Homeಕರ್ನಾಟಕಮತ್ತೊಬ್ಬ ಗುತ್ತಿಗೆದಾರ ಸಾವಿಗೆ ಶರಣು: ಸರ್ಕಾರದ ವಿರುದ್ಧ ಕಾಂಗ್ರೆಸ್‌ ಟೀಕಾಪ್ರಹಾರ

ಮತ್ತೊಬ್ಬ ಗುತ್ತಿಗೆದಾರ ಸಾವಿಗೆ ಶರಣು: ಸರ್ಕಾರದ ವಿರುದ್ಧ ಕಾಂಗ್ರೆಸ್‌ ಟೀಕಾಪ್ರಹಾರ

- Advertisement -
- Advertisement -

ತುಮಕೂರು: ನಗರದ ಸಪ್ತಗಿರಿ ಬಡಾವಣೆಯ ನಿವಾಸಿ, ಗುತ್ತಿಗೆದಾರ ಟಿ.ಎನ್‌. ಪ್ರಸಾದ್‌ ತಾಲ್ಲೂಕಿನ ದೇವರಾಯನದುರ್ಗದ ಅತಿಥಿ ಗೃಹದಲ್ಲಿ ನೇಣು ಬಿಗಿದುಕೊಂಡು ಶುಕ್ರವಾರ ಆತ್ಮಹತ್ಯೆ ಮಾಡಿಕೊಂಡಿದ್ದು, ಘಟನೆಗೆ ಸರ್ಕಾರವೇ ಕಾರಣವೆಂದು ಪ್ರತಿಪಕ್ಷ ಕಾಂಗ್ರೆಸ್ ದೂರಿದೆ.

ಮೃತ ಗುತ್ತಿಗೆದಾರನನ್ನು ತುಮಕೂರು ನಗರದ ಸಪ್ತಗಿರಿ ಬಡಾವಣೆ ಮೂಲದ ಟಿ.ಎನ್. ಪ್ರಸಾದ್ (50) ಎಂದು ಗುರುತಿಸಲಾಗಿದೆ. ಪಿಡಬ್ಲ್ಯೂಡಿ ಇಲಾಖೆಯ ಸಿವಿಲ್ ಕಂಟ್ರಾಕ್ಟರ್ ಆಗಿ ಕೆಲಸ ನಿರ್ವಹಿಸುತ್ತಿದ್ದ ಟಿ.ಎನ್. ಪ್ರಸಾದ್, ಸಾಲ ಬಾಧೆ ತಾಳಲಾರದೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.

ಘಟನೆ ತಿಳಿದ ತಕ್ಷಣ ಸ್ಥಳೀಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ತನಿಖೆ ಕೈಗೊಂಡಿದ್ದು ಮೃತ ದೇಹವನ್ನು ತುಮಕೂರು ಜಿಲ್ಲಾಸ್ಪತ್ರೆಗೆ ಕಳುಹಿಸಿದ್ದರು.

ಘಟನೆ ಕುರಿತು ಮಾತನಾಡಿರುವ ತುಮಕೂರು ಜಿಲ್ಲಾ ಗುತ್ತಿಗೆದಾರರ ಸಂಘದ ಅಧ್ಯಕ್ಷ ಬಲರಾಮ್, “ಮೃತ ಟಿ.ಎನ್.ಪುಸಾದ್ ಸಾಲದ ಸುಳಿಯಲ್ಲಿ ಸಿಲುಕಿದ್ದರು, ಸಾಲದ ಒತ್ತಡ ಜಾಸ್ತಿಯಾಗಿದ್ದು, ಕೆಲಸ ನಿರ್ವಹಿಸಿದ್ದ ಬಿಲ್ ಗಳು ಸಹ ಪಾವತಿ ಆಗಿರಲಿಲ್ಲ. ಅಲ್ಲದೆ, ಇತ್ತೀಚೆಗೆ ತಾನು ವಾಸವಾಗಿದ್ದ ಮನೆಯನ್ನು ಸಹ ಮಾರಾಟ ಮಾಡಿದ್ದಾರೆ. ರಾಜ್ಯದ ಭ್ರಷ್ಟ ಆಡಳಿತ ಹಾಗೂ ರಾಜಕಾರಣಿಗಳ ವ್ಯವಸ್ಥೆ ಈ ಸಾವಿಗೆ ಕಾರಣ” ಎಂದು ದೂರಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಕಾಂಗ್ರೆಸ್, “ಭ್ರಷ್ಟ ಬಿಜೆಪಿಯ 40% ಕಮಿಷನ್ ಲೂಟಿಗೆ ಮತ್ತೊಂದು ಬಲಿಯಾಗಿದೆ. ಸಾಲ ಮಾಡಿ ಕಾಮಗಾರಿಗೆ ಹಣ ಹೂಡಿದ್ದ ಗುತ್ತಿಗೆದಾರ ಪ್ರಸಾದ್ ಭ್ರಷ್ಟ ಬಿಜೆಪಿ ಸರ್ಕಾರದ ಕಮಿಷನ್ ಕಿರುಕುಳಕ್ಕೆ ಬಲಿಯಾಗಿದ್ದಾರೆ. ಅಮಿತ್ ಷಾ ಅವರೇ, ರಾಜ್ಯದ ಗುತ್ತಿಗೆದಾರರೊಂದಿಗೆ ಸಮಾಲೋಚನೆ ನಡೆಸುವ, 40% ಕಮಿಷನ್ ವಿರುದ್ದ ಕ್ರಮ ಕೈಗೊಳ್ಳುವ ದಮ್ಮು, ತಾಕತ್ತು ಇದೆಯೇ?” ಎಂದು ಪ್ರಶ್ನಿಸಿದೆ.

“ಬಿಜೆಪಿ ಸರ್ಕಾರದಲ್ಲಿ ಆರೋಪಿಗಳಿಗೆ ಶ್ರೀರಕ್ಷೆ, ಆರೋಪಿಸಿದವರಿಗೆ ಶಿಕ್ಷೆ! 40% ಕಮಿಷನ್ ಕಿರುಕುಳ ತಾಳಲಾರದೆ ಬಹಿರಂಗ ವೇದಿಕೆಗೆ ಬಂದು ಆರೋಪ ಮಾಡಿದ ಗುತ್ತಿಗೆದಾರರನ್ನು ಬಂಧಿಸಿದ ಸರ್ಕಾರ ಆರೋಪದ ಬಗ್ಗೆ ಸಣ್ಣ ತನಿಖೆಗೂ ವಹಿಸದ ಸಿಎಂ ಬೊಮ್ಮಾಯಿಯವರೇ, ಗುತ್ತಿಗೆದಾರರ ಸಾವುಗಳಿಗೆ ನೇರ ಹೊಣೆ. ಜೊತೆಗೆ ಬೇಜವಾಬ್ದಾರಿ ಪ್ರಧಾನಿ ಕೂಡ” ಎಂದು ಆಕ್ರೋಶ ವ್ಯಕ್ತಪಡಿಸಿದೆ.

ಟಿ.ಎನ್. ಪ್ರಸಾದ್ ಆತ್ಮಹತ್ಯೆಗೆ ಸಂಬಂಧಿಸಿದಂತೆ ‘ಪ್ರಜಾವಾಣಿ’ ಮಾಡಿರುವ ವರದಿಯಲ್ಲಿ, “ಡೆತ್ ನೋಟ್ ಸಿಕ್ಕಿದೆ. ‘ನನ್ನ ಸಾವಿಗೆ ಯಾರೂ ಕಾರಣರಲ್ಲ’ ಎಂದು ಅದರಲ್ಲಿ ಉಲ್ಲೇಖಿಸಿರುವುದಾಗಿ ತಿಳಿದುಬಂದಿದೆ. ಕ್ಯಾತ್ಸಂದ್ರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ” ಎಂದು ತಿಳಿಸಲಾಗಿದೆ.

“ಗುತ್ತಿಗೆ ನಿರ್ವಹಿಸಿದ್ದಕ್ಕೆ ಸರ್ಕಾರದಿಂದ ಬಾಕಿ ಹಣ ಬರಬೇಕಿತ್ತು ಎಂಬ ಬಗ್ಗೆ ಕುಟುಂಬದವರು ದೂರು ನೀಡಿಲ್ಲ. ಅಂತಹ ಆರೋಪ ಕೇಳಿಬಂದಿಲ್ಲ” ಎಂದು ಪೊಲೀಸ್ ವರಿಷ್ಠಾಧಿಕಾರಿ ರಾಹುಲ್‌ಕುಮಾರ್ ಶಹಪೂರವಾಡ್ ಹೇಳಿದ್ದಾರೆ.

ಈ ಕುರಿತು ವರದಿ ಮಾಡಿರುವ ‘ವಿಜಯವಾಣಿ’ ಸುದ್ದಿಜಾಲತಾಣ, “ದೇವರಾಯನದುರ್ಗ ಪುವಾಸಿ ಮಂದಿರದ ರಿಪೇರಿ ಕಾಮಗಾರಿಯ ತುಂಡು ಗುತ್ತಿಗೆ ಪಡೆದಿದ್ದ ಕೊರಟಗೆರೆ ತಾಲೂಕು ತೊಗರಿಘಟ್ಟ ಮೂಲಕ ಟಿ.ಎನ್.ಪುಸಾದ್‌ ಕಳೆದ ಜುಲೈ ತಿಂಗಳಿನಲ್ಲಿಯೇ ಕಾಮಗಾರಿ ಮುಗಿಸಿ ಬಿಲ್‌ಗಾಗಿ ಲೋಕೋಪಯೋಗಿ ಇಲಾಖೆಗೆ ನಿರಂತರವಾಗಿ ಅಲೆದಾಡುತ್ತಿದ್ದರು ಎನ್ನಲಾಗಿದೆ. ಅರಣ್ಯ ಪ್ರದೇಶದಲ್ಲಿ ಸಾಕಷ್ಟು ಪರದಾಡಿಕೊಂಡು ಕಾಮಗಾರಿ ಮುಗಿಸಿದ್ದರೂ ಬಿಲ್ ಮಾಡಿಕೊಡಲು ಇಂಜಿನಿಯರ್ ಹಣಕ್ಕೆ ಬೇಡಿಕೆ ಇಟ್ಟಿದ್ದರು ಎಂದು ಗುತ್ತಿಗೆದಾರರ ಸಂಘ ಆರೋಪಿಸಿದ್ದು, ಈ ಬಗ್ಗೆ ತನಿಖೆಗೂ ಆಗ್ರಹಿಸಿದೆ. ಆತ್ಮಹತ್ಯೆ ಮಾಡಿಕೊಂಡ ನಂತರ ಹಳೆಯ ದಿನಾಂಕಕ್ಕೆ ಬಿಲ್‌ ನೀಡಲಾಗಿರುವ ದಾಖಲೆಗಳನ್ನು ಸೃಷ್ಟಿಸಲಾಗಿದೆ” ಎಂದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...