Homeಮುಖಪುಟಕರಾವಳಿಯ ಕೋಮುದ್ವೇಷದ ಇನ್ನೊಂದು ರಕ್ತಸಿಕ್ತ ಅಧ್ಯಾಯಕ್ಕೆ ಕಾರಣಗಳು: ನಿಖಿಲ್ ಕೋಲ್ಪೆ

ಕರಾವಳಿಯ ಕೋಮುದ್ವೇಷದ ಇನ್ನೊಂದು ರಕ್ತಸಿಕ್ತ ಅಧ್ಯಾಯಕ್ಕೆ ಕಾರಣಗಳು: ನಿಖಿಲ್ ಕೋಲ್ಪೆ

- Advertisement -
- Advertisement -

ಕರಾವಳಿಯ ಅತ್ಯಂತ ಭೀಕರ ಕೋಮುಗಲಭೆ ನಡೆದ ಸುರತ್ಕಲ್ ಸುತ್ತಮುತ್ತಲಿನ ಕೋಮುಗಲಭೆಗಳು, ಕೊಲೆಗಳು ಅಲ್ಲಿಗೇ ನಿಲ್ಲಲಿಲ್ಲ. ಅದು ಇಂದಿನ ವರೆಗೂ ಮುಂದುವರಿದಿದೆ. ಕೃಷ್ಣಾಪುರ-ಕಾಟಿಪಳ್ಳ ಪ್ರದೇಶಗಳಲ್ಲಿ ಮತ್ತೆ ಮತ್ತೆ ಘರ್ಷಣೆಗಳು ನಡೆಯುತ್ತಾ ಬಂದಿವೆ. ಇದಕ್ಕೆ ಒಂದು ಪ್ರಮುಖ ಕಾರಣವೂ ಇದೆ. ಈ ಪ್ರದೇಶದಲ್ಲಿ ಇರುವುದು ಹೆಚ್ಚಾಗಿ ಬಂದರು ನಿರ್ಮಾಣದ ವೇಳೆ ನಿರಾಶ್ರಿತರಾದವರ ಮನೆಗಳು. ಸರಕಾರ ಅವರಿಗೆ ಸೈಟುಗಳನ್ನು ಹಂಚುವಾಗ ಹಿಂದೂ ಮತ್ತು ಮುಸ್ಲಿಮರಿಗೆ ಮಿಶ್ರ ಮಾಡಿ ಹಂಚಬೇಕಿತ್ತು. ಆದರೆ, ಅದು ಕೆಲವು ಬ್ಲಾಕ್‌ಗಳಲ್ಲಿ ಕೇವಲ ಹಿಂದೂಗಳಿಗೆ ಮತ್ತು ಕೆಲವು ಬ್ಲಾಕ್‌ಗಳಲ್ಲಿ ಮುಸ್ಲಿಮರಿಗೆ ಮಾತ್ರ ಸೈಟುಗಳನ್ನು ಹಂಚಿತ್ತು. ಪರಿಣಾಮವಾಗಿ ಯಾವುದೇ ಕೋಮು ಉದ್ವಿಗ್ನತೆ ಉಂಟಾದಾಗ ಈ ಎರಡು ಪ್ರದೇಶಗಳು ಎರಡು ದೇಶಗಳಂತೆ ಕಂಡು, ಎರಡೂ ಕಡೆ ಜನರು ಜಮಾಯಿಸುತ್ತಾರೆ.

ಅಲ್ಲದೇ, ಬಂದರು ಆದ ಬಳಿಕ ಪಣಂಬೂರು, ಕುಳಾಯಿ, ಸುರತ್ಕಲ್, ನೆರೆಯ ಕಾನ, ಬಾಳ ಮುಂತಾದ ಕಡೆ ಎಂಆರ್‌ಪಿಎಲ್ ಸಹಿತ ಹಲವು ಚಿಕ್ಕದೊಡ್ಡ ಉದ್ದಿಮೆಗಳ ಜೊತೆ ಹಲವಾರು ರೀತಿಯ ದಂಧೆಗಳು ಆರಂಭವಾಗಿದ್ದವು. ಹಾಗಾಗಿ ವಹಿವಾಟು ಸಂಬಂಧಿ ವೈಯಕ್ತಿಕ ದ್ವೇಷಗಳೂ ಕೋಮುಗಲಾಟೆಗೆ ಕಾರಣಗಳಾಗುತ್ತಿದ್ದವು.

ಸುರತ್ಕಲ್‌ ಪ್ರದೇಶದಲ್ಲಿ ಮತ್ತೆ ನಡೆದ ಘಟನೆಯೆಂದರೆ 2006ಲ್ಲಿ ನಡೆದ ಮಾರ್ಬಲ್ ಅಂಗಡಿಯೊಂದರ ಮಾಲಕನಾಗಿದ್ದ ಸುಖಾನಂದ ಶೆಟ್ಟಿ ಕೊಲೆ. ಮೂಲತಃ ಮುಲ್ಕಿಯ ಶೆಟ್ಟಿ  ಹಿಂದೂತ್ವವಾದಿ ಸಂಘಟನೆಗಳಲ್ಲಿ ಸಕ್ರಿಯನಾಗಿದ್ದು, ಗೋವು ಸಾಗಾಟಗಾರರ ಮೇಲೆ ದಾಳಿ, ಲವ್ ಜೆಹಾದ್ ವಿಷಯದಲ್ಲಿ ಹಲ್ಲೆ ಮುಂತಾಗಿ ಯುವಕರಿಗೆ ಸಕ್ರಿಯ ಬೆಂಬಲ ನೀಡುತ್ತಿದ್ದ ವ್ಯಕ್ತಿ. ಈತನನ್ನು ಸುರತ್ಕಲ್ ಸಮೀಪದ ಕುಳಾಯಿ ಹೊನ್ನಕಟ್ಟೆಯಲ್ಲಿದ್ದ ಆತನ ಮಾರ್ಬಲ್ ಅಂಗಡಿಗೆ ಕಾರಿನಲ್ಲಿ ಬಂದ ಗುಂಪೊಂದು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಂದಿತ್ತು. ಈ ಪ್ರಕರಣದ ವಿಚಾರಣೆ ಕೆಲವರ್ಷ ನಡೆದು 17 ಆರೋಪಿಗಳಿಗೆ ಖುಲಾಸೆಯಾಗಿತ್ತು. ಇವರಲ್ಲಿ ಕೆಲವರು ಬಾಡಿಗೆ ಹತ್ಯೆಯಿಂದ ಹಿಡಿದು ಹಲವು ರೀತಿಯ ಕ್ರಿಮಿನಲ್ ಕೃತ್ಯಗಳಲ್ಲಿ ಬಾಗಿಯಾದ ಪಕ್ಕಾ ರೌಡಿಗಳಿದ್ದರು. ಈ ಪ್ರಕರಣದಲ್ಲಿಯೂ ಘರ್ಷಣೆಯ ಕಿಚ್ಚು ಹೊತ್ತಿದ್ದು, ಎಜೆ ಆಸ್ಪತ್ರೆ ಬಳಿ ಗೋಲಿಬಾರ್ ಕೂಡಾ ನಡೆದಿತ್ತು. ಗಲಭೆಗಳಲ್ಲಿ ಹಲವರು ಗಂಭೀರವಾಗಿ ಗಾಯಗೊಂಡಿದ್ದರು.

ಇವರಲ್ಲಿ ಒಬ್ಬನಾದ ಕಬೀರ್ ಎಂಬಾತನನ್ನು ಗುರುಪುರ ಬಳಿ ಬೈಕಿಗೆ ಕಾರು ಡಿಕ್ಕಿ ಹೊಡೆಸಿ, ನಂತರ ತಲವಾರಿನಿಂದ ಕೊಚ್ಚಿ ಕೊಲೆ ಮಾಡಲಾಯಿತು. ಬಾಡಿಗೆ ಹಂತಕನೆಂದು ಕುಖ್ಯಾತಿ ಗಳಿಸಿದ್ದ ಮುಲ್ಕಿ ರಫೀಕ್ ಯಾನೆ ಕೊಳಚೆಕಂಬ್ಳ ರಫೀಕ್‌ನನ್ನು ತಮಿಳುನಾಡಿನಿಂದ ಪೊಲೀಸರು ಬಂಧಿಸಿತಂದಿದ್ದರು. ನಂತರ ಈತ ಮಣಿಪಾಲದ ಬಳಿ ರೈಲು ನಿಲ್ದಾಣದ ಎದುರು ಪೊಲೀಸ್ ಎನ್‌ಕೌಂಟರ್‌ನಲ್ಲಿ ಹತನಾಗಿದ್ದ. ಇನ್ನೊಬ್ಬ ರೌಡಿ ಮಾಡೂರು ಯೂಸುಫ್ ಅಥವಾ ಇಸುಬುನನ್ನು ಮಂಗಳೂರು ಜೈಲಿನಲ್ಲಿ ಸಹಕೈದಿಗಳು ಕೊಂದಿದ್ದರು. ಬುಲೆಟ್ ಸುಧೀರ್ ಎಂಬಾತ ಕುಂದಾಪುರದಲ್ಲಿ ಪೊಲೀಸ್ ಎನ್‌ಕೌಂಟರ್‌ನಲ್ಲಿ ಹತನಾಗಿದ್ದ.

ಇದರ ಅರ್ಥವೆಂದರೆ, ಕರಾವಳಿಯಲ್ಲಿ ನಡೆಯುವ ಕೋಮುಗಲಭೆಗಳು, ಕೊಲೆಗಳು ನೇರವಾಗಿ ಧರ್ಮಕ್ಕೆ ಸಂಬಂಧಿಸಿದವುಗಳಲ್ಲ. ಅವು ಧರ್ಮರಾಜಕಾರಣ ಮತ್ತು ಎರಡು ನಂಬರ್ ದಂಧೆಗಳಿಗೆ, ಇತರ ವ್ಯವಹಾರಗಳಿಗೆ ಸಂಬಂಧಿಸಿದವುಗಳಾಗಿವೆ. ಇಲ್ಲಿ ನಡೆದ ಎಲ್ಲಾ ಕೋಮು ಗಲಭೆ ಮತ್ತು ಆ ಸಂಬಂಧಿ ಕೊಲೆಗಳ ವಿಷಯವನ್ನು ಬರೆಯುತ್ತಾ ಹೋದರೆ, ಒಂದು ಪುಸ್ತಕವನ್ನೇ ಬರೆಯಬೇಕಾದೀತು.  ಸುರತ್ಕಲ್‌ ಪರಿಸರದಲ್ಲಿ 2018ರಲ್ಲಿಯೇ ಕಾಟಿಪಳ್ಳದಲ್ಲಿ ದೀಪಕ್ ರಾವ್ ಎಂಂಬಾತನ ಕೊಲೆ ನಡೆದಿದ್ದರೆ, ಪ್ರತೀಕಾರವೋ ಎಂಬಂತೆ ಕೆಲದಿನಗಳಲ್ಲೇ ಕೊಟ್ಟಾರ ಚೌಕಿಯಲ್ಲಿ ಬಶೀರ್ ಎಂಬಾತನ ಕೊಲೆ ನಡೆದಿತ್ತು.

ಇಲ್ಲಿ ಇನ್ನೊಂದು ವಿಷಯವನ್ನು ಇಲ್ಲಿ ಉಲ್ಲೇಖಿಸಬೇಕು. ಎಲ್ಲಾ ಪ್ರಕರಣಗಳಲ್ಲಿ ರಾಜಕೀಯ ಮಧ್ಯಪ್ರವೇಶದಿಂದ ಪೊಲೀಸರು ಪಕ್ಷಪಾತದ ಆರೋಪಕ್ಕೆ ಗುರಿಯಾಗಿ ಪ್ರತಿಭಟನೆ, ಪೊಲೀಸ್ ಠಾಣೆಗೆ ಮುತ್ತಿಗೆ ಮುಂತಾದ ಘಟನೆಗಳು ನಡೆದಿದ್ದವು. ಸುರತ್ಕಲ್ ಠಾಣೆಯಂತೂ ಹಲವಾರು ಬಾರಿ ಗುಂಪು ಮುತ್ತಿಗೆಗೆ ಗುರಿಯಾಗಿದೆ.

ಆದುದರಿಂದ ಇಲ್ಲಿ ಎಲ್ಲಾ ಪ್ರಕರಣಗಳನ್ನು ಕಾಲಾನುಕ್ರಮದಲ್ಲಿ ಹೇಳಲು ಹೋಗದೆ, ಅತ್ಯಂತ ಸೂಕ್ಷ್ಮವಾದ ಕೆಲವು ಪ್ರದೇಶಗಳು ಮತ್ತು ಅವುಗಳಲ್ಲಿ ನಡೆದ ಪ್ರಮುಖ ಘಟನೆಗಳನ್ನು ಮಾತ್ರ ಉಲ್ಲೇಖಿಸಲಾಗಿದೆ. ಇದಕ್ಕೆ ಇನ್ನೊಂದು ಕಾರಣವೆಂದರೆ, ಎಲ್ಲಾ ಘಟನೆಗಳು ಒಂದೇ ಮಾದರಿ (ಮೋಡಸ್ ಒಪೆರಾಂಡಿ)ಯಲ್ಲಿ ನಡೆದಿದ್ದು, ಎರಡೂ ಕೋಮುಗಳು ಮತ್ತು ಅವುಗಳನ್ನು ಬೆಂಬಲಿಸುವ ರಾಜಕೀಯ ಪಕ್ಷಗಳ ಪ್ರತಿಕ್ರಿಯೆ ಒಂದೇ ರೀತಿ ಇರುವುದರಿಂದ ಅವುಗಳನ್ನು ಮತ್ತೆ ಮತ್ತೆ ಪುನರಾವರ್ತಿಸುವ ಅಗತ್ಯವಿಲ್ಲ.

ಸುರತ್ಕಲ್‌ನಂತೆ ಕೋಮುಸೂಕ್ಷ್ಮವಾಗಿದ್ದು, ಹಲವಾರು ಕೊಲೆ ಮತ್ತು ಪ್ರತೀಕಾರದ ಕೊಲೆಗಳಿಗೆ ಸಾಕ್ಷಿಯಾಗಿರುವುದೆಂದರೆ, ಪೊಳಲಿ ಮತ್ತು ಮಾಡೂರು ಪರಿಸರ. ಇಲ್ಲಿ ಏನಾದರೂ ಆರಂಭವಾದರೆ, ಅದು ಬಜ್ಪೆ, ಬಿ.ಸಿ.ರೋಡು, ಮಾರಿಪಳ್ಳ, ಫರಂಗಿಪೇಟೆ ಮುಂತಾದ ಕಡೆಗಳಿಗೆ ವ್ಯಾಪಿಸುತ್ತದೆ. ವರ್ಷಗಳ ಹಿಂದೆ ಇಲ್ಲಿ ಪೊಳಲಿ ಕಮಲಾಕ್ಷ ಎಂಬಾತನ ಕೊಲೆ ನಡೆದಿತ್ತು. ಕಾಟಿಪಳ್ಳ-ಕೃಷ್ಣಾಪುರದಂತೆಯೇ ಮಾಡೂರಿನಲ್ಲಿ ಮುಸ್ಲಿಂ ಬಾಹುಳ್ಯವಿದ್ದರೆ, ಸುತ್ತಲೂ ಹಿಂದೂ ಬಾಹುಳ್ಯವಿದೆ. ನಂತರ ನಾಗೇಶ ಶೆಟ್ಟಿಗಾರ್ ಎಂಬಾತನ ಕೊಲೆ ನಡೆಯಿತು. ತಕ್ಷಣವೇ ಮಂಗಳೂರಿನ ಜಪ್ಪು ಪ್ರದೇಶದಲ್ಲಿ ಮುಸ್ಲಿಂ ಯುವಕನೊಬ್ಬನ ಕೊಲೆ ನಡೆದಿತ್ತು. ಇದು ಪ್ರತೀಕಾರಾರ್ಥ ಕೊಲೆ ಎಂದು ಹೇಳಲಾಗಿತ್ತು.

ನಂತರ ಎಲ್ಲರನ್ನೂ ಬೆಚ್ಚಿ ಬೀಳಿಸಿದ ಘಟನೆ ಎಂದರೆ, ಮಾಡೂರಿನ ಕಾಂಗ್ರೆಸ್ ನಾಯಕ ಮತ್ತು ಮಂಗಳೂರು ತಾಲೂಕು ಪಂಚಾಯತ್ ಅಧ್ಯಕ್ಷರಾಗಿದ್ದ ಅಬ್ದುಲ್ ಜಬ್ಬಾರ್ ಅವರನ್ನು ಅವರ ಕಚೇರಿಯಲ್ಲಿಯೇ, ಅವರ ಹೆಂಡತಿ ಮಕ್ಕಳ ಕಣ್ಣೆದುರೇ, ಭೀಕರವಾಗಿ ಕೊಚ್ಚಿ ಕೊಲ್ಲಲಾಗಿತ್ತು. ಈ ಪ್ರಕರಣದ ಆರೋಪಿಗಳೆಂದರೆ ಪೊಳಲಿ ಅನಂತು ಮತ್ತು ಇತರರು. ಮಾಡೂರು ಇಸುಬು ಕೊಲೆ ಪ್ರಕರಣವನ್ನು ಹಿಂದೆ ಉಲ್ಲೇಖಿಸಲಾಗಿದೆ. ಈ ಪ್ರಕರಣದಲ್ಲಿ ಬಿಡುಗಡೆ ಹೊಂದಿದ ಅನಂತುವನ್ನು ಹಿಂದೂತ್ವವಾದಿ ಸಂಘಟನೆಗಳು ಮಂಗಳೂರಿನಿಂದ ಪೊಳಲಿಗೆ ಮೆರವಣಿಗೆಯಲ್ಲಿ ಒಯ್ದಿದ್ದರು. ನಂತರ ಒಂಟಿಯಾಗಿ ಹೋಗುತ್ತಿದ್ದ ಆತನನ್ನು ಪ್ರತೀಕಾರವಾಗಿ ಕೊಲ್ಲಲಾಗಿತ್ತು. ಬೆನ್ನಲ್ಲೇ ಜಬ್ಬಾರ್ ಹತ್ಯೆಯಲ್ಲಿ ಶಾಮೀಲಾಗಿದ್ದನೆನ್ನಲಾದ ಸಂತೋಷ ಯಾನೆ ಕ್ಯಾಂಡಲ್ ಸಂತು ಎಂಬಾತನ ಕೊಲೆಯೂ ನಡೆದಿತ್ತು. ಈ ರೀತಿಯ ಕೊಲೆಗಳ ಸರಣಿ ಉಳ್ಳಾಲ ಮತ್ತಿತರ ಕಡೆಗಳಲ್ಲೂ ನಡೆದಿದ್ದು, ಕೋಮು ವಿಷ ಎಷ್ಟರ ಮಟ್ಟಿಗೆ ಹರಡಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. (ಇನ್ನಷ್ಟು ಕೋಮುಸಂಬಂಧಿ ಘಟನೆಗಳು ಮತ್ತು ಹುನ್ನಾರಗಳ ವಿವರ ಮುಂದೆ ನೋಡೋಣ)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೈಲ ಆಮದು ವಿಚಾರದಲ್ಲಿ ಅಮೆರಿಕದ ಒಪ್ಪಿಗೆ ಪಡೆಉವುದು ‘ಅತಿರೇಕದ’ ಸಂಗತಿ: ಪಿಣರಾಯಿ ವಿಜಯನ್

ತೈಲ ಆಮದುಗಳಂತಹ ನಿರ್ಧಾರಗಳಿಗೆ ಭಾರತವು ಅಮೆರಿಕದ ಅನುಮೋದನೆಯನ್ನು ಪಡೆಯುವಂತೆ ಬಿಂಬಿತವಾಗುತ್ತಿರುವುದು 'ಅತಿರೇಕದ' ಸಂಗತಿ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಶುಕ್ರವಾರ ಹೇಳಿದ್ದಾರೆ. ಭಾರತದ ಸಾರ್ವಭೌಮತ್ವವು ವಿದೇಶಿ ಅನುಮತಿಗೆ ಒಳಪಡುವುದಿಲ್ಲ ಎಂದು ವಿಜಯನ್ ಸಾಮಾಜಿಕ...

ಪತ್ರಕರ್ತನ ಹತ್ಯೆ ಪ್ರಕರಣ : ಡೇರಾ ಮುಖ್ಯಸ್ಥ ರಾಮ್ ರಹೀಂ ಸಿಂಗ್ ಖುಲಾಸೆ

ಪತ್ರಕರ್ತ ಛತ್ರಪತಿ ಹತ್ಯೆ ಪ್ರಕರಣದಲ್ಲಿ ಸಿರ್ಸಾದ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಂ ಸಿಂಗ್ ಅನ್ನು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಶನಿವಾರ (ಮಾ.7) ಖುಲಾಸೆಗೊಳಿಸಿರುವುದಾಗಿ livelaw.in ಎಂದು ವರದಿ...

ಗೃಹ ಬಳಕೆಯ ಎಲ್‌ಪಿಜಿ ದರ 60 ರೂ. ಹೆಚ್ಚಳ : 11 ತಿಂಗಳಲ್ಲಿ ಎರಡನೇ ಬಾರಿ ಬೆಲೆ ಏರಿಕೆ

ತೈಲ ಮಾರುಕಟ್ಟೆ ಕಂಪನಿಗಳು ಶನಿವಾರ (ಮಾ.7) ದೇಶದಲ್ಲಿ ಗೃಹ ಬಳಕೆಯ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು ಕ್ರಮವಾಗಿ ರೂ. 60 ಮತ್ತು ರೂ. 115 ಹೆಚ್ಚಿಸಿವೆ. ಈ ಹೆಚ್ಚಳದ ನಂತರ ರಾಷ್ಟ್ರ ರಾಜಧಾನಿ...

ಟಿವಿ ನ್ಯೂಸ್ ಚಾನೆಲ್‌ಗಳಲ್ಲಿ ಅನಗತ್ಯ ಯುದ್ಧೋನ್ಮಾದ, ಸುಳ್ಳು ವರದಿ : ನಾಲ್ಕು ವಾರ TRP ಸ್ಥಗಿತಕ್ಕೆ ಕೇಂದ್ರ ಆದೇಶ

ಅಮೆರಿಕ, ಇಸ್ರೇಲ್, ಇರಾನ್ ಮತ್ತು ಗಲ್ಫ್ ರಾಷ್ಟ್ರಗಳ ಸಂಘರ್ಷದ ಕುರಿತು ಟಿವಿ ನ್ಯೂಸ್‌ ಚಾನೆಲ್‌ಗಳು ಅನಗತ್ಯ ಯುದ್ಧೋನ್ಮಾದ ಸೃಷ್ಟಿಸುತ್ತಿರುವ ಹಾಗೂ ಸುಳ್ಳು ವರದಿಗಳನ್ನು ಪ್ರಸಾರ ಮಾಡುತ್ತಿರುವ ಹಿನ್ನೆಲೆ, ಮುಂದಿನ ನಾಲ್ಕು ವಾರಗಳ ಕಾಲ...

‘ಮಿಯಾ ಮುಸ್ಲಿಮರು ನಮ್ಮ ಶತ್ರುಗಳಲ್ಲ..’; ಚುನಾವಣೆ ಸನಿಹದಲ್ಲಿ ಮಾತು ಬದಲಿಸಿದ ಅಸ್ಸಾಂ ಸಿಎಂ

ಭಾರತೀಯ ಜನತಾ ಪಕ್ಷವು (ಬಿಜೆಪಿ) ಅಸ್ಸಾಂನಲ್ಲಿರುವ ಬಂಗಾಳಿ ಮೂಲದ ಮುಸ್ಲಿಂ ಸಮುದಾಯವಾದ ಮಿಯಾ ಮುಸ್ಲಿಮರನ್ನು ತನ್ನ ಶತ್ರುಗಳೆಂದು ಪರಿಗಣಿಸುವುದಿಲ್ಲ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಗುರುವಾರ ಹೇಳಿದ್ದಾರೆ. ಇದೇ ವರ್ಷದ...

ಜೈಲಿನಲ್ಲಿರುವ ಪಿಎಫ್‌ಐ ನಾಯಕ ಇ ಅಬೂಬಕರ್ ಆರೋಗ್ಯ ಸ್ಥಿತಿ ಗಂಭೀರ

ಸುಮಾರು ನಾಲ್ಕು ವರ್ಷಗಳ ಕಾಲ ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿರುವ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಸ್ಥಾಪಕ ಅಧ್ಯಕ್ಷ ಎರಪ್ಪುಂಗಲ್ ಅಬೂಬಕರ್ ಅವರ ಆರೋಗ್ಯ ಹದಗೆಟ್ಟ ನಂತರ ಬುಧವಾರದಿಂದ ಆಸ್ಪತ್ರೆಯಲ್ಲಿ ತೀವ್ರ ನಿಗಾ...

‘ಭಾರತ ನಮ್ಮನ್ನು ಹಿಂದುಕ್ಕುವುದಕ್ಕೆ ಬಿಡಲ್ಲ; ಅಮೆರಿಕದ ಹಿತಾಸಕ್ತಿಗಳಿಗೆ ಮೊದಲ ಆದ್ಯತೆ..’; ಕ್ರಿಸ್ಟೋಫರ್ ಲ್ಯಾಂಡೌ

ನಮ್ಮ ಪ್ರಮುಖ ಪ್ರತಿಸ್ಪರ್ಧಿಯಾಗಿ ಹೊರಹೊಮ್ಮಲು ಚೀನಾಗೆ ಮಾಡಿಕೊಟ್ಟ ಆರ್ಥಿಕ ಅನುಕೂಲಗಳನ್ನು ನಾವು ಭಾರತಕ್ಕೆ ನೀಡುವುದಿಲ್ಲ ಎಂದು ಯುನೈಟೆಡ್ ಸ್ಟೇಟ್ಸ್‌ (ಯುಎಸ್‌) ಉಪ ಕಾರ್ಯದರ್ಶಿ ಕ್ರಿಸ್ಟೋಫರ್ ಲ್ಯಾಂಡೌ ಗುರುವಾರ ಹೇಳಿದ್ದಾರೆ. ಅಮೆರಿಕ ಮತ್ತು ಭಾರತ...

ರೋಹಿತ್ ಆ್ಯಕ್ಟ್| ಸರ್ಕಾರದ ನಿರ್ಧಾರ ಸ್ವಾಗತಿಸಿದ ಹೋರಾಟಗಾರರು; ಕಾಯ್ದೆ ಪರಿಣಾಮಕಾರಿ ಜಾರಿಗೆ ಆಗ್ರಹ

“ರಾಜ್ಯದ ಎಲ್ಲಾ ಸರ್ಕಾರಿ, ಖಾಸಗಿ ಮತ್ತು ಡೀಮ್ಡ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರದ ಮೇಲೆ ವಿದ್ಯಾರ್ಥಿಗಳ ಮೇಲೆ ನಡೆಯುವ ʻಶೈಕ್ಷಣಿಕ ಮತ್ತು ಸಾಮಾಜಿಕ ದೌರ್ಜನ್ಯʼವನ್ನು ನಿಲ್ಲಿಸಲು ʻರೋಹಿತ್ ವೇಮುಲ ಕಾಯ್ದೆʼಯನ್ನು ಜಾರಿಗೆ ತರಲಾಗುವುದು” ಎಂದು...

Karnataka Budget 2026| ಸಮಾಜ ಕಲ್ಯಾಣ ಇಲಾಖೆಯಡಿ ‘ಬೌದ್ಧ ಅಭಿವೃದ್ಧಿ ನಿಗಮ’ ಸ್ಥಾಪನೆ

ಸಮಾಜ ಕಲ್ಯಾಣ ಇಲಾಖೆಯಡಿ 'ಬೌದ್ಧ ಅಭಿವೃದ್ಧಿ ನಿಗಮ' ಸ್ಥಾಪನೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದಿನ 2026-27ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿದರು. "ನಮ್ಮ ಸರ್ಕಾರವು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳ...

Karnataka Budget 2026| ಗೃಹಲಕ್ಷ್ಮಿ ಯೋಜನೆಗೆ 28,608 ಕೋಟಿ ರೂ. ಮೀಸಲು; ದೇವದಾಸಿ-ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಅರಿಯಲು ಸಮೀಕ್ಷೆ

2026-27 ಸಾಲಿನ ಆಯವ್ಯಯ ಮಂಡಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಸಾಕಷ್ಟು ಅನುದಾನ ಘೋಷಣೆ ಮಾಡಿದ್ದಾರೆ. ಗೃಹಲಕ್ಷ್ಮಿ ಯೋಜನೆಗೆ 28,608 ಕೋಟಿ ರೂ. ಮೀಸಲಿಡಲಾಗಿದ್ದು, ಮಾಜಿ ದೇವದಾಸಿ ಮಹಿಳೆಯರು...