Homeಚಳವಳಿದೆಹಲಿ ಪೂರ್ವಭಾಗದಲ್ಲಿ ಭುಗಿಲೆದ್ದ ಮತ್ತೊಂದು ’ರೈತ ಪ್ರತಿಭಟನೆ’

ದೆಹಲಿ ಪೂರ್ವಭಾಗದಲ್ಲಿ ಭುಗಿಲೆದ್ದ ಮತ್ತೊಂದು ’ರೈತ ಪ್ರತಿಭಟನೆ’

- Advertisement -
- Advertisement -

ಕೇಂದ್ರದ ಬಿಜೆಪಿ ಸರ್ಕಾರದ ವಿರುದ್ದ ದೇಶದಾದ್ಯಂತ ರೈತರು ಈಗಾಗಲೇ ಹೋರಾಟ ಮಾಡುತ್ತಿದ್ದಾರೆ. ದೆಹಲಿಯ ಹೋರಾಟ 43 ನೇ ದಿನಕ್ಕೆ ಕಾಲಿಟ್ಟಿದೆ. ದೆಹಲಿ ಗಡಿಯಲ್ಲಿ ಮೂರು ಹೊಸ ಕೃಷಿ ಕಾನೂನುಗಳನ್ನು ರದ್ದು ಪಡಿಸಬೇಕು ಹಾಗೂ ಕನಿಷ್ಠ ಬೆಂಬಲ ಬೆಲೆ ನಿಗದಿ ಮಾಡುವ ಕಾನೂನು ತರಬೇಕು ಎಂದು ರೈತರು ಹೋರಾಟ ನಡೆಸುತ್ತಿದ್ದಾರೆ. ಆದರೆ ದೆಹಲಿಯ ಪೂರ್ವ ಭಾಗದಲ್ಲಿ ಮತ್ತೊಂದು ರೈತ ಪ್ರತಿಭಟನೆ ಭುಗಿಲೆದ್ದಿದ್ದು, ಉತ್ತರ ಪ್ರದೇಶದ ಕಬ್ಬು ಬೆಳೆಗಾರರು ಬಾಕಿ ಪಾವತಿಗೆ ಆಗ್ರಹಿಸಿ ಹೋರಾಟ ಪ್ರಾರಂಭಿಸಿದ್ದಾರೆ.

ಕಳೆದ ಹಂಗಾಮಿನ ಕಬ್ಬಿನ ಬಾಕಿ ಪಾವತಿಯಾಗದೇ ಇರುವುದು, ಕಬ್ಬು ಅರೆದು ಎರಡು ತಿಂಗಳಾದರೂ 2020-21 ರ ಸಾಲಿನ ರಾಜ್ಯ ಸಲಹೆ ಮಾಡಿದ ಬೆಲೆ (state advised price-SAP) ಘೋಷಿಸದಿರುವುದು ಯುಪಿಯ ಕಬ್ಬು ಬೆಳೆಗಾರರ ಪ್ರತಿಭಟನೆಗೆ ಕಾರಣವಾಗಿದೆ.

ಉತ್ತರಪ್ರದೇಶದ ಮುಖ್ಯ ಬೆಳೆಯಾಗಿರುವ ಕಬ್ಬನ್ನು ಎಪಿಎಂಸಿ ಮಂಡಿಗಳಲ್ಲಿ ಮಾರುವುದಿಲ್ಲ. ಅದಕ್ಕೆ ’ರಾಜ್ಯ ಸಲಹೆ ಮಾಡಿದ ಬೆಲೆ(ಎಸ್‌ಎಪಿ)’ ನಿಗದಿ ಮಾಡಲಾಗುತ್ತದೆ. ಈ ಬೆಲೆ ಶಾಸನ ಬದ್ಧವಾಗಿರುತ್ತದೆ. ಇಲ್ಲಿ ಎಂಎಸ್‌ಪಿ ಪ್ರಶ್ನೆ ಬರುವುದಿಲ್ಲ, ಸಕ್ಕರೆ ಕಾರ್ಖಾನೆಗಳು ಎಸ್‌ಎಪಿ ಆಧರಿಸಿ ರೈತರಿಗೆ ಪಾವತಿಸಲೇಬೇಕು.

ಇದನ್ನೂ ಓದಿ: ರೈತ ಪ್ರತಿಭಟನೆಯಲ್ಲಿ ಪಂಜಾಬಿನ ರೈತ ಕೂಲಿಯಾಳುಗಳ ಕತೆ

ದೆಹಲಿ-ಉತ್ತರಪ್ರದೇಶ ಗಡಿಯ ಘಾಜಿಪುರದ ಪ್ರತಿಭಟನೆಯಲ್ಲಿ ಕಬ್ಬು ಬೆಳೆಗಾರರು ಭಾಗವಹಿಸುತ್ತಿದ್ದಾರೆ. ಕಬ್ಬನ್ನು ಕಾರ್ಖಾನೆಗೆ ತಲುಪಿಸಿದ 14 ದಿನದಲ್ಲಿ ಎಸ್‌ಎಪಿ ಪಾವತಿಸಬೇಕು ಎಂಬ ಕಾನೂನು ಇದ್ದರೂ, 2019-20 ರ ಹಂಗಾಮಿನ (ಸೆಪ್ಟೆಂಬರ್-ಅಕ್ಟೋಬರ್) ಕಬ್ಬಿಗೆ ಕಾರ್ಖಾನೆಗಳು ಇನ್ನೂ ಹಣ ಪಾವತಿ ಮಾಡಿಲ್ಲ. 2020 ರ ಅಕ್ಟೋಬರ್ ಅಂತ್ಯದಿಂದಲೇ ಕಾರ್ಖಾನೆಗಳು 2020-21 ರ ಹಂಗಾಮಿಯ ಕಬ್ಬು ಅರೆಯಲು ಶುರು ಮಾಡಿದ್ದರೂ, ಆದಿತ್ಯನಾಥ ಸರ್ಕಾರವು ಈವರೆಗೂ ಈ ಹಂಗಾಮಿ ಎಸ್‌ಎಪಿಯನ್ನು ಘೋಷಣೆ ಮಾಡಿಲ್ಲ.

ಪಶ್ಚಿಮ ಯುಪಿಯ ಭಾಗಪತ್ ಜಿಲ್ಲೆಯ ಖಾಸಿಮಪುರ್ ಖೇರಿಯಲ್ಲಿ ಒಂದು ಎಕರೆ ಜಮೀನು ಹೊಂದಿರುವ ರಾಕೇಶ್ ತೋಮರ್, 2019-20 ರ ಹಂಗಾಮಿಯ ಒಟ್ಟು 15 ’ಪಾರ್ಚಿ’ ಕಬ್ಬನ್ನು (ಪಾರ್ಚಿ ಎಂದರೆ ಒಂದು ಎತ್ತಿನ ಚಕ್ಕಡಿ ಭರ್ತಿ ಕಬ್ಬು, ತಲಾ 18 ಕ್ವಿಂಟಾಲ್ ತೂಗುತ್ತದೆ) ರಾಮಲಾ ಸಹಕಾರಿ ಮಿಲ್‌ಗೆ ನೀಡಿದ್ದಾರೆ. ಮಿಲ್ ಜೂನ್ 14 ರಂದೇ ಕಬ್ಬು ಅರೆಯುವಿಕೆ ಆರಂಭಿಸಿದೆ. ರಾಕೇಶ್ ಅವರಿಗೆ ಇನ್ನೂ 4 ಪಾರ್ಚಿ ಕಬ್ಬಿನ ಬಾಕಿ ಬರಬೇಕಿದ್ದು, ಇದು 23,400 ಆಗುತ್ತದೆ. ಹೊಸ ಹಂಗಾಮಿಯ 6 ಪಾರ್ಚಿ ಕಬ್ಬನ್ನೂ ಅವರು ಮಿಲ್‌ಗೆ ಪೂರೈಸಿದ್ದಾರೆ. ಅಕ್ಟೋಬರ್ ಅಂತ್ಯದಲ್ಲೇ ಅರಿಯುವಿಕೆ ಆರಂಭಗೊಂಡರೂ ಇನ್ನೂ ಬಾಕಿ ಬಂದಿಲ್ಲ.

ಇದನ್ನೂ ಓದಿ: ಈ ಬಾರಿ ಕೆಂಪುಕೋಟೆಯಲ್ಲಿ ಮೋದಿ ಧ್ವಜಾರೋಹಣ ಮಾಡಲು ಬಿಡುವುದಿಲ್ಲ: ಟ್ರಾಕ್ಟರ್ ರ್ಯಾಲಿಯಲ್ಲಿ ರೈತರ ಎಚ್ಚರಿಕೆ

ಶಾಮ್ಲಿಯಲ್ಲಿರುವ ಮಿಲ್‌ಗೆ ಅನೂಜ್ ಕಲ್ಕಂಡೆಯವರು ಜನವರಿ 3 ರಂದು 20 ಕ್ವಿಂಟಾಲ್ ಕಬ್ಬು ಪೂರೈಸಿದ್ದರು. ಕಳೆದ ಹಂಗಾಮಿನಲ್ಲಿ 2,400 ಕ್ವಿಂಟಾಲ್ ಪೂರೈಸಿದ್ದರು. ಹಿಂದಿನ ಹಂಗಾಮಿನ ಬಾಕಿಯೂ ಬಂದಿಲ್ಲ. ಈ ಸಲ ಇನ್ನೂ ಎಸ್‌ಎಪಿ ಘೋಷಣೆಯಾಗದ ಕಾರಣ, ಈ ಸಲವೂ ವಿಳಂಬವಾಗಲಿದೆ. ಸರ್ಕಾರ ಎಸ್‌ಎಪಿ ಘೋಷಣೆ ಮಾಡದೇ ಕಾರ್ಖಾನೆಗಳಿಗೆ ಪರೀಕ್ಷವಾಗಿ ಸಹಾಯ ಮಾಡುತ್ತಿದೆ ಎಂಬ ಆರೋಪ ಕೇಳಿ ಬಂದಿದೆ.

2021 ರ ಜನವರಿ 5 ರ ಅಂಕಿಅಂಶಗಳ ಪ್ರಕಾರ, ಮಿಲ್/ಕಾರ್ಖಾನೆಗಳು 2019-20 ರ ಹಂಗಾಮಿನಲ್ಲಿ ಒಟ್ಟು 35,898 ಕೋಟಿ ರೂ ಮೌಲ್ಯದ (ಎಸ್‌ಎಪಿ ಅನ್ವಯ) ಕಬ್ಬು ಖರೀದಿಸಿದ್ದು, ಇನ್ನೂ 2019-20 ರ ಸಾಲಿನ 2,470 ಕೋಟಿ ರೂ. ಬಾಕಿ ಪಾವತಿಸಿಲ್ಲ. ಈ ಹಂಗಾಮಿನಲ್ಲಿ ಅವು ಈಗಾಗಲೇ 363.20 ಲಕ್ಷ ಟನ್ ಕಬ್ಬನ್ನೂ ಅರೆದಿವೆ.

ಈಗಲೂ ಎಸ್‌ಎಪಿ ಘೋಷಣೆಯಾಗದ ನೆಪದಲ್ಲಿ ರೈತರಿಗೆ ಹಣ ಪಾವತಿ ಮಾಡುತ್ತಿಲ್ಲ. ಹೋದ ವರ್ಷದ ಎಸ್‌ಎಪಿ ಆಧಾರದಲ್ಲಿ ಹೇಳುವುದಾದರೆ, 11,660 ಕೋಟಿ ರೂ. ಮೌಲ್ಯದ ಕಬ್ಬನ್ನೂ ಈಗಾಗಲೇ ಅರೆಯಲು ಆರಂಭಿಸಿವೆ. ಇಲ್ಲಿವರೆಗೆ ಅವು 11,660 ಕೋಟಿ ರೂ. ಪೈಕಿ ಕೇವಲ 2,427 ಕೋಟಿ ರೂ ಪಾವತಿಸಿದ್ದು, ಎಸ್‌ಎಪಿ ಘೋಷಣೆ ನಂತರ ಉಳಿದ ಹಣ ಪಾವತಿಸುವ ಭರವಸೆ ನೀಡಿವೆ. ಆದರೆ ಕಳೆದ ಹಂಗಾಮಿನ ಬಾಕಿಯನ್ನೂ ಇನ್ನೂ ಕೊಡದ ಪರಿಣಾಮ ಕಬ್ಬು ಬೆಳೆಗಾರರು ಯುಪಿ ಸರ್ಕಾರ ಮತ್ತು ಕಾರ್ಖಾನೆಗಳ ವಿರುದ್ಧ ದೆಹಲಿಯ ಪೂರ್ವ ಗಡಿಯ ಘಾಜಿಪುರ್‌ನಲ್ಲಿ ಪ್ರತಿಭಟನೆ ಹಮ್ಮಿಕೊಂಡಿದ್ದಾರೆ.

ಇದನ್ನೂ ಓದಿ: ದೆಹಲಿ ಹೋರಾಟದಲ್ಲಿ ರೈತರ ಜೊತೆ ಬುದ್ದ, ಅಂಬೇಡ್ಕರ್‌, ಭಗತ್‌ಸಿಂಗ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...