Homeಮುಖಪುಟಕರಾವಳಿಯ ಕೋಮುದ್ವೇಷದ ಇನ್ನೊಂದು ರಕ್ತಸಿಕ್ತ ಅಧ್ಯಾಯಕ್ಕೆ ಕಾರಣಗಳು: ನಿಖಿಲ್ ಕೋಲ್ಪೆ

ಕರಾವಳಿಯ ಕೋಮುದ್ವೇಷದ ಇನ್ನೊಂದು ರಕ್ತಸಿಕ್ತ ಅಧ್ಯಾಯಕ್ಕೆ ಕಾರಣಗಳು: ನಿಖಿಲ್ ಕೋಲ್ಪೆ

- Advertisement -
- Advertisement -

ಕರಾವಳಿಯ ಅತ್ಯಂತ ಭೀಕರ ಕೋಮುಗಲಭೆ ನಡೆದ ಸುರತ್ಕಲ್ ಸುತ್ತಮುತ್ತಲಿನ ಕೋಮುಗಲಭೆಗಳು, ಕೊಲೆಗಳು ಅಲ್ಲಿಗೇ ನಿಲ್ಲಲಿಲ್ಲ. ಅದು ಇಂದಿನ ವರೆಗೂ ಮುಂದುವರಿದಿದೆ. ಕೃಷ್ಣಾಪುರ-ಕಾಟಿಪಳ್ಳ ಪ್ರದೇಶಗಳಲ್ಲಿ ಮತ್ತೆ ಮತ್ತೆ ಘರ್ಷಣೆಗಳು ನಡೆಯುತ್ತಾ ಬಂದಿವೆ. ಇದಕ್ಕೆ ಒಂದು ಪ್ರಮುಖ ಕಾರಣವೂ ಇದೆ. ಈ ಪ್ರದೇಶದಲ್ಲಿ ಇರುವುದು ಹೆಚ್ಚಾಗಿ ಬಂದರು ನಿರ್ಮಾಣದ ವೇಳೆ ನಿರಾಶ್ರಿತರಾದವರ ಮನೆಗಳು. ಸರಕಾರ ಅವರಿಗೆ ಸೈಟುಗಳನ್ನು ಹಂಚುವಾಗ ಹಿಂದೂ ಮತ್ತು ಮುಸ್ಲಿಮರಿಗೆ ಮಿಶ್ರ ಮಾಡಿ ಹಂಚಬೇಕಿತ್ತು. ಆದರೆ, ಅದು ಕೆಲವು ಬ್ಲಾಕ್‌ಗಳಲ್ಲಿ ಕೇವಲ ಹಿಂದೂಗಳಿಗೆ ಮತ್ತು ಕೆಲವು ಬ್ಲಾಕ್‌ಗಳಲ್ಲಿ ಮುಸ್ಲಿಮರಿಗೆ ಮಾತ್ರ ಸೈಟುಗಳನ್ನು ಹಂಚಿತ್ತು. ಪರಿಣಾಮವಾಗಿ ಯಾವುದೇ ಕೋಮು ಉದ್ವಿಗ್ನತೆ ಉಂಟಾದಾಗ ಈ ಎರಡು ಪ್ರದೇಶಗಳು ಎರಡು ದೇಶಗಳಂತೆ ಕಂಡು, ಎರಡೂ ಕಡೆ ಜನರು ಜಮಾಯಿಸುತ್ತಾರೆ.

ಅಲ್ಲದೇ, ಬಂದರು ಆದ ಬಳಿಕ ಪಣಂಬೂರು, ಕುಳಾಯಿ, ಸುರತ್ಕಲ್, ನೆರೆಯ ಕಾನ, ಬಾಳ ಮುಂತಾದ ಕಡೆ ಎಂಆರ್‌ಪಿಎಲ್ ಸಹಿತ ಹಲವು ಚಿಕ್ಕದೊಡ್ಡ ಉದ್ದಿಮೆಗಳ ಜೊತೆ ಹಲವಾರು ರೀತಿಯ ದಂಧೆಗಳು ಆರಂಭವಾಗಿದ್ದವು. ಹಾಗಾಗಿ ವಹಿವಾಟು ಸಂಬಂಧಿ ವೈಯಕ್ತಿಕ ದ್ವೇಷಗಳೂ ಕೋಮುಗಲಾಟೆಗೆ ಕಾರಣಗಳಾಗುತ್ತಿದ್ದವು.

ಸುರತ್ಕಲ್‌ ಪ್ರದೇಶದಲ್ಲಿ ಮತ್ತೆ ನಡೆದ ಘಟನೆಯೆಂದರೆ 2006ಲ್ಲಿ ನಡೆದ ಮಾರ್ಬಲ್ ಅಂಗಡಿಯೊಂದರ ಮಾಲಕನಾಗಿದ್ದ ಸುಖಾನಂದ ಶೆಟ್ಟಿ ಕೊಲೆ. ಮೂಲತಃ ಮುಲ್ಕಿಯ ಶೆಟ್ಟಿ  ಹಿಂದೂತ್ವವಾದಿ ಸಂಘಟನೆಗಳಲ್ಲಿ ಸಕ್ರಿಯನಾಗಿದ್ದು, ಗೋವು ಸಾಗಾಟಗಾರರ ಮೇಲೆ ದಾಳಿ, ಲವ್ ಜೆಹಾದ್ ವಿಷಯದಲ್ಲಿ ಹಲ್ಲೆ ಮುಂತಾಗಿ ಯುವಕರಿಗೆ ಸಕ್ರಿಯ ಬೆಂಬಲ ನೀಡುತ್ತಿದ್ದ ವ್ಯಕ್ತಿ. ಈತನನ್ನು ಸುರತ್ಕಲ್ ಸಮೀಪದ ಕುಳಾಯಿ ಹೊನ್ನಕಟ್ಟೆಯಲ್ಲಿದ್ದ ಆತನ ಮಾರ್ಬಲ್ ಅಂಗಡಿಗೆ ಕಾರಿನಲ್ಲಿ ಬಂದ ಗುಂಪೊಂದು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಂದಿತ್ತು. ಈ ಪ್ರಕರಣದ ವಿಚಾರಣೆ ಕೆಲವರ್ಷ ನಡೆದು 17 ಆರೋಪಿಗಳಿಗೆ ಖುಲಾಸೆಯಾಗಿತ್ತು. ಇವರಲ್ಲಿ ಕೆಲವರು ಬಾಡಿಗೆ ಹತ್ಯೆಯಿಂದ ಹಿಡಿದು ಹಲವು ರೀತಿಯ ಕ್ರಿಮಿನಲ್ ಕೃತ್ಯಗಳಲ್ಲಿ ಬಾಗಿಯಾದ ಪಕ್ಕಾ ರೌಡಿಗಳಿದ್ದರು. ಈ ಪ್ರಕರಣದಲ್ಲಿಯೂ ಘರ್ಷಣೆಯ ಕಿಚ್ಚು ಹೊತ್ತಿದ್ದು, ಎಜೆ ಆಸ್ಪತ್ರೆ ಬಳಿ ಗೋಲಿಬಾರ್ ಕೂಡಾ ನಡೆದಿತ್ತು. ಗಲಭೆಗಳಲ್ಲಿ ಹಲವರು ಗಂಭೀರವಾಗಿ ಗಾಯಗೊಂಡಿದ್ದರು.

ಇವರಲ್ಲಿ ಒಬ್ಬನಾದ ಕಬೀರ್ ಎಂಬಾತನನ್ನು ಗುರುಪುರ ಬಳಿ ಬೈಕಿಗೆ ಕಾರು ಡಿಕ್ಕಿ ಹೊಡೆಸಿ, ನಂತರ ತಲವಾರಿನಿಂದ ಕೊಚ್ಚಿ ಕೊಲೆ ಮಾಡಲಾಯಿತು. ಬಾಡಿಗೆ ಹಂತಕನೆಂದು ಕುಖ್ಯಾತಿ ಗಳಿಸಿದ್ದ ಮುಲ್ಕಿ ರಫೀಕ್ ಯಾನೆ ಕೊಳಚೆಕಂಬ್ಳ ರಫೀಕ್‌ನನ್ನು ತಮಿಳುನಾಡಿನಿಂದ ಪೊಲೀಸರು ಬಂಧಿಸಿತಂದಿದ್ದರು. ನಂತರ ಈತ ಮಣಿಪಾಲದ ಬಳಿ ರೈಲು ನಿಲ್ದಾಣದ ಎದುರು ಪೊಲೀಸ್ ಎನ್‌ಕೌಂಟರ್‌ನಲ್ಲಿ ಹತನಾಗಿದ್ದ. ಇನ್ನೊಬ್ಬ ರೌಡಿ ಮಾಡೂರು ಯೂಸುಫ್ ಅಥವಾ ಇಸುಬುನನ್ನು ಮಂಗಳೂರು ಜೈಲಿನಲ್ಲಿ ಸಹಕೈದಿಗಳು ಕೊಂದಿದ್ದರು. ಬುಲೆಟ್ ಸುಧೀರ್ ಎಂಬಾತ ಕುಂದಾಪುರದಲ್ಲಿ ಪೊಲೀಸ್ ಎನ್‌ಕೌಂಟರ್‌ನಲ್ಲಿ ಹತನಾಗಿದ್ದ.

ಇದರ ಅರ್ಥವೆಂದರೆ, ಕರಾವಳಿಯಲ್ಲಿ ನಡೆಯುವ ಕೋಮುಗಲಭೆಗಳು, ಕೊಲೆಗಳು ನೇರವಾಗಿ ಧರ್ಮಕ್ಕೆ ಸಂಬಂಧಿಸಿದವುಗಳಲ್ಲ. ಅವು ಧರ್ಮರಾಜಕಾರಣ ಮತ್ತು ಎರಡು ನಂಬರ್ ದಂಧೆಗಳಿಗೆ, ಇತರ ವ್ಯವಹಾರಗಳಿಗೆ ಸಂಬಂಧಿಸಿದವುಗಳಾಗಿವೆ. ಇಲ್ಲಿ ನಡೆದ ಎಲ್ಲಾ ಕೋಮು ಗಲಭೆ ಮತ್ತು ಆ ಸಂಬಂಧಿ ಕೊಲೆಗಳ ವಿಷಯವನ್ನು ಬರೆಯುತ್ತಾ ಹೋದರೆ, ಒಂದು ಪುಸ್ತಕವನ್ನೇ ಬರೆಯಬೇಕಾದೀತು.  ಸುರತ್ಕಲ್‌ ಪರಿಸರದಲ್ಲಿ 2018ರಲ್ಲಿಯೇ ಕಾಟಿಪಳ್ಳದಲ್ಲಿ ದೀಪಕ್ ರಾವ್ ಎಂಂಬಾತನ ಕೊಲೆ ನಡೆದಿದ್ದರೆ, ಪ್ರತೀಕಾರವೋ ಎಂಬಂತೆ ಕೆಲದಿನಗಳಲ್ಲೇ ಕೊಟ್ಟಾರ ಚೌಕಿಯಲ್ಲಿ ಬಶೀರ್ ಎಂಬಾತನ ಕೊಲೆ ನಡೆದಿತ್ತು.

ಇಲ್ಲಿ ಇನ್ನೊಂದು ವಿಷಯವನ್ನು ಇಲ್ಲಿ ಉಲ್ಲೇಖಿಸಬೇಕು. ಎಲ್ಲಾ ಪ್ರಕರಣಗಳಲ್ಲಿ ರಾಜಕೀಯ ಮಧ್ಯಪ್ರವೇಶದಿಂದ ಪೊಲೀಸರು ಪಕ್ಷಪಾತದ ಆರೋಪಕ್ಕೆ ಗುರಿಯಾಗಿ ಪ್ರತಿಭಟನೆ, ಪೊಲೀಸ್ ಠಾಣೆಗೆ ಮುತ್ತಿಗೆ ಮುಂತಾದ ಘಟನೆಗಳು ನಡೆದಿದ್ದವು. ಸುರತ್ಕಲ್ ಠಾಣೆಯಂತೂ ಹಲವಾರು ಬಾರಿ ಗುಂಪು ಮುತ್ತಿಗೆಗೆ ಗುರಿಯಾಗಿದೆ.

ಆದುದರಿಂದ ಇಲ್ಲಿ ಎಲ್ಲಾ ಪ್ರಕರಣಗಳನ್ನು ಕಾಲಾನುಕ್ರಮದಲ್ಲಿ ಹೇಳಲು ಹೋಗದೆ, ಅತ್ಯಂತ ಸೂಕ್ಷ್ಮವಾದ ಕೆಲವು ಪ್ರದೇಶಗಳು ಮತ್ತು ಅವುಗಳಲ್ಲಿ ನಡೆದ ಪ್ರಮುಖ ಘಟನೆಗಳನ್ನು ಮಾತ್ರ ಉಲ್ಲೇಖಿಸಲಾಗಿದೆ. ಇದಕ್ಕೆ ಇನ್ನೊಂದು ಕಾರಣವೆಂದರೆ, ಎಲ್ಲಾ ಘಟನೆಗಳು ಒಂದೇ ಮಾದರಿ (ಮೋಡಸ್ ಒಪೆರಾಂಡಿ)ಯಲ್ಲಿ ನಡೆದಿದ್ದು, ಎರಡೂ ಕೋಮುಗಳು ಮತ್ತು ಅವುಗಳನ್ನು ಬೆಂಬಲಿಸುವ ರಾಜಕೀಯ ಪಕ್ಷಗಳ ಪ್ರತಿಕ್ರಿಯೆ ಒಂದೇ ರೀತಿ ಇರುವುದರಿಂದ ಅವುಗಳನ್ನು ಮತ್ತೆ ಮತ್ತೆ ಪುನರಾವರ್ತಿಸುವ ಅಗತ್ಯವಿಲ್ಲ.

ಸುರತ್ಕಲ್‌ನಂತೆ ಕೋಮುಸೂಕ್ಷ್ಮವಾಗಿದ್ದು, ಹಲವಾರು ಕೊಲೆ ಮತ್ತು ಪ್ರತೀಕಾರದ ಕೊಲೆಗಳಿಗೆ ಸಾಕ್ಷಿಯಾಗಿರುವುದೆಂದರೆ, ಪೊಳಲಿ ಮತ್ತು ಮಾಡೂರು ಪರಿಸರ. ಇಲ್ಲಿ ಏನಾದರೂ ಆರಂಭವಾದರೆ, ಅದು ಬಜ್ಪೆ, ಬಿ.ಸಿ.ರೋಡು, ಮಾರಿಪಳ್ಳ, ಫರಂಗಿಪೇಟೆ ಮುಂತಾದ ಕಡೆಗಳಿಗೆ ವ್ಯಾಪಿಸುತ್ತದೆ. ವರ್ಷಗಳ ಹಿಂದೆ ಇಲ್ಲಿ ಪೊಳಲಿ ಕಮಲಾಕ್ಷ ಎಂಬಾತನ ಕೊಲೆ ನಡೆದಿತ್ತು. ಕಾಟಿಪಳ್ಳ-ಕೃಷ್ಣಾಪುರದಂತೆಯೇ ಮಾಡೂರಿನಲ್ಲಿ ಮುಸ್ಲಿಂ ಬಾಹುಳ್ಯವಿದ್ದರೆ, ಸುತ್ತಲೂ ಹಿಂದೂ ಬಾಹುಳ್ಯವಿದೆ. ನಂತರ ನಾಗೇಶ ಶೆಟ್ಟಿಗಾರ್ ಎಂಬಾತನ ಕೊಲೆ ನಡೆಯಿತು. ತಕ್ಷಣವೇ ಮಂಗಳೂರಿನ ಜಪ್ಪು ಪ್ರದೇಶದಲ್ಲಿ ಮುಸ್ಲಿಂ ಯುವಕನೊಬ್ಬನ ಕೊಲೆ ನಡೆದಿತ್ತು. ಇದು ಪ್ರತೀಕಾರಾರ್ಥ ಕೊಲೆ ಎಂದು ಹೇಳಲಾಗಿತ್ತು.

ನಂತರ ಎಲ್ಲರನ್ನೂ ಬೆಚ್ಚಿ ಬೀಳಿಸಿದ ಘಟನೆ ಎಂದರೆ, ಮಾಡೂರಿನ ಕಾಂಗ್ರೆಸ್ ನಾಯಕ ಮತ್ತು ಮಂಗಳೂರು ತಾಲೂಕು ಪಂಚಾಯತ್ ಅಧ್ಯಕ್ಷರಾಗಿದ್ದ ಅಬ್ದುಲ್ ಜಬ್ಬಾರ್ ಅವರನ್ನು ಅವರ ಕಚೇರಿಯಲ್ಲಿಯೇ, ಅವರ ಹೆಂಡತಿ ಮಕ್ಕಳ ಕಣ್ಣೆದುರೇ, ಭೀಕರವಾಗಿ ಕೊಚ್ಚಿ ಕೊಲ್ಲಲಾಗಿತ್ತು. ಈ ಪ್ರಕರಣದ ಆರೋಪಿಗಳೆಂದರೆ ಪೊಳಲಿ ಅನಂತು ಮತ್ತು ಇತರರು. ಮಾಡೂರು ಇಸುಬು ಕೊಲೆ ಪ್ರಕರಣವನ್ನು ಹಿಂದೆ ಉಲ್ಲೇಖಿಸಲಾಗಿದೆ. ಈ ಪ್ರಕರಣದಲ್ಲಿ ಬಿಡುಗಡೆ ಹೊಂದಿದ ಅನಂತುವನ್ನು ಹಿಂದೂತ್ವವಾದಿ ಸಂಘಟನೆಗಳು ಮಂಗಳೂರಿನಿಂದ ಪೊಳಲಿಗೆ ಮೆರವಣಿಗೆಯಲ್ಲಿ ಒಯ್ದಿದ್ದರು. ನಂತರ ಒಂಟಿಯಾಗಿ ಹೋಗುತ್ತಿದ್ದ ಆತನನ್ನು ಪ್ರತೀಕಾರವಾಗಿ ಕೊಲ್ಲಲಾಗಿತ್ತು. ಬೆನ್ನಲ್ಲೇ ಜಬ್ಬಾರ್ ಹತ್ಯೆಯಲ್ಲಿ ಶಾಮೀಲಾಗಿದ್ದನೆನ್ನಲಾದ ಸಂತೋಷ ಯಾನೆ ಕ್ಯಾಂಡಲ್ ಸಂತು ಎಂಬಾತನ ಕೊಲೆಯೂ ನಡೆದಿತ್ತು. ಈ ರೀತಿಯ ಕೊಲೆಗಳ ಸರಣಿ ಉಳ್ಳಾಲ ಮತ್ತಿತರ ಕಡೆಗಳಲ್ಲೂ ನಡೆದಿದ್ದು, ಕೋಮು ವಿಷ ಎಷ್ಟರ ಮಟ್ಟಿಗೆ ಹರಡಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. (ಇನ್ನಷ್ಟು ಕೋಮುಸಂಬಂಧಿ ಘಟನೆಗಳು ಮತ್ತು ಹುನ್ನಾರಗಳ ವಿವರ ಮುಂದೆ ನೋಡೋಣ)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸುಡಾನ್: ನೈಲ್ ನದಿಯಲ್ಲಿ ದೋಣಿ ಮುಳುಗಿ ಕನಿಷ್ಠ 21 ಸಾವು, ಹಲವರು ನಾಪತ್ತೆ!

ಉತ್ತರ ಸುಡಾನ್‌ನ ನೈಲ್ ರಾಜ್ಯದ ನೈಲ್ ನದಿಯಲ್ಲಿ ಪ್ರಯಾಣಿಕರ ದೋಣಿ ಮುಳುಗಿದ ನಂತರ ಕನಿಷ್ಠ 21 ಜನರು ಸಾವನ್ನಪ್ಪಿದ್ದಾರೆ ಮತ್ತು ಹಲವಾರು ಜನರು ಕಾಣೆಯಾಗಿದ್ದಾರೆ ಎಂದು ಯುದ್ಧ ಪೀಡಿತ ದೇಶದ ನಾಗರಿಕ ರಕ್ಷಣಾ...

ಹೊಸಕೋಟೆ ಭೀಕರ ಅಪಘಾತದಲ್ಲಿ 7 ಮಂದಿ ಸಾವು: ಮೃತರಲ್ಲಿ 6 ಮಂದಿ 17-18 ವರ್ಷದ ವಿದ್ಯಾರ್ಥಿಗಳು!

ಬೆಂಗಳೂರು: ಫೆಬ್ರವರಿ 13, ಶುಕ್ರವಾರ ಬೆಳಗಿನ ಜಾವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯ ಹೊರವಲಯದಲ್ಲಿ ಸಂಭವಿಸಿದ ಭೀಕರ ಸರಣಿ ರಸ್ತೆ ಅಪಘಾತದಲ್ಲಿ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ದೃಢಪಡಿಸಿದ್ದಾರೆ. ಪೊಲೀಸರ ಪ್ರಕಾರ,...

85 ಕೋಟಿ ರೂ. ವಂಚನೆ ಪ್ರಕರಣ: ಲೋಧಾ ಡೆವಲಪರ್ಸ್‌ನ ಮಾಜಿ ನಿರ್ದೇಶಕರನ್ನು ಬಂಧಿಸಿದ ಇಡಿ

85 ಕೋಟಿ ರೂಪಾಯಿ ಹಗರಣದಲ್ಲಿ ಭಾಗಿಯಾಗಿರುವ ಆರೋಪದ ಮೇಲೆ ಮುಂಬೈ ಮೂಲದ ರಿಯಲ್ ಎಸ್ಟೇಟ್ ಸಂಸ್ಥೆ ಲೋಧಾ ಡೆವಲಪರ್ಸ್‌ನ ಮಾಜಿ ನಿರ್ದೇಶಕ ರಾಜೇಂದ್ರ ಲೋಧಾ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಗುರುವಾರ (Pe.13)...

ಹೆತ್ತವರ ಹತ್ಯೆ ಪ್ರಕರಣ: ಸ್ಕಿಜೋಫ್ರೇನಿಯಾ ಎಂಬ ಮನೋರೋಗದಿಂದ ಬಳಲುತ್ತಿದ್ದ ಬೆಂಗಳೂರು ಟೆಕ್ಕಿ ರೋಹನ್ ಚಂದ್ರ ಭಟ್ 

ಬೆಂಗಳೂರು: ಬುಧವಾರ ತನ್ನ ಹೆತ್ತವರನ್ನು ಇರಿದು ಕೊಂದ 33 ವರ್ಷದ ಅಮೆರಿಕದಿಂದ ಹಿಂದಿರುಗಿದ ಟೆಕ್ಕಿ ರೋಹನ್ ಚಂದ್ರ ಭಟ್, ವರ್ಷಗಳಿಂದ ಕೆಲಸವಿಲ್ಲದ ಕಾರಣ ಮಾನಸಿಕವಾಗಿ ಅಸ್ವಸ್ಥನಾಗಿದ್ದ ಅನ್ನುವುದು ದೃಢವಾಗಿದೆ.  ಬುಧವಾರ ಬೆಳಿಗ್ಗೆ 8.30 ರ...

ಬಿಕ್ಲುಶಿವ ಹತ್ಯೆ ಪ್ರಕರಣದಲ್ಲಿ ಬಿಜೆಪಿ ಶಾಸಕ ಬೈರತಿ ಬಸವರಾಜ್ ಬಂಧನ: ಇಂದು ಕೋರ್ಟ್‌ಗೆ ಹಾಜರು

ಬೆಂಗಳೂರು ನಗರ ಪೊಲೀಸ್‌ ವ್ಯಾಪ್ತಿಯ ರೌಡಿ ಶಿವಪ್ರಕಾಶ್ ಅಲಿಯಾಸ್ ಬಿಕ್ಲುಶಿವ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆ.ಆರ್‌.ಪುರ ಕ್ಷೇತ್ರದ ಬಿಜೆಪಿ ಶಾಸಕ ಬೈರತಿ ಬಸವರಾಜ್ ಅವರಿಗೆ ಆರಿ ಹಿನ್ನಡೆಯಾಗಿದೆ. ಕೊಲೆ ಪ್ರಕರಣ ಸಂಬಂಧ ಸುಪ್ರೀಂಕೋರ್ಟ್‌ನಲ್ಲಿ...

ಸಾರ್ವತ್ರಿಕ ಮುಷ್ಕರ | ಕೆಲ ರಾಜ್ಯಗಳಲ್ಲಿ ಸಾಮಾನ್ಯ ಜನಜೀವನ ಅಸ್ತವ್ಯಸ್ತ; ಬ್ಯಾಂಕಿಂಗ್, ಸಾರಿಗೆ ವ್ಯವಸ್ಥೆಯಲ್ಲಿ ವ್ಯತ್ಯಯ

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ 'ಕಾರ್ಮಿಕ, ರೈತ ವಿರೋಧಿ ಹಾಗೂ ಕಾರ್ಪೊರೇಟ್ ಪರ ನೀತಿಗಳ' ವಿರುದ್ಧ ಕಾರ್ಮಿಕ ಸಂಘಟನೆಗಳು ಗುರುವಾರ (ಫೆ.12) ಕರೆ ನೀಡಿದ್ದ ರಾಷ್ಟ್ರವ್ಯಾಪಿ ಮುಷ್ಕರದಿಂದ ವಿವಿಧ ರಾಜ್ಯಗಳಲ್ಲಿ ಜನ ಜೀವನ...

ಅದಾನಿ ಮಾನನಷ್ಟ ಪ್ರಕರಣದಲ್ಲಿ ಪತ್ರಕರ್ತ ರವಿ ನಾಯರ್‌ಗೆ ಶಿಕ್ಷೆ: ‘ಇದು ಪತ್ರಿಕಾ ಸ್ವಾತಂತ್ರ್ಯಕ್ಕೆ ಹೊಡೆತ’ ಎಂದ ಪತ್ರಕರ್ತರ ಸಂಘಟನೆಗಳು

ಅದಾನಿ ಎಂಟರ್‌ಪ್ರೈಸಸ್ ದಾಖಲಿಸಿದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ತನಿಖಾ ಪತ್ರಕರ್ತ ರವಿ ನಾಯರ್ ಅವರಿಗೆ ಒಂದು ವರ್ಷ ಜೈಲು ಶಿಕ್ಷೆ ವಿಧಿಸಿರುವುದನ್ನು ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಮತ್ತು ಹಲವಾರು ಪತ್ರಿಕಾ ಸಂಸ್ಥೆಗಳು...

‘ನಾವು ಯಾರನ್ನೂ ನಿಂದಿಸಿಲ್ಲ’: ಚೇಂಬರ್ ‘ದುರ್ವರ್ತನೆ’ ಆರೋಪಕ್ಕೆ ಪ್ರಿಯಾಂಕಾ ಗಾಂಧಿ ಸ್ಪಷ್ಟನೆ 

ನವದೆಹಲಿ: ಸ್ಪೀಕರ್ ಓಂ ಬಿರ್ಲಾ ಅವರ ಕೊಠಡಿಯಲ್ಲಿ ತಮ್ಮ ಪಕ್ಷದ ಸಂಸದರು "ಅನುಚಿತವಾಗಿ ವರ್ತಿಸಿದ್ದಾರೆ" ಎಂದು ಆರೋಪಿಸಿದಾಗ, ಅವರನ್ನು ಬೆಂಬಲಿಸಿದ್ದೇನೆ ಎಂದು ಹೇಳಿದ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಸಂಸದೀಯ ವ್ಯವಹಾರಗಳ...

‘ಭಾರತಕ್ಕೆ ಮರಳಲು ಇದು ಕೊನೆಯ ಅವಕಾಶ’: ವಿಜಯ್ ಮಲ್ಯಗೆ ಬಾಂಬೆ ಹೈಕೋರ್ಟ್‌ ಎಚ್ಚರಿಕೆ

ಭಾರತದ ಹೊರಗೆ ಇರುವ ಉದ್ಯಮಿ ವಿಜಯ್ ಮಲ್ಯ ನ್ಯಾಯಾಲಯದ ಪ್ರಕ್ರಿಯೆಗಳಿಂದ ಉದ್ದೇಶಪೂರ್ವಕವಾಗಿ ತಪ್ಪಿಸಿಕೊಳ್ಳುತ್ತಿದ್ದಾರೆ ಎಂದು ಗಂಭೀರವಾಗಿ ಪರಿಗಣಿಸಿರುವ ಬಾಂಬೆ ಹೈಕೋರ್ಟ್, ಅವರಿಗೆ ಭಾರತಕ್ಕೆ ಮರಳಲು “ಒಂದು ಕೊನೆಯ ಅವಕಾಶ” ನೀಡಿದೆ. ಒಂದು ವೇಳೆ...

ಕೆಲಸದ ಸ್ಥಳದಲ್ಲಿ ಜಾತಿ ತಾರತಮ್ಯದ ಬಗ್ಗೆ ರಾಜ್ಯಸಭೆಯಲ್ಲಿ ಖರ್ಗೆ ಕಳವಳ; ಒಡಿಶಾ ಅಂಗನವಾಡಿ ಘಟನೆ ಉಲ್ಲೇಖ

ಕೆಲಸದ ಸ್ಥಳಗಳಲ್ಲಿ ಆಗುತ್ತಿರುವ ಜಾತಿ ತಾರತಮ್ಯದ ಕುರಿತು ರಾಜ್ಯಸಭೆಯಲ್ಲಿ ಗುರುವಾರ (ಫೆ.12) ವಿಪಕ್ಷ ನಾಯಕ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಳವಳ ವ್ಯಕ್ತಪಡಿಸಿದರು. ಒಡಿಶಾದ ಅಂಗನವಾಡಿಯೊಂದರಲ್ಲಿ ದಲಿತ ಮಹಿಳೆ ತಯಾರಿಸಿದ ಆಹಾರವನ್ನು...