Homeಚಳವಳಿದೆಹಲಿ ಪೂರ್ವಭಾಗದಲ್ಲಿ ಭುಗಿಲೆದ್ದ ಮತ್ತೊಂದು ’ರೈತ ಪ್ರತಿಭಟನೆ’

ದೆಹಲಿ ಪೂರ್ವಭಾಗದಲ್ಲಿ ಭುಗಿಲೆದ್ದ ಮತ್ತೊಂದು ’ರೈತ ಪ್ರತಿಭಟನೆ’

- Advertisement -
- Advertisement -

ಕೇಂದ್ರದ ಬಿಜೆಪಿ ಸರ್ಕಾರದ ವಿರುದ್ದ ದೇಶದಾದ್ಯಂತ ರೈತರು ಈಗಾಗಲೇ ಹೋರಾಟ ಮಾಡುತ್ತಿದ್ದಾರೆ. ದೆಹಲಿಯ ಹೋರಾಟ 43 ನೇ ದಿನಕ್ಕೆ ಕಾಲಿಟ್ಟಿದೆ. ದೆಹಲಿ ಗಡಿಯಲ್ಲಿ ಮೂರು ಹೊಸ ಕೃಷಿ ಕಾನೂನುಗಳನ್ನು ರದ್ದು ಪಡಿಸಬೇಕು ಹಾಗೂ ಕನಿಷ್ಠ ಬೆಂಬಲ ಬೆಲೆ ನಿಗದಿ ಮಾಡುವ ಕಾನೂನು ತರಬೇಕು ಎಂದು ರೈತರು ಹೋರಾಟ ನಡೆಸುತ್ತಿದ್ದಾರೆ. ಆದರೆ ದೆಹಲಿಯ ಪೂರ್ವ ಭಾಗದಲ್ಲಿ ಮತ್ತೊಂದು ರೈತ ಪ್ರತಿಭಟನೆ ಭುಗಿಲೆದ್ದಿದ್ದು, ಉತ್ತರ ಪ್ರದೇಶದ ಕಬ್ಬು ಬೆಳೆಗಾರರು ಬಾಕಿ ಪಾವತಿಗೆ ಆಗ್ರಹಿಸಿ ಹೋರಾಟ ಪ್ರಾರಂಭಿಸಿದ್ದಾರೆ.

ಕಳೆದ ಹಂಗಾಮಿನ ಕಬ್ಬಿನ ಬಾಕಿ ಪಾವತಿಯಾಗದೇ ಇರುವುದು, ಕಬ್ಬು ಅರೆದು ಎರಡು ತಿಂಗಳಾದರೂ 2020-21 ರ ಸಾಲಿನ ರಾಜ್ಯ ಸಲಹೆ ಮಾಡಿದ ಬೆಲೆ (state advised price-SAP) ಘೋಷಿಸದಿರುವುದು ಯುಪಿಯ ಕಬ್ಬು ಬೆಳೆಗಾರರ ಪ್ರತಿಭಟನೆಗೆ ಕಾರಣವಾಗಿದೆ.

ಉತ್ತರಪ್ರದೇಶದ ಮುಖ್ಯ ಬೆಳೆಯಾಗಿರುವ ಕಬ್ಬನ್ನು ಎಪಿಎಂಸಿ ಮಂಡಿಗಳಲ್ಲಿ ಮಾರುವುದಿಲ್ಲ. ಅದಕ್ಕೆ ’ರಾಜ್ಯ ಸಲಹೆ ಮಾಡಿದ ಬೆಲೆ(ಎಸ್‌ಎಪಿ)’ ನಿಗದಿ ಮಾಡಲಾಗುತ್ತದೆ. ಈ ಬೆಲೆ ಶಾಸನ ಬದ್ಧವಾಗಿರುತ್ತದೆ. ಇಲ್ಲಿ ಎಂಎಸ್‌ಪಿ ಪ್ರಶ್ನೆ ಬರುವುದಿಲ್ಲ, ಸಕ್ಕರೆ ಕಾರ್ಖಾನೆಗಳು ಎಸ್‌ಎಪಿ ಆಧರಿಸಿ ರೈತರಿಗೆ ಪಾವತಿಸಲೇಬೇಕು.

ಇದನ್ನೂ ಓದಿ: ರೈತ ಪ್ರತಿಭಟನೆಯಲ್ಲಿ ಪಂಜಾಬಿನ ರೈತ ಕೂಲಿಯಾಳುಗಳ ಕತೆ

ದೆಹಲಿ-ಉತ್ತರಪ್ರದೇಶ ಗಡಿಯ ಘಾಜಿಪುರದ ಪ್ರತಿಭಟನೆಯಲ್ಲಿ ಕಬ್ಬು ಬೆಳೆಗಾರರು ಭಾಗವಹಿಸುತ್ತಿದ್ದಾರೆ. ಕಬ್ಬನ್ನು ಕಾರ್ಖಾನೆಗೆ ತಲುಪಿಸಿದ 14 ದಿನದಲ್ಲಿ ಎಸ್‌ಎಪಿ ಪಾವತಿಸಬೇಕು ಎಂಬ ಕಾನೂನು ಇದ್ದರೂ, 2019-20 ರ ಹಂಗಾಮಿನ (ಸೆಪ್ಟೆಂಬರ್-ಅಕ್ಟೋಬರ್) ಕಬ್ಬಿಗೆ ಕಾರ್ಖಾನೆಗಳು ಇನ್ನೂ ಹಣ ಪಾವತಿ ಮಾಡಿಲ್ಲ. 2020 ರ ಅಕ್ಟೋಬರ್ ಅಂತ್ಯದಿಂದಲೇ ಕಾರ್ಖಾನೆಗಳು 2020-21 ರ ಹಂಗಾಮಿಯ ಕಬ್ಬು ಅರೆಯಲು ಶುರು ಮಾಡಿದ್ದರೂ, ಆದಿತ್ಯನಾಥ ಸರ್ಕಾರವು ಈವರೆಗೂ ಈ ಹಂಗಾಮಿ ಎಸ್‌ಎಪಿಯನ್ನು ಘೋಷಣೆ ಮಾಡಿಲ್ಲ.

ಪಶ್ಚಿಮ ಯುಪಿಯ ಭಾಗಪತ್ ಜಿಲ್ಲೆಯ ಖಾಸಿಮಪುರ್ ಖೇರಿಯಲ್ಲಿ ಒಂದು ಎಕರೆ ಜಮೀನು ಹೊಂದಿರುವ ರಾಕೇಶ್ ತೋಮರ್, 2019-20 ರ ಹಂಗಾಮಿಯ ಒಟ್ಟು 15 ’ಪಾರ್ಚಿ’ ಕಬ್ಬನ್ನು (ಪಾರ್ಚಿ ಎಂದರೆ ಒಂದು ಎತ್ತಿನ ಚಕ್ಕಡಿ ಭರ್ತಿ ಕಬ್ಬು, ತಲಾ 18 ಕ್ವಿಂಟಾಲ್ ತೂಗುತ್ತದೆ) ರಾಮಲಾ ಸಹಕಾರಿ ಮಿಲ್‌ಗೆ ನೀಡಿದ್ದಾರೆ. ಮಿಲ್ ಜೂನ್ 14 ರಂದೇ ಕಬ್ಬು ಅರೆಯುವಿಕೆ ಆರಂಭಿಸಿದೆ. ರಾಕೇಶ್ ಅವರಿಗೆ ಇನ್ನೂ 4 ಪಾರ್ಚಿ ಕಬ್ಬಿನ ಬಾಕಿ ಬರಬೇಕಿದ್ದು, ಇದು 23,400 ಆಗುತ್ತದೆ. ಹೊಸ ಹಂಗಾಮಿಯ 6 ಪಾರ್ಚಿ ಕಬ್ಬನ್ನೂ ಅವರು ಮಿಲ್‌ಗೆ ಪೂರೈಸಿದ್ದಾರೆ. ಅಕ್ಟೋಬರ್ ಅಂತ್ಯದಲ್ಲೇ ಅರಿಯುವಿಕೆ ಆರಂಭಗೊಂಡರೂ ಇನ್ನೂ ಬಾಕಿ ಬಂದಿಲ್ಲ.

ಇದನ್ನೂ ಓದಿ: ಈ ಬಾರಿ ಕೆಂಪುಕೋಟೆಯಲ್ಲಿ ಮೋದಿ ಧ್ವಜಾರೋಹಣ ಮಾಡಲು ಬಿಡುವುದಿಲ್ಲ: ಟ್ರಾಕ್ಟರ್ ರ್ಯಾಲಿಯಲ್ಲಿ ರೈತರ ಎಚ್ಚರಿಕೆ

ಶಾಮ್ಲಿಯಲ್ಲಿರುವ ಮಿಲ್‌ಗೆ ಅನೂಜ್ ಕಲ್ಕಂಡೆಯವರು ಜನವರಿ 3 ರಂದು 20 ಕ್ವಿಂಟಾಲ್ ಕಬ್ಬು ಪೂರೈಸಿದ್ದರು. ಕಳೆದ ಹಂಗಾಮಿನಲ್ಲಿ 2,400 ಕ್ವಿಂಟಾಲ್ ಪೂರೈಸಿದ್ದರು. ಹಿಂದಿನ ಹಂಗಾಮಿನ ಬಾಕಿಯೂ ಬಂದಿಲ್ಲ. ಈ ಸಲ ಇನ್ನೂ ಎಸ್‌ಎಪಿ ಘೋಷಣೆಯಾಗದ ಕಾರಣ, ಈ ಸಲವೂ ವಿಳಂಬವಾಗಲಿದೆ. ಸರ್ಕಾರ ಎಸ್‌ಎಪಿ ಘೋಷಣೆ ಮಾಡದೇ ಕಾರ್ಖಾನೆಗಳಿಗೆ ಪರೀಕ್ಷವಾಗಿ ಸಹಾಯ ಮಾಡುತ್ತಿದೆ ಎಂಬ ಆರೋಪ ಕೇಳಿ ಬಂದಿದೆ.

2021 ರ ಜನವರಿ 5 ರ ಅಂಕಿಅಂಶಗಳ ಪ್ರಕಾರ, ಮಿಲ್/ಕಾರ್ಖಾನೆಗಳು 2019-20 ರ ಹಂಗಾಮಿನಲ್ಲಿ ಒಟ್ಟು 35,898 ಕೋಟಿ ರೂ ಮೌಲ್ಯದ (ಎಸ್‌ಎಪಿ ಅನ್ವಯ) ಕಬ್ಬು ಖರೀದಿಸಿದ್ದು, ಇನ್ನೂ 2019-20 ರ ಸಾಲಿನ 2,470 ಕೋಟಿ ರೂ. ಬಾಕಿ ಪಾವತಿಸಿಲ್ಲ. ಈ ಹಂಗಾಮಿನಲ್ಲಿ ಅವು ಈಗಾಗಲೇ 363.20 ಲಕ್ಷ ಟನ್ ಕಬ್ಬನ್ನೂ ಅರೆದಿವೆ.

ಈಗಲೂ ಎಸ್‌ಎಪಿ ಘೋಷಣೆಯಾಗದ ನೆಪದಲ್ಲಿ ರೈತರಿಗೆ ಹಣ ಪಾವತಿ ಮಾಡುತ್ತಿಲ್ಲ. ಹೋದ ವರ್ಷದ ಎಸ್‌ಎಪಿ ಆಧಾರದಲ್ಲಿ ಹೇಳುವುದಾದರೆ, 11,660 ಕೋಟಿ ರೂ. ಮೌಲ್ಯದ ಕಬ್ಬನ್ನೂ ಈಗಾಗಲೇ ಅರೆಯಲು ಆರಂಭಿಸಿವೆ. ಇಲ್ಲಿವರೆಗೆ ಅವು 11,660 ಕೋಟಿ ರೂ. ಪೈಕಿ ಕೇವಲ 2,427 ಕೋಟಿ ರೂ ಪಾವತಿಸಿದ್ದು, ಎಸ್‌ಎಪಿ ಘೋಷಣೆ ನಂತರ ಉಳಿದ ಹಣ ಪಾವತಿಸುವ ಭರವಸೆ ನೀಡಿವೆ. ಆದರೆ ಕಳೆದ ಹಂಗಾಮಿನ ಬಾಕಿಯನ್ನೂ ಇನ್ನೂ ಕೊಡದ ಪರಿಣಾಮ ಕಬ್ಬು ಬೆಳೆಗಾರರು ಯುಪಿ ಸರ್ಕಾರ ಮತ್ತು ಕಾರ್ಖಾನೆಗಳ ವಿರುದ್ಧ ದೆಹಲಿಯ ಪೂರ್ವ ಗಡಿಯ ಘಾಜಿಪುರ್‌ನಲ್ಲಿ ಪ್ರತಿಭಟನೆ ಹಮ್ಮಿಕೊಂಡಿದ್ದಾರೆ.

ಇದನ್ನೂ ಓದಿ: ದೆಹಲಿ ಹೋರಾಟದಲ್ಲಿ ರೈತರ ಜೊತೆ ಬುದ್ದ, ಅಂಬೇಡ್ಕರ್‌, ಭಗತ್‌ಸಿಂಗ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...