Homeಮುಖಪುಟಕರಾವಳಿಯ ಕೋಮುದ್ವೇಷದ ಇನ್ನೊಂದು ರಕ್ತಸಿಕ್ತ ಅಧ್ಯಾಯಕ್ಕೆ ಕಾರಣಗಳು: ನಿಖಿಲ್ ಕೋಲ್ಪೆ

ಕರಾವಳಿಯ ಕೋಮುದ್ವೇಷದ ಇನ್ನೊಂದು ರಕ್ತಸಿಕ್ತ ಅಧ್ಯಾಯಕ್ಕೆ ಕಾರಣಗಳು: ನಿಖಿಲ್ ಕೋಲ್ಪೆ

- Advertisement -
- Advertisement -

ಕರಾವಳಿಯ ಅತ್ಯಂತ ಭೀಕರ ಕೋಮುಗಲಭೆ ನಡೆದ ಸುರತ್ಕಲ್ ಸುತ್ತಮುತ್ತಲಿನ ಕೋಮುಗಲಭೆಗಳು, ಕೊಲೆಗಳು ಅಲ್ಲಿಗೇ ನಿಲ್ಲಲಿಲ್ಲ. ಅದು ಇಂದಿನ ವರೆಗೂ ಮುಂದುವರಿದಿದೆ. ಕೃಷ್ಣಾಪುರ-ಕಾಟಿಪಳ್ಳ ಪ್ರದೇಶಗಳಲ್ಲಿ ಮತ್ತೆ ಮತ್ತೆ ಘರ್ಷಣೆಗಳು ನಡೆಯುತ್ತಾ ಬಂದಿವೆ. ಇದಕ್ಕೆ ಒಂದು ಪ್ರಮುಖ ಕಾರಣವೂ ಇದೆ. ಈ ಪ್ರದೇಶದಲ್ಲಿ ಇರುವುದು ಹೆಚ್ಚಾಗಿ ಬಂದರು ನಿರ್ಮಾಣದ ವೇಳೆ ನಿರಾಶ್ರಿತರಾದವರ ಮನೆಗಳು. ಸರಕಾರ ಅವರಿಗೆ ಸೈಟುಗಳನ್ನು ಹಂಚುವಾಗ ಹಿಂದೂ ಮತ್ತು ಮುಸ್ಲಿಮರಿಗೆ ಮಿಶ್ರ ಮಾಡಿ ಹಂಚಬೇಕಿತ್ತು. ಆದರೆ, ಅದು ಕೆಲವು ಬ್ಲಾಕ್‌ಗಳಲ್ಲಿ ಕೇವಲ ಹಿಂದೂಗಳಿಗೆ ಮತ್ತು ಕೆಲವು ಬ್ಲಾಕ್‌ಗಳಲ್ಲಿ ಮುಸ್ಲಿಮರಿಗೆ ಮಾತ್ರ ಸೈಟುಗಳನ್ನು ಹಂಚಿತ್ತು. ಪರಿಣಾಮವಾಗಿ ಯಾವುದೇ ಕೋಮು ಉದ್ವಿಗ್ನತೆ ಉಂಟಾದಾಗ ಈ ಎರಡು ಪ್ರದೇಶಗಳು ಎರಡು ದೇಶಗಳಂತೆ ಕಂಡು, ಎರಡೂ ಕಡೆ ಜನರು ಜಮಾಯಿಸುತ್ತಾರೆ.

ಅಲ್ಲದೇ, ಬಂದರು ಆದ ಬಳಿಕ ಪಣಂಬೂರು, ಕುಳಾಯಿ, ಸುರತ್ಕಲ್, ನೆರೆಯ ಕಾನ, ಬಾಳ ಮುಂತಾದ ಕಡೆ ಎಂಆರ್‌ಪಿಎಲ್ ಸಹಿತ ಹಲವು ಚಿಕ್ಕದೊಡ್ಡ ಉದ್ದಿಮೆಗಳ ಜೊತೆ ಹಲವಾರು ರೀತಿಯ ದಂಧೆಗಳು ಆರಂಭವಾಗಿದ್ದವು. ಹಾಗಾಗಿ ವಹಿವಾಟು ಸಂಬಂಧಿ ವೈಯಕ್ತಿಕ ದ್ವೇಷಗಳೂ ಕೋಮುಗಲಾಟೆಗೆ ಕಾರಣಗಳಾಗುತ್ತಿದ್ದವು.

ಸುರತ್ಕಲ್‌ ಪ್ರದೇಶದಲ್ಲಿ ಮತ್ತೆ ನಡೆದ ಘಟನೆಯೆಂದರೆ 2006ಲ್ಲಿ ನಡೆದ ಮಾರ್ಬಲ್ ಅಂಗಡಿಯೊಂದರ ಮಾಲಕನಾಗಿದ್ದ ಸುಖಾನಂದ ಶೆಟ್ಟಿ ಕೊಲೆ. ಮೂಲತಃ ಮುಲ್ಕಿಯ ಶೆಟ್ಟಿ  ಹಿಂದೂತ್ವವಾದಿ ಸಂಘಟನೆಗಳಲ್ಲಿ ಸಕ್ರಿಯನಾಗಿದ್ದು, ಗೋವು ಸಾಗಾಟಗಾರರ ಮೇಲೆ ದಾಳಿ, ಲವ್ ಜೆಹಾದ್ ವಿಷಯದಲ್ಲಿ ಹಲ್ಲೆ ಮುಂತಾಗಿ ಯುವಕರಿಗೆ ಸಕ್ರಿಯ ಬೆಂಬಲ ನೀಡುತ್ತಿದ್ದ ವ್ಯಕ್ತಿ. ಈತನನ್ನು ಸುರತ್ಕಲ್ ಸಮೀಪದ ಕುಳಾಯಿ ಹೊನ್ನಕಟ್ಟೆಯಲ್ಲಿದ್ದ ಆತನ ಮಾರ್ಬಲ್ ಅಂಗಡಿಗೆ ಕಾರಿನಲ್ಲಿ ಬಂದ ಗುಂಪೊಂದು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಂದಿತ್ತು. ಈ ಪ್ರಕರಣದ ವಿಚಾರಣೆ ಕೆಲವರ್ಷ ನಡೆದು 17 ಆರೋಪಿಗಳಿಗೆ ಖುಲಾಸೆಯಾಗಿತ್ತು. ಇವರಲ್ಲಿ ಕೆಲವರು ಬಾಡಿಗೆ ಹತ್ಯೆಯಿಂದ ಹಿಡಿದು ಹಲವು ರೀತಿಯ ಕ್ರಿಮಿನಲ್ ಕೃತ್ಯಗಳಲ್ಲಿ ಬಾಗಿಯಾದ ಪಕ್ಕಾ ರೌಡಿಗಳಿದ್ದರು. ಈ ಪ್ರಕರಣದಲ್ಲಿಯೂ ಘರ್ಷಣೆಯ ಕಿಚ್ಚು ಹೊತ್ತಿದ್ದು, ಎಜೆ ಆಸ್ಪತ್ರೆ ಬಳಿ ಗೋಲಿಬಾರ್ ಕೂಡಾ ನಡೆದಿತ್ತು. ಗಲಭೆಗಳಲ್ಲಿ ಹಲವರು ಗಂಭೀರವಾಗಿ ಗಾಯಗೊಂಡಿದ್ದರು.

ಇವರಲ್ಲಿ ಒಬ್ಬನಾದ ಕಬೀರ್ ಎಂಬಾತನನ್ನು ಗುರುಪುರ ಬಳಿ ಬೈಕಿಗೆ ಕಾರು ಡಿಕ್ಕಿ ಹೊಡೆಸಿ, ನಂತರ ತಲವಾರಿನಿಂದ ಕೊಚ್ಚಿ ಕೊಲೆ ಮಾಡಲಾಯಿತು. ಬಾಡಿಗೆ ಹಂತಕನೆಂದು ಕುಖ್ಯಾತಿ ಗಳಿಸಿದ್ದ ಮುಲ್ಕಿ ರಫೀಕ್ ಯಾನೆ ಕೊಳಚೆಕಂಬ್ಳ ರಫೀಕ್‌ನನ್ನು ತಮಿಳುನಾಡಿನಿಂದ ಪೊಲೀಸರು ಬಂಧಿಸಿತಂದಿದ್ದರು. ನಂತರ ಈತ ಮಣಿಪಾಲದ ಬಳಿ ರೈಲು ನಿಲ್ದಾಣದ ಎದುರು ಪೊಲೀಸ್ ಎನ್‌ಕೌಂಟರ್‌ನಲ್ಲಿ ಹತನಾಗಿದ್ದ. ಇನ್ನೊಬ್ಬ ರೌಡಿ ಮಾಡೂರು ಯೂಸುಫ್ ಅಥವಾ ಇಸುಬುನನ್ನು ಮಂಗಳೂರು ಜೈಲಿನಲ್ಲಿ ಸಹಕೈದಿಗಳು ಕೊಂದಿದ್ದರು. ಬುಲೆಟ್ ಸುಧೀರ್ ಎಂಬಾತ ಕುಂದಾಪುರದಲ್ಲಿ ಪೊಲೀಸ್ ಎನ್‌ಕೌಂಟರ್‌ನಲ್ಲಿ ಹತನಾಗಿದ್ದ.

ಇದರ ಅರ್ಥವೆಂದರೆ, ಕರಾವಳಿಯಲ್ಲಿ ನಡೆಯುವ ಕೋಮುಗಲಭೆಗಳು, ಕೊಲೆಗಳು ನೇರವಾಗಿ ಧರ್ಮಕ್ಕೆ ಸಂಬಂಧಿಸಿದವುಗಳಲ್ಲ. ಅವು ಧರ್ಮರಾಜಕಾರಣ ಮತ್ತು ಎರಡು ನಂಬರ್ ದಂಧೆಗಳಿಗೆ, ಇತರ ವ್ಯವಹಾರಗಳಿಗೆ ಸಂಬಂಧಿಸಿದವುಗಳಾಗಿವೆ. ಇಲ್ಲಿ ನಡೆದ ಎಲ್ಲಾ ಕೋಮು ಗಲಭೆ ಮತ್ತು ಆ ಸಂಬಂಧಿ ಕೊಲೆಗಳ ವಿಷಯವನ್ನು ಬರೆಯುತ್ತಾ ಹೋದರೆ, ಒಂದು ಪುಸ್ತಕವನ್ನೇ ಬರೆಯಬೇಕಾದೀತು.  ಸುರತ್ಕಲ್‌ ಪರಿಸರದಲ್ಲಿ 2018ರಲ್ಲಿಯೇ ಕಾಟಿಪಳ್ಳದಲ್ಲಿ ದೀಪಕ್ ರಾವ್ ಎಂಂಬಾತನ ಕೊಲೆ ನಡೆದಿದ್ದರೆ, ಪ್ರತೀಕಾರವೋ ಎಂಬಂತೆ ಕೆಲದಿನಗಳಲ್ಲೇ ಕೊಟ್ಟಾರ ಚೌಕಿಯಲ್ಲಿ ಬಶೀರ್ ಎಂಬಾತನ ಕೊಲೆ ನಡೆದಿತ್ತು.

ಇಲ್ಲಿ ಇನ್ನೊಂದು ವಿಷಯವನ್ನು ಇಲ್ಲಿ ಉಲ್ಲೇಖಿಸಬೇಕು. ಎಲ್ಲಾ ಪ್ರಕರಣಗಳಲ್ಲಿ ರಾಜಕೀಯ ಮಧ್ಯಪ್ರವೇಶದಿಂದ ಪೊಲೀಸರು ಪಕ್ಷಪಾತದ ಆರೋಪಕ್ಕೆ ಗುರಿಯಾಗಿ ಪ್ರತಿಭಟನೆ, ಪೊಲೀಸ್ ಠಾಣೆಗೆ ಮುತ್ತಿಗೆ ಮುಂತಾದ ಘಟನೆಗಳು ನಡೆದಿದ್ದವು. ಸುರತ್ಕಲ್ ಠಾಣೆಯಂತೂ ಹಲವಾರು ಬಾರಿ ಗುಂಪು ಮುತ್ತಿಗೆಗೆ ಗುರಿಯಾಗಿದೆ.

ಆದುದರಿಂದ ಇಲ್ಲಿ ಎಲ್ಲಾ ಪ್ರಕರಣಗಳನ್ನು ಕಾಲಾನುಕ್ರಮದಲ್ಲಿ ಹೇಳಲು ಹೋಗದೆ, ಅತ್ಯಂತ ಸೂಕ್ಷ್ಮವಾದ ಕೆಲವು ಪ್ರದೇಶಗಳು ಮತ್ತು ಅವುಗಳಲ್ಲಿ ನಡೆದ ಪ್ರಮುಖ ಘಟನೆಗಳನ್ನು ಮಾತ್ರ ಉಲ್ಲೇಖಿಸಲಾಗಿದೆ. ಇದಕ್ಕೆ ಇನ್ನೊಂದು ಕಾರಣವೆಂದರೆ, ಎಲ್ಲಾ ಘಟನೆಗಳು ಒಂದೇ ಮಾದರಿ (ಮೋಡಸ್ ಒಪೆರಾಂಡಿ)ಯಲ್ಲಿ ನಡೆದಿದ್ದು, ಎರಡೂ ಕೋಮುಗಳು ಮತ್ತು ಅವುಗಳನ್ನು ಬೆಂಬಲಿಸುವ ರಾಜಕೀಯ ಪಕ್ಷಗಳ ಪ್ರತಿಕ್ರಿಯೆ ಒಂದೇ ರೀತಿ ಇರುವುದರಿಂದ ಅವುಗಳನ್ನು ಮತ್ತೆ ಮತ್ತೆ ಪುನರಾವರ್ತಿಸುವ ಅಗತ್ಯವಿಲ್ಲ.

ಸುರತ್ಕಲ್‌ನಂತೆ ಕೋಮುಸೂಕ್ಷ್ಮವಾಗಿದ್ದು, ಹಲವಾರು ಕೊಲೆ ಮತ್ತು ಪ್ರತೀಕಾರದ ಕೊಲೆಗಳಿಗೆ ಸಾಕ್ಷಿಯಾಗಿರುವುದೆಂದರೆ, ಪೊಳಲಿ ಮತ್ತು ಮಾಡೂರು ಪರಿಸರ. ಇಲ್ಲಿ ಏನಾದರೂ ಆರಂಭವಾದರೆ, ಅದು ಬಜ್ಪೆ, ಬಿ.ಸಿ.ರೋಡು, ಮಾರಿಪಳ್ಳ, ಫರಂಗಿಪೇಟೆ ಮುಂತಾದ ಕಡೆಗಳಿಗೆ ವ್ಯಾಪಿಸುತ್ತದೆ. ವರ್ಷಗಳ ಹಿಂದೆ ಇಲ್ಲಿ ಪೊಳಲಿ ಕಮಲಾಕ್ಷ ಎಂಬಾತನ ಕೊಲೆ ನಡೆದಿತ್ತು. ಕಾಟಿಪಳ್ಳ-ಕೃಷ್ಣಾಪುರದಂತೆಯೇ ಮಾಡೂರಿನಲ್ಲಿ ಮುಸ್ಲಿಂ ಬಾಹುಳ್ಯವಿದ್ದರೆ, ಸುತ್ತಲೂ ಹಿಂದೂ ಬಾಹುಳ್ಯವಿದೆ. ನಂತರ ನಾಗೇಶ ಶೆಟ್ಟಿಗಾರ್ ಎಂಬಾತನ ಕೊಲೆ ನಡೆಯಿತು. ತಕ್ಷಣವೇ ಮಂಗಳೂರಿನ ಜಪ್ಪು ಪ್ರದೇಶದಲ್ಲಿ ಮುಸ್ಲಿಂ ಯುವಕನೊಬ್ಬನ ಕೊಲೆ ನಡೆದಿತ್ತು. ಇದು ಪ್ರತೀಕಾರಾರ್ಥ ಕೊಲೆ ಎಂದು ಹೇಳಲಾಗಿತ್ತು.

ನಂತರ ಎಲ್ಲರನ್ನೂ ಬೆಚ್ಚಿ ಬೀಳಿಸಿದ ಘಟನೆ ಎಂದರೆ, ಮಾಡೂರಿನ ಕಾಂಗ್ರೆಸ್ ನಾಯಕ ಮತ್ತು ಮಂಗಳೂರು ತಾಲೂಕು ಪಂಚಾಯತ್ ಅಧ್ಯಕ್ಷರಾಗಿದ್ದ ಅಬ್ದುಲ್ ಜಬ್ಬಾರ್ ಅವರನ್ನು ಅವರ ಕಚೇರಿಯಲ್ಲಿಯೇ, ಅವರ ಹೆಂಡತಿ ಮಕ್ಕಳ ಕಣ್ಣೆದುರೇ, ಭೀಕರವಾಗಿ ಕೊಚ್ಚಿ ಕೊಲ್ಲಲಾಗಿತ್ತು. ಈ ಪ್ರಕರಣದ ಆರೋಪಿಗಳೆಂದರೆ ಪೊಳಲಿ ಅನಂತು ಮತ್ತು ಇತರರು. ಮಾಡೂರು ಇಸುಬು ಕೊಲೆ ಪ್ರಕರಣವನ್ನು ಹಿಂದೆ ಉಲ್ಲೇಖಿಸಲಾಗಿದೆ. ಈ ಪ್ರಕರಣದಲ್ಲಿ ಬಿಡುಗಡೆ ಹೊಂದಿದ ಅನಂತುವನ್ನು ಹಿಂದೂತ್ವವಾದಿ ಸಂಘಟನೆಗಳು ಮಂಗಳೂರಿನಿಂದ ಪೊಳಲಿಗೆ ಮೆರವಣಿಗೆಯಲ್ಲಿ ಒಯ್ದಿದ್ದರು. ನಂತರ ಒಂಟಿಯಾಗಿ ಹೋಗುತ್ತಿದ್ದ ಆತನನ್ನು ಪ್ರತೀಕಾರವಾಗಿ ಕೊಲ್ಲಲಾಗಿತ್ತು. ಬೆನ್ನಲ್ಲೇ ಜಬ್ಬಾರ್ ಹತ್ಯೆಯಲ್ಲಿ ಶಾಮೀಲಾಗಿದ್ದನೆನ್ನಲಾದ ಸಂತೋಷ ಯಾನೆ ಕ್ಯಾಂಡಲ್ ಸಂತು ಎಂಬಾತನ ಕೊಲೆಯೂ ನಡೆದಿತ್ತು. ಈ ರೀತಿಯ ಕೊಲೆಗಳ ಸರಣಿ ಉಳ್ಳಾಲ ಮತ್ತಿತರ ಕಡೆಗಳಲ್ಲೂ ನಡೆದಿದ್ದು, ಕೋಮು ವಿಷ ಎಷ್ಟರ ಮಟ್ಟಿಗೆ ಹರಡಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. (ಇನ್ನಷ್ಟು ಕೋಮುಸಂಬಂಧಿ ಘಟನೆಗಳು ಮತ್ತು ಹುನ್ನಾರಗಳ ವಿವರ ಮುಂದೆ ನೋಡೋಣ)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...