Homeಮುಖಪುಟಕೇರಳ: ರಾಜೀವ್‌ ಚಂದ್ರಶೇಖರ್‌ ವಿರುದ್ಧ ಮತ್ತೊಂದು ಪ್ರಕರಣ ದಾಖಲು

ಕೇರಳ: ರಾಜೀವ್‌ ಚಂದ್ರಶೇಖರ್‌ ವಿರುದ್ಧ ಮತ್ತೊಂದು ಪ್ರಕರಣ ದಾಖಲು

- Advertisement -
- Advertisement -

ಕೊಚ್ಚಿಯ ಕನ್ವೆನ್ಷನ್ ಸೆಂಟರ್‌ನಲ್ಲಿ ಯೆಹೋವನ ಸಾಕ್ಷಿಗಳ ಸಮಾವೇಷದಲ್ಲಿ ನಡೆದ ಸ್ಫೋಟಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ ಮಾಡಿದ ಪೋಸ್ಟ್‌ಗೆ ಸಂಬಂಧಿಸಿ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ವಿರುದ್ಧ ಎರಡನೇ ಪ್ರಕರಣ ದಾಖಲಾಗಿದೆ.

ಕೆಪಿಸಿಸಿ ಡಿಜಿಟಲ್ ಮೀಡಿಯಾ ಕನ್ವೀನರ್ ಪಿ ಸರಿನ್ ನೀಡಿದ ದೂರಿನ ಆಧಾರದ ಮೇಲೆ ಎರ್ನಾಕುಲಂ ಸೆಂಟ್ರಲ್ ಪೊಲೀಸರು ಕೇಂದ್ರ ಸಚಿವರ ವಿರುದ್ಧ ಎರಡನೇ ಪ್ರಕರಣ ದಾಖಲಿಸಿದ್ದಾರೆ.

ಐಪಿಸಿ 153 ಮತ್ತು 153 ಎ ಮತ್ತು ಸೆಕ್ಷನ್ 120 (ಒ) ಅಡಿಯಲ್ಲಿ ರಾಜೀವ್ ಚಂದ್ರಶೇಖರ್‌ ವಿರುದ್ಧ ಎರಡು ಪ್ರಕರಣವನ್ನು ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಸಚಿವ ರಾಜೀವ್ ಚಂದ್ರಶೇಖರ್ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವ ಪೋಸ್ಟ್‌ನ್ನು ಮಾಡಿದ ಆರೋಪದ ಮೇಲೆ ಎರಡು ದಿನಗಳ ಹಿಂದೆ ಅವರ ವಿರುದ್ಧ ಪ್ರಕರಣ ದಾಖಲಾಗಿದೆ.

ರಾಜೀವ್‌ ಚಂದ್ರಶೇಖರ್ ಮತ್ತು ಬಿಜೆಪಿ ಪ್ರಕರಣ ದಾಖಲಿಸಿರುವ ಬಗ್ಗೆ ಟೀಕಿಸಿದೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಹಮಾಸ್ ಸಂಘಟನೆಯನ್ನು ಓಲೈಸುತ್ತಿದ್ದಾರೆ ಎಂಬುದನ್ನು ತೋರಿಸಿಕೊಟ್ಟ ಕಾರಣಕ್ಕೆ ಈ ಪ್ರಕರಣ ದಾಖಲಿಸಲಾಗಿದೆ ಎಂದು ರಾಜೀವ್  ಹೇಳಿದ್ದಾರೆ.

ಈ ಮೊದಲು ಕೇರಳ ಪೊಲೀಸರು ಯೆಹೋವನ ಸಾಕ್ಷಿಗಳ ಸಮಾವೇಷದಲ್ಲಿನ ಸ್ಪೋಟದ ಬಗ್ಗೆ ಪೋಸ್ಟ್‌ ಮಾಡಿದ್ದ ರಾಜೀವ್‌ ಚಂದ್ರಶೇಖರ್ ವಿರುದ್ಧ ಪ್ರಕರಣ ದಾಖಲಿಸಿದ್ದರು. ಇದೀಗ ಮತ್ತೊಂದು ಪ್ರಕರಣ ದಾಖಲಾಗಿದೆ.

ರಾಜೀವ್ ಚಂದ್ರಶೇಖರ್ ಪೋಸ್ಟ್‌ನಲ್ಲಿ ಏನಿದೆ?

ಭ್ರಷ್ಟಾಚಾರದ ಆರೋಪದ ಮೂಲಕ ಅಪಖ್ಯಾತಿ ಪಡೆದ ಸಿಎಂ ಪಿಣರಾಯಿ ವಿಜಯನ್‌  ನಾಚಿಕೆಯಿಲ್ಲದೆ ತುಷ್ಟೀಕರಣ ರಾಜಕಾರಣ ಮಾಡುತ್ತಿದ್ದಾರೆ. ದೆಹಲಿಯಲ್ಲಿ ಕುಳಿತು ಇಸ್ರೇಲ್ ವಿರುದ್ಧ ಪ್ರತಿಭಟನೆ ನಡೆಸುತ್ತಿರುವಾಗ ಕೇರಳದಲ್ಲಿ ಜಿಹಾದ್‌ಗಾಗಿ ಹಮಾಸ್‌ನ ಮುಕ್ತ ಕರೆಗಳು ಅಮಾಯಕ ಕ್ರಿಶ್ಚಿಯನ್ನರ ಮೇಲೆ ದಾಳಿ ಮತ್ತು ಬಾಂಬ್ ಸ್ಫೋಟಗಳಿಗೆ ಕಾರಣವಾಗುತ್ತಿವೆ ಎಂದು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದರು.

ರಾಜ್ಯದಲ್ಲಿ ದ್ವೇಷ ಮತ್ತು ಜಿಹಾದ್‌ನ್ನು ಮುಕ್ತವಾಗಿ ಬೋಧಿಸಲು INDIA ಮೈತ್ರಿಕೂಟದ ಎರಡು ರಾಜಕೀಯ ಪಕ್ಷಗಳು ಭಯೋತ್ಪಾದಕ ಸಂಘಟನೆ ಹಮಾಸ್‌ನ ಮುಖ್ಯಸ್ಥರಿಗೆ ಅವಕಾಶ ನೀಡಿರುವುದು ಮಾತ್ರ ಕಷ್ಟ ಎಂದು ಹೇಳಿದ್ದರು.

ಚಂದ್ರಶೇಖರ್‌ಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಪಿಣರಾಯ್ ವಿಜಯನ್‌, ಸಚಿವರ ಹೇಳಿಕೆ ಕೋಮುವಾದದಿಂದ ಕೂಡಿದೆ. ವಿಷವುಳ್ಳವರು ವಿಷವನ್ನು ಉಗುಳುತ್ತಲೇ ಇರುತ್ತಾರೆ. ಜವಾಬ್ದಾರಿಯುತ ಸಚಿವರಾಗಿ ಅವರು ಘಟನೆಯ ಬಗ್ಗೆ ತನಿಖೆ ನಡೆಸುತ್ತಿರುವ ತನಿಖಾ ಸಂಸ್ಥೆಗಳಿಗೆ ಕನಿಷ್ಠ ಗೌರವವನ್ನು ತೋರಿಸಬೇಕಾಗಿತ್ತು. ನಿರ್ದಿಷ್ಟ ವರ್ಗವನ್ನು ಗುರಿಯಾಗಿಸಿಕೊಂಡು ತನಿಖೆಯ ಆರಂಭಿಕ ದಿನಗಳಲ್ಲಿ ಸಾರ್ವಜನಿಕ ಹೇಳಿಕೆಗಳನ್ನು ನೀಡಲು ಪ್ರಾರಂಭಿಸಿದ್ದಾರೆ ಎಂದು ಹೇಳಿದ್ದರು.

ಇದನ್ನು ಓದಿ: ಅಪರೂಪದ ಕಾಯಿಲೆಯಿಂದ ಬಳಲುತ್ತಿರುವ ಮಗು: ಚುಚ್ಚು ಮದ್ದಿಗೆ ತೆರಿಗೆ ವಿನಾಯಿತಿ ನೀಡುವಂತೆ ಪ್ರಧಾನಿಗೆ ಸಿಎಂ ಪತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...