Homeಕರ್ನಾಟಕಮತ್ತೊಬ್ಬ ಗುತ್ತಿಗೆದಾರ ಸಾವಿಗೆ ಶರಣು: ಸರ್ಕಾರದ ವಿರುದ್ಧ ಕಾಂಗ್ರೆಸ್‌ ಟೀಕಾಪ್ರಹಾರ

ಮತ್ತೊಬ್ಬ ಗುತ್ತಿಗೆದಾರ ಸಾವಿಗೆ ಶರಣು: ಸರ್ಕಾರದ ವಿರುದ್ಧ ಕಾಂಗ್ರೆಸ್‌ ಟೀಕಾಪ್ರಹಾರ

- Advertisement -
- Advertisement -

ತುಮಕೂರು: ನಗರದ ಸಪ್ತಗಿರಿ ಬಡಾವಣೆಯ ನಿವಾಸಿ, ಗುತ್ತಿಗೆದಾರ ಟಿ.ಎನ್‌. ಪ್ರಸಾದ್‌ ತಾಲ್ಲೂಕಿನ ದೇವರಾಯನದುರ್ಗದ ಅತಿಥಿ ಗೃಹದಲ್ಲಿ ನೇಣು ಬಿಗಿದುಕೊಂಡು ಶುಕ್ರವಾರ ಆತ್ಮಹತ್ಯೆ ಮಾಡಿಕೊಂಡಿದ್ದು, ಘಟನೆಗೆ ಸರ್ಕಾರವೇ ಕಾರಣವೆಂದು ಪ್ರತಿಪಕ್ಷ ಕಾಂಗ್ರೆಸ್ ದೂರಿದೆ.

ಮೃತ ಗುತ್ತಿಗೆದಾರನನ್ನು ತುಮಕೂರು ನಗರದ ಸಪ್ತಗಿರಿ ಬಡಾವಣೆ ಮೂಲದ ಟಿ.ಎನ್. ಪ್ರಸಾದ್ (50) ಎಂದು ಗುರುತಿಸಲಾಗಿದೆ. ಪಿಡಬ್ಲ್ಯೂಡಿ ಇಲಾಖೆಯ ಸಿವಿಲ್ ಕಂಟ್ರಾಕ್ಟರ್ ಆಗಿ ಕೆಲಸ ನಿರ್ವಹಿಸುತ್ತಿದ್ದ ಟಿ.ಎನ್. ಪ್ರಸಾದ್, ಸಾಲ ಬಾಧೆ ತಾಳಲಾರದೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.

ಘಟನೆ ತಿಳಿದ ತಕ್ಷಣ ಸ್ಥಳೀಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ತನಿಖೆ ಕೈಗೊಂಡಿದ್ದು ಮೃತ ದೇಹವನ್ನು ತುಮಕೂರು ಜಿಲ್ಲಾಸ್ಪತ್ರೆಗೆ ಕಳುಹಿಸಿದ್ದರು.

ಘಟನೆ ಕುರಿತು ಮಾತನಾಡಿರುವ ತುಮಕೂರು ಜಿಲ್ಲಾ ಗುತ್ತಿಗೆದಾರರ ಸಂಘದ ಅಧ್ಯಕ್ಷ ಬಲರಾಮ್, “ಮೃತ ಟಿ.ಎನ್.ಪುಸಾದ್ ಸಾಲದ ಸುಳಿಯಲ್ಲಿ ಸಿಲುಕಿದ್ದರು, ಸಾಲದ ಒತ್ತಡ ಜಾಸ್ತಿಯಾಗಿದ್ದು, ಕೆಲಸ ನಿರ್ವಹಿಸಿದ್ದ ಬಿಲ್ ಗಳು ಸಹ ಪಾವತಿ ಆಗಿರಲಿಲ್ಲ. ಅಲ್ಲದೆ, ಇತ್ತೀಚೆಗೆ ತಾನು ವಾಸವಾಗಿದ್ದ ಮನೆಯನ್ನು ಸಹ ಮಾರಾಟ ಮಾಡಿದ್ದಾರೆ. ರಾಜ್ಯದ ಭ್ರಷ್ಟ ಆಡಳಿತ ಹಾಗೂ ರಾಜಕಾರಣಿಗಳ ವ್ಯವಸ್ಥೆ ಈ ಸಾವಿಗೆ ಕಾರಣ” ಎಂದು ದೂರಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಕಾಂಗ್ರೆಸ್, “ಭ್ರಷ್ಟ ಬಿಜೆಪಿಯ 40% ಕಮಿಷನ್ ಲೂಟಿಗೆ ಮತ್ತೊಂದು ಬಲಿಯಾಗಿದೆ. ಸಾಲ ಮಾಡಿ ಕಾಮಗಾರಿಗೆ ಹಣ ಹೂಡಿದ್ದ ಗುತ್ತಿಗೆದಾರ ಪ್ರಸಾದ್ ಭ್ರಷ್ಟ ಬಿಜೆಪಿ ಸರ್ಕಾರದ ಕಮಿಷನ್ ಕಿರುಕುಳಕ್ಕೆ ಬಲಿಯಾಗಿದ್ದಾರೆ. ಅಮಿತ್ ಷಾ ಅವರೇ, ರಾಜ್ಯದ ಗುತ್ತಿಗೆದಾರರೊಂದಿಗೆ ಸಮಾಲೋಚನೆ ನಡೆಸುವ, 40% ಕಮಿಷನ್ ವಿರುದ್ದ ಕ್ರಮ ಕೈಗೊಳ್ಳುವ ದಮ್ಮು, ತಾಕತ್ತು ಇದೆಯೇ?” ಎಂದು ಪ್ರಶ್ನಿಸಿದೆ.

“ಬಿಜೆಪಿ ಸರ್ಕಾರದಲ್ಲಿ ಆರೋಪಿಗಳಿಗೆ ಶ್ರೀರಕ್ಷೆ, ಆರೋಪಿಸಿದವರಿಗೆ ಶಿಕ್ಷೆ! 40% ಕಮಿಷನ್ ಕಿರುಕುಳ ತಾಳಲಾರದೆ ಬಹಿರಂಗ ವೇದಿಕೆಗೆ ಬಂದು ಆರೋಪ ಮಾಡಿದ ಗುತ್ತಿಗೆದಾರರನ್ನು ಬಂಧಿಸಿದ ಸರ್ಕಾರ ಆರೋಪದ ಬಗ್ಗೆ ಸಣ್ಣ ತನಿಖೆಗೂ ವಹಿಸದ ಸಿಎಂ ಬೊಮ್ಮಾಯಿಯವರೇ, ಗುತ್ತಿಗೆದಾರರ ಸಾವುಗಳಿಗೆ ನೇರ ಹೊಣೆ. ಜೊತೆಗೆ ಬೇಜವಾಬ್ದಾರಿ ಪ್ರಧಾನಿ ಕೂಡ” ಎಂದು ಆಕ್ರೋಶ ವ್ಯಕ್ತಪಡಿಸಿದೆ.

ಟಿ.ಎನ್. ಪ್ರಸಾದ್ ಆತ್ಮಹತ್ಯೆಗೆ ಸಂಬಂಧಿಸಿದಂತೆ ‘ಪ್ರಜಾವಾಣಿ’ ಮಾಡಿರುವ ವರದಿಯಲ್ಲಿ, “ಡೆತ್ ನೋಟ್ ಸಿಕ್ಕಿದೆ. ‘ನನ್ನ ಸಾವಿಗೆ ಯಾರೂ ಕಾರಣರಲ್ಲ’ ಎಂದು ಅದರಲ್ಲಿ ಉಲ್ಲೇಖಿಸಿರುವುದಾಗಿ ತಿಳಿದುಬಂದಿದೆ. ಕ್ಯಾತ್ಸಂದ್ರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ” ಎಂದು ತಿಳಿಸಲಾಗಿದೆ.

“ಗುತ್ತಿಗೆ ನಿರ್ವಹಿಸಿದ್ದಕ್ಕೆ ಸರ್ಕಾರದಿಂದ ಬಾಕಿ ಹಣ ಬರಬೇಕಿತ್ತು ಎಂಬ ಬಗ್ಗೆ ಕುಟುಂಬದವರು ದೂರು ನೀಡಿಲ್ಲ. ಅಂತಹ ಆರೋಪ ಕೇಳಿಬಂದಿಲ್ಲ” ಎಂದು ಪೊಲೀಸ್ ವರಿಷ್ಠಾಧಿಕಾರಿ ರಾಹುಲ್‌ಕುಮಾರ್ ಶಹಪೂರವಾಡ್ ಹೇಳಿದ್ದಾರೆ.

ಈ ಕುರಿತು ವರದಿ ಮಾಡಿರುವ ‘ವಿಜಯವಾಣಿ’ ಸುದ್ದಿಜಾಲತಾಣ, “ದೇವರಾಯನದುರ್ಗ ಪುವಾಸಿ ಮಂದಿರದ ರಿಪೇರಿ ಕಾಮಗಾರಿಯ ತುಂಡು ಗುತ್ತಿಗೆ ಪಡೆದಿದ್ದ ಕೊರಟಗೆರೆ ತಾಲೂಕು ತೊಗರಿಘಟ್ಟ ಮೂಲಕ ಟಿ.ಎನ್.ಪುಸಾದ್‌ ಕಳೆದ ಜುಲೈ ತಿಂಗಳಿನಲ್ಲಿಯೇ ಕಾಮಗಾರಿ ಮುಗಿಸಿ ಬಿಲ್‌ಗಾಗಿ ಲೋಕೋಪಯೋಗಿ ಇಲಾಖೆಗೆ ನಿರಂತರವಾಗಿ ಅಲೆದಾಡುತ್ತಿದ್ದರು ಎನ್ನಲಾಗಿದೆ. ಅರಣ್ಯ ಪ್ರದೇಶದಲ್ಲಿ ಸಾಕಷ್ಟು ಪರದಾಡಿಕೊಂಡು ಕಾಮಗಾರಿ ಮುಗಿಸಿದ್ದರೂ ಬಿಲ್ ಮಾಡಿಕೊಡಲು ಇಂಜಿನಿಯರ್ ಹಣಕ್ಕೆ ಬೇಡಿಕೆ ಇಟ್ಟಿದ್ದರು ಎಂದು ಗುತ್ತಿಗೆದಾರರ ಸಂಘ ಆರೋಪಿಸಿದ್ದು, ಈ ಬಗ್ಗೆ ತನಿಖೆಗೂ ಆಗ್ರಹಿಸಿದೆ. ಆತ್ಮಹತ್ಯೆ ಮಾಡಿಕೊಂಡ ನಂತರ ಹಳೆಯ ದಿನಾಂಕಕ್ಕೆ ಬಿಲ್‌ ನೀಡಲಾಗಿರುವ ದಾಖಲೆಗಳನ್ನು ಸೃಷ್ಟಿಸಲಾಗಿದೆ” ಎಂದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...