Homeಮುಖಪುಟಪತ್ರಕರ್ತ ಮಹೇಶ್ ಲಾಂಗಾ ವಿರುದ್ಧ ಮತ್ತೊಂದು ಪ್ರಕರಣ : ಜೈಲಿನಿಂದಲೇ ಬಂಧಿಸಿದ ಇಡಿ

ಪತ್ರಕರ್ತ ಮಹೇಶ್ ಲಾಂಗಾ ವಿರುದ್ಧ ಮತ್ತೊಂದು ಪ್ರಕರಣ : ಜೈಲಿನಿಂದಲೇ ಬಂಧಿಸಿದ ಇಡಿ

- Advertisement -
- Advertisement -

ವಂಚನೆ ಮತ್ತು ದ್ರೋಹ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ಮಂಗಳವಾರ (ಫೆ.25) ಪತ್ರಕರ್ತ ಮಹೇಶ್ ಲಾಂಗಾ ಅವರನ್ನು ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆಯಡಿ (ಪಿಎಂಎಲ್‌) ಬಂಧಿಸಿದೆ.

ಲಾಂಗಾ ಅವರನ್ನು ಅಹಮದಾಬಾದ್‌ನ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯ ಅವರನ್ನು ಫೆಬ್ರವರಿ 28 ರವರೆಗೆ ಇಡಿ ಕಸ್ಟಡಿಗೆ ನೀಡಿದೆ.

ಮತ್ತೊಂದು ಪ್ರಕರಣದಲ್ಲಿ ಮಹೇಶ್ ಲಾಂಗಾ ಅವರು ಸಾಬರಮತಿ ಕೇಂದ್ರ ಕಾರಾಗೃದಲ್ಲಿದ್ದರು. ಅಲ್ಲಿಂದಲೇ ಇಡಿ ಬಂಧಿಸಿದೆ.

ದಿ ಹಿಂದೂ ಪತ್ರಿಕೆಯ ಗುಜರಾತ್ ಆವೃತ್ತಿಯ ಸಹಾಯಕ ಸಂಪಾದಕ ಮಹೇಶ್ ಲಾಂಗಾ ಅವರ ವಿರುದ್ದ ಒಟ್ಟು ಏಳು ಪ್ರಕರಣಗಳು ದಾಖಲಾಗಿವೆ. ಇವುಗಳಲ್ಲಿ ಗುಜರಾತ್ ಪೊಲೀಸರು ದಾಖಲಿಸಿರುವ ಐದು ಎಫ್‌ಐಆರ್‌ಗಳು ಮತ್ತು ಇಡಿ ದಾಖಲಿಸಿದ ಎರಡು ಪ್ರಕರಣಗಳು ಸೇರಿವೆ.

ಅಕ್ಟೋಬರ್‌ನಲ್ಲಿ ಕ್ರೈಂ ಬ್ರ್ಯಾಂಚ್ ಪೊಲೀಸರು ದಾಖಲಿಸಿರುವ ಎಫ್‌ಐಆರ್ ಆಧರಿಸಿ ಮಹೇಶ್ ಲಾಂಗಾ ವಿರುದ್ದ ಪ್ರಕರಣ ದಾಖಲಿಸಿಕೊಂಡ ಇಡಿ, ಅವರನ್ನು ಬಂಧಿಸಿದೆ. ಉದ್ಯಮಿಯೊಬ್ಬರಿಗೆ 28.68 ಲಕ್ಷ ರೂಪಾಯಿ ವಂಚಿಸಿದ್ದಾರೆ ಎಂದು ಆರೋಪಿಸಿ ಈ ಪ್ರಕರಣ ದಾಖಲಿಸಲಾಗಿದೆ.

ವಂಚನೆ ಮತ್ತು ನಷ್ಟಕ್ಕೆ ಕಾರಣವಾದ ಆರೋಪದ ಮೇಲೆ ಅಹಮದಾಬಾದ್‌ನ ಸ್ಯಾಟಲೈಟ್ ಪೊಲೀಸ್ ಠಾಣೆಯಲ್ಲಿ ಲಾಂಗಾ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿರುವುದು ತನಿಖೆಯ ಸಮಯದಲ್ಲಿ ತಿಳಿದುಬಂದಿದೆ ಎಂದು ಇಡಿ ತಿಳಿಸಿದೆ. ಈ ಪ್ರಕರಣವು ಭೂ ದಲ್ಲಾಳಿಯಿಂದ 40 ಲಕ್ಷ ರೂ. ಸುಲಿಗೆ ಮಾಡಿದ ಆರೋಪವನ್ನು ಆಧರಿಸಿದೆ.

ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಆರೋಪದ ಮೇಲೆ ಮೇಲೆ ಲಾಂಗಾ ಅವರನ್ನು ಅಕ್ಟೋಬರ್ 7, 2024ರಂದು ಅಹಮದಾಬಾದ್ ಕ್ರೈಂ ಬ್ರ್ಯಾಂಚ್ ಮೊದಲು ಬಂಧಿಸಿತ್ತು.
ಧ್ರುವಿ ಎಂಟರ್‌ಪ್ರೈಸ್ ಎಂಬ ಕಂಪನಿಯು ಇನ್‌ಪುಟ್ ತೆರಿಗೆ ಕ್ರೆಡಿಟ್ ಪಡೆಯಲು ಒಂದೇ ಶಾಶ್ವತ ಖಾತೆ ಸಂಖ್ಯೆಯಿಂದ ಆರು ಸಂಸ್ಥೆಗಳನ್ನು ಸೃಷ್ಟಿಸಿದೆ ಎಂದು ಪೊಲೀಸರು ಆರೋಪಿಸಿದ್ದರು. ಎಫ್‌ಐಆರ್‌ನಲ್ಲಿ ಹೆಸರಿಸಲಾದ ಕಂಪನಿಗಳಲ್ಲಿ ಡಿಎ ಎಂಟರ್‌ಪ್ರೈಸ್ ಕೂಡ ಒಂದು.

ಅಕ್ಟೋಬರ್ 22ರಂದು, ಗುಜರಾತ್ ಕಡಲ ಮಂಡಳಿಗೆ ಸಂಬಂಧಿಸಿದ ಗೌಪ್ಯ ಸರ್ಕಾರಿ ದಾಖಲೆಗಳನ್ನು ಹೊಂದಿದ್ದ ಆರೋಪದ ಮೇಲೆ ಲಾಂಗಾ ವಿರುದ್ಧ ಪೊಲೀಸರು ಎರಡನೇ ಪ್ರಕರಣವನ್ನು ದಾಖಲಿಸಿದ್ದರು. ಮೊದಲ ಪ್ರಕರಣದಲ್ಲಿ ಬಂಧನದ ಸಮಯದಲ್ಲಿ ಅವರಿಂದ ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿತ್ತು.

ಗೌಪ್ಯ ಸರ್ಕಾರಿ ದಾಖಲೆಗಳನ್ನು ಹೊಂದಿದ್ದಕ್ಕಾಗಿ ಲಾಂಗಾ ವಿರುದ್ಧ ದಾಖಲಿಸಿರುವ ಪ್ರಕರಣವನ್ನು ಹಿಂಪಡೆಯುವಂತೆ ಪತ್ರಿಕಾ ಸಂಸ್ಥೆಗಳು ಪೊಲೀಸರನ್ನು ಒತ್ತಾಯಿಸಿವೆ.

ಅಕ್ಟೋಬರ್ 29ರಂದು, ಅಹಮದಾಬಾದ್‌ನಲ್ಲಿ ಉದ್ಯಮಿಯೊಬ್ಬರಿಗೆ ವಂಚನೆ ಮಾಡಿದ ಆರೋಪದ ಮೇಲೆ ಲಾಂಗಾ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು.

ಅದೇ ದಿನ, ಇಡಿಯ ಅಹಮದಾಬಾದ್ ವಲಯ ಕಚೇರಿಯು ಲಾಂಗಾ ಮತ್ತು ಇತರರ ವಿರುದ್ಧ ಹಣ ಅಕ್ರಮ ವರ್ಗಾವಣೆ ಪ್ರಕರಣ ದಾಖಲಿಸಿರುವುದಾಗಿ ತಿಳಿಸಿತ್ತು.

ಬಿಜೆಪಿ-ಡಿಎಂಕೆ ಸರ್ಕಾರಗಳ ವಿರುದ್ಧ ‘ಗೆಟ್‌ಔಟ್‌’ ಅಭಿಯಾನ ಆರಂಭಿಸಿದ ನಟ ವಿಜಯ್ ನೇತೃತ್ವದ ಟಿವಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧರ್ಮದ ಕಾರಣಕ್ಕೆ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಗೆ ಹಲವು ಬಾರಿ ಇರಿತ: ಅಮೆರಿಕದ ಮಾಲ್‌ನಲ್ಲಿ ಕೃತ್ಯ

ಅಮೆರಿಕದ ಉತಾಹ್‌ನಲ್ಲಿರುವ ಶಾಪಿಂಗ್ ಮಾಲ್‌ನಲ್ಲಿ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಯೊಬ್ಬನಿಗೆ ಹಲವು ಬಾರಿ ಇರಿತದ ಆರೋಪ ಹೊರಿಸಲಾಗಿದೆ. ಹೈದರಾಬಾದ್‌ ನಗರದ ಟೋಲಿಚೌಕಿಯ ನಿವಾಸಿ ಸೈಯದ್ ಸೊಹೈಲ್ ಉದ್ದೀನ್, ಉತಾಹ್‌ನ ಸಾಲ್ಟ್ ಲೇಕ್ ಕೌಂಟಿಯ...

47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ...

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ ಸಾವು

ಮುರ್ಷಿದಾಬಾದ್: ದೇಶದಲ್ಲಿ ರೈಲ್ವೆ ಸುರಕ್ಷತೆಯ ಕುರಿತು ಸರ್ಕಾರಗಳು ದೊಡ್ಡ ದೊಡ್ಡ ಭರವಸೆ ಹಾಗೂ ಯೋಜನೆಗಳನ್ನು ಮಂಡಿಸುತ್ತಿದ್ದರೂ, ತಳಮಟ್ಟದ ವಾಸ್ತವ ಮಾತ್ರ ಇಂದಿಗೂ ಅತ್ಯಂತ ಭೀಕರವಾಗಿದೆ ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘೋರ...

ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ‘ಪ್ರಾಜೆಕ್ಟ್ ಮೇಘಾಲಯ’ ಸಂಚು ಆರೋಪ : ಪತ್ರಕರ್ತನ ವಿಚಾರಣೆ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಎನ್. ಇಲೈಯರಾಜ ಅವರಿಗೆ ಹಣದ ಆಮಿಷವೊಡ್ಡಲು ಯತ್ನಿಸಿದ ಆರೋಪ ಪ್ರಕರಣ ಸಂಬಂಧ ಚೆನ್ನೈ ಪೊಲೀಸರು 'ಪುದಿಯಾ ತಲೈಮುರೈ' ವಾಹಿನಿಯ ಪತ್ರಕರ್ತ ವಿಜಯನ್...

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...