Homeಮುಖಪುಟಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

- Advertisement -
- Advertisement -

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಶುಕ್ರವಾರ (ಜು.10) ಪಕ್ಷದ ಇತರ 12 ಬ್ಯಾಂಕ್ ಖಾತೆಗಳನ್ನು ಫ್ರೀಝ್ ಮಾಡಿದ್ದಾರೆ ಎಂದು ವರದಿಯಾಗಿದೆ.

Indianexpress.com ವರದಿಯ ಪ್ರಕಾರ, ಹೊಸದಾಗಿ ಫ್ರೀಝ್ ಮಾಡಲಾದ 12 ಖಾತೆಗಳು ದೇಶದ ಪ್ರಮುಖ ಸಾರ್ವಜನಿಕ ವಲಯದ ಮತ್ತು ಖಾಸಗಿ ಬ್ಯಾಂಕ್‌ಗಳಲ್ಲಿ ಹರಡಿಕೊಂಡಿವೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಟಿಎಂಸಿ ಪಕ್ಷಕ್ಕೆ ಸೇರಿದ ಒಟ್ಟು 15 ಬ್ಯಾಂಕ್ ಖಾತೆಗಳನ್ನು ಇದುವರೆಗೆ ಮುಟ್ಟುಗೋಲು ಹಾಕಿಕೊಳ್ಳಲಾಗಿದ್ದು, ಇವುಗಳಲ್ಲಿ ಸುಮಾರು 1,000 ಕೋಟಿ ರೂಪಾಯಿಗಳಷ್ಟು ಠೇವಣಿ ಇರುವುದು ಪತ್ತೆಯಾಗಿದೆ. ಪೊಲೀಸರು ಈ ಖಾತೆಗಳ ಮಾಲೀಕರ ವಿವರಗಳನ್ನು ಹಾಗೂ ಇವುಗಳಲ್ಲಿ ನಡೆದಿರುವ ಆರ್ಥಿಕ ವಹಿವಾಟುಗಳ ಸಂಪೂರ್ಣ ದಾಖಲೆಗಳನ್ನು ಒದಗಿಸುವಂತೆ ಕೇಳಿದ್ದಾರೆ.

ಕಲ್ಕತ್ತಾ ಹೈಕೋರ್ಟ್ ಟಿಎಂಸಿ ಪಕ್ಷಕ್ಕೆ ತನ್ನ ಮೂರು ಎಚ್‌ಡಿಎಫ್‌ಸಿ ಬ್ಯಾಂಕ್ ಖಾತೆಗಳಲ್ಲಿನ ಹಣವನ್ನು ಭಾಗಶಃ ಬಳಸಲು ಅನುಮತಿ ನೀಡಿದ ಮತ್ತು ನಿವೃತ್ತ ನ್ಯಾಯಾಧೀಶ ಜಸ್ಟಿಸ್ ಸುಬ್ರತಾ ತಾಲೂಕ್ದಾರ್ ಅವರನ್ನು ಸೆಪ್ಟೆಂಬರ್ 30 ರವರೆಗೆ ವಿಶೇಷ ಅಧಿಕಾರಿಯನ್ನಾಗಿ ನೇಮಿಸಿದ ಮರುದಿನವೇ ಈ ಬೆಳವಣಿಗೆ ನಡೆದಿದೆ.

ಪೊಲೀಸರು ತಮ್ಮ ಪಕ್ಷದ ಮೂರು ಬ್ಯಾಂಕ್ ಖಾತೆಗಳನ್ನು ಫ್ರೀಝ್ ಮಾಡಿದ ನಂತರ, ಮಮತಾ ಬ್ಯಾನರ್ಜಿ ನೇತೃತ್ವದ ಬಣವು ತಕ್ಷಣದ ಮಧ್ಯಪ್ರವೇಶವನ್ನು ಕೋರಿ ಹೈಕೋರ್ಟ್ ಮೆಟ್ಟಿಲೇರಿತ್ತು.

ವಿಧಾನಸಭಾ ಚುನಾವಣೆಯಲ್ಲಿ ಪಕ್ಷದ ಸೋಲಿನ ನಂತರ, ಟಿಎಂಸಿ ಪಕ್ಷದ ಬಂಡಾಯ ಶಾಸಕರು ಮತ್ತು ನಾಯಕರ ಗುಂಪು ಪಕ್ಷದೊಳಗೆ “ಗಂಭೀರ ವಿವಾದ” ಇರುವುದನ್ನು ಉಲ್ಲೇಖಿಸಿ, ಪಕ್ಷದ ಬ್ಯಾಂಕ್ ಖಾತೆಗಳನ್ನು ಫ್ರೀಝ್ ಮಾಡುವಂತೆ ಬ್ಯಾಂಕ್‌ಗಳಿಗೆ ಕೇಳಿಕೊಂಡಿದ್ದರು.

ಬಂಡಾಯಗಾರರು ಹಣದ ಮೂಲದ ಬಗ್ಗೆ ತನಿಖೆ ನಡೆಸುವಂತೆ ಕೋರಿ ಬಿಧಾನಗರ ಪೊಲೀಸರ ಸೈಬರ್ ಕ್ರೈಂ ವಿಭಾಗಕ್ಕೂ ದೂರು ನೀಡಿದ್ದರು. ಇದಾಗಿ ಒಂದು ದಿನದ ನಂತರ, ಪೊಲೀಸರು ಎಫ್‌ಐಆರ್ ದಾಖಲಿಸಿ ತನಿಖೆ ಆರಂಭಿಸಿದ್ದರು.

ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆಯಡಿ (ಪಿಎಂಎಲ್‌ಎ) ಜಾರಿ ನಿರ್ದೇಶನಾಲಯವು (ಇಡಿ) ಸಹ ಪಕ್ಷದ ಮೂರು ಖಾತೆಗಳನ್ನು ಮುಟ್ಟುಗೋಲು ಹಾಕಿಕೊಂಡಿರುವುದರಿಂದ, ಹೈಕೋರ್ಟ್ ಅನುಮತಿ ನೀಡಿದರೂ ಟಿಎಂಸಿ ಪಕ್ಷಕ್ಕೆ 440 ಕೋಟಿ ರೂಪಾಯಿ ಹಣವನ್ನು ಇದುವರೆಗೆ ಬಳಸಲು ಸಾಧ್ಯವಾಗಿಲ್ಲ.

ಈ ಸಂಬಂಧ ಹಿರಿಯ ನ್ಯಾಯವಾದಿ ಕಿಶೋರ್ ದತ್ತಾ ಅವರು ಹೈಕೋರ್ಟ್‌ನ ನ್ಯಾಯಮೂರ್ತಿ ಕೃಷ್ಣ ರಾವ್ ಅವರ ಪೀಠದ ಮುಂದೆ ತುರ್ತು ವಿಚಾರಣೆಗೆ ಕೋರಿದ್ದು, ಹೈಕೋರ್ಟ್‌ನ ಇನ್ನೊಬ್ಬರು ನ್ಯಾಯಮೂರ್ತಿ ಸೌಗತ ಭಟ್ಟಾಚಾರ್ಯ ಅವರು ಈಗಾಲೇ ನೀಡಿರುವ ಆದೇಶವು ಪೊಲೀಸ್ ಕ್ರಮಕ್ಕೆ ಸಂಬಂಧಿಸಿದ್ದಾಗಿದ್ದರೆ, ಈ ಹೊಸ ಅರ್ಜಿಯು ಪಿಎಂಎಲ್‌ಎ ಅಡಿಯಲ್ಲಿ ಇಡಿ ಕೈಗೊಂಡಿರುವ ಕ್ರಮವನ್ನು ಪ್ರಶ್ನಿಸುತ್ತದೆ ಎಂದು ತಿಳಿಸಿದ್ದಾರೆ. ಈ ಅರ್ಜಿಯ ಮುಂದಿನ ವಿಚಾರಣೆಯು ಸೋಮವಾರ ನಡೆಯಲಿದೆ.

ಖಾಸಗಿ ವಿಮಾನಯಾನ ಸಂಸ್ಥೆಯೊಂದರ ಒಳಗೊಳ್ಳುವಿಕೆ ಹಾಗೂ ಎಂಬ್ರೇಯರ್ ಬಿಸಿನೆಸ್ ಜೆಟ್ ಮತ್ತು ಅಗಸ್ಟಾ ಹೆಲಿಕಾಪ್ಟರ್ ಖರೀದಿಗೆ ಸಂಬಂಧಿಸಿದ ಸುಮಾರು 160 ಕೋಟಿ ರೂಪಾಯಿಗಳ ಹಣ ಅಕ್ರಮ ವರ್ಗಾವಣೆ ಪ್ರಕರಣದ ತನಿಖೆಯ ಭಾಗವಾಗಿ ಇಡಿ ಟಿಎಂಸಿ ಮೂರು ಖಾತೆಗಳನ್ನು ಮುಟ್ಟುಗೋಲು ಹಾಕಿಕೊಂಡಿದೆ ಎಂದು ವರದಿಯಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...