Homeಮುಖಪುಟಹೋರಾಟಗಾರ ಗೌತಮ್ ನವ್ಲಾಖಾ ಗೃಹಬಂಧನಕ್ಕೆ ಮತ್ತೆ ವಿಳಂಬ; ಭದ್ರತೆಯ ಕಾರಣ ನೀಡಿದ ಎನ್‌ಐಎ

ಹೋರಾಟಗಾರ ಗೌತಮ್ ನವ್ಲಾಖಾ ಗೃಹಬಂಧನಕ್ಕೆ ಮತ್ತೆ ವಿಳಂಬ; ಭದ್ರತೆಯ ಕಾರಣ ನೀಡಿದ ಎನ್‌ಐಎ

2018ರಲ್ಲಿ ನಡೆದ ಭೀಮಾ ಕೋರೆಗಾಂವ್ ಪ್ರಕರಣಕ್ಕೆ ಸಂಬಂಧಿಸಿದಂತೆ 70 ವರ್ಷದ ಗೌತಮ್‌ ನವ್ಲಾಖಾ ಆರೋಪಿಯಾಗಿದ್ದಾರೆ.

- Advertisement -
- Advertisement -

ಜೈಲಿನಲ್ಲಿರುವ ಹೋರಾಟಗಾರ ಗೌತಮ್ ನವ್ಲಾಖಾ ಅವರನ್ನು ಗೃಹಬಂಧನದಲ್ಲಿ ಇರಿಸುವ ಕುರಿತು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ತಕರಾರು ತೆಗೆದಿದೆ. ಗೌತಮ್‌ ಅವರು ಉಳಿಯಲು ಬಯಸಿದ ಸ್ಥಳದಲ್ಲಿ ಭದ್ರತಾ ಲೋಪವಿದೆ ಎಂದು ಆಕ್ಷೇಪ ಎತ್ತಿದ ಬಳಿಕ ಗೃಹಬಂಧನ ಮತ್ತೆ ವಿಳಂಬವಾಯಿತು ಎಂದು ಪಿಟಿಐ ವರದಿ ಮಾಡಿದೆ.

ಸುಪ್ರೀಂ ಕೋರ್ಟ್ ನವೆಂಬರ್ 10ರಂದು ನವ್ಲಾಖಾ ಅವರನ್ನು ಒಂದು ತಿಂಗಳ ಕಾಲ ಗೃಹಬಂಧನದಲ್ಲಿಡಲು ಅನುಮತಿ ನೀಡಿತ್ತು. ಅನಾರೋಗ್ಯ ಮತ್ತು ಜೈಲಿನಲ್ಲಿನ ಕಳಪೆ ಸೌಲಭ್ಯಗಳ ಆಧಾರದ ಮೇಲೆ ಜೈಲಿನಿಂದ ಸ್ಥಳಾಂತರಿಸುವಂತೆ ಕೋರಿ ಅವರು ಸಲ್ಲಿಸಿದ ಮನವಿಗೆ ಕೋರ್ಟ್ ಒಪ್ಪಿತ್ತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

2018ರಲ್ಲಿ ನಡೆದ ಭೀಮಾ ಕೋರೆಗಾಂವ್ ಪ್ರಕರಣಕ್ಕೆ ಸಂಬಂಧಿಸಿದಂತೆ 70 ವರ್ಷದ ಗೌತಮ್‌ ನವ್ಲಾಖಾ ಆರೋಪಿಯಾಗಿದ್ದಾರೆ. ಹಿಂಸಾಚಾರಕ್ಕೆ ಸಂಚು ರೂಪಿಸಿದ ಆರೋಪದ ಮೇಲೆ 16 ಮಂದಿಯನ್ನು ಬಂಧಿಸಲಾಗಿದೆ.

ರಾಷ್ಟ್ರೀಯ ತನಿಖಾ ಸಂಸ್ಥೆ ಎತ್ತಿರುವ ಆಕ್ಷೇಪವು ನವ್ಲಾಖಾ ಅವರನ್ನು ಜೈಲಿನಿಂದ ಸ್ಥಳಾಂತರಿಸಲು ಉಂಟಾಗಿರುವ ಎರಡನೇ ಅಡಚಣೆಯಾಗಿದೆ.

ಗೃಹಬಂಧನಕ್ಕೆ ಅನುಮತಿ ನೀಡುವಾಗ ಸುಪ್ರೀಂ ಕೋರ್ಟ್ ವಿಧಿಸಿದ ಷರತ್ತುಗಳ ಪೈಕಿ, ನವೆಂಬರ್ 14 ರೊಳಗೆ ಪರಿಹಾರದ ಪುರಾವೆಯಾಗಿ 2 ಲಕ್ಷ ರೂಪಾಯಿಗಳ ಶ್ಯೂರಿಟಿಯನ್ನು ಸಲ್ಲಿಸಬೇಕಿತ್ತು. ನವ್ಲಾಖಾ ಅವರು ದಾಖಲೆಗಳನ್ನು ನೀಡಲು ಸಾಧ್ಯವಾಗದ ಕಾರಣ ಆರಂಭದಲ್ಲಿ ಅವರನ್ನು ಜೈಲಿನಿಂದ ಸ್ಥಳಾಂತರಿಸಲಾಗಲಿಲ್ಲ.

ಮಂಗಳವಾರ ನವ್ಲಾಖಾ ಅವರ ವಕೀಲರು, “ಸಾಲ್ವೆನ್ಸಿ ಪ್ರಮಾಣಪತ್ರವನ್ನು ಪಡೆಯಲು ಕನಿಷ್ಠ ಆರು ವಾರಗಳನ್ನು ತೆಗೆದುಕೊಳ್ಳುತ್ತದೆ” ಎಂದು ಮನವಿ ಸಲ್ಲಿಸಿದ ನಂತರ ಸುಪ್ರೀಂ ಕೋರ್ಟ್ ಇದಕ್ಕೆ ಒಪ್ಪಿಗೆ ನೀಡಿದೆ.

ಇದರ ಹೊರತಾಗಿಯೂ ಎನ್‌ಐಎ ತಕರಾರು ತೆಗೆಯಿತು. ನವ್ಲಾಖಾ ಅವರು ಗೃಹಬಂಧನದಲ್ಲಿ ಉಳಿಯಲು ಸೂಚಿಸಿದ ಕಟ್ಟಡದಲ್ಲಿ ಒಳಹೋಗಲು ಮತ್ತು ಹೊರಬರಲು ಮೂರುಮೂರು ಪ್ರವೇಶಗಳನ್ನು ನೀಡಲಾಗಿದೆ. ಹೊರಗೆ ಹೋಗುವುದನ್ನು ದಾಖಲಿಸಲು ಯಾವುದೇ ಸಿಸಿಟಿವಿ ಕ್ಯಾಮೆರಾಗಳಿಲ್ಲ ಎಂದು ರಾಷ್ಟ್ರೀಯ ತನಿಖಾ ಸಂಸ್ಥೆ ವಿಶೇಷ ನ್ಯಾಯಾಲಯಕ್ಕೆ ತಿಳಿಸಿದ ನಂತರ ನವ್ಲಾಖಾ ಅವರನ್ನು ಬುಧವಾರ ಜೈಲಿನಿಂದ ಸ್ಥಳಾಂತರಿಸಲು ಸಾಧ್ಯವಾಗಲಿಲ್ಲ.

ಮನೆಯ ಪ್ರತಿ ಪ್ರವೇಶ ಮತ್ತು ನಿರ್ಗಮನ ಬಿಂದುಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳು ಇರಬೇಕಾಗಿದೆ. ನವಲಾಖಾ ಅವರ ಗೃಹಬಂಧನಕ್ಕೆ ಸುಪ್ರೀಂ ಕೋರ್ಟ್ ನಿಗದಿಪಡಿಸಿದ ಷರತ್ತುಗಳಲ್ಲಿ ಇದೂ ಒಂದಾಗಿದೆ.

ಕಟ್ಟಡದ ನೆಲಮಹಡಿಯು ಸಾರ್ವಜನಿಕ ಗ್ರಂಥಾಲಯವಾಗಿ ಕಾರ್ಯನಿರ್ವಹಿಸುತ್ತದೆ. ಇದರಿಂದ ಆರೋಪಿಗಳ ಮೇಲೆ ನಿಗಾ ಇಡುವುದು ತುಂಬಾ ಕಷ್ಟಕರವಾಗುತ್ತದೆ ಎಂದು ರಾಷ್ಟ್ರೀಯ ತನಿಖಾ ಸಂಸ್ಥೆಯು ವಾದಿಸಿದೆ. ಕಟ್ಟಡದ ಮಾಲೀಕರನ್ನು “ಕಮ್ಯುನಿಸ್ಟ್ ಪಕ್ಷದ ಕಾರ್ಯದರ್ಶಿ” ಎಂದು ಗುರುತಿಸಿರುವ ಬಗ್ಗೆ ಇದು ಆಕ್ಷೇಪಣೆಗಳನ್ನು ಎತ್ತಿದೆ.

ನವ್ಲಾಖಾ ಪರವಾಗಿ ಹಾಜರಾದ ವಕೀಲ ಯುಗ್ ಮೋಹಿತ್ ಚೌಧರಿ, ಏಜೆನ್ಸಿ ಬಯಸಿದಲ್ಲೆಲ್ಲಾ ಸಿಸಿಟಿವಿ ಕ್ಯಾಮೆರಾಗಳನ್ನು ಸ್ಥಾಪಿಸಲು ಸಿದ್ಧ ಎಂದು ನ್ಯಾಯಾಲಯಕ್ಕೆ ತಿಳಿಸಿದರು ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ. ಕಟ್ಟಡದ ಮೊದಲ ಮಹಡಿಗೆ ಮಾತ್ರ ನವ್ಲಾಖಾ ಅವರನ್ನು ನಿರ್ಬಂಧಿಸಲಾಗುವುದು ಮತ್ತು ನೆಲ ಅಂತಸ್ತಿನ ಗ್ರಂಥಾಲಯಕ್ಕೆ ಪ್ರವೇಶ ನೀಡುವುದಿಲ್ಲ ಎಂದು ತಿಳಿಸಿದ್ದಾರೆ.

ಕಟ್ಟಡದ ಮಾಲೀಕತ್ವದ ಬಗ್ಗೆ ಆಕ್ಷೇಪಣೆಯ ಕುರಿತು ಚೌಧರಿ, “ನೀವು ನಿವೇಶನದ ಮಾಲೀಕತ್ವದ ಬಗ್ಗೆ ಹೇಳಲು ಸಾಧ್ಯವಿಲ್ಲ. ಸಿಪಿಐ(ಎಂ) ಒಂದು ನೋಂದಾಯಿತ ರಾಜಕೀಯ ಪಕ್ಷವಾಗಿದೆ” ಎಂದು ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿರಿ: ಬಿಬಿಎಂಪಿ ಬಳಸಿಕೊಂಡು ಮತದಾರರ ಡೇಟಾ ಕದ್ದ ಬೊಮ್ಮಾಯಿ ಸರ್ಕಾರ: ಕಾಂಗ್ರೆಸ್‌ ದೂರು

ಆದಾಗ್ಯೂ ಎನ್‌ಐಎ ಈಗ ಸಲ್ಲಿಸಿರುವ ವರದಿಯ ಕುರಿತು ಸುಪ್ರೀಂ ಕೋರ್ಟ್‌ನ ಆದೇಶಕ್ಕಾಗಿ ಕಾಯದೆ ಈ ಹಂತದಲ್ಲಿ ನವ್ಲಾಖಾ ಅವರನ್ನು ಬಿಡುಗಡೆ ಮಾಡುವುದು ಸರಿಯಲ್ಲ ಎಂದು ವಿಶೇಷ ಎನ್‌ಐಎ ನ್ಯಾಯಾಲಯ ಅಭಿಪ್ರಾಯಪಟ್ಟಿದೆ.

ಸುಪ್ರೀಂಕೋರ್ಟ್‌ನಲ್ಲಿ ವಿಚಾರಣೆ ಕೈಗೆತ್ತಿಕೊಳ್ಳಲಾಗಿದ್ದು ನ್ಯಾಯಮೂರ್ತಿ ಕೆಎಂ ಜೋಸೆಫ್ ನೇತೃತ್ವದ ಪೀಠದ ಮುಂದೆ ಇಂದು (ಶುಕ್ರವಾರ) ವಿಚಾರಣೆ ಬರಲಿದೆ.

ಇದರ ನಡುವೆ ಹಿರಿಯ ನಟಿ ಸುಹಾಸಿನಿ ಮುಲೆ ಅವರು ಬುಧವಾರ ವಿಶೇಷ ನ್ಯಾಯಾಲಯದ ಮುಂದೆ ನವಲಖಾ ಅವರಿಗೆ ಜಾಮೀನುದಾರರಾಗಿ ಹಾಜರಾಗಿದ್ದರು. ಸುಮಾರು 30 ವರ್ಷಗಳಿಂದ ನವ್ಲಾಖಾ ಅವರು ಪರಿಚಯವಿದ್ದಾರೆ ಎಂದು ಸುಹಾಸಿನಿ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...