇಲೆ ಹೇರಲಾದ್ದ ತೀವ್ರ ಒತ್ತಡ ಸ್ಪಷ್ಟವಾಗಿ ಗೊತ್ತಾಗುತ್ತದೆ. ನಮ್ಮ ಸಂಘವು ಈ ವ್ಯವಸ್ಥೆಯನ್ನು ಬಲವಾಗಿ ವಿರೋಧಿಸುತ್ತದೆ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಮತ್ತು ಮೃತ ಶಿಕ್ಷಕನ ಕುಟುಂಬಕ್ಕೆ ಒಂದು ಕೋಟಿ ರೂಪಾಯಿ ಪರಿಹಾರ ನೀಡಬೇಕು” ಎಂದು ಅದರ ಸಂಘದ ರಾಜ್ಯಾಧ್ಯಕ್ಷ ಮಿತೇಶ್ ಭಟ್ ಆಗ್ರಹಿಸಿದ್ದಾರೆ.

ಎಸ್‌ಐಆರ್ ಕೆಲಸದ ಅಸಹನೀಯ ಹೊರೆಯ ಬಗ್ಗೆ ಒಕ್ಕೂಟವು ಈಗಾಗಲೇ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದೆ ಎಂದು ಭಟ್ ಹೇಳಿದ್ದಾರೆ.

ಅರವಿಂದ್ ಅವರ ಸಾವಿನ ಬಗ್ಗೆ ಆಕ್ರೋಶ ಹೆಚ್ಚಾದಂತೆ ಬಿಎಲ್‌ಒಗಳು ಮತ್ತು ಎಸ್‌ಐಆರ್ ಪ್ರಗತಿಯನ್ನು ನೋಡಿಕೊಳ್ಳುವ ಗಿರ್ ಸೋಮನಾಥ್ ಕಲೆಕ್ಟರ್ ಎನ್.ವಿ. ಉಪಾಧ್ಯಾಯ ಪ್ರತಿಕ್ರಿಯೆ ನೀಡಿದ್ದು, “ಅರವಿಂದ್ ಅವರು ಯಾವುದೇ ಕೆಲಸದ ಒತ್ತಡದ ಬಗ್ಗೆ ನನಗೆ ವರದಿ ಮಾಡಿರಲಿಲ್ಲ. ಅವರ ಸಾವಿನ ಸುದ್ದಿ ತಿಳಿದು ಆಘಾತವಾಗಿದೆ” ಎಂದು ಹೇಳಿದ್ದಾರೆ.

ಎಸ್‌ಐಆರ್‌ನಲ್ಲಿ ಅರವಿಂದ್ ಅವರ ಕಾರ್ಯಕ್ಷಮತೆಯ ಬಗ್ಗೆ ಮಾತನಾಡಿದ ಕಲೆಕ್ಟರ್, “ಅವರು ಅಸಾಧಾರಣರು. ಒಂದೇ ಒಂದು ದೂರು ಅವರ ವಿರುದ್ದ ಬಂದಿರಲಿಲ್ಲ. ಅವರು ಈಗಾಗಲೇ ತಮ್ಮ ಕೆಲಸದ ಶೇಕಡ 43ರಷ್ಟು ಪೂರ್ಣಗೊಳಿಸಿದ್ದರು. ಒತ್ತಡಕ್ಕೊಳಗಾಗಿರುವುದಾಗಿ ಅವರು ನನಗೆ ಎಂದಿಗೂ ತಿಳಿಸಿರಲಿಲ್ಲ. ಪೊಲೀಸ್ ತನಿಖಾ ವರದಿಯ ನಂತರವೇ ಪ್ರಕರಣದ ಸತ್ಯಾಸತ್ಯತೆ ತಿಳಿಯಬೇಕಿದೆ ಎಂದು ಕಲೆಕ್ಟರ್ ತಿಳಿಸಿದ್ದಾರೆ.

ಎಸ್‌ಐಆರ್ ಒತ್ತಡದಿಂದ ಈ ತಿಂಗಳಲ್ಲಿ 10 ಮಂದಿಯ ಆತ್ಮಹತ್ಯೆ ಸೇರಿದಂತೆ 20ಕ್ಕೂ ಹೆಚ್ಚು ಜನರು ಸಾವಿಗೀಡಾಗಿರುವ ಬಗ್ಗೆ ವರದಿಯಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...