Homeಮುಖಪುಟಹೋರಾಟಗಾರ ಗೌತಮ್ ನವ್ಲಾಖಾ ಗೃಹಬಂಧನಕ್ಕೆ ಮತ್ತೆ ವಿಳಂಬ; ಭದ್ರತೆಯ ಕಾರಣ ನೀಡಿದ ಎನ್‌ಐಎ

ಹೋರಾಟಗಾರ ಗೌತಮ್ ನವ್ಲಾಖಾ ಗೃಹಬಂಧನಕ್ಕೆ ಮತ್ತೆ ವಿಳಂಬ; ಭದ್ರತೆಯ ಕಾರಣ ನೀಡಿದ ಎನ್‌ಐಎ

2018ರಲ್ಲಿ ನಡೆದ ಭೀಮಾ ಕೋರೆಗಾಂವ್ ಪ್ರಕರಣಕ್ಕೆ ಸಂಬಂಧಿಸಿದಂತೆ 70 ವರ್ಷದ ಗೌತಮ್‌ ನವ್ಲಾಖಾ ಆರೋಪಿಯಾಗಿದ್ದಾರೆ.

- Advertisement -
- Advertisement -

ಜೈಲಿನಲ್ಲಿರುವ ಹೋರಾಟಗಾರ ಗೌತಮ್ ನವ್ಲಾಖಾ ಅವರನ್ನು ಗೃಹಬಂಧನದಲ್ಲಿ ಇರಿಸುವ ಕುರಿತು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ತಕರಾರು ತೆಗೆದಿದೆ. ಗೌತಮ್‌ ಅವರು ಉಳಿಯಲು ಬಯಸಿದ ಸ್ಥಳದಲ್ಲಿ ಭದ್ರತಾ ಲೋಪವಿದೆ ಎಂದು ಆಕ್ಷೇಪ ಎತ್ತಿದ ಬಳಿಕ ಗೃಹಬಂಧನ ಮತ್ತೆ ವಿಳಂಬವಾಯಿತು ಎಂದು ಪಿಟಿಐ ವರದಿ ಮಾಡಿದೆ.

ಸುಪ್ರೀಂ ಕೋರ್ಟ್ ನವೆಂಬರ್ 10ರಂದು ನವ್ಲಾಖಾ ಅವರನ್ನು ಒಂದು ತಿಂಗಳ ಕಾಲ ಗೃಹಬಂಧನದಲ್ಲಿಡಲು ಅನುಮತಿ ನೀಡಿತ್ತು. ಅನಾರೋಗ್ಯ ಮತ್ತು ಜೈಲಿನಲ್ಲಿನ ಕಳಪೆ ಸೌಲಭ್ಯಗಳ ಆಧಾರದ ಮೇಲೆ ಜೈಲಿನಿಂದ ಸ್ಥಳಾಂತರಿಸುವಂತೆ ಕೋರಿ ಅವರು ಸಲ್ಲಿಸಿದ ಮನವಿಗೆ ಕೋರ್ಟ್ ಒಪ್ಪಿತ್ತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

2018ರಲ್ಲಿ ನಡೆದ ಭೀಮಾ ಕೋರೆಗಾಂವ್ ಪ್ರಕರಣಕ್ಕೆ ಸಂಬಂಧಿಸಿದಂತೆ 70 ವರ್ಷದ ಗೌತಮ್‌ ನವ್ಲಾಖಾ ಆರೋಪಿಯಾಗಿದ್ದಾರೆ. ಹಿಂಸಾಚಾರಕ್ಕೆ ಸಂಚು ರೂಪಿಸಿದ ಆರೋಪದ ಮೇಲೆ 16 ಮಂದಿಯನ್ನು ಬಂಧಿಸಲಾಗಿದೆ.

ರಾಷ್ಟ್ರೀಯ ತನಿಖಾ ಸಂಸ್ಥೆ ಎತ್ತಿರುವ ಆಕ್ಷೇಪವು ನವ್ಲಾಖಾ ಅವರನ್ನು ಜೈಲಿನಿಂದ ಸ್ಥಳಾಂತರಿಸಲು ಉಂಟಾಗಿರುವ ಎರಡನೇ ಅಡಚಣೆಯಾಗಿದೆ.

ಗೃಹಬಂಧನಕ್ಕೆ ಅನುಮತಿ ನೀಡುವಾಗ ಸುಪ್ರೀಂ ಕೋರ್ಟ್ ವಿಧಿಸಿದ ಷರತ್ತುಗಳ ಪೈಕಿ, ನವೆಂಬರ್ 14 ರೊಳಗೆ ಪರಿಹಾರದ ಪುರಾವೆಯಾಗಿ 2 ಲಕ್ಷ ರೂಪಾಯಿಗಳ ಶ್ಯೂರಿಟಿಯನ್ನು ಸಲ್ಲಿಸಬೇಕಿತ್ತು. ನವ್ಲಾಖಾ ಅವರು ದಾಖಲೆಗಳನ್ನು ನೀಡಲು ಸಾಧ್ಯವಾಗದ ಕಾರಣ ಆರಂಭದಲ್ಲಿ ಅವರನ್ನು ಜೈಲಿನಿಂದ ಸ್ಥಳಾಂತರಿಸಲಾಗಲಿಲ್ಲ.

ಮಂಗಳವಾರ ನವ್ಲಾಖಾ ಅವರ ವಕೀಲರು, “ಸಾಲ್ವೆನ್ಸಿ ಪ್ರಮಾಣಪತ್ರವನ್ನು ಪಡೆಯಲು ಕನಿಷ್ಠ ಆರು ವಾರಗಳನ್ನು ತೆಗೆದುಕೊಳ್ಳುತ್ತದೆ” ಎಂದು ಮನವಿ ಸಲ್ಲಿಸಿದ ನಂತರ ಸುಪ್ರೀಂ ಕೋರ್ಟ್ ಇದಕ್ಕೆ ಒಪ್ಪಿಗೆ ನೀಡಿದೆ.

ಇದರ ಹೊರತಾಗಿಯೂ ಎನ್‌ಐಎ ತಕರಾರು ತೆಗೆಯಿತು. ನವ್ಲಾಖಾ ಅವರು ಗೃಹಬಂಧನದಲ್ಲಿ ಉಳಿಯಲು ಸೂಚಿಸಿದ ಕಟ್ಟಡದಲ್ಲಿ ಒಳಹೋಗಲು ಮತ್ತು ಹೊರಬರಲು ಮೂರುಮೂರು ಪ್ರವೇಶಗಳನ್ನು ನೀಡಲಾಗಿದೆ. ಹೊರಗೆ ಹೋಗುವುದನ್ನು ದಾಖಲಿಸಲು ಯಾವುದೇ ಸಿಸಿಟಿವಿ ಕ್ಯಾಮೆರಾಗಳಿಲ್ಲ ಎಂದು ರಾಷ್ಟ್ರೀಯ ತನಿಖಾ ಸಂಸ್ಥೆ ವಿಶೇಷ ನ್ಯಾಯಾಲಯಕ್ಕೆ ತಿಳಿಸಿದ ನಂತರ ನವ್ಲಾಖಾ ಅವರನ್ನು ಬುಧವಾರ ಜೈಲಿನಿಂದ ಸ್ಥಳಾಂತರಿಸಲು ಸಾಧ್ಯವಾಗಲಿಲ್ಲ.

ಮನೆಯ ಪ್ರತಿ ಪ್ರವೇಶ ಮತ್ತು ನಿರ್ಗಮನ ಬಿಂದುಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳು ಇರಬೇಕಾಗಿದೆ. ನವಲಾಖಾ ಅವರ ಗೃಹಬಂಧನಕ್ಕೆ ಸುಪ್ರೀಂ ಕೋರ್ಟ್ ನಿಗದಿಪಡಿಸಿದ ಷರತ್ತುಗಳಲ್ಲಿ ಇದೂ ಒಂದಾಗಿದೆ.

ಕಟ್ಟಡದ ನೆಲಮಹಡಿಯು ಸಾರ್ವಜನಿಕ ಗ್ರಂಥಾಲಯವಾಗಿ ಕಾರ್ಯನಿರ್ವಹಿಸುತ್ತದೆ. ಇದರಿಂದ ಆರೋಪಿಗಳ ಮೇಲೆ ನಿಗಾ ಇಡುವುದು ತುಂಬಾ ಕಷ್ಟಕರವಾಗುತ್ತದೆ ಎಂದು ರಾಷ್ಟ್ರೀಯ ತನಿಖಾ ಸಂಸ್ಥೆಯು ವಾದಿಸಿದೆ. ಕಟ್ಟಡದ ಮಾಲೀಕರನ್ನು “ಕಮ್ಯುನಿಸ್ಟ್ ಪಕ್ಷದ ಕಾರ್ಯದರ್ಶಿ” ಎಂದು ಗುರುತಿಸಿರುವ ಬಗ್ಗೆ ಇದು ಆಕ್ಷೇಪಣೆಗಳನ್ನು ಎತ್ತಿದೆ.

ನವ್ಲಾಖಾ ಪರವಾಗಿ ಹಾಜರಾದ ವಕೀಲ ಯುಗ್ ಮೋಹಿತ್ ಚೌಧರಿ, ಏಜೆನ್ಸಿ ಬಯಸಿದಲ್ಲೆಲ್ಲಾ ಸಿಸಿಟಿವಿ ಕ್ಯಾಮೆರಾಗಳನ್ನು ಸ್ಥಾಪಿಸಲು ಸಿದ್ಧ ಎಂದು ನ್ಯಾಯಾಲಯಕ್ಕೆ ತಿಳಿಸಿದರು ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ. ಕಟ್ಟಡದ ಮೊದಲ ಮಹಡಿಗೆ ಮಾತ್ರ ನವ್ಲಾಖಾ ಅವರನ್ನು ನಿರ್ಬಂಧಿಸಲಾಗುವುದು ಮತ್ತು ನೆಲ ಅಂತಸ್ತಿನ ಗ್ರಂಥಾಲಯಕ್ಕೆ ಪ್ರವೇಶ ನೀಡುವುದಿಲ್ಲ ಎಂದು ತಿಳಿಸಿದ್ದಾರೆ.

ಕಟ್ಟಡದ ಮಾಲೀಕತ್ವದ ಬಗ್ಗೆ ಆಕ್ಷೇಪಣೆಯ ಕುರಿತು ಚೌಧರಿ, “ನೀವು ನಿವೇಶನದ ಮಾಲೀಕತ್ವದ ಬಗ್ಗೆ ಹೇಳಲು ಸಾಧ್ಯವಿಲ್ಲ. ಸಿಪಿಐ(ಎಂ) ಒಂದು ನೋಂದಾಯಿತ ರಾಜಕೀಯ ಪಕ್ಷವಾಗಿದೆ” ಎಂದು ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿರಿ: ಬಿಬಿಎಂಪಿ ಬಳಸಿಕೊಂಡು ಮತದಾರರ ಡೇಟಾ ಕದ್ದ ಬೊಮ್ಮಾಯಿ ಸರ್ಕಾರ: ಕಾಂಗ್ರೆಸ್‌ ದೂರು

ಆದಾಗ್ಯೂ ಎನ್‌ಐಎ ಈಗ ಸಲ್ಲಿಸಿರುವ ವರದಿಯ ಕುರಿತು ಸುಪ್ರೀಂ ಕೋರ್ಟ್‌ನ ಆದೇಶಕ್ಕಾಗಿ ಕಾಯದೆ ಈ ಹಂತದಲ್ಲಿ ನವ್ಲಾಖಾ ಅವರನ್ನು ಬಿಡುಗಡೆ ಮಾಡುವುದು ಸರಿಯಲ್ಲ ಎಂದು ವಿಶೇಷ ಎನ್‌ಐಎ ನ್ಯಾಯಾಲಯ ಅಭಿಪ್ರಾಯಪಟ್ಟಿದೆ.

ಸುಪ್ರೀಂಕೋರ್ಟ್‌ನಲ್ಲಿ ವಿಚಾರಣೆ ಕೈಗೆತ್ತಿಕೊಳ್ಳಲಾಗಿದ್ದು ನ್ಯಾಯಮೂರ್ತಿ ಕೆಎಂ ಜೋಸೆಫ್ ನೇತೃತ್ವದ ಪೀಠದ ಮುಂದೆ ಇಂದು (ಶುಕ್ರವಾರ) ವಿಚಾರಣೆ ಬರಲಿದೆ.

ಇದರ ನಡುವೆ ಹಿರಿಯ ನಟಿ ಸುಹಾಸಿನಿ ಮುಲೆ ಅವರು ಬುಧವಾರ ವಿಶೇಷ ನ್ಯಾಯಾಲಯದ ಮುಂದೆ ನವಲಖಾ ಅವರಿಗೆ ಜಾಮೀನುದಾರರಾಗಿ ಹಾಜರಾಗಿದ್ದರು. ಸುಮಾರು 30 ವರ್ಷಗಳಿಂದ ನವ್ಲಾಖಾ ಅವರು ಪರಿಚಯವಿದ್ದಾರೆ ಎಂದು ಸುಹಾಸಿನಿ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...