Homeಕರ್ನಾಟಕಮತ್ತೊಬ್ಬ ಗುತ್ತಿಗೆದಾರ ಸಾವಿಗೆ ಶರಣು: ಸರ್ಕಾರದ ವಿರುದ್ಧ ಕಾಂಗ್ರೆಸ್‌ ಟೀಕಾಪ್ರಹಾರ

ಮತ್ತೊಬ್ಬ ಗುತ್ತಿಗೆದಾರ ಸಾವಿಗೆ ಶರಣು: ಸರ್ಕಾರದ ವಿರುದ್ಧ ಕಾಂಗ್ರೆಸ್‌ ಟೀಕಾಪ್ರಹಾರ

- Advertisement -
- Advertisement -

ತುಮಕೂರು: ನಗರದ ಸಪ್ತಗಿರಿ ಬಡಾವಣೆಯ ನಿವಾಸಿ, ಗುತ್ತಿಗೆದಾರ ಟಿ.ಎನ್‌. ಪ್ರಸಾದ್‌ ತಾಲ್ಲೂಕಿನ ದೇವರಾಯನದುರ್ಗದ ಅತಿಥಿ ಗೃಹದಲ್ಲಿ ನೇಣು ಬಿಗಿದುಕೊಂಡು ಶುಕ್ರವಾರ ಆತ್ಮಹತ್ಯೆ ಮಾಡಿಕೊಂಡಿದ್ದು, ಘಟನೆಗೆ ಸರ್ಕಾರವೇ ಕಾರಣವೆಂದು ಪ್ರತಿಪಕ್ಷ ಕಾಂಗ್ರೆಸ್ ದೂರಿದೆ.

ಮೃತ ಗುತ್ತಿಗೆದಾರನನ್ನು ತುಮಕೂರು ನಗರದ ಸಪ್ತಗಿರಿ ಬಡಾವಣೆ ಮೂಲದ ಟಿ.ಎನ್. ಪ್ರಸಾದ್ (50) ಎಂದು ಗುರುತಿಸಲಾಗಿದೆ. ಪಿಡಬ್ಲ್ಯೂಡಿ ಇಲಾಖೆಯ ಸಿವಿಲ್ ಕಂಟ್ರಾಕ್ಟರ್ ಆಗಿ ಕೆಲಸ ನಿರ್ವಹಿಸುತ್ತಿದ್ದ ಟಿ.ಎನ್. ಪ್ರಸಾದ್, ಸಾಲ ಬಾಧೆ ತಾಳಲಾರದೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.

ಘಟನೆ ತಿಳಿದ ತಕ್ಷಣ ಸ್ಥಳೀಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ತನಿಖೆ ಕೈಗೊಂಡಿದ್ದು ಮೃತ ದೇಹವನ್ನು ತುಮಕೂರು ಜಿಲ್ಲಾಸ್ಪತ್ರೆಗೆ ಕಳುಹಿಸಿದ್ದರು.

ಘಟನೆ ಕುರಿತು ಮಾತನಾಡಿರುವ ತುಮಕೂರು ಜಿಲ್ಲಾ ಗುತ್ತಿಗೆದಾರರ ಸಂಘದ ಅಧ್ಯಕ್ಷ ಬಲರಾಮ್, “ಮೃತ ಟಿ.ಎನ್.ಪುಸಾದ್ ಸಾಲದ ಸುಳಿಯಲ್ಲಿ ಸಿಲುಕಿದ್ದರು, ಸಾಲದ ಒತ್ತಡ ಜಾಸ್ತಿಯಾಗಿದ್ದು, ಕೆಲಸ ನಿರ್ವಹಿಸಿದ್ದ ಬಿಲ್ ಗಳು ಸಹ ಪಾವತಿ ಆಗಿರಲಿಲ್ಲ. ಅಲ್ಲದೆ, ಇತ್ತೀಚೆಗೆ ತಾನು ವಾಸವಾಗಿದ್ದ ಮನೆಯನ್ನು ಸಹ ಮಾರಾಟ ಮಾಡಿದ್ದಾರೆ. ರಾಜ್ಯದ ಭ್ರಷ್ಟ ಆಡಳಿತ ಹಾಗೂ ರಾಜಕಾರಣಿಗಳ ವ್ಯವಸ್ಥೆ ಈ ಸಾವಿಗೆ ಕಾರಣ” ಎಂದು ದೂರಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಕಾಂಗ್ರೆಸ್, “ಭ್ರಷ್ಟ ಬಿಜೆಪಿಯ 40% ಕಮಿಷನ್ ಲೂಟಿಗೆ ಮತ್ತೊಂದು ಬಲಿಯಾಗಿದೆ. ಸಾಲ ಮಾಡಿ ಕಾಮಗಾರಿಗೆ ಹಣ ಹೂಡಿದ್ದ ಗುತ್ತಿಗೆದಾರ ಪ್ರಸಾದ್ ಭ್ರಷ್ಟ ಬಿಜೆಪಿ ಸರ್ಕಾರದ ಕಮಿಷನ್ ಕಿರುಕುಳಕ್ಕೆ ಬಲಿಯಾಗಿದ್ದಾರೆ. ಅಮಿತ್ ಷಾ ಅವರೇ, ರಾಜ್ಯದ ಗುತ್ತಿಗೆದಾರರೊಂದಿಗೆ ಸಮಾಲೋಚನೆ ನಡೆಸುವ, 40% ಕಮಿಷನ್ ವಿರುದ್ದ ಕ್ರಮ ಕೈಗೊಳ್ಳುವ ದಮ್ಮು, ತಾಕತ್ತು ಇದೆಯೇ?” ಎಂದು ಪ್ರಶ್ನಿಸಿದೆ.

“ಬಿಜೆಪಿ ಸರ್ಕಾರದಲ್ಲಿ ಆರೋಪಿಗಳಿಗೆ ಶ್ರೀರಕ್ಷೆ, ಆರೋಪಿಸಿದವರಿಗೆ ಶಿಕ್ಷೆ! 40% ಕಮಿಷನ್ ಕಿರುಕುಳ ತಾಳಲಾರದೆ ಬಹಿರಂಗ ವೇದಿಕೆಗೆ ಬಂದು ಆರೋಪ ಮಾಡಿದ ಗುತ್ತಿಗೆದಾರರನ್ನು ಬಂಧಿಸಿದ ಸರ್ಕಾರ ಆರೋಪದ ಬಗ್ಗೆ ಸಣ್ಣ ತನಿಖೆಗೂ ವಹಿಸದ ಸಿಎಂ ಬೊಮ್ಮಾಯಿಯವರೇ, ಗುತ್ತಿಗೆದಾರರ ಸಾವುಗಳಿಗೆ ನೇರ ಹೊಣೆ. ಜೊತೆಗೆ ಬೇಜವಾಬ್ದಾರಿ ಪ್ರಧಾನಿ ಕೂಡ” ಎಂದು ಆಕ್ರೋಶ ವ್ಯಕ್ತಪಡಿಸಿದೆ.

ಟಿ.ಎನ್. ಪ್ರಸಾದ್ ಆತ್ಮಹತ್ಯೆಗೆ ಸಂಬಂಧಿಸಿದಂತೆ ‘ಪ್ರಜಾವಾಣಿ’ ಮಾಡಿರುವ ವರದಿಯಲ್ಲಿ, “ಡೆತ್ ನೋಟ್ ಸಿಕ್ಕಿದೆ. ‘ನನ್ನ ಸಾವಿಗೆ ಯಾರೂ ಕಾರಣರಲ್ಲ’ ಎಂದು ಅದರಲ್ಲಿ ಉಲ್ಲೇಖಿಸಿರುವುದಾಗಿ ತಿಳಿದುಬಂದಿದೆ. ಕ್ಯಾತ್ಸಂದ್ರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ” ಎಂದು ತಿಳಿಸಲಾಗಿದೆ.

“ಗುತ್ತಿಗೆ ನಿರ್ವಹಿಸಿದ್ದಕ್ಕೆ ಸರ್ಕಾರದಿಂದ ಬಾಕಿ ಹಣ ಬರಬೇಕಿತ್ತು ಎಂಬ ಬಗ್ಗೆ ಕುಟುಂಬದವರು ದೂರು ನೀಡಿಲ್ಲ. ಅಂತಹ ಆರೋಪ ಕೇಳಿಬಂದಿಲ್ಲ” ಎಂದು ಪೊಲೀಸ್ ವರಿಷ್ಠಾಧಿಕಾರಿ ರಾಹುಲ್‌ಕುಮಾರ್ ಶಹಪೂರವಾಡ್ ಹೇಳಿದ್ದಾರೆ.

ಈ ಕುರಿತು ವರದಿ ಮಾಡಿರುವ ‘ವಿಜಯವಾಣಿ’ ಸುದ್ದಿಜಾಲತಾಣ, “ದೇವರಾಯನದುರ್ಗ ಪುವಾಸಿ ಮಂದಿರದ ರಿಪೇರಿ ಕಾಮಗಾರಿಯ ತುಂಡು ಗುತ್ತಿಗೆ ಪಡೆದಿದ್ದ ಕೊರಟಗೆರೆ ತಾಲೂಕು ತೊಗರಿಘಟ್ಟ ಮೂಲಕ ಟಿ.ಎನ್.ಪುಸಾದ್‌ ಕಳೆದ ಜುಲೈ ತಿಂಗಳಿನಲ್ಲಿಯೇ ಕಾಮಗಾರಿ ಮುಗಿಸಿ ಬಿಲ್‌ಗಾಗಿ ಲೋಕೋಪಯೋಗಿ ಇಲಾಖೆಗೆ ನಿರಂತರವಾಗಿ ಅಲೆದಾಡುತ್ತಿದ್ದರು ಎನ್ನಲಾಗಿದೆ. ಅರಣ್ಯ ಪ್ರದೇಶದಲ್ಲಿ ಸಾಕಷ್ಟು ಪರದಾಡಿಕೊಂಡು ಕಾಮಗಾರಿ ಮುಗಿಸಿದ್ದರೂ ಬಿಲ್ ಮಾಡಿಕೊಡಲು ಇಂಜಿನಿಯರ್ ಹಣಕ್ಕೆ ಬೇಡಿಕೆ ಇಟ್ಟಿದ್ದರು ಎಂದು ಗುತ್ತಿಗೆದಾರರ ಸಂಘ ಆರೋಪಿಸಿದ್ದು, ಈ ಬಗ್ಗೆ ತನಿಖೆಗೂ ಆಗ್ರಹಿಸಿದೆ. ಆತ್ಮಹತ್ಯೆ ಮಾಡಿಕೊಂಡ ನಂತರ ಹಳೆಯ ದಿನಾಂಕಕ್ಕೆ ಬಿಲ್‌ ನೀಡಲಾಗಿರುವ ದಾಖಲೆಗಳನ್ನು ಸೃಷ್ಟಿಸಲಾಗಿದೆ” ಎಂದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...