Homeಚಳವಳಿದೆಹಲಿ ಪೂರ್ವಭಾಗದಲ್ಲಿ ಭುಗಿಲೆದ್ದ ಮತ್ತೊಂದು ’ರೈತ ಪ್ರತಿಭಟನೆ’

ದೆಹಲಿ ಪೂರ್ವಭಾಗದಲ್ಲಿ ಭುಗಿಲೆದ್ದ ಮತ್ತೊಂದು ’ರೈತ ಪ್ರತಿಭಟನೆ’

- Advertisement -
- Advertisement -

ಕೇಂದ್ರದ ಬಿಜೆಪಿ ಸರ್ಕಾರದ ವಿರುದ್ದ ದೇಶದಾದ್ಯಂತ ರೈತರು ಈಗಾಗಲೇ ಹೋರಾಟ ಮಾಡುತ್ತಿದ್ದಾರೆ. ದೆಹಲಿಯ ಹೋರಾಟ 43 ನೇ ದಿನಕ್ಕೆ ಕಾಲಿಟ್ಟಿದೆ. ದೆಹಲಿ ಗಡಿಯಲ್ಲಿ ಮೂರು ಹೊಸ ಕೃಷಿ ಕಾನೂನುಗಳನ್ನು ರದ್ದು ಪಡಿಸಬೇಕು ಹಾಗೂ ಕನಿಷ್ಠ ಬೆಂಬಲ ಬೆಲೆ ನಿಗದಿ ಮಾಡುವ ಕಾನೂನು ತರಬೇಕು ಎಂದು ರೈತರು ಹೋರಾಟ ನಡೆಸುತ್ತಿದ್ದಾರೆ. ಆದರೆ ದೆಹಲಿಯ ಪೂರ್ವ ಭಾಗದಲ್ಲಿ ಮತ್ತೊಂದು ರೈತ ಪ್ರತಿಭಟನೆ ಭುಗಿಲೆದ್ದಿದ್ದು, ಉತ್ತರ ಪ್ರದೇಶದ ಕಬ್ಬು ಬೆಳೆಗಾರರು ಬಾಕಿ ಪಾವತಿಗೆ ಆಗ್ರಹಿಸಿ ಹೋರಾಟ ಪ್ರಾರಂಭಿಸಿದ್ದಾರೆ.

ಕಳೆದ ಹಂಗಾಮಿನ ಕಬ್ಬಿನ ಬಾಕಿ ಪಾವತಿಯಾಗದೇ ಇರುವುದು, ಕಬ್ಬು ಅರೆದು ಎರಡು ತಿಂಗಳಾದರೂ 2020-21 ರ ಸಾಲಿನ ರಾಜ್ಯ ಸಲಹೆ ಮಾಡಿದ ಬೆಲೆ (state advised price-SAP) ಘೋಷಿಸದಿರುವುದು ಯುಪಿಯ ಕಬ್ಬು ಬೆಳೆಗಾರರ ಪ್ರತಿಭಟನೆಗೆ ಕಾರಣವಾಗಿದೆ.

ಉತ್ತರಪ್ರದೇಶದ ಮುಖ್ಯ ಬೆಳೆಯಾಗಿರುವ ಕಬ್ಬನ್ನು ಎಪಿಎಂಸಿ ಮಂಡಿಗಳಲ್ಲಿ ಮಾರುವುದಿಲ್ಲ. ಅದಕ್ಕೆ ’ರಾಜ್ಯ ಸಲಹೆ ಮಾಡಿದ ಬೆಲೆ(ಎಸ್‌ಎಪಿ)’ ನಿಗದಿ ಮಾಡಲಾಗುತ್ತದೆ. ಈ ಬೆಲೆ ಶಾಸನ ಬದ್ಧವಾಗಿರುತ್ತದೆ. ಇಲ್ಲಿ ಎಂಎಸ್‌ಪಿ ಪ್ರಶ್ನೆ ಬರುವುದಿಲ್ಲ, ಸಕ್ಕರೆ ಕಾರ್ಖಾನೆಗಳು ಎಸ್‌ಎಪಿ ಆಧರಿಸಿ ರೈತರಿಗೆ ಪಾವತಿಸಲೇಬೇಕು.

ಇದನ್ನೂ ಓದಿ: ರೈತ ಪ್ರತಿಭಟನೆಯಲ್ಲಿ ಪಂಜಾಬಿನ ರೈತ ಕೂಲಿಯಾಳುಗಳ ಕತೆ

ದೆಹಲಿ-ಉತ್ತರಪ್ರದೇಶ ಗಡಿಯ ಘಾಜಿಪುರದ ಪ್ರತಿಭಟನೆಯಲ್ಲಿ ಕಬ್ಬು ಬೆಳೆಗಾರರು ಭಾಗವಹಿಸುತ್ತಿದ್ದಾರೆ. ಕಬ್ಬನ್ನು ಕಾರ್ಖಾನೆಗೆ ತಲುಪಿಸಿದ 14 ದಿನದಲ್ಲಿ ಎಸ್‌ಎಪಿ ಪಾವತಿಸಬೇಕು ಎಂಬ ಕಾನೂನು ಇದ್ದರೂ, 2019-20 ರ ಹಂಗಾಮಿನ (ಸೆಪ್ಟೆಂಬರ್-ಅಕ್ಟೋಬರ್) ಕಬ್ಬಿಗೆ ಕಾರ್ಖಾನೆಗಳು ಇನ್ನೂ ಹಣ ಪಾವತಿ ಮಾಡಿಲ್ಲ. 2020 ರ ಅಕ್ಟೋಬರ್ ಅಂತ್ಯದಿಂದಲೇ ಕಾರ್ಖಾನೆಗಳು 2020-21 ರ ಹಂಗಾಮಿಯ ಕಬ್ಬು ಅರೆಯಲು ಶುರು ಮಾಡಿದ್ದರೂ, ಆದಿತ್ಯನಾಥ ಸರ್ಕಾರವು ಈವರೆಗೂ ಈ ಹಂಗಾಮಿ ಎಸ್‌ಎಪಿಯನ್ನು ಘೋಷಣೆ ಮಾಡಿಲ್ಲ.

ಪಶ್ಚಿಮ ಯುಪಿಯ ಭಾಗಪತ್ ಜಿಲ್ಲೆಯ ಖಾಸಿಮಪುರ್ ಖೇರಿಯಲ್ಲಿ ಒಂದು ಎಕರೆ ಜಮೀನು ಹೊಂದಿರುವ ರಾಕೇಶ್ ತೋಮರ್, 2019-20 ರ ಹಂಗಾಮಿಯ ಒಟ್ಟು 15 ’ಪಾರ್ಚಿ’ ಕಬ್ಬನ್ನು (ಪಾರ್ಚಿ ಎಂದರೆ ಒಂದು ಎತ್ತಿನ ಚಕ್ಕಡಿ ಭರ್ತಿ ಕಬ್ಬು, ತಲಾ 18 ಕ್ವಿಂಟಾಲ್ ತೂಗುತ್ತದೆ) ರಾಮಲಾ ಸಹಕಾರಿ ಮಿಲ್‌ಗೆ ನೀಡಿದ್ದಾರೆ. ಮಿಲ್ ಜೂನ್ 14 ರಂದೇ ಕಬ್ಬು ಅರೆಯುವಿಕೆ ಆರಂಭಿಸಿದೆ. ರಾಕೇಶ್ ಅವರಿಗೆ ಇನ್ನೂ 4 ಪಾರ್ಚಿ ಕಬ್ಬಿನ ಬಾಕಿ ಬರಬೇಕಿದ್ದು, ಇದು 23,400 ಆಗುತ್ತದೆ. ಹೊಸ ಹಂಗಾಮಿಯ 6 ಪಾರ್ಚಿ ಕಬ್ಬನ್ನೂ ಅವರು ಮಿಲ್‌ಗೆ ಪೂರೈಸಿದ್ದಾರೆ. ಅಕ್ಟೋಬರ್ ಅಂತ್ಯದಲ್ಲೇ ಅರಿಯುವಿಕೆ ಆರಂಭಗೊಂಡರೂ ಇನ್ನೂ ಬಾಕಿ ಬಂದಿಲ್ಲ.

ಇದನ್ನೂ ಓದಿ: ಈ ಬಾರಿ ಕೆಂಪುಕೋಟೆಯಲ್ಲಿ ಮೋದಿ ಧ್ವಜಾರೋಹಣ ಮಾಡಲು ಬಿಡುವುದಿಲ್ಲ: ಟ್ರಾಕ್ಟರ್ ರ್ಯಾಲಿಯಲ್ಲಿ ರೈತರ ಎಚ್ಚರಿಕೆ

ಶಾಮ್ಲಿಯಲ್ಲಿರುವ ಮಿಲ್‌ಗೆ ಅನೂಜ್ ಕಲ್ಕಂಡೆಯವರು ಜನವರಿ 3 ರಂದು 20 ಕ್ವಿಂಟಾಲ್ ಕಬ್ಬು ಪೂರೈಸಿದ್ದರು. ಕಳೆದ ಹಂಗಾಮಿನಲ್ಲಿ 2,400 ಕ್ವಿಂಟಾಲ್ ಪೂರೈಸಿದ್ದರು. ಹಿಂದಿನ ಹಂಗಾಮಿನ ಬಾಕಿಯೂ ಬಂದಿಲ್ಲ. ಈ ಸಲ ಇನ್ನೂ ಎಸ್‌ಎಪಿ ಘೋಷಣೆಯಾಗದ ಕಾರಣ, ಈ ಸಲವೂ ವಿಳಂಬವಾಗಲಿದೆ. ಸರ್ಕಾರ ಎಸ್‌ಎಪಿ ಘೋಷಣೆ ಮಾಡದೇ ಕಾರ್ಖಾನೆಗಳಿಗೆ ಪರೀಕ್ಷವಾಗಿ ಸಹಾಯ ಮಾಡುತ್ತಿದೆ ಎಂಬ ಆರೋಪ ಕೇಳಿ ಬಂದಿದೆ.

2021 ರ ಜನವರಿ 5 ರ ಅಂಕಿಅಂಶಗಳ ಪ್ರಕಾರ, ಮಿಲ್/ಕಾರ್ಖಾನೆಗಳು 2019-20 ರ ಹಂಗಾಮಿನಲ್ಲಿ ಒಟ್ಟು 35,898 ಕೋಟಿ ರೂ ಮೌಲ್ಯದ (ಎಸ್‌ಎಪಿ ಅನ್ವಯ) ಕಬ್ಬು ಖರೀದಿಸಿದ್ದು, ಇನ್ನೂ 2019-20 ರ ಸಾಲಿನ 2,470 ಕೋಟಿ ರೂ. ಬಾಕಿ ಪಾವತಿಸಿಲ್ಲ. ಈ ಹಂಗಾಮಿನಲ್ಲಿ ಅವು ಈಗಾಗಲೇ 363.20 ಲಕ್ಷ ಟನ್ ಕಬ್ಬನ್ನೂ ಅರೆದಿವೆ.

ಈಗಲೂ ಎಸ್‌ಎಪಿ ಘೋಷಣೆಯಾಗದ ನೆಪದಲ್ಲಿ ರೈತರಿಗೆ ಹಣ ಪಾವತಿ ಮಾಡುತ್ತಿಲ್ಲ. ಹೋದ ವರ್ಷದ ಎಸ್‌ಎಪಿ ಆಧಾರದಲ್ಲಿ ಹೇಳುವುದಾದರೆ, 11,660 ಕೋಟಿ ರೂ. ಮೌಲ್ಯದ ಕಬ್ಬನ್ನೂ ಈಗಾಗಲೇ ಅರೆಯಲು ಆರಂಭಿಸಿವೆ. ಇಲ್ಲಿವರೆಗೆ ಅವು 11,660 ಕೋಟಿ ರೂ. ಪೈಕಿ ಕೇವಲ 2,427 ಕೋಟಿ ರೂ ಪಾವತಿಸಿದ್ದು, ಎಸ್‌ಎಪಿ ಘೋಷಣೆ ನಂತರ ಉಳಿದ ಹಣ ಪಾವತಿಸುವ ಭರವಸೆ ನೀಡಿವೆ. ಆದರೆ ಕಳೆದ ಹಂಗಾಮಿನ ಬಾಕಿಯನ್ನೂ ಇನ್ನೂ ಕೊಡದ ಪರಿಣಾಮ ಕಬ್ಬು ಬೆಳೆಗಾರರು ಯುಪಿ ಸರ್ಕಾರ ಮತ್ತು ಕಾರ್ಖಾನೆಗಳ ವಿರುದ್ಧ ದೆಹಲಿಯ ಪೂರ್ವ ಗಡಿಯ ಘಾಜಿಪುರ್‌ನಲ್ಲಿ ಪ್ರತಿಭಟನೆ ಹಮ್ಮಿಕೊಂಡಿದ್ದಾರೆ.

ಇದನ್ನೂ ಓದಿ: ದೆಹಲಿ ಹೋರಾಟದಲ್ಲಿ ರೈತರ ಜೊತೆ ಬುದ್ದ, ಅಂಬೇಡ್ಕರ್‌, ಭಗತ್‌ಸಿಂಗ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...