Homeಚಳವಳಿದೆಹಲಿ ಪೂರ್ವಭಾಗದಲ್ಲಿ ಭುಗಿಲೆದ್ದ ಮತ್ತೊಂದು ’ರೈತ ಪ್ರತಿಭಟನೆ’

ದೆಹಲಿ ಪೂರ್ವಭಾಗದಲ್ಲಿ ಭುಗಿಲೆದ್ದ ಮತ್ತೊಂದು ’ರೈತ ಪ್ರತಿಭಟನೆ’

- Advertisement -
- Advertisement -

ಕೇಂದ್ರದ ಬಿಜೆಪಿ ಸರ್ಕಾರದ ವಿರುದ್ದ ದೇಶದಾದ್ಯಂತ ರೈತರು ಈಗಾಗಲೇ ಹೋರಾಟ ಮಾಡುತ್ತಿದ್ದಾರೆ. ದೆಹಲಿಯ ಹೋರಾಟ 43 ನೇ ದಿನಕ್ಕೆ ಕಾಲಿಟ್ಟಿದೆ. ದೆಹಲಿ ಗಡಿಯಲ್ಲಿ ಮೂರು ಹೊಸ ಕೃಷಿ ಕಾನೂನುಗಳನ್ನು ರದ್ದು ಪಡಿಸಬೇಕು ಹಾಗೂ ಕನಿಷ್ಠ ಬೆಂಬಲ ಬೆಲೆ ನಿಗದಿ ಮಾಡುವ ಕಾನೂನು ತರಬೇಕು ಎಂದು ರೈತರು ಹೋರಾಟ ನಡೆಸುತ್ತಿದ್ದಾರೆ. ಆದರೆ ದೆಹಲಿಯ ಪೂರ್ವ ಭಾಗದಲ್ಲಿ ಮತ್ತೊಂದು ರೈತ ಪ್ರತಿಭಟನೆ ಭುಗಿಲೆದ್ದಿದ್ದು, ಉತ್ತರ ಪ್ರದೇಶದ ಕಬ್ಬು ಬೆಳೆಗಾರರು ಬಾಕಿ ಪಾವತಿಗೆ ಆಗ್ರಹಿಸಿ ಹೋರಾಟ ಪ್ರಾರಂಭಿಸಿದ್ದಾರೆ.

ಕಳೆದ ಹಂಗಾಮಿನ ಕಬ್ಬಿನ ಬಾಕಿ ಪಾವತಿಯಾಗದೇ ಇರುವುದು, ಕಬ್ಬು ಅರೆದು ಎರಡು ತಿಂಗಳಾದರೂ 2020-21 ರ ಸಾಲಿನ ರಾಜ್ಯ ಸಲಹೆ ಮಾಡಿದ ಬೆಲೆ (state advised price-SAP) ಘೋಷಿಸದಿರುವುದು ಯುಪಿಯ ಕಬ್ಬು ಬೆಳೆಗಾರರ ಪ್ರತಿಭಟನೆಗೆ ಕಾರಣವಾಗಿದೆ.

ಉತ್ತರಪ್ರದೇಶದ ಮುಖ್ಯ ಬೆಳೆಯಾಗಿರುವ ಕಬ್ಬನ್ನು ಎಪಿಎಂಸಿ ಮಂಡಿಗಳಲ್ಲಿ ಮಾರುವುದಿಲ್ಲ. ಅದಕ್ಕೆ ’ರಾಜ್ಯ ಸಲಹೆ ಮಾಡಿದ ಬೆಲೆ(ಎಸ್‌ಎಪಿ)’ ನಿಗದಿ ಮಾಡಲಾಗುತ್ತದೆ. ಈ ಬೆಲೆ ಶಾಸನ ಬದ್ಧವಾಗಿರುತ್ತದೆ. ಇಲ್ಲಿ ಎಂಎಸ್‌ಪಿ ಪ್ರಶ್ನೆ ಬರುವುದಿಲ್ಲ, ಸಕ್ಕರೆ ಕಾರ್ಖಾನೆಗಳು ಎಸ್‌ಎಪಿ ಆಧರಿಸಿ ರೈತರಿಗೆ ಪಾವತಿಸಲೇಬೇಕು.

ಇದನ್ನೂ ಓದಿ: ರೈತ ಪ್ರತಿಭಟನೆಯಲ್ಲಿ ಪಂಜಾಬಿನ ರೈತ ಕೂಲಿಯಾಳುಗಳ ಕತೆ

ದೆಹಲಿ-ಉತ್ತರಪ್ರದೇಶ ಗಡಿಯ ಘಾಜಿಪುರದ ಪ್ರತಿಭಟನೆಯಲ್ಲಿ ಕಬ್ಬು ಬೆಳೆಗಾರರು ಭಾಗವಹಿಸುತ್ತಿದ್ದಾರೆ. ಕಬ್ಬನ್ನು ಕಾರ್ಖಾನೆಗೆ ತಲುಪಿಸಿದ 14 ದಿನದಲ್ಲಿ ಎಸ್‌ಎಪಿ ಪಾವತಿಸಬೇಕು ಎಂಬ ಕಾನೂನು ಇದ್ದರೂ, 2019-20 ರ ಹಂಗಾಮಿನ (ಸೆಪ್ಟೆಂಬರ್-ಅಕ್ಟೋಬರ್) ಕಬ್ಬಿಗೆ ಕಾರ್ಖಾನೆಗಳು ಇನ್ನೂ ಹಣ ಪಾವತಿ ಮಾಡಿಲ್ಲ. 2020 ರ ಅಕ್ಟೋಬರ್ ಅಂತ್ಯದಿಂದಲೇ ಕಾರ್ಖಾನೆಗಳು 2020-21 ರ ಹಂಗಾಮಿಯ ಕಬ್ಬು ಅರೆಯಲು ಶುರು ಮಾಡಿದ್ದರೂ, ಆದಿತ್ಯನಾಥ ಸರ್ಕಾರವು ಈವರೆಗೂ ಈ ಹಂಗಾಮಿ ಎಸ್‌ಎಪಿಯನ್ನು ಘೋಷಣೆ ಮಾಡಿಲ್ಲ.

ಪಶ್ಚಿಮ ಯುಪಿಯ ಭಾಗಪತ್ ಜಿಲ್ಲೆಯ ಖಾಸಿಮಪುರ್ ಖೇರಿಯಲ್ಲಿ ಒಂದು ಎಕರೆ ಜಮೀನು ಹೊಂದಿರುವ ರಾಕೇಶ್ ತೋಮರ್, 2019-20 ರ ಹಂಗಾಮಿಯ ಒಟ್ಟು 15 ’ಪಾರ್ಚಿ’ ಕಬ್ಬನ್ನು (ಪಾರ್ಚಿ ಎಂದರೆ ಒಂದು ಎತ್ತಿನ ಚಕ್ಕಡಿ ಭರ್ತಿ ಕಬ್ಬು, ತಲಾ 18 ಕ್ವಿಂಟಾಲ್ ತೂಗುತ್ತದೆ) ರಾಮಲಾ ಸಹಕಾರಿ ಮಿಲ್‌ಗೆ ನೀಡಿದ್ದಾರೆ. ಮಿಲ್ ಜೂನ್ 14 ರಂದೇ ಕಬ್ಬು ಅರೆಯುವಿಕೆ ಆರಂಭಿಸಿದೆ. ರಾಕೇಶ್ ಅವರಿಗೆ ಇನ್ನೂ 4 ಪಾರ್ಚಿ ಕಬ್ಬಿನ ಬಾಕಿ ಬರಬೇಕಿದ್ದು, ಇದು 23,400 ಆಗುತ್ತದೆ. ಹೊಸ ಹಂಗಾಮಿಯ 6 ಪಾರ್ಚಿ ಕಬ್ಬನ್ನೂ ಅವರು ಮಿಲ್‌ಗೆ ಪೂರೈಸಿದ್ದಾರೆ. ಅಕ್ಟೋಬರ್ ಅಂತ್ಯದಲ್ಲೇ ಅರಿಯುವಿಕೆ ಆರಂಭಗೊಂಡರೂ ಇನ್ನೂ ಬಾಕಿ ಬಂದಿಲ್ಲ.

ಇದನ್ನೂ ಓದಿ: ಈ ಬಾರಿ ಕೆಂಪುಕೋಟೆಯಲ್ಲಿ ಮೋದಿ ಧ್ವಜಾರೋಹಣ ಮಾಡಲು ಬಿಡುವುದಿಲ್ಲ: ಟ್ರಾಕ್ಟರ್ ರ್ಯಾಲಿಯಲ್ಲಿ ರೈತರ ಎಚ್ಚರಿಕೆ

ಶಾಮ್ಲಿಯಲ್ಲಿರುವ ಮಿಲ್‌ಗೆ ಅನೂಜ್ ಕಲ್ಕಂಡೆಯವರು ಜನವರಿ 3 ರಂದು 20 ಕ್ವಿಂಟಾಲ್ ಕಬ್ಬು ಪೂರೈಸಿದ್ದರು. ಕಳೆದ ಹಂಗಾಮಿನಲ್ಲಿ 2,400 ಕ್ವಿಂಟಾಲ್ ಪೂರೈಸಿದ್ದರು. ಹಿಂದಿನ ಹಂಗಾಮಿನ ಬಾಕಿಯೂ ಬಂದಿಲ್ಲ. ಈ ಸಲ ಇನ್ನೂ ಎಸ್‌ಎಪಿ ಘೋಷಣೆಯಾಗದ ಕಾರಣ, ಈ ಸಲವೂ ವಿಳಂಬವಾಗಲಿದೆ. ಸರ್ಕಾರ ಎಸ್‌ಎಪಿ ಘೋಷಣೆ ಮಾಡದೇ ಕಾರ್ಖಾನೆಗಳಿಗೆ ಪರೀಕ್ಷವಾಗಿ ಸಹಾಯ ಮಾಡುತ್ತಿದೆ ಎಂಬ ಆರೋಪ ಕೇಳಿ ಬಂದಿದೆ.

2021 ರ ಜನವರಿ 5 ರ ಅಂಕಿಅಂಶಗಳ ಪ್ರಕಾರ, ಮಿಲ್/ಕಾರ್ಖಾನೆಗಳು 2019-20 ರ ಹಂಗಾಮಿನಲ್ಲಿ ಒಟ್ಟು 35,898 ಕೋಟಿ ರೂ ಮೌಲ್ಯದ (ಎಸ್‌ಎಪಿ ಅನ್ವಯ) ಕಬ್ಬು ಖರೀದಿಸಿದ್ದು, ಇನ್ನೂ 2019-20 ರ ಸಾಲಿನ 2,470 ಕೋಟಿ ರೂ. ಬಾಕಿ ಪಾವತಿಸಿಲ್ಲ. ಈ ಹಂಗಾಮಿನಲ್ಲಿ ಅವು ಈಗಾಗಲೇ 363.20 ಲಕ್ಷ ಟನ್ ಕಬ್ಬನ್ನೂ ಅರೆದಿವೆ.

ಈಗಲೂ ಎಸ್‌ಎಪಿ ಘೋಷಣೆಯಾಗದ ನೆಪದಲ್ಲಿ ರೈತರಿಗೆ ಹಣ ಪಾವತಿ ಮಾಡುತ್ತಿಲ್ಲ. ಹೋದ ವರ್ಷದ ಎಸ್‌ಎಪಿ ಆಧಾರದಲ್ಲಿ ಹೇಳುವುದಾದರೆ, 11,660 ಕೋಟಿ ರೂ. ಮೌಲ್ಯದ ಕಬ್ಬನ್ನೂ ಈಗಾಗಲೇ ಅರೆಯಲು ಆರಂಭಿಸಿವೆ. ಇಲ್ಲಿವರೆಗೆ ಅವು 11,660 ಕೋಟಿ ರೂ. ಪೈಕಿ ಕೇವಲ 2,427 ಕೋಟಿ ರೂ ಪಾವತಿಸಿದ್ದು, ಎಸ್‌ಎಪಿ ಘೋಷಣೆ ನಂತರ ಉಳಿದ ಹಣ ಪಾವತಿಸುವ ಭರವಸೆ ನೀಡಿವೆ. ಆದರೆ ಕಳೆದ ಹಂಗಾಮಿನ ಬಾಕಿಯನ್ನೂ ಇನ್ನೂ ಕೊಡದ ಪರಿಣಾಮ ಕಬ್ಬು ಬೆಳೆಗಾರರು ಯುಪಿ ಸರ್ಕಾರ ಮತ್ತು ಕಾರ್ಖಾನೆಗಳ ವಿರುದ್ಧ ದೆಹಲಿಯ ಪೂರ್ವ ಗಡಿಯ ಘಾಜಿಪುರ್‌ನಲ್ಲಿ ಪ್ರತಿಭಟನೆ ಹಮ್ಮಿಕೊಂಡಿದ್ದಾರೆ.

ಇದನ್ನೂ ಓದಿ: ದೆಹಲಿ ಹೋರಾಟದಲ್ಲಿ ರೈತರ ಜೊತೆ ಬುದ್ದ, ಅಂಬೇಡ್ಕರ್‌, ಭಗತ್‌ಸಿಂಗ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....