Homeಫ್ಯಾಕ್ಟ್‌ಚೆಕ್FactCheck: ಸತ್ತ ವ್ಯಕ್ತಿ ಬಾಯಿಂದ ಮೋದಿ ಹೊಗಳಿಸಿದ ಪೋಸ್ಟ್‌ ಕಾರ್ಡ್‌: ಸತ್ಯ ತಿಳಿಯುತ್ತಲೇ ಮತ್ತೊಂದು ಸುಳ್ಳು...

FactCheck: ಸತ್ತ ವ್ಯಕ್ತಿ ಬಾಯಿಂದ ಮೋದಿ ಹೊಗಳಿಸಿದ ಪೋಸ್ಟ್‌ ಕಾರ್ಡ್‌: ಸತ್ಯ ತಿಳಿಯುತ್ತಲೇ ಮತ್ತೊಂದು ಸುಳ್ಳು ಪ್ರಕಟ!

- Advertisement -
- Advertisement -

ಫೇಕ್‌ನ್ಯೂಸ್‌ ವೆಬ್‌ಸೈಟ್‌ ಎಂತಲೇ ಕುಖ್ಯಾತಿ ಗಳಿಸಿರುವ ಪೋಸ್ಟ್‌ ಕಾರ್ಡ್‌ ಕನ್ನಡ ಸುಳ್ಳು ಸುದ್ದಿ ಪ್ರಕಟಿಸಿ, ಸತ್ತ ವ್ಯಕ್ತಿಯ ಫೋಟೊ ಹಾಕಿ ಮೋದಿ ಹೊಗಳಿದ್ದಾರೆ ಎಂದು ಪ್ರಸಾರ ಮಾಡಿ ಸಿಕ್ಕಿಬಿದ್ದಿದೆ. ಈ ಕುರಿತು ನೆಟ್ಟಿಗರು ಅದರ ಸ್ಥಾಪಕನ ವಿರುದ್ಧ ಟೀಕಾ ಪ್ರಹಾರ ನಡೆಸಿದ್ದಾರೆ.

ನಡೆದುದಿಷ್ಟು…

ಜೂನ್ 15 ರಂದು ಲಡಾಖ್‌ ಗಡಿಯಲ್ಲಿ ಭಾರತ – ಚೀನಾ ನಡುವೆ ನಡೆದ ಸಂಘ‍ರ್ಷದಲ್ಲಿ 20 ಭಾರತೀಯ ಸೈನಿಕರು ಹುತಾತ್ಮರಾಗಿದ್ದಾರೆ. ಅಲ್ಲದೇ ಭಾರತದ ವಾಸ್ತವಿಕ ನಿಯಂತ್ರಿತ ರೇಖೆಯೊಳಗೆ ಕಾಲಿಟ್ಟಿದೆ. ಅಂದಿನಿಂದ ನರೇಂದ್ರ ಮೋದಿ ಸರ್ಕಾರವನ್ನು ಜನ ಪ್ರಶ್ನಿಸುತ್ತಿದ್ದಾರೆ. ಕೊನೆಗೂ ಎರಡು ದೇಶಗಳ ಮಾತುಕತೆಯ ನಂತರ ಎರಡೂ ದೇಶಗಳ ಸೈನ್ಯ ವಾಪಸ್ ತೆರಳಿವೆ. ಇದಿಷ್ಟು ವಾಸ್ತವವನ್ನು ಇಟ್ಟುಕೊಂಡು ಮೋದಿಯನ್ನು ಹೊಗಳುವ ಭರದಲ್ಲಿ ಪೋಸ್ಟ್‌ ಕಾರ್ಡ್‌ ಸುಳ್ಳು ಸುದ್ದಿ ಹಬ್ಬಿಸಿದೆ.

“ಗಡಿಯಲ್ಲಿ ಚೀನಾ ನಿರ್ಮಿಸಿದ್ದ ಉದ್ವಿಗ್ನ ಸ್ಥಿತಿಯನ್ನು ಭಾರತ ಸಮರ್ಥವಾಗಿ ಎದುರಿಸಿದೆ. ಇದು ಚೀನಾದಿಂದ ಒದಗುವ ಬೆದರಿಕೆಯನ್ನು ಧೈರ್ಯದಿಂದ ಎದುರಿಸಲು ಇತರ ದೇಶಗಳಿಗೆ ಶಕ್ತಿ ತುಂಬಲಿದೆ. ಚೀನಾಕ್ಕೆ ತಕ್ಕ ಪ್ರತ್ಯುತ್ತರ ನೀಡಿದ ಪ್ರಧಾನಿ ನರೇಂದ್ರ ಮೋದಿ ಬಗ್ಗೆ ಹೆಮ್ಮೆ ಎನಿಸುತ್ತದೆ”. – ಅಮೆರಿಕದ ಸಂಸದ ಜಾನ್ ಕೆನಡಿ ಎಂಬ ವಿಷಯವುಳ್ಳ ಪೋಸ್ಟರ್ ಮಾಡಿ, ಅದರಲ್ಲಿ ಜಾನ್ ಕೆನಡಿ ಫೋಟೊ ಹಾಕಿ ಪೋಸ್ಟ್‌ ಕಾರ್ಡ್‌ ಕನ್ನಡ ಸೇರಿದಂತೆ ಹಲವಾರು ಫೇಸ್‌ಬುಕ್‌ ಪುಟಗಳಲ್ಲಿ ಷೇರ್ ಮಾಡಲಾಗಿದೆ.

ಆದರೆ ಸ್ಪಲ್ಪ ಸಮಯದಲ್ಲಿಯೇ ನೆಟ್ಟಿಗರು ಅಮೆರಿಕ ಮಾಜಿ ಅಧ್ಯಕ್ಷ ಜಾನ್ ಕೆನಡಿ ಮರಣ ಹೊಂದಿ 57 ವರ್ಷಗಳಾಗಿವೆ. ಸುಳ್ಳು ಸುದ್ದಿ ಹರಡುವುದನ್ನು ನಿಲ್ಲಿಸಿ ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ. ಜಾನ್ ಕೆನಡಿ 1963ರಲ್ಲಿ ಸಾವನಪ್ಪಿರುವ ವಿಕಿಪೀಡಿಯ ಮಾಹಿತಿಗಳನ್ನು ಹಂಚಿಕೊಂಡಿದ್ದಾರೆ.

ಪೋಸ್ಟ್ ಕಾರ್ಡ್ ಮೊದಲು ಹರಡಿದ್ದ ಪೋಸ್ಟರ್

ನಂತರ ಮುಖಭಂಗಕ್ಕೊಳಗಾದ ಪೋಸ್ಟ್ ಕಾರ್ಡ್ ಮುಖ್ಯಸ್ಥ ಮಹೇಶ್ ವಿಕ್ರಂ ಹೆಗ್ಡೆ ಆ ಪೋಸ್ಟರ್‌ ಅನ್ನು ಡಿಲೀಟ್ ಮಾಡಿದ್ದಾರೆ. ಕೂಡಲೇ ಜಾನ್ ಕೆನಡಿಯ ಜಾಗದಲ್ಲಿ ಜಾನ್ ನೀಲಿ ಕೆನಡಿಯ ಫೋಟೊ ಹಾಕಿ ಮತ್ತೊಂದು ಪೋಸ್ಟರ್ ಅನ್ನು ಪೋಸ್ಟ್ ಮಾಡಿದ್ದಾರೆ.

https://www.facebook.com/mvhindu/posts/1236827983315356

ಈ ಕುರಿತು ಗೂಗಲ್‌ನಲ್ಲಿ ಹುಡಕಾಡಿದಾಗ ಮೋದಿ ಕುರಿತು ಇತ್ತೀಚೆಗೆ ಜಾನ್‌ ನೀಲಿ ಕೆನಡಿ ಮಾತನಾಡಿರುವ ಯಾವುದೇ ವರದಿಗಳು ಲಭ್ಯವಿಲ್ಲ. ಆದರೆ ನ್ಯೂಸ್‌ಬಸ್ಟ್‌.ಇನ್ ಎನ್ನು ಭಾರತೀಯ ಮೂಲಕ ವೆಬ್ ಸೈಟ್ ಒಂದು ಮಾತ್ರ ಈ ಸುದ್ದಿಯನ್ನು ಪ್ರಕಟಿಸಿದೆ. ಆದರೆ ಅದರ ಫೇಸ್‌ಬುಕ್‌ ಪುಟವು ಕೇವಲ 43 ಲೈಕ್‌ಗಳನ್ನು ಹಾಗೂ 473 ಫಾಲೋವರ್‌ಗಳನ್ನು ಮಾತ್ರ ಹೊಂದಿದೆ. ಆ ವರದಿಯನ್ನು ಕೇವಲ ಒಬ್ಬರು ಮಾತ್ರ ಓದಿದ್ದಾರೆ.. ಅಲ್ಲಿಗೆ ಅದು ಕೂಡ ಫೇಕ್‌ ನ್ಯೂಸ್ ಎಂದು ಸಾಬೀತಾಗಿದೆ.

ಒಟ್ಟಿನಲ್ಲಿ ಸುಳ್ಳು ಸುದ್ದಿ ಹರಡುವುದರಲ್ಲಿ ಎತ್ತಿದ ಕೈ ಆದ ಮಹೇಶ್ ವಿಕ್ರಂ ಹೆಗಡೆ ಮತ್ತು ಫೋಸ್ಟ್ ಕಾರ್ಡ್ ಮತ್ತೊಂದು ಸುಳ್ಳು ಸುದ್ದಿ ಹರಡಿ ಸಿಕ್ಕಿಕೊಂಡಿದೆ. ನೆಟ್ಟಿಗರು ದೊಡ್ಡ ಮಟ್ಟದಲ್ಲಿ ತರಾಟೆಗೆ ತೆಗೆದುಕೊಂಡಿದ್ದಾರೆ.


ಇದನ್ನೂ ಓದಿ: ಮುಖ್ಯಮಂತ್ರಿಗಳ ಎಚ್ಚರಿಕೆಯ ನಂತರವೂ ಸುಳ್ಳು ಸುದ್ದಿ ಹರಡುತ್ತಿರುವ ಪೋಸ್ಟ್‌ ಕಾರ್ಡ್‌ ಕನ್ನಡ: ಕ್ರಮ ಯಾವಾಗ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. PEOPLE ARE VERY MUCH AWARE ABOUT GOSI MEDIA N THEIR DIRTY LIES… TO DISTRACT N DIVERT FROM CURRENT MAJOR ISSUES N TO FOOL PEOPLE ASHTE..
    BUT CANT FOOL ANYMORE.
    ENJOY ACHHEDIN..🤣🤣🤣

LEAVE A REPLY

Please enter your comment!
Please enter your name here

- Advertisment -

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...