Homeಮುಖಪುಟಕರಾವಳಿಯ ಕೋಮುದ್ವೇಷದ ಇನ್ನೊಂದು ರಕ್ತಸಿಕ್ತ ಅಧ್ಯಾಯಕ್ಕೆ ಕಾರಣಗಳು: ನಿಖಿಲ್ ಕೋಲ್ಪೆ

ಕರಾವಳಿಯ ಕೋಮುದ್ವೇಷದ ಇನ್ನೊಂದು ರಕ್ತಸಿಕ್ತ ಅಧ್ಯಾಯಕ್ಕೆ ಕಾರಣಗಳು: ನಿಖಿಲ್ ಕೋಲ್ಪೆ

- Advertisement -
- Advertisement -

ಕರಾವಳಿಯ ಅತ್ಯಂತ ಭೀಕರ ಕೋಮುಗಲಭೆ ನಡೆದ ಸುರತ್ಕಲ್ ಸುತ್ತಮುತ್ತಲಿನ ಕೋಮುಗಲಭೆಗಳು, ಕೊಲೆಗಳು ಅಲ್ಲಿಗೇ ನಿಲ್ಲಲಿಲ್ಲ. ಅದು ಇಂದಿನ ವರೆಗೂ ಮುಂದುವರಿದಿದೆ. ಕೃಷ್ಣಾಪುರ-ಕಾಟಿಪಳ್ಳ ಪ್ರದೇಶಗಳಲ್ಲಿ ಮತ್ತೆ ಮತ್ತೆ ಘರ್ಷಣೆಗಳು ನಡೆಯುತ್ತಾ ಬಂದಿವೆ. ಇದಕ್ಕೆ ಒಂದು ಪ್ರಮುಖ ಕಾರಣವೂ ಇದೆ. ಈ ಪ್ರದೇಶದಲ್ಲಿ ಇರುವುದು ಹೆಚ್ಚಾಗಿ ಬಂದರು ನಿರ್ಮಾಣದ ವೇಳೆ ನಿರಾಶ್ರಿತರಾದವರ ಮನೆಗಳು. ಸರಕಾರ ಅವರಿಗೆ ಸೈಟುಗಳನ್ನು ಹಂಚುವಾಗ ಹಿಂದೂ ಮತ್ತು ಮುಸ್ಲಿಮರಿಗೆ ಮಿಶ್ರ ಮಾಡಿ ಹಂಚಬೇಕಿತ್ತು. ಆದರೆ, ಅದು ಕೆಲವು ಬ್ಲಾಕ್‌ಗಳಲ್ಲಿ ಕೇವಲ ಹಿಂದೂಗಳಿಗೆ ಮತ್ತು ಕೆಲವು ಬ್ಲಾಕ್‌ಗಳಲ್ಲಿ ಮುಸ್ಲಿಮರಿಗೆ ಮಾತ್ರ ಸೈಟುಗಳನ್ನು ಹಂಚಿತ್ತು. ಪರಿಣಾಮವಾಗಿ ಯಾವುದೇ ಕೋಮು ಉದ್ವಿಗ್ನತೆ ಉಂಟಾದಾಗ ಈ ಎರಡು ಪ್ರದೇಶಗಳು ಎರಡು ದೇಶಗಳಂತೆ ಕಂಡು, ಎರಡೂ ಕಡೆ ಜನರು ಜಮಾಯಿಸುತ್ತಾರೆ.

ಅಲ್ಲದೇ, ಬಂದರು ಆದ ಬಳಿಕ ಪಣಂಬೂರು, ಕುಳಾಯಿ, ಸುರತ್ಕಲ್, ನೆರೆಯ ಕಾನ, ಬಾಳ ಮುಂತಾದ ಕಡೆ ಎಂಆರ್‌ಪಿಎಲ್ ಸಹಿತ ಹಲವು ಚಿಕ್ಕದೊಡ್ಡ ಉದ್ದಿಮೆಗಳ ಜೊತೆ ಹಲವಾರು ರೀತಿಯ ದಂಧೆಗಳು ಆರಂಭವಾಗಿದ್ದವು. ಹಾಗಾಗಿ ವಹಿವಾಟು ಸಂಬಂಧಿ ವೈಯಕ್ತಿಕ ದ್ವೇಷಗಳೂ ಕೋಮುಗಲಾಟೆಗೆ ಕಾರಣಗಳಾಗುತ್ತಿದ್ದವು.

ಸುರತ್ಕಲ್‌ ಪ್ರದೇಶದಲ್ಲಿ ಮತ್ತೆ ನಡೆದ ಘಟನೆಯೆಂದರೆ 2006ಲ್ಲಿ ನಡೆದ ಮಾರ್ಬಲ್ ಅಂಗಡಿಯೊಂದರ ಮಾಲಕನಾಗಿದ್ದ ಸುಖಾನಂದ ಶೆಟ್ಟಿ ಕೊಲೆ. ಮೂಲತಃ ಮುಲ್ಕಿಯ ಶೆಟ್ಟಿ  ಹಿಂದೂತ್ವವಾದಿ ಸಂಘಟನೆಗಳಲ್ಲಿ ಸಕ್ರಿಯನಾಗಿದ್ದು, ಗೋವು ಸಾಗಾಟಗಾರರ ಮೇಲೆ ದಾಳಿ, ಲವ್ ಜೆಹಾದ್ ವಿಷಯದಲ್ಲಿ ಹಲ್ಲೆ ಮುಂತಾಗಿ ಯುವಕರಿಗೆ ಸಕ್ರಿಯ ಬೆಂಬಲ ನೀಡುತ್ತಿದ್ದ ವ್ಯಕ್ತಿ. ಈತನನ್ನು ಸುರತ್ಕಲ್ ಸಮೀಪದ ಕುಳಾಯಿ ಹೊನ್ನಕಟ್ಟೆಯಲ್ಲಿದ್ದ ಆತನ ಮಾರ್ಬಲ್ ಅಂಗಡಿಗೆ ಕಾರಿನಲ್ಲಿ ಬಂದ ಗುಂಪೊಂದು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಂದಿತ್ತು. ಈ ಪ್ರಕರಣದ ವಿಚಾರಣೆ ಕೆಲವರ್ಷ ನಡೆದು 17 ಆರೋಪಿಗಳಿಗೆ ಖುಲಾಸೆಯಾಗಿತ್ತು. ಇವರಲ್ಲಿ ಕೆಲವರು ಬಾಡಿಗೆ ಹತ್ಯೆಯಿಂದ ಹಿಡಿದು ಹಲವು ರೀತಿಯ ಕ್ರಿಮಿನಲ್ ಕೃತ್ಯಗಳಲ್ಲಿ ಬಾಗಿಯಾದ ಪಕ್ಕಾ ರೌಡಿಗಳಿದ್ದರು. ಈ ಪ್ರಕರಣದಲ್ಲಿಯೂ ಘರ್ಷಣೆಯ ಕಿಚ್ಚು ಹೊತ್ತಿದ್ದು, ಎಜೆ ಆಸ್ಪತ್ರೆ ಬಳಿ ಗೋಲಿಬಾರ್ ಕೂಡಾ ನಡೆದಿತ್ತು. ಗಲಭೆಗಳಲ್ಲಿ ಹಲವರು ಗಂಭೀರವಾಗಿ ಗಾಯಗೊಂಡಿದ್ದರು.

ಇವರಲ್ಲಿ ಒಬ್ಬನಾದ ಕಬೀರ್ ಎಂಬಾತನನ್ನು ಗುರುಪುರ ಬಳಿ ಬೈಕಿಗೆ ಕಾರು ಡಿಕ್ಕಿ ಹೊಡೆಸಿ, ನಂತರ ತಲವಾರಿನಿಂದ ಕೊಚ್ಚಿ ಕೊಲೆ ಮಾಡಲಾಯಿತು. ಬಾಡಿಗೆ ಹಂತಕನೆಂದು ಕುಖ್ಯಾತಿ ಗಳಿಸಿದ್ದ ಮುಲ್ಕಿ ರಫೀಕ್ ಯಾನೆ ಕೊಳಚೆಕಂಬ್ಳ ರಫೀಕ್‌ನನ್ನು ತಮಿಳುನಾಡಿನಿಂದ ಪೊಲೀಸರು ಬಂಧಿಸಿತಂದಿದ್ದರು. ನಂತರ ಈತ ಮಣಿಪಾಲದ ಬಳಿ ರೈಲು ನಿಲ್ದಾಣದ ಎದುರು ಪೊಲೀಸ್ ಎನ್‌ಕೌಂಟರ್‌ನಲ್ಲಿ ಹತನಾಗಿದ್ದ. ಇನ್ನೊಬ್ಬ ರೌಡಿ ಮಾಡೂರು ಯೂಸುಫ್ ಅಥವಾ ಇಸುಬುನನ್ನು ಮಂಗಳೂರು ಜೈಲಿನಲ್ಲಿ ಸಹಕೈದಿಗಳು ಕೊಂದಿದ್ದರು. ಬುಲೆಟ್ ಸುಧೀರ್ ಎಂಬಾತ ಕುಂದಾಪುರದಲ್ಲಿ ಪೊಲೀಸ್ ಎನ್‌ಕೌಂಟರ್‌ನಲ್ಲಿ ಹತನಾಗಿದ್ದ.

ಇದರ ಅರ್ಥವೆಂದರೆ, ಕರಾವಳಿಯಲ್ಲಿ ನಡೆಯುವ ಕೋಮುಗಲಭೆಗಳು, ಕೊಲೆಗಳು ನೇರವಾಗಿ ಧರ್ಮಕ್ಕೆ ಸಂಬಂಧಿಸಿದವುಗಳಲ್ಲ. ಅವು ಧರ್ಮರಾಜಕಾರಣ ಮತ್ತು ಎರಡು ನಂಬರ್ ದಂಧೆಗಳಿಗೆ, ಇತರ ವ್ಯವಹಾರಗಳಿಗೆ ಸಂಬಂಧಿಸಿದವುಗಳಾಗಿವೆ. ಇಲ್ಲಿ ನಡೆದ ಎಲ್ಲಾ ಕೋಮು ಗಲಭೆ ಮತ್ತು ಆ ಸಂಬಂಧಿ ಕೊಲೆಗಳ ವಿಷಯವನ್ನು ಬರೆಯುತ್ತಾ ಹೋದರೆ, ಒಂದು ಪುಸ್ತಕವನ್ನೇ ಬರೆಯಬೇಕಾದೀತು.  ಸುರತ್ಕಲ್‌ ಪರಿಸರದಲ್ಲಿ 2018ರಲ್ಲಿಯೇ ಕಾಟಿಪಳ್ಳದಲ್ಲಿ ದೀಪಕ್ ರಾವ್ ಎಂಂಬಾತನ ಕೊಲೆ ನಡೆದಿದ್ದರೆ, ಪ್ರತೀಕಾರವೋ ಎಂಬಂತೆ ಕೆಲದಿನಗಳಲ್ಲೇ ಕೊಟ್ಟಾರ ಚೌಕಿಯಲ್ಲಿ ಬಶೀರ್ ಎಂಬಾತನ ಕೊಲೆ ನಡೆದಿತ್ತು.

ಇಲ್ಲಿ ಇನ್ನೊಂದು ವಿಷಯವನ್ನು ಇಲ್ಲಿ ಉಲ್ಲೇಖಿಸಬೇಕು. ಎಲ್ಲಾ ಪ್ರಕರಣಗಳಲ್ಲಿ ರಾಜಕೀಯ ಮಧ್ಯಪ್ರವೇಶದಿಂದ ಪೊಲೀಸರು ಪಕ್ಷಪಾತದ ಆರೋಪಕ್ಕೆ ಗುರಿಯಾಗಿ ಪ್ರತಿಭಟನೆ, ಪೊಲೀಸ್ ಠಾಣೆಗೆ ಮುತ್ತಿಗೆ ಮುಂತಾದ ಘಟನೆಗಳು ನಡೆದಿದ್ದವು. ಸುರತ್ಕಲ್ ಠಾಣೆಯಂತೂ ಹಲವಾರು ಬಾರಿ ಗುಂಪು ಮುತ್ತಿಗೆಗೆ ಗುರಿಯಾಗಿದೆ.

ಆದುದರಿಂದ ಇಲ್ಲಿ ಎಲ್ಲಾ ಪ್ರಕರಣಗಳನ್ನು ಕಾಲಾನುಕ್ರಮದಲ್ಲಿ ಹೇಳಲು ಹೋಗದೆ, ಅತ್ಯಂತ ಸೂಕ್ಷ್ಮವಾದ ಕೆಲವು ಪ್ರದೇಶಗಳು ಮತ್ತು ಅವುಗಳಲ್ಲಿ ನಡೆದ ಪ್ರಮುಖ ಘಟನೆಗಳನ್ನು ಮಾತ್ರ ಉಲ್ಲೇಖಿಸಲಾಗಿದೆ. ಇದಕ್ಕೆ ಇನ್ನೊಂದು ಕಾರಣವೆಂದರೆ, ಎಲ್ಲಾ ಘಟನೆಗಳು ಒಂದೇ ಮಾದರಿ (ಮೋಡಸ್ ಒಪೆರಾಂಡಿ)ಯಲ್ಲಿ ನಡೆದಿದ್ದು, ಎರಡೂ ಕೋಮುಗಳು ಮತ್ತು ಅವುಗಳನ್ನು ಬೆಂಬಲಿಸುವ ರಾಜಕೀಯ ಪಕ್ಷಗಳ ಪ್ರತಿಕ್ರಿಯೆ ಒಂದೇ ರೀತಿ ಇರುವುದರಿಂದ ಅವುಗಳನ್ನು ಮತ್ತೆ ಮತ್ತೆ ಪುನರಾವರ್ತಿಸುವ ಅಗತ್ಯವಿಲ್ಲ.

ಸುರತ್ಕಲ್‌ನಂತೆ ಕೋಮುಸೂಕ್ಷ್ಮವಾಗಿದ್ದು, ಹಲವಾರು ಕೊಲೆ ಮತ್ತು ಪ್ರತೀಕಾರದ ಕೊಲೆಗಳಿಗೆ ಸಾಕ್ಷಿಯಾಗಿರುವುದೆಂದರೆ, ಪೊಳಲಿ ಮತ್ತು ಮಾಡೂರು ಪರಿಸರ. ಇಲ್ಲಿ ಏನಾದರೂ ಆರಂಭವಾದರೆ, ಅದು ಬಜ್ಪೆ, ಬಿ.ಸಿ.ರೋಡು, ಮಾರಿಪಳ್ಳ, ಫರಂಗಿಪೇಟೆ ಮುಂತಾದ ಕಡೆಗಳಿಗೆ ವ್ಯಾಪಿಸುತ್ತದೆ. ವರ್ಷಗಳ ಹಿಂದೆ ಇಲ್ಲಿ ಪೊಳಲಿ ಕಮಲಾಕ್ಷ ಎಂಬಾತನ ಕೊಲೆ ನಡೆದಿತ್ತು. ಕಾಟಿಪಳ್ಳ-ಕೃಷ್ಣಾಪುರದಂತೆಯೇ ಮಾಡೂರಿನಲ್ಲಿ ಮುಸ್ಲಿಂ ಬಾಹುಳ್ಯವಿದ್ದರೆ, ಸುತ್ತಲೂ ಹಿಂದೂ ಬಾಹುಳ್ಯವಿದೆ. ನಂತರ ನಾಗೇಶ ಶೆಟ್ಟಿಗಾರ್ ಎಂಬಾತನ ಕೊಲೆ ನಡೆಯಿತು. ತಕ್ಷಣವೇ ಮಂಗಳೂರಿನ ಜಪ್ಪು ಪ್ರದೇಶದಲ್ಲಿ ಮುಸ್ಲಿಂ ಯುವಕನೊಬ್ಬನ ಕೊಲೆ ನಡೆದಿತ್ತು. ಇದು ಪ್ರತೀಕಾರಾರ್ಥ ಕೊಲೆ ಎಂದು ಹೇಳಲಾಗಿತ್ತು.

ನಂತರ ಎಲ್ಲರನ್ನೂ ಬೆಚ್ಚಿ ಬೀಳಿಸಿದ ಘಟನೆ ಎಂದರೆ, ಮಾಡೂರಿನ ಕಾಂಗ್ರೆಸ್ ನಾಯಕ ಮತ್ತು ಮಂಗಳೂರು ತಾಲೂಕು ಪಂಚಾಯತ್ ಅಧ್ಯಕ್ಷರಾಗಿದ್ದ ಅಬ್ದುಲ್ ಜಬ್ಬಾರ್ ಅವರನ್ನು ಅವರ ಕಚೇರಿಯಲ್ಲಿಯೇ, ಅವರ ಹೆಂಡತಿ ಮಕ್ಕಳ ಕಣ್ಣೆದುರೇ, ಭೀಕರವಾಗಿ ಕೊಚ್ಚಿ ಕೊಲ್ಲಲಾಗಿತ್ತು. ಈ ಪ್ರಕರಣದ ಆರೋಪಿಗಳೆಂದರೆ ಪೊಳಲಿ ಅನಂತು ಮತ್ತು ಇತರರು. ಮಾಡೂರು ಇಸುಬು ಕೊಲೆ ಪ್ರಕರಣವನ್ನು ಹಿಂದೆ ಉಲ್ಲೇಖಿಸಲಾಗಿದೆ. ಈ ಪ್ರಕರಣದಲ್ಲಿ ಬಿಡುಗಡೆ ಹೊಂದಿದ ಅನಂತುವನ್ನು ಹಿಂದೂತ್ವವಾದಿ ಸಂಘಟನೆಗಳು ಮಂಗಳೂರಿನಿಂದ ಪೊಳಲಿಗೆ ಮೆರವಣಿಗೆಯಲ್ಲಿ ಒಯ್ದಿದ್ದರು. ನಂತರ ಒಂಟಿಯಾಗಿ ಹೋಗುತ್ತಿದ್ದ ಆತನನ್ನು ಪ್ರತೀಕಾರವಾಗಿ ಕೊಲ್ಲಲಾಗಿತ್ತು. ಬೆನ್ನಲ್ಲೇ ಜಬ್ಬಾರ್ ಹತ್ಯೆಯಲ್ಲಿ ಶಾಮೀಲಾಗಿದ್ದನೆನ್ನಲಾದ ಸಂತೋಷ ಯಾನೆ ಕ್ಯಾಂಡಲ್ ಸಂತು ಎಂಬಾತನ ಕೊಲೆಯೂ ನಡೆದಿತ್ತು. ಈ ರೀತಿಯ ಕೊಲೆಗಳ ಸರಣಿ ಉಳ್ಳಾಲ ಮತ್ತಿತರ ಕಡೆಗಳಲ್ಲೂ ನಡೆದಿದ್ದು, ಕೋಮು ವಿಷ ಎಷ್ಟರ ಮಟ್ಟಿಗೆ ಹರಡಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. (ಇನ್ನಷ್ಟು ಕೋಮುಸಂಬಂಧಿ ಘಟನೆಗಳು ಮತ್ತು ಹುನ್ನಾರಗಳ ವಿವರ ಮುಂದೆ ನೋಡೋಣ)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...