Homeಮುಖಪುಟಕರಾವಳಿಯ ಕೋಮುದ್ವೇಷದ ಇನ್ನೊಂದು ರಕ್ತಸಿಕ್ತ ಅಧ್ಯಾಯಕ್ಕೆ ಕಾರಣಗಳು: ನಿಖಿಲ್ ಕೋಲ್ಪೆ

ಕರಾವಳಿಯ ಕೋಮುದ್ವೇಷದ ಇನ್ನೊಂದು ರಕ್ತಸಿಕ್ತ ಅಧ್ಯಾಯಕ್ಕೆ ಕಾರಣಗಳು: ನಿಖಿಲ್ ಕೋಲ್ಪೆ

- Advertisement -
- Advertisement -

ಕರಾವಳಿಯ ಅತ್ಯಂತ ಭೀಕರ ಕೋಮುಗಲಭೆ ನಡೆದ ಸುರತ್ಕಲ್ ಸುತ್ತಮುತ್ತಲಿನ ಕೋಮುಗಲಭೆಗಳು, ಕೊಲೆಗಳು ಅಲ್ಲಿಗೇ ನಿಲ್ಲಲಿಲ್ಲ. ಅದು ಇಂದಿನ ವರೆಗೂ ಮುಂದುವರಿದಿದೆ. ಕೃಷ್ಣಾಪುರ-ಕಾಟಿಪಳ್ಳ ಪ್ರದೇಶಗಳಲ್ಲಿ ಮತ್ತೆ ಮತ್ತೆ ಘರ್ಷಣೆಗಳು ನಡೆಯುತ್ತಾ ಬಂದಿವೆ. ಇದಕ್ಕೆ ಒಂದು ಪ್ರಮುಖ ಕಾರಣವೂ ಇದೆ. ಈ ಪ್ರದೇಶದಲ್ಲಿ ಇರುವುದು ಹೆಚ್ಚಾಗಿ ಬಂದರು ನಿರ್ಮಾಣದ ವೇಳೆ ನಿರಾಶ್ರಿತರಾದವರ ಮನೆಗಳು. ಸರಕಾರ ಅವರಿಗೆ ಸೈಟುಗಳನ್ನು ಹಂಚುವಾಗ ಹಿಂದೂ ಮತ್ತು ಮುಸ್ಲಿಮರಿಗೆ ಮಿಶ್ರ ಮಾಡಿ ಹಂಚಬೇಕಿತ್ತು. ಆದರೆ, ಅದು ಕೆಲವು ಬ್ಲಾಕ್‌ಗಳಲ್ಲಿ ಕೇವಲ ಹಿಂದೂಗಳಿಗೆ ಮತ್ತು ಕೆಲವು ಬ್ಲಾಕ್‌ಗಳಲ್ಲಿ ಮುಸ್ಲಿಮರಿಗೆ ಮಾತ್ರ ಸೈಟುಗಳನ್ನು ಹಂಚಿತ್ತು. ಪರಿಣಾಮವಾಗಿ ಯಾವುದೇ ಕೋಮು ಉದ್ವಿಗ್ನತೆ ಉಂಟಾದಾಗ ಈ ಎರಡು ಪ್ರದೇಶಗಳು ಎರಡು ದೇಶಗಳಂತೆ ಕಂಡು, ಎರಡೂ ಕಡೆ ಜನರು ಜಮಾಯಿಸುತ್ತಾರೆ.

ಅಲ್ಲದೇ, ಬಂದರು ಆದ ಬಳಿಕ ಪಣಂಬೂರು, ಕುಳಾಯಿ, ಸುರತ್ಕಲ್, ನೆರೆಯ ಕಾನ, ಬಾಳ ಮುಂತಾದ ಕಡೆ ಎಂಆರ್‌ಪಿಎಲ್ ಸಹಿತ ಹಲವು ಚಿಕ್ಕದೊಡ್ಡ ಉದ್ದಿಮೆಗಳ ಜೊತೆ ಹಲವಾರು ರೀತಿಯ ದಂಧೆಗಳು ಆರಂಭವಾಗಿದ್ದವು. ಹಾಗಾಗಿ ವಹಿವಾಟು ಸಂಬಂಧಿ ವೈಯಕ್ತಿಕ ದ್ವೇಷಗಳೂ ಕೋಮುಗಲಾಟೆಗೆ ಕಾರಣಗಳಾಗುತ್ತಿದ್ದವು.

ಸುರತ್ಕಲ್‌ ಪ್ರದೇಶದಲ್ಲಿ ಮತ್ತೆ ನಡೆದ ಘಟನೆಯೆಂದರೆ 2006ಲ್ಲಿ ನಡೆದ ಮಾರ್ಬಲ್ ಅಂಗಡಿಯೊಂದರ ಮಾಲಕನಾಗಿದ್ದ ಸುಖಾನಂದ ಶೆಟ್ಟಿ ಕೊಲೆ. ಮೂಲತಃ ಮುಲ್ಕಿಯ ಶೆಟ್ಟಿ  ಹಿಂದೂತ್ವವಾದಿ ಸಂಘಟನೆಗಳಲ್ಲಿ ಸಕ್ರಿಯನಾಗಿದ್ದು, ಗೋವು ಸಾಗಾಟಗಾರರ ಮೇಲೆ ದಾಳಿ, ಲವ್ ಜೆಹಾದ್ ವಿಷಯದಲ್ಲಿ ಹಲ್ಲೆ ಮುಂತಾಗಿ ಯುವಕರಿಗೆ ಸಕ್ರಿಯ ಬೆಂಬಲ ನೀಡುತ್ತಿದ್ದ ವ್ಯಕ್ತಿ. ಈತನನ್ನು ಸುರತ್ಕಲ್ ಸಮೀಪದ ಕುಳಾಯಿ ಹೊನ್ನಕಟ್ಟೆಯಲ್ಲಿದ್ದ ಆತನ ಮಾರ್ಬಲ್ ಅಂಗಡಿಗೆ ಕಾರಿನಲ್ಲಿ ಬಂದ ಗುಂಪೊಂದು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಂದಿತ್ತು. ಈ ಪ್ರಕರಣದ ವಿಚಾರಣೆ ಕೆಲವರ್ಷ ನಡೆದು 17 ಆರೋಪಿಗಳಿಗೆ ಖುಲಾಸೆಯಾಗಿತ್ತು. ಇವರಲ್ಲಿ ಕೆಲವರು ಬಾಡಿಗೆ ಹತ್ಯೆಯಿಂದ ಹಿಡಿದು ಹಲವು ರೀತಿಯ ಕ್ರಿಮಿನಲ್ ಕೃತ್ಯಗಳಲ್ಲಿ ಬಾಗಿಯಾದ ಪಕ್ಕಾ ರೌಡಿಗಳಿದ್ದರು. ಈ ಪ್ರಕರಣದಲ್ಲಿಯೂ ಘರ್ಷಣೆಯ ಕಿಚ್ಚು ಹೊತ್ತಿದ್ದು, ಎಜೆ ಆಸ್ಪತ್ರೆ ಬಳಿ ಗೋಲಿಬಾರ್ ಕೂಡಾ ನಡೆದಿತ್ತು. ಗಲಭೆಗಳಲ್ಲಿ ಹಲವರು ಗಂಭೀರವಾಗಿ ಗಾಯಗೊಂಡಿದ್ದರು.

ಇವರಲ್ಲಿ ಒಬ್ಬನಾದ ಕಬೀರ್ ಎಂಬಾತನನ್ನು ಗುರುಪುರ ಬಳಿ ಬೈಕಿಗೆ ಕಾರು ಡಿಕ್ಕಿ ಹೊಡೆಸಿ, ನಂತರ ತಲವಾರಿನಿಂದ ಕೊಚ್ಚಿ ಕೊಲೆ ಮಾಡಲಾಯಿತು. ಬಾಡಿಗೆ ಹಂತಕನೆಂದು ಕುಖ್ಯಾತಿ ಗಳಿಸಿದ್ದ ಮುಲ್ಕಿ ರಫೀಕ್ ಯಾನೆ ಕೊಳಚೆಕಂಬ್ಳ ರಫೀಕ್‌ನನ್ನು ತಮಿಳುನಾಡಿನಿಂದ ಪೊಲೀಸರು ಬಂಧಿಸಿತಂದಿದ್ದರು. ನಂತರ ಈತ ಮಣಿಪಾಲದ ಬಳಿ ರೈಲು ನಿಲ್ದಾಣದ ಎದುರು ಪೊಲೀಸ್ ಎನ್‌ಕೌಂಟರ್‌ನಲ್ಲಿ ಹತನಾಗಿದ್ದ. ಇನ್ನೊಬ್ಬ ರೌಡಿ ಮಾಡೂರು ಯೂಸುಫ್ ಅಥವಾ ಇಸುಬುನನ್ನು ಮಂಗಳೂರು ಜೈಲಿನಲ್ಲಿ ಸಹಕೈದಿಗಳು ಕೊಂದಿದ್ದರು. ಬುಲೆಟ್ ಸುಧೀರ್ ಎಂಬಾತ ಕುಂದಾಪುರದಲ್ಲಿ ಪೊಲೀಸ್ ಎನ್‌ಕೌಂಟರ್‌ನಲ್ಲಿ ಹತನಾಗಿದ್ದ.

ಇದರ ಅರ್ಥವೆಂದರೆ, ಕರಾವಳಿಯಲ್ಲಿ ನಡೆಯುವ ಕೋಮುಗಲಭೆಗಳು, ಕೊಲೆಗಳು ನೇರವಾಗಿ ಧರ್ಮಕ್ಕೆ ಸಂಬಂಧಿಸಿದವುಗಳಲ್ಲ. ಅವು ಧರ್ಮರಾಜಕಾರಣ ಮತ್ತು ಎರಡು ನಂಬರ್ ದಂಧೆಗಳಿಗೆ, ಇತರ ವ್ಯವಹಾರಗಳಿಗೆ ಸಂಬಂಧಿಸಿದವುಗಳಾಗಿವೆ. ಇಲ್ಲಿ ನಡೆದ ಎಲ್ಲಾ ಕೋಮು ಗಲಭೆ ಮತ್ತು ಆ ಸಂಬಂಧಿ ಕೊಲೆಗಳ ವಿಷಯವನ್ನು ಬರೆಯುತ್ತಾ ಹೋದರೆ, ಒಂದು ಪುಸ್ತಕವನ್ನೇ ಬರೆಯಬೇಕಾದೀತು.  ಸುರತ್ಕಲ್‌ ಪರಿಸರದಲ್ಲಿ 2018ರಲ್ಲಿಯೇ ಕಾಟಿಪಳ್ಳದಲ್ಲಿ ದೀಪಕ್ ರಾವ್ ಎಂಂಬಾತನ ಕೊಲೆ ನಡೆದಿದ್ದರೆ, ಪ್ರತೀಕಾರವೋ ಎಂಬಂತೆ ಕೆಲದಿನಗಳಲ್ಲೇ ಕೊಟ್ಟಾರ ಚೌಕಿಯಲ್ಲಿ ಬಶೀರ್ ಎಂಬಾತನ ಕೊಲೆ ನಡೆದಿತ್ತು.

ಇಲ್ಲಿ ಇನ್ನೊಂದು ವಿಷಯವನ್ನು ಇಲ್ಲಿ ಉಲ್ಲೇಖಿಸಬೇಕು. ಎಲ್ಲಾ ಪ್ರಕರಣಗಳಲ್ಲಿ ರಾಜಕೀಯ ಮಧ್ಯಪ್ರವೇಶದಿಂದ ಪೊಲೀಸರು ಪಕ್ಷಪಾತದ ಆರೋಪಕ್ಕೆ ಗುರಿಯಾಗಿ ಪ್ರತಿಭಟನೆ, ಪೊಲೀಸ್ ಠಾಣೆಗೆ ಮುತ್ತಿಗೆ ಮುಂತಾದ ಘಟನೆಗಳು ನಡೆದಿದ್ದವು. ಸುರತ್ಕಲ್ ಠಾಣೆಯಂತೂ ಹಲವಾರು ಬಾರಿ ಗುಂಪು ಮುತ್ತಿಗೆಗೆ ಗುರಿಯಾಗಿದೆ.

ಆದುದರಿಂದ ಇಲ್ಲಿ ಎಲ್ಲಾ ಪ್ರಕರಣಗಳನ್ನು ಕಾಲಾನುಕ್ರಮದಲ್ಲಿ ಹೇಳಲು ಹೋಗದೆ, ಅತ್ಯಂತ ಸೂಕ್ಷ್ಮವಾದ ಕೆಲವು ಪ್ರದೇಶಗಳು ಮತ್ತು ಅವುಗಳಲ್ಲಿ ನಡೆದ ಪ್ರಮುಖ ಘಟನೆಗಳನ್ನು ಮಾತ್ರ ಉಲ್ಲೇಖಿಸಲಾಗಿದೆ. ಇದಕ್ಕೆ ಇನ್ನೊಂದು ಕಾರಣವೆಂದರೆ, ಎಲ್ಲಾ ಘಟನೆಗಳು ಒಂದೇ ಮಾದರಿ (ಮೋಡಸ್ ಒಪೆರಾಂಡಿ)ಯಲ್ಲಿ ನಡೆದಿದ್ದು, ಎರಡೂ ಕೋಮುಗಳು ಮತ್ತು ಅವುಗಳನ್ನು ಬೆಂಬಲಿಸುವ ರಾಜಕೀಯ ಪಕ್ಷಗಳ ಪ್ರತಿಕ್ರಿಯೆ ಒಂದೇ ರೀತಿ ಇರುವುದರಿಂದ ಅವುಗಳನ್ನು ಮತ್ತೆ ಮತ್ತೆ ಪುನರಾವರ್ತಿಸುವ ಅಗತ್ಯವಿಲ್ಲ.

ಸುರತ್ಕಲ್‌ನಂತೆ ಕೋಮುಸೂಕ್ಷ್ಮವಾಗಿದ್ದು, ಹಲವಾರು ಕೊಲೆ ಮತ್ತು ಪ್ರತೀಕಾರದ ಕೊಲೆಗಳಿಗೆ ಸಾಕ್ಷಿಯಾಗಿರುವುದೆಂದರೆ, ಪೊಳಲಿ ಮತ್ತು ಮಾಡೂರು ಪರಿಸರ. ಇಲ್ಲಿ ಏನಾದರೂ ಆರಂಭವಾದರೆ, ಅದು ಬಜ್ಪೆ, ಬಿ.ಸಿ.ರೋಡು, ಮಾರಿಪಳ್ಳ, ಫರಂಗಿಪೇಟೆ ಮುಂತಾದ ಕಡೆಗಳಿಗೆ ವ್ಯಾಪಿಸುತ್ತದೆ. ವರ್ಷಗಳ ಹಿಂದೆ ಇಲ್ಲಿ ಪೊಳಲಿ ಕಮಲಾಕ್ಷ ಎಂಬಾತನ ಕೊಲೆ ನಡೆದಿತ್ತು. ಕಾಟಿಪಳ್ಳ-ಕೃಷ್ಣಾಪುರದಂತೆಯೇ ಮಾಡೂರಿನಲ್ಲಿ ಮುಸ್ಲಿಂ ಬಾಹುಳ್ಯವಿದ್ದರೆ, ಸುತ್ತಲೂ ಹಿಂದೂ ಬಾಹುಳ್ಯವಿದೆ. ನಂತರ ನಾಗೇಶ ಶೆಟ್ಟಿಗಾರ್ ಎಂಬಾತನ ಕೊಲೆ ನಡೆಯಿತು. ತಕ್ಷಣವೇ ಮಂಗಳೂರಿನ ಜಪ್ಪು ಪ್ರದೇಶದಲ್ಲಿ ಮುಸ್ಲಿಂ ಯುವಕನೊಬ್ಬನ ಕೊಲೆ ನಡೆದಿತ್ತು. ಇದು ಪ್ರತೀಕಾರಾರ್ಥ ಕೊಲೆ ಎಂದು ಹೇಳಲಾಗಿತ್ತು.

ನಂತರ ಎಲ್ಲರನ್ನೂ ಬೆಚ್ಚಿ ಬೀಳಿಸಿದ ಘಟನೆ ಎಂದರೆ, ಮಾಡೂರಿನ ಕಾಂಗ್ರೆಸ್ ನಾಯಕ ಮತ್ತು ಮಂಗಳೂರು ತಾಲೂಕು ಪಂಚಾಯತ್ ಅಧ್ಯಕ್ಷರಾಗಿದ್ದ ಅಬ್ದುಲ್ ಜಬ್ಬಾರ್ ಅವರನ್ನು ಅವರ ಕಚೇರಿಯಲ್ಲಿಯೇ, ಅವರ ಹೆಂಡತಿ ಮಕ್ಕಳ ಕಣ್ಣೆದುರೇ, ಭೀಕರವಾಗಿ ಕೊಚ್ಚಿ ಕೊಲ್ಲಲಾಗಿತ್ತು. ಈ ಪ್ರಕರಣದ ಆರೋಪಿಗಳೆಂದರೆ ಪೊಳಲಿ ಅನಂತು ಮತ್ತು ಇತರರು. ಮಾಡೂರು ಇಸುಬು ಕೊಲೆ ಪ್ರಕರಣವನ್ನು ಹಿಂದೆ ಉಲ್ಲೇಖಿಸಲಾಗಿದೆ. ಈ ಪ್ರಕರಣದಲ್ಲಿ ಬಿಡುಗಡೆ ಹೊಂದಿದ ಅನಂತುವನ್ನು ಹಿಂದೂತ್ವವಾದಿ ಸಂಘಟನೆಗಳು ಮಂಗಳೂರಿನಿಂದ ಪೊಳಲಿಗೆ ಮೆರವಣಿಗೆಯಲ್ಲಿ ಒಯ್ದಿದ್ದರು. ನಂತರ ಒಂಟಿಯಾಗಿ ಹೋಗುತ್ತಿದ್ದ ಆತನನ್ನು ಪ್ರತೀಕಾರವಾಗಿ ಕೊಲ್ಲಲಾಗಿತ್ತು. ಬೆನ್ನಲ್ಲೇ ಜಬ್ಬಾರ್ ಹತ್ಯೆಯಲ್ಲಿ ಶಾಮೀಲಾಗಿದ್ದನೆನ್ನಲಾದ ಸಂತೋಷ ಯಾನೆ ಕ್ಯಾಂಡಲ್ ಸಂತು ಎಂಬಾತನ ಕೊಲೆಯೂ ನಡೆದಿತ್ತು. ಈ ರೀತಿಯ ಕೊಲೆಗಳ ಸರಣಿ ಉಳ್ಳಾಲ ಮತ್ತಿತರ ಕಡೆಗಳಲ್ಲೂ ನಡೆದಿದ್ದು, ಕೋಮು ವಿಷ ಎಷ್ಟರ ಮಟ್ಟಿಗೆ ಹರಡಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. (ಇನ್ನಷ್ಟು ಕೋಮುಸಂಬಂಧಿ ಘಟನೆಗಳು ಮತ್ತು ಹುನ್ನಾರಗಳ ವಿವರ ಮುಂದೆ ನೋಡೋಣ)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಕರ್ನಾಟಕ ಸರ್ಕಾರ ಸಾಮಾಜಿಕ ನ್ಯಾಯ ನಿರಾಕರಿಸುತ್ತಿದೆ’: ವಿಶೇಷ ಸಚಿವ ಸಂಪುಟ ಸಭೆ ಮುಂದೂಡಿಕೆಗೆ ಹೋರಾಟಗಾರರ ಖಂಡನೆ

ಕಳೆದ 35 ವರ್ಷಗಳಿಂದ ಒಳಮೀಸಲಾತಿಗಾಗಿ ಆಗ್ರಹಿಸಿ ನಡೆಯುತ್ತಿದ್ದ ಹೋರಾಟಕ್ಕೆ ಸುಪ್ರೀಂ ಕೋರ್ಟ್‌ ತೀರ್ಪಿನ ನಂತರ ಕರ್ನಾಟಕದಲ್ಲಿ ಒಳಮೀಸಲಾತಿ ಜಾರಿಯಾಗುವ ಭರವಸೆಯನ್ನು ಒಳಮೀಸಲಾತಿ ಹೋರಾಟಗಾರರು ಹೊಂದಿದ್ದರು.  ಕಾಂಗ್ರೆಸ್‌ ನೇತೃತ್ವದ ಕರ್ನಾಟಕ ಸರ್ಕಾರ ಎರಡು ವರ್ಷಗಳಿಂದ ನಿರಂತರವಾಗಿ...

ನೇಪಾಳದ ನೂತನ ಪ್ರಧಾನಿಯಾಗಿ 35ವರ್ಷದ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ

ಕಠ್ಮಂಡು: 'ಬಾಲೆನ್' ಎಂದು ಪ್ರೀತಿಯಿಂದ ಕರೆಯಲ್ಪಡುವ ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು, ಹಿಮಾಲಯನ್ ರಾಷ್ಟ್ರದಲ್ಲಿ ಉನ್ನತ ಕಾರ್ಯಕಾರಿ ಹುದ್ದೆಯನ್ನು ಅಲಂಕರಿಸಿದ ಅತ್ಯಂತ ಕಿರಿಯ ನಾಯಕರಾಗಿ ಬಾಲೆನ್...

ಶಿವನ ಅವತಾರ ಎಂದು ಹೇಳಿಕೊಳ್ಳುತ್ತಿದ್ದ ಋುಷಿಕೇಶ್ ವೈದ್ಯ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣ: ಎಫ್‌ಐಆರ್ ನಂತರ ದೇವಮಾನವ ಪರಾರಿ

ವಸಾಯಿ: ಶಿವನ ಅವತಾರ ಎಂದು ಹೇಳಿಕೊಂಡು ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಸ್ವಯಂ ಘೋಷಿತ ದೇವಮಾನವ ಋಷಿಕೇಶ್ ವೈದ್ಯ ವಿರುದ್ಧ ಪ್ರಕರಣ ದಾಖಲಾಗಿದೆ. ಈ ಘಟನೆ ವಸಾಯಿ-ವಿರಾರ್ ಪ್ರದೇಶ...

ಜ್ಯೋತಿಷಿ ಅಶೋಕ್ ಖರತ್ ಲೈಂಗಿಕ ದೌರ್ಜನ್ಯ; ಸಂತ್ರಸ್ತರ ವಿಡಿಯೋ ಪ್ರಸಾರ ಮಾಡುವವರ ವಿರುದ್ಧ ಕ್ರಿಮಿನಲ್ ಕೇಸ್: ದೇವೇಂದ್ರ ಫಡ್ನವೀಸ್

ಮುಂಬೈ: ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ಅವರಿಂದ ದೌರ್ಜನ್ಯಕ್ಕೊಳಗಾದ ಸಂತ್ರಸ್ತ ಮಹಿಳೆಯರ ಅಶ್ಲೀಲ ವೀಡಿಯೊಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಸಾರ ಮಾಡುವವರ ವಿರುದ್ಧ ಕ್ರಿಮಿನಲ್ ಕ್ರಮ ಕೈಗೊಳ್ಳಲಾಗುವುದು ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ...

ಕ್ಷಿಪಣಿಗಳ ಮೇಲೆ ಭಾರತ ಸೇರಿದಂತೆ ಹಲವು ರಾಷ್ಟ್ರಗಳಿಗೆ ಧನ್ಯವಾದ ಸಂದೇಶ ಬರೆದ ಇರಾನ್

ಯುನೈಟೆಡ್ ಸ್ಟೇಟ್ಸ್-ಇಸ್ರೇಲ್ ವಿರುದ್ಧದ ಯುದ್ಧದ ಮಧ್ಯೆ ಇರಾನ್‌ನೊಂದಿಗೆ ಒಗ್ಗಟ್ಟನ್ನು ತೋರಿಸಿದ ರಾಷ್ಟ್ರಗಳಿಗೆ ಇರಾನ್‌ ತನ್ನ ಕ್ಷಿಪಣಿಗಳು ಕೃತಜ್ಞತಾ ಸಂದೇಶ ಬರೆದಿದೆ. ಕ್ಷಿಪಣಿಗಳ ಮೇಲೆ ಬರೆಯಲಾದ ಸಂದೇಶಗಲ್ಲಿ "ಭಾರತದ ಜನರಿಗೆ ಧನ್ಯವಾದಗಳು" ಎಂದು ಕಂಡುಬಂದಿದೆ. ಜೊತೆಗೆ,...

ಬಿಜೆಪಿಗೆ ಉಳಿದೆಲ್ಲಾ ಪಕ್ಷಗಳಿಗಿಂತ 10 ಪಟ್ಟು ಹೆಚ್ಚು ದೇಣಿಗೆ: ವರದಿ

2024–25ರ ಆರ್ಥಿಕ ವರ್ಷದಲ್ಲಿ ಆಡಳಿತಾರೂಢ ಭಾರತೀಯ ಜನತಾ ಪಕ್ಷ ( ಬಿಜೆಪಿ ) ಇತರ ಎಲ್ಲಾ ರಾಷ್ಟ್ರೀಯ ಪಕ್ಷಗಳು ಒಟ್ಟು ಸೇರಿಸಿ ಪಡೆದ ದೇಣಿಗೆಗಿಂತ ಸುಮಾರು ಹತ್ತು ಪಟ್ಟು ಹೆಚ್ಚು ದೇಣಿಗೆ ಪಡೆದಿದೆ...

ವಿಶಾಖಪಟ್ಟಣ| ಕುಡಿದ ಮತ್ತಿನಲ್ಲಿ ಎಪಿಎಸ್‌ಆರ್‌ಟಿಸಿ ಬಸ್‌ ಅಪಹರಿಸಿದ ವ್ಯಕ್ತಿ

ಮದ್ಯದ ಅಮಲಿನಲ್ಲಿದ್ದ ವ್ಯಕ್ತಿಯೊಬ್ಬ ಎಪಿಎಸ್‌ಆರ್‌ಟಿಸಿ ಬಸ್ಸನ್ನು ಅಪಹರಿಸಿ ಸುಮಾರು ಒಂದು ಕಿಲೋಮೀಟರ್ ಅಜಾಗರೂಕತೆಯಿಂದ ಚಲಾಯಿಸಿ ಸಾರ್ವಜನಿಕರಲ್ಲಿ ಭೀತಿ ಮೂಡಿಸಿದ ಆಘಾತಕಾರಿ ಘಟನೆ ವಿಶಾಖಪಟ್ಟಣದಲ್ಲಿ ನಡೆದಿದೆ. ಪ್ರತ್ಯಕ್ಷ್ಯದರ್ಶಿಗಳ ಪ್ರಕಾರ, ಮಾರ್ಚ್ 26 ರ ಗುರುವಾರ ಬಸ್...

ಕರ್ನಾಟಕ ವಿಧಾನಸಭೆಯಲ್ಲಿ ಐಪಿಎಲ್ ಟಿಕೆಟ್ ವಿವಾದ; ಶಾಸಕರನ್ನು ಟೀಕಿಸಿದ ತೇಜಸ್ವಿ ಸೂರ್ಯ ವಿರುದ್ಧ ಡಿಕೆಶಿ ವಾಗ್ದಾಳಿ

ಶಾಸಕರಿಗೆ ಐಪಿಎಲ್ 2026 ಟಿಕೆಟ್ ಹಂಚಿಕೆ ವಿವಾದದ ನಡುವೆ ಕರ್ನಾಟಕ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರೋಧ ಪಕ್ಷದ ನಾಯಕ ತೇಜಸ್ವಿ ಸೂರ್ಯ ವಿರುದ್ಧ ಕಿಡಿಕಾರಿದ್ದಾರೆ  ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುವ ಪಂದ್ಯಗಳಿಗೆ ವಿಐಪಿ ಟಿಕೆಟ್‌ಗಳಿಗೆ...

ವಿಚಾರಣೆಯ ನಂತರವೂ 8 ಲಕ್ಷ ಮತದಾರರ ಹೆಸರು ಅಳಿಸಲಾಗಿದೆ; ಬಂಗಾಳದಲ್ಲಿ ಎನ್.ಆರ್.ಸಿ ಇಲ್ಲ: ಮಮತಾ ಬ್ಯಾನರ್ಜಿ

ಮೊದಲ ಪೂರಕ ಮತದಾರರ ಪಟ್ಟಿ ಪ್ರಕಟವಾದ ನಂತರ ಎಂಟು ಲಕ್ಷ ಮತದಾರರ ಹೆಸರುಗಳನ್ನು ಅಳಿಸಲಾಗಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ. ಇದು ರಾಜ್ಯದಲ್ಲಿ ಚುನಾವಣಾ ಪಾರದರ್ಶಕತೆಯ ಬಗ್ಗೆ ಗಂಭೀರ...

ಪೆಟ್ರೋಲ್-ಡೀಸೆಲ್ ಮೇಲಿನ ಅಬಕಾರಿ ಸುಂಕ ಕಡಿತಗೊಳಿಸಿದ ಕೇಂದ್ರ ಸರ್ಕಾರ

ಜಾಗತಿಕ ತೈಲ ಬೆಲೆಗಳ ಏರಿಕೆಯ ಪರಿಣಾಮವನ್ನು ತಗ್ಗಿಸುವ ಪ್ರಯತ್ನದಲ್ಲಿ ಸರ್ಕಾರವು ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಪ್ರತಿ ಲೀಟರ್‌ಗೆ 10 ರೂ.ಗಳಷ್ಟು ಕಡಿಮೆ ಮಾಡಿದೆ, ಇದರಿಂದಾಗಿ ಪೆಟ್ರೋಲ್‌ಗೆ 3 ರೂ.ಗಳಷ್ಟು...