Homeಫ್ಯಾಕ್ಟ್‌ಚೆಕ್FactCheck: ಸತ್ತ ವ್ಯಕ್ತಿ ಬಾಯಿಂದ ಮೋದಿ ಹೊಗಳಿಸಿದ ಪೋಸ್ಟ್‌ ಕಾರ್ಡ್‌: ಸತ್ಯ ತಿಳಿಯುತ್ತಲೇ ಮತ್ತೊಂದು ಸುಳ್ಳು...

FactCheck: ಸತ್ತ ವ್ಯಕ್ತಿ ಬಾಯಿಂದ ಮೋದಿ ಹೊಗಳಿಸಿದ ಪೋಸ್ಟ್‌ ಕಾರ್ಡ್‌: ಸತ್ಯ ತಿಳಿಯುತ್ತಲೇ ಮತ್ತೊಂದು ಸುಳ್ಳು ಪ್ರಕಟ!

- Advertisement -
- Advertisement -

ಫೇಕ್‌ನ್ಯೂಸ್‌ ವೆಬ್‌ಸೈಟ್‌ ಎಂತಲೇ ಕುಖ್ಯಾತಿ ಗಳಿಸಿರುವ ಪೋಸ್ಟ್‌ ಕಾರ್ಡ್‌ ಕನ್ನಡ ಸುಳ್ಳು ಸುದ್ದಿ ಪ್ರಕಟಿಸಿ, ಸತ್ತ ವ್ಯಕ್ತಿಯ ಫೋಟೊ ಹಾಕಿ ಮೋದಿ ಹೊಗಳಿದ್ದಾರೆ ಎಂದು ಪ್ರಸಾರ ಮಾಡಿ ಸಿಕ್ಕಿಬಿದ್ದಿದೆ. ಈ ಕುರಿತು ನೆಟ್ಟಿಗರು ಅದರ ಸ್ಥಾಪಕನ ವಿರುದ್ಧ ಟೀಕಾ ಪ್ರಹಾರ ನಡೆಸಿದ್ದಾರೆ.

ನಡೆದುದಿಷ್ಟು…

ಜೂನ್ 15 ರಂದು ಲಡಾಖ್‌ ಗಡಿಯಲ್ಲಿ ಭಾರತ – ಚೀನಾ ನಡುವೆ ನಡೆದ ಸಂಘ‍ರ್ಷದಲ್ಲಿ 20 ಭಾರತೀಯ ಸೈನಿಕರು ಹುತಾತ್ಮರಾಗಿದ್ದಾರೆ. ಅಲ್ಲದೇ ಭಾರತದ ವಾಸ್ತವಿಕ ನಿಯಂತ್ರಿತ ರೇಖೆಯೊಳಗೆ ಕಾಲಿಟ್ಟಿದೆ. ಅಂದಿನಿಂದ ನರೇಂದ್ರ ಮೋದಿ ಸರ್ಕಾರವನ್ನು ಜನ ಪ್ರಶ್ನಿಸುತ್ತಿದ್ದಾರೆ. ಕೊನೆಗೂ ಎರಡು ದೇಶಗಳ ಮಾತುಕತೆಯ ನಂತರ ಎರಡೂ ದೇಶಗಳ ಸೈನ್ಯ ವಾಪಸ್ ತೆರಳಿವೆ. ಇದಿಷ್ಟು ವಾಸ್ತವವನ್ನು ಇಟ್ಟುಕೊಂಡು ಮೋದಿಯನ್ನು ಹೊಗಳುವ ಭರದಲ್ಲಿ ಪೋಸ್ಟ್‌ ಕಾರ್ಡ್‌ ಸುಳ್ಳು ಸುದ್ದಿ ಹಬ್ಬಿಸಿದೆ.

“ಗಡಿಯಲ್ಲಿ ಚೀನಾ ನಿರ್ಮಿಸಿದ್ದ ಉದ್ವಿಗ್ನ ಸ್ಥಿತಿಯನ್ನು ಭಾರತ ಸಮರ್ಥವಾಗಿ ಎದುರಿಸಿದೆ. ಇದು ಚೀನಾದಿಂದ ಒದಗುವ ಬೆದರಿಕೆಯನ್ನು ಧೈರ್ಯದಿಂದ ಎದುರಿಸಲು ಇತರ ದೇಶಗಳಿಗೆ ಶಕ್ತಿ ತುಂಬಲಿದೆ. ಚೀನಾಕ್ಕೆ ತಕ್ಕ ಪ್ರತ್ಯುತ್ತರ ನೀಡಿದ ಪ್ರಧಾನಿ ನರೇಂದ್ರ ಮೋದಿ ಬಗ್ಗೆ ಹೆಮ್ಮೆ ಎನಿಸುತ್ತದೆ”. – ಅಮೆರಿಕದ ಸಂಸದ ಜಾನ್ ಕೆನಡಿ ಎಂಬ ವಿಷಯವುಳ್ಳ ಪೋಸ್ಟರ್ ಮಾಡಿ, ಅದರಲ್ಲಿ ಜಾನ್ ಕೆನಡಿ ಫೋಟೊ ಹಾಕಿ ಪೋಸ್ಟ್‌ ಕಾರ್ಡ್‌ ಕನ್ನಡ ಸೇರಿದಂತೆ ಹಲವಾರು ಫೇಸ್‌ಬುಕ್‌ ಪುಟಗಳಲ್ಲಿ ಷೇರ್ ಮಾಡಲಾಗಿದೆ.

ಆದರೆ ಸ್ಪಲ್ಪ ಸಮಯದಲ್ಲಿಯೇ ನೆಟ್ಟಿಗರು ಅಮೆರಿಕ ಮಾಜಿ ಅಧ್ಯಕ್ಷ ಜಾನ್ ಕೆನಡಿ ಮರಣ ಹೊಂದಿ 57 ವರ್ಷಗಳಾಗಿವೆ. ಸುಳ್ಳು ಸುದ್ದಿ ಹರಡುವುದನ್ನು ನಿಲ್ಲಿಸಿ ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ. ಜಾನ್ ಕೆನಡಿ 1963ರಲ್ಲಿ ಸಾವನಪ್ಪಿರುವ ವಿಕಿಪೀಡಿಯ ಮಾಹಿತಿಗಳನ್ನು ಹಂಚಿಕೊಂಡಿದ್ದಾರೆ.

ಪೋಸ್ಟ್ ಕಾರ್ಡ್ ಮೊದಲು ಹರಡಿದ್ದ ಪೋಸ್ಟರ್

ನಂತರ ಮುಖಭಂಗಕ್ಕೊಳಗಾದ ಪೋಸ್ಟ್ ಕಾರ್ಡ್ ಮುಖ್ಯಸ್ಥ ಮಹೇಶ್ ವಿಕ್ರಂ ಹೆಗ್ಡೆ ಆ ಪೋಸ್ಟರ್‌ ಅನ್ನು ಡಿಲೀಟ್ ಮಾಡಿದ್ದಾರೆ. ಕೂಡಲೇ ಜಾನ್ ಕೆನಡಿಯ ಜಾಗದಲ್ಲಿ ಜಾನ್ ನೀಲಿ ಕೆನಡಿಯ ಫೋಟೊ ಹಾಕಿ ಮತ್ತೊಂದು ಪೋಸ್ಟರ್ ಅನ್ನು ಪೋಸ್ಟ್ ಮಾಡಿದ್ದಾರೆ.

https://www.facebook.com/mvhindu/posts/1236827983315356

ಈ ಕುರಿತು ಗೂಗಲ್‌ನಲ್ಲಿ ಹುಡಕಾಡಿದಾಗ ಮೋದಿ ಕುರಿತು ಇತ್ತೀಚೆಗೆ ಜಾನ್‌ ನೀಲಿ ಕೆನಡಿ ಮಾತನಾಡಿರುವ ಯಾವುದೇ ವರದಿಗಳು ಲಭ್ಯವಿಲ್ಲ. ಆದರೆ ನ್ಯೂಸ್‌ಬಸ್ಟ್‌.ಇನ್ ಎನ್ನು ಭಾರತೀಯ ಮೂಲಕ ವೆಬ್ ಸೈಟ್ ಒಂದು ಮಾತ್ರ ಈ ಸುದ್ದಿಯನ್ನು ಪ್ರಕಟಿಸಿದೆ. ಆದರೆ ಅದರ ಫೇಸ್‌ಬುಕ್‌ ಪುಟವು ಕೇವಲ 43 ಲೈಕ್‌ಗಳನ್ನು ಹಾಗೂ 473 ಫಾಲೋವರ್‌ಗಳನ್ನು ಮಾತ್ರ ಹೊಂದಿದೆ. ಆ ವರದಿಯನ್ನು ಕೇವಲ ಒಬ್ಬರು ಮಾತ್ರ ಓದಿದ್ದಾರೆ.. ಅಲ್ಲಿಗೆ ಅದು ಕೂಡ ಫೇಕ್‌ ನ್ಯೂಸ್ ಎಂದು ಸಾಬೀತಾಗಿದೆ.

ಒಟ್ಟಿನಲ್ಲಿ ಸುಳ್ಳು ಸುದ್ದಿ ಹರಡುವುದರಲ್ಲಿ ಎತ್ತಿದ ಕೈ ಆದ ಮಹೇಶ್ ವಿಕ್ರಂ ಹೆಗಡೆ ಮತ್ತು ಫೋಸ್ಟ್ ಕಾರ್ಡ್ ಮತ್ತೊಂದು ಸುಳ್ಳು ಸುದ್ದಿ ಹರಡಿ ಸಿಕ್ಕಿಕೊಂಡಿದೆ. ನೆಟ್ಟಿಗರು ದೊಡ್ಡ ಮಟ್ಟದಲ್ಲಿ ತರಾಟೆಗೆ ತೆಗೆದುಕೊಂಡಿದ್ದಾರೆ.


ಇದನ್ನೂ ಓದಿ: ಮುಖ್ಯಮಂತ್ರಿಗಳ ಎಚ್ಚರಿಕೆಯ ನಂತರವೂ ಸುಳ್ಳು ಸುದ್ದಿ ಹರಡುತ್ತಿರುವ ಪೋಸ್ಟ್‌ ಕಾರ್ಡ್‌ ಕನ್ನಡ: ಕ್ರಮ ಯಾವಾಗ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. PEOPLE ARE VERY MUCH AWARE ABOUT GOSI MEDIA N THEIR DIRTY LIES… TO DISTRACT N DIVERT FROM CURRENT MAJOR ISSUES N TO FOOL PEOPLE ASHTE..
    BUT CANT FOOL ANYMORE.
    ENJOY ACHHEDIN..🤣🤣🤣

LEAVE A REPLY

Please enter your comment!
Please enter your name here

- Advertisment -

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...