Homeಫ್ಯಾಕ್ಟ್‌ಚೆಕ್FactCheck: ಸತ್ತ ವ್ಯಕ್ತಿ ಬಾಯಿಂದ ಮೋದಿ ಹೊಗಳಿಸಿದ ಪೋಸ್ಟ್‌ ಕಾರ್ಡ್‌: ಸತ್ಯ ತಿಳಿಯುತ್ತಲೇ ಮತ್ತೊಂದು ಸುಳ್ಳು...

FactCheck: ಸತ್ತ ವ್ಯಕ್ತಿ ಬಾಯಿಂದ ಮೋದಿ ಹೊಗಳಿಸಿದ ಪೋಸ್ಟ್‌ ಕಾರ್ಡ್‌: ಸತ್ಯ ತಿಳಿಯುತ್ತಲೇ ಮತ್ತೊಂದು ಸುಳ್ಳು ಪ್ರಕಟ!

- Advertisement -
- Advertisement -

ಫೇಕ್‌ನ್ಯೂಸ್‌ ವೆಬ್‌ಸೈಟ್‌ ಎಂತಲೇ ಕುಖ್ಯಾತಿ ಗಳಿಸಿರುವ ಪೋಸ್ಟ್‌ ಕಾರ್ಡ್‌ ಕನ್ನಡ ಸುಳ್ಳು ಸುದ್ದಿ ಪ್ರಕಟಿಸಿ, ಸತ್ತ ವ್ಯಕ್ತಿಯ ಫೋಟೊ ಹಾಕಿ ಮೋದಿ ಹೊಗಳಿದ್ದಾರೆ ಎಂದು ಪ್ರಸಾರ ಮಾಡಿ ಸಿಕ್ಕಿಬಿದ್ದಿದೆ. ಈ ಕುರಿತು ನೆಟ್ಟಿಗರು ಅದರ ಸ್ಥಾಪಕನ ವಿರುದ್ಧ ಟೀಕಾ ಪ್ರಹಾರ ನಡೆಸಿದ್ದಾರೆ.

ನಡೆದುದಿಷ್ಟು…

ಜೂನ್ 15 ರಂದು ಲಡಾಖ್‌ ಗಡಿಯಲ್ಲಿ ಭಾರತ – ಚೀನಾ ನಡುವೆ ನಡೆದ ಸಂಘ‍ರ್ಷದಲ್ಲಿ 20 ಭಾರತೀಯ ಸೈನಿಕರು ಹುತಾತ್ಮರಾಗಿದ್ದಾರೆ. ಅಲ್ಲದೇ ಭಾರತದ ವಾಸ್ತವಿಕ ನಿಯಂತ್ರಿತ ರೇಖೆಯೊಳಗೆ ಕಾಲಿಟ್ಟಿದೆ. ಅಂದಿನಿಂದ ನರೇಂದ್ರ ಮೋದಿ ಸರ್ಕಾರವನ್ನು ಜನ ಪ್ರಶ್ನಿಸುತ್ತಿದ್ದಾರೆ. ಕೊನೆಗೂ ಎರಡು ದೇಶಗಳ ಮಾತುಕತೆಯ ನಂತರ ಎರಡೂ ದೇಶಗಳ ಸೈನ್ಯ ವಾಪಸ್ ತೆರಳಿವೆ. ಇದಿಷ್ಟು ವಾಸ್ತವವನ್ನು ಇಟ್ಟುಕೊಂಡು ಮೋದಿಯನ್ನು ಹೊಗಳುವ ಭರದಲ್ಲಿ ಪೋಸ್ಟ್‌ ಕಾರ್ಡ್‌ ಸುಳ್ಳು ಸುದ್ದಿ ಹಬ್ಬಿಸಿದೆ.

“ಗಡಿಯಲ್ಲಿ ಚೀನಾ ನಿರ್ಮಿಸಿದ್ದ ಉದ್ವಿಗ್ನ ಸ್ಥಿತಿಯನ್ನು ಭಾರತ ಸಮರ್ಥವಾಗಿ ಎದುರಿಸಿದೆ. ಇದು ಚೀನಾದಿಂದ ಒದಗುವ ಬೆದರಿಕೆಯನ್ನು ಧೈರ್ಯದಿಂದ ಎದುರಿಸಲು ಇತರ ದೇಶಗಳಿಗೆ ಶಕ್ತಿ ತುಂಬಲಿದೆ. ಚೀನಾಕ್ಕೆ ತಕ್ಕ ಪ್ರತ್ಯುತ್ತರ ನೀಡಿದ ಪ್ರಧಾನಿ ನರೇಂದ್ರ ಮೋದಿ ಬಗ್ಗೆ ಹೆಮ್ಮೆ ಎನಿಸುತ್ತದೆ”. – ಅಮೆರಿಕದ ಸಂಸದ ಜಾನ್ ಕೆನಡಿ ಎಂಬ ವಿಷಯವುಳ್ಳ ಪೋಸ್ಟರ್ ಮಾಡಿ, ಅದರಲ್ಲಿ ಜಾನ್ ಕೆನಡಿ ಫೋಟೊ ಹಾಕಿ ಪೋಸ್ಟ್‌ ಕಾರ್ಡ್‌ ಕನ್ನಡ ಸೇರಿದಂತೆ ಹಲವಾರು ಫೇಸ್‌ಬುಕ್‌ ಪುಟಗಳಲ್ಲಿ ಷೇರ್ ಮಾಡಲಾಗಿದೆ.

ಆದರೆ ಸ್ಪಲ್ಪ ಸಮಯದಲ್ಲಿಯೇ ನೆಟ್ಟಿಗರು ಅಮೆರಿಕ ಮಾಜಿ ಅಧ್ಯಕ್ಷ ಜಾನ್ ಕೆನಡಿ ಮರಣ ಹೊಂದಿ 57 ವರ್ಷಗಳಾಗಿವೆ. ಸುಳ್ಳು ಸುದ್ದಿ ಹರಡುವುದನ್ನು ನಿಲ್ಲಿಸಿ ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ. ಜಾನ್ ಕೆನಡಿ 1963ರಲ್ಲಿ ಸಾವನಪ್ಪಿರುವ ವಿಕಿಪೀಡಿಯ ಮಾಹಿತಿಗಳನ್ನು ಹಂಚಿಕೊಂಡಿದ್ದಾರೆ.

ಪೋಸ್ಟ್ ಕಾರ್ಡ್ ಮೊದಲು ಹರಡಿದ್ದ ಪೋಸ್ಟರ್

ನಂತರ ಮುಖಭಂಗಕ್ಕೊಳಗಾದ ಪೋಸ್ಟ್ ಕಾರ್ಡ್ ಮುಖ್ಯಸ್ಥ ಮಹೇಶ್ ವಿಕ್ರಂ ಹೆಗ್ಡೆ ಆ ಪೋಸ್ಟರ್‌ ಅನ್ನು ಡಿಲೀಟ್ ಮಾಡಿದ್ದಾರೆ. ಕೂಡಲೇ ಜಾನ್ ಕೆನಡಿಯ ಜಾಗದಲ್ಲಿ ಜಾನ್ ನೀಲಿ ಕೆನಡಿಯ ಫೋಟೊ ಹಾಕಿ ಮತ್ತೊಂದು ಪೋಸ್ಟರ್ ಅನ್ನು ಪೋಸ್ಟ್ ಮಾಡಿದ್ದಾರೆ.

https://www.facebook.com/mvhindu/posts/1236827983315356

ಈ ಕುರಿತು ಗೂಗಲ್‌ನಲ್ಲಿ ಹುಡಕಾಡಿದಾಗ ಮೋದಿ ಕುರಿತು ಇತ್ತೀಚೆಗೆ ಜಾನ್‌ ನೀಲಿ ಕೆನಡಿ ಮಾತನಾಡಿರುವ ಯಾವುದೇ ವರದಿಗಳು ಲಭ್ಯವಿಲ್ಲ. ಆದರೆ ನ್ಯೂಸ್‌ಬಸ್ಟ್‌.ಇನ್ ಎನ್ನು ಭಾರತೀಯ ಮೂಲಕ ವೆಬ್ ಸೈಟ್ ಒಂದು ಮಾತ್ರ ಈ ಸುದ್ದಿಯನ್ನು ಪ್ರಕಟಿಸಿದೆ. ಆದರೆ ಅದರ ಫೇಸ್‌ಬುಕ್‌ ಪುಟವು ಕೇವಲ 43 ಲೈಕ್‌ಗಳನ್ನು ಹಾಗೂ 473 ಫಾಲೋವರ್‌ಗಳನ್ನು ಮಾತ್ರ ಹೊಂದಿದೆ. ಆ ವರದಿಯನ್ನು ಕೇವಲ ಒಬ್ಬರು ಮಾತ್ರ ಓದಿದ್ದಾರೆ.. ಅಲ್ಲಿಗೆ ಅದು ಕೂಡ ಫೇಕ್‌ ನ್ಯೂಸ್ ಎಂದು ಸಾಬೀತಾಗಿದೆ.

ಒಟ್ಟಿನಲ್ಲಿ ಸುಳ್ಳು ಸುದ್ದಿ ಹರಡುವುದರಲ್ಲಿ ಎತ್ತಿದ ಕೈ ಆದ ಮಹೇಶ್ ವಿಕ್ರಂ ಹೆಗಡೆ ಮತ್ತು ಫೋಸ್ಟ್ ಕಾರ್ಡ್ ಮತ್ತೊಂದು ಸುಳ್ಳು ಸುದ್ದಿ ಹರಡಿ ಸಿಕ್ಕಿಕೊಂಡಿದೆ. ನೆಟ್ಟಿಗರು ದೊಡ್ಡ ಮಟ್ಟದಲ್ಲಿ ತರಾಟೆಗೆ ತೆಗೆದುಕೊಂಡಿದ್ದಾರೆ.


ಇದನ್ನೂ ಓದಿ: ಮುಖ್ಯಮಂತ್ರಿಗಳ ಎಚ್ಚರಿಕೆಯ ನಂತರವೂ ಸುಳ್ಳು ಸುದ್ದಿ ಹರಡುತ್ತಿರುವ ಪೋಸ್ಟ್‌ ಕಾರ್ಡ್‌ ಕನ್ನಡ: ಕ್ರಮ ಯಾವಾಗ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. PEOPLE ARE VERY MUCH AWARE ABOUT GOSI MEDIA N THEIR DIRTY LIES… TO DISTRACT N DIVERT FROM CURRENT MAJOR ISSUES N TO FOOL PEOPLE ASHTE..
    BUT CANT FOOL ANYMORE.
    ENJOY ACHHEDIN..🤣🤣🤣

LEAVE A REPLY

Please enter your comment!
Please enter your name here

- Advertisment -

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...

ಗಾಜಿಯಾಬಾದ್‌| ಗೋಮಾಂಸ ಸಾಗಾಣಿಕೆ ಆರೋಪ; ವ್ಯಕ್ತಿ ಮೇಲೆ ಗುಂಪಿನಿಂದ ಹಲ್ಲೆ

ಉತ್ತರ ಪ್ರದೇಶದ ಗಾಜಿಯಾಬಾದ್‌ ನಗರದ ಶಾಸ್ತ್ರಿ ನಗರದಲ್ಲಿ ಗೋಮಾಂಸ ಸಾಗಿಸುತ್ತಿದ್ದಾರೆ ಎಂಬ ಅನುಮಾನದ ಮೇಲೆ ಸಲೀಂ ಎಂದು ಗುರುತಿಸಲಾದ ವ್ಯಕ್ತಿಯ ಮೇಲೆ ನಕಲಿ ಗೋರಕ್ಷಕರ ಗುಂಪೊಂದು ಹಲ್ಲೆ ನಡೆಸಿದೆ. ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ...

ಬಾಂಗ್ಲಾ ಗಡಿಯಾಚೆಗೆ ತಳ್ಳಿದ್ದ ನಾಲ್ವರು ಭಾರತೀಯರನ್ನು ವಾಪಸ್ ಕರೆತಂದ ಕೇಂದ್ರ ಸರ್ಕಾರ

ವರ್ಷದ ಹಿಂದೆ, ಅಂದರೆ 2025ರ ಜೂನ್ ತಿಂಗಳಲ್ಲಿ ಬಾಂಗ್ಲಾದೇಶದ ಗಡಿಯಾಚೆಗೆ ತಳ್ಳಿದ್ದ ನಾಲ್ವರು ಭಾರತೀಯರು ಬುಧವಾರ (ಜು.8) ಪಶ್ಚಿಮ ಬಂಗಾಳದ ಬೀರ್‌ಭೂಮ್ ಜಿಲ್ಲೆಯ ತಮ್ಮ ಗ್ರಾಮಕ್ಕೆ ಹಿಂದಿರುಗಿದ್ದಾರೆ ಎಂದು ವರದಿಯಾಗಿದೆ. ಸುನಾಲಿ...

ಬೆಂಗಳೂರಿನ ಜ್ವಲಂತ ನಾಗರಿಕ ಸಮಸ್ಯೆಗಳ ವಿರುದ್ಧ ಜುಲೈ 12ಕ್ಕೆ ಬೃಹತ್ ‘ಜನಾಕ್ರೋಶ ಸಮಾವೇಶ

ಸಿಲಿಕಾನ್ ಸಿಟಿ ಬೆಂಗಳೂರಿನ ನಾಗರಿಕರು ಪ್ರತಿನಿತ್ಯ ಎದುರಿಸುತ್ತಿರುವ ನರಕಸದೃಶ ಸಮಸ್ಯೆಗಳ ವಿರುದ್ಧ ಮತ್ತು ಆಡಳಿತ ವ್ಯವಸ್ಥೆಯ ಭ್ರಷ್ಟಾಚಾರವನ್ನು ಖಂಡಿಸಿ ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ಬೃಹತ್ ‘ಜನಾಕ್ರೋಶ ಸಮಾವೇಶ’ವನ್ನು ಹಮ್ಮಿಕೊಂಡಿದೆ. ಈ ‘ಜನಾಕ್ರೋಶ...

ಭೀಕರ ಪ್ರವಾಹಕ್ಕೆ ಕೊಚ್ಚಿಹೋದ 3 ಸಾವಿರ LPG ಸಿಲಿಂಡರ್

ಮಹಾರಾಷ್ಟ್ರದಲ್ಲಿ ವಾರದಿಂದ ಸುರಿಯುತ್ತಿರುವ ಮಳೆ ಇಡೀ ಜನಜೀವನವನ್ನು ಅಸ್ತವ್ಯಸ್ತಗೊಳಿಸಿದ್ದು, ಪ್ರಕೃತಿಯ ವಿಕೋಪದ ನಡುವೆ ರಾಯಗಢ ಜಿಲ್ಲೆಯಿಂದ ಅತ್ಯಂತ ಆಘಾತಕಾರಿ ವಿಡಿಯೋವೊಂದು ವೈರಲ್ ಆಗಿದೆ. ಇಲ್ಲಿನ ಎಚ್‌ಪಿಸಿಎಲ್ (HPCL) ಪಾತಾಳಗಂಗಾ ಎಲ್‌ಪಿಜಿ ಬಾಟ್ಲಿಂಗ್...

ಹೈದರಾಬಾದ್‌| ಪವನ್‌ ಕಲ್ಯಾಣ್‌ ಟೀಕಿಸಿದ ಯೂಟ್ಯೂಬರ್ ರಾವಣ್ ಮೇಲೆ ಯುಎಪಿಎ ಕೇಸ್; ನಿವಾಸದಲ್ಲಿ ಪೊಲೀಸರ ಶೋಧ

ತೆಲುಗು ಯೂಟ್ಯೂಬರ್, ಸಾಮಾಜಿಕ ಕಾರ್ಯಕರ್ತ ರಾವಣ್‌ (ಬಚಲಕೂರಿ ಜೋಸೆಫ್) ಅವರನ್ನು ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪೊಲೀಸರು ಬಂಧಿಸಿದ್ದು, ಆಂಧ್ರಪ್ರದೇಶ ಪೊಲೀಸರು ಹೈದರಾಬಾದ್‌ನಲ್ಲಿರುವ ಯೂಟ್ಯೂಬರ್ ರಾವಣ್ ನಿವಾಸದಲ್ಲಿ...

ಬೀದಿಬದಿ ವ್ಯಾಪಾರಿಗಳ ಒಕ್ಕಲೆಬ್ಬಿಸುವಿಕೆ ಖಂಡಿಸಿ ಸರ್ಕಾರದ ವಿರುದ್ದ ಬೃಹತ್ ಪ್ರತಿಭಟನೆ

ಬೆಂಗಳೂರು ನಗರದಲ್ಲಿ ಫುಟ್‌ಪಾತ್ ಒತ್ತುವರಿ ತೆರವಿನ ಹೆಸರಿನಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ನಡೆಸುತ್ತಿರುವ ಏಕಪಕ್ಷೀಯ ಕಾರ್ಯಾಚರಣೆ ಬಡ ಬೀದಿಬದಿ ವ್ಯಾಪಾರಿಗಳ ಬದುಕನ್ನು ಬೀದಿಗೆ ತಳ್ಳಿದೆ. ಪ್ರಾಧಿಕಾರದ ಈ ಜನವಿರೋಧಿ ‘ಆಪರೇಷನ್’ ಖಂಡಿಸಿ,...

ಬಿಹಾರ| ಹಿಜಾಬ್ ತೆಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಮುಸ್ಲಿಂ ಮಹಿಳೆಗೆ ಒತ್ತಾಯಿಸಿದ ಗುಂಪು

ಪುರುಷರ ಗುಂಪೊಂದು ದಾರಿಯಲ್ಲಿ ಹೋಗುತ್ತಿದ್ದ ಮುಸ್ಲಿಂ ಮಹಿಳೆಯನ್ನು ತಡೆದು ದೌರ್ಜನ್ಯ ಎಸಗಿದ್ದು, ಆಕೆ ಧರಿಸಿದ್ದ ಹಿಜಾಬ್ ತಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಹಿಂದುತ್ವ ಕಿಡಿಗೇಡಿಗಳು ಒತ್ತಾಯಿಸಿರುವ ವಿಡಿಯೊ ವೈರಲ್ ಆಗಿದೆ. ಜುಲೈ 8 ರ...