Homeಚಳವಳಿದೆಹಲಿ ಪೂರ್ವಭಾಗದಲ್ಲಿ ಭುಗಿಲೆದ್ದ ಮತ್ತೊಂದು ’ರೈತ ಪ್ರತಿಭಟನೆ’

ದೆಹಲಿ ಪೂರ್ವಭಾಗದಲ್ಲಿ ಭುಗಿಲೆದ್ದ ಮತ್ತೊಂದು ’ರೈತ ಪ್ರತಿಭಟನೆ’

- Advertisement -
- Advertisement -

ಕೇಂದ್ರದ ಬಿಜೆಪಿ ಸರ್ಕಾರದ ವಿರುದ್ದ ದೇಶದಾದ್ಯಂತ ರೈತರು ಈಗಾಗಲೇ ಹೋರಾಟ ಮಾಡುತ್ತಿದ್ದಾರೆ. ದೆಹಲಿಯ ಹೋರಾಟ 43 ನೇ ದಿನಕ್ಕೆ ಕಾಲಿಟ್ಟಿದೆ. ದೆಹಲಿ ಗಡಿಯಲ್ಲಿ ಮೂರು ಹೊಸ ಕೃಷಿ ಕಾನೂನುಗಳನ್ನು ರದ್ದು ಪಡಿಸಬೇಕು ಹಾಗೂ ಕನಿಷ್ಠ ಬೆಂಬಲ ಬೆಲೆ ನಿಗದಿ ಮಾಡುವ ಕಾನೂನು ತರಬೇಕು ಎಂದು ರೈತರು ಹೋರಾಟ ನಡೆಸುತ್ತಿದ್ದಾರೆ. ಆದರೆ ದೆಹಲಿಯ ಪೂರ್ವ ಭಾಗದಲ್ಲಿ ಮತ್ತೊಂದು ರೈತ ಪ್ರತಿಭಟನೆ ಭುಗಿಲೆದ್ದಿದ್ದು, ಉತ್ತರ ಪ್ರದೇಶದ ಕಬ್ಬು ಬೆಳೆಗಾರರು ಬಾಕಿ ಪಾವತಿಗೆ ಆಗ್ರಹಿಸಿ ಹೋರಾಟ ಪ್ರಾರಂಭಿಸಿದ್ದಾರೆ.

ಕಳೆದ ಹಂಗಾಮಿನ ಕಬ್ಬಿನ ಬಾಕಿ ಪಾವತಿಯಾಗದೇ ಇರುವುದು, ಕಬ್ಬು ಅರೆದು ಎರಡು ತಿಂಗಳಾದರೂ 2020-21 ರ ಸಾಲಿನ ರಾಜ್ಯ ಸಲಹೆ ಮಾಡಿದ ಬೆಲೆ (state advised price-SAP) ಘೋಷಿಸದಿರುವುದು ಯುಪಿಯ ಕಬ್ಬು ಬೆಳೆಗಾರರ ಪ್ರತಿಭಟನೆಗೆ ಕಾರಣವಾಗಿದೆ.

ಉತ್ತರಪ್ರದೇಶದ ಮುಖ್ಯ ಬೆಳೆಯಾಗಿರುವ ಕಬ್ಬನ್ನು ಎಪಿಎಂಸಿ ಮಂಡಿಗಳಲ್ಲಿ ಮಾರುವುದಿಲ್ಲ. ಅದಕ್ಕೆ ’ರಾಜ್ಯ ಸಲಹೆ ಮಾಡಿದ ಬೆಲೆ(ಎಸ್‌ಎಪಿ)’ ನಿಗದಿ ಮಾಡಲಾಗುತ್ತದೆ. ಈ ಬೆಲೆ ಶಾಸನ ಬದ್ಧವಾಗಿರುತ್ತದೆ. ಇಲ್ಲಿ ಎಂಎಸ್‌ಪಿ ಪ್ರಶ್ನೆ ಬರುವುದಿಲ್ಲ, ಸಕ್ಕರೆ ಕಾರ್ಖಾನೆಗಳು ಎಸ್‌ಎಪಿ ಆಧರಿಸಿ ರೈತರಿಗೆ ಪಾವತಿಸಲೇಬೇಕು.

ಇದನ್ನೂ ಓದಿ: ರೈತ ಪ್ರತಿಭಟನೆಯಲ್ಲಿ ಪಂಜಾಬಿನ ರೈತ ಕೂಲಿಯಾಳುಗಳ ಕತೆ

ದೆಹಲಿ-ಉತ್ತರಪ್ರದೇಶ ಗಡಿಯ ಘಾಜಿಪುರದ ಪ್ರತಿಭಟನೆಯಲ್ಲಿ ಕಬ್ಬು ಬೆಳೆಗಾರರು ಭಾಗವಹಿಸುತ್ತಿದ್ದಾರೆ. ಕಬ್ಬನ್ನು ಕಾರ್ಖಾನೆಗೆ ತಲುಪಿಸಿದ 14 ದಿನದಲ್ಲಿ ಎಸ್‌ಎಪಿ ಪಾವತಿಸಬೇಕು ಎಂಬ ಕಾನೂನು ಇದ್ದರೂ, 2019-20 ರ ಹಂಗಾಮಿನ (ಸೆಪ್ಟೆಂಬರ್-ಅಕ್ಟೋಬರ್) ಕಬ್ಬಿಗೆ ಕಾರ್ಖಾನೆಗಳು ಇನ್ನೂ ಹಣ ಪಾವತಿ ಮಾಡಿಲ್ಲ. 2020 ರ ಅಕ್ಟೋಬರ್ ಅಂತ್ಯದಿಂದಲೇ ಕಾರ್ಖಾನೆಗಳು 2020-21 ರ ಹಂಗಾಮಿಯ ಕಬ್ಬು ಅರೆಯಲು ಶುರು ಮಾಡಿದ್ದರೂ, ಆದಿತ್ಯನಾಥ ಸರ್ಕಾರವು ಈವರೆಗೂ ಈ ಹಂಗಾಮಿ ಎಸ್‌ಎಪಿಯನ್ನು ಘೋಷಣೆ ಮಾಡಿಲ್ಲ.

ಪಶ್ಚಿಮ ಯುಪಿಯ ಭಾಗಪತ್ ಜಿಲ್ಲೆಯ ಖಾಸಿಮಪುರ್ ಖೇರಿಯಲ್ಲಿ ಒಂದು ಎಕರೆ ಜಮೀನು ಹೊಂದಿರುವ ರಾಕೇಶ್ ತೋಮರ್, 2019-20 ರ ಹಂಗಾಮಿಯ ಒಟ್ಟು 15 ’ಪಾರ್ಚಿ’ ಕಬ್ಬನ್ನು (ಪಾರ್ಚಿ ಎಂದರೆ ಒಂದು ಎತ್ತಿನ ಚಕ್ಕಡಿ ಭರ್ತಿ ಕಬ್ಬು, ತಲಾ 18 ಕ್ವಿಂಟಾಲ್ ತೂಗುತ್ತದೆ) ರಾಮಲಾ ಸಹಕಾರಿ ಮಿಲ್‌ಗೆ ನೀಡಿದ್ದಾರೆ. ಮಿಲ್ ಜೂನ್ 14 ರಂದೇ ಕಬ್ಬು ಅರೆಯುವಿಕೆ ಆರಂಭಿಸಿದೆ. ರಾಕೇಶ್ ಅವರಿಗೆ ಇನ್ನೂ 4 ಪಾರ್ಚಿ ಕಬ್ಬಿನ ಬಾಕಿ ಬರಬೇಕಿದ್ದು, ಇದು 23,400 ಆಗುತ್ತದೆ. ಹೊಸ ಹಂಗಾಮಿಯ 6 ಪಾರ್ಚಿ ಕಬ್ಬನ್ನೂ ಅವರು ಮಿಲ್‌ಗೆ ಪೂರೈಸಿದ್ದಾರೆ. ಅಕ್ಟೋಬರ್ ಅಂತ್ಯದಲ್ಲೇ ಅರಿಯುವಿಕೆ ಆರಂಭಗೊಂಡರೂ ಇನ್ನೂ ಬಾಕಿ ಬಂದಿಲ್ಲ.

ಇದನ್ನೂ ಓದಿ: ಈ ಬಾರಿ ಕೆಂಪುಕೋಟೆಯಲ್ಲಿ ಮೋದಿ ಧ್ವಜಾರೋಹಣ ಮಾಡಲು ಬಿಡುವುದಿಲ್ಲ: ಟ್ರಾಕ್ಟರ್ ರ್ಯಾಲಿಯಲ್ಲಿ ರೈತರ ಎಚ್ಚರಿಕೆ

ಶಾಮ್ಲಿಯಲ್ಲಿರುವ ಮಿಲ್‌ಗೆ ಅನೂಜ್ ಕಲ್ಕಂಡೆಯವರು ಜನವರಿ 3 ರಂದು 20 ಕ್ವಿಂಟಾಲ್ ಕಬ್ಬು ಪೂರೈಸಿದ್ದರು. ಕಳೆದ ಹಂಗಾಮಿನಲ್ಲಿ 2,400 ಕ್ವಿಂಟಾಲ್ ಪೂರೈಸಿದ್ದರು. ಹಿಂದಿನ ಹಂಗಾಮಿನ ಬಾಕಿಯೂ ಬಂದಿಲ್ಲ. ಈ ಸಲ ಇನ್ನೂ ಎಸ್‌ಎಪಿ ಘೋಷಣೆಯಾಗದ ಕಾರಣ, ಈ ಸಲವೂ ವಿಳಂಬವಾಗಲಿದೆ. ಸರ್ಕಾರ ಎಸ್‌ಎಪಿ ಘೋಷಣೆ ಮಾಡದೇ ಕಾರ್ಖಾನೆಗಳಿಗೆ ಪರೀಕ್ಷವಾಗಿ ಸಹಾಯ ಮಾಡುತ್ತಿದೆ ಎಂಬ ಆರೋಪ ಕೇಳಿ ಬಂದಿದೆ.

2021 ರ ಜನವರಿ 5 ರ ಅಂಕಿಅಂಶಗಳ ಪ್ರಕಾರ, ಮಿಲ್/ಕಾರ್ಖಾನೆಗಳು 2019-20 ರ ಹಂಗಾಮಿನಲ್ಲಿ ಒಟ್ಟು 35,898 ಕೋಟಿ ರೂ ಮೌಲ್ಯದ (ಎಸ್‌ಎಪಿ ಅನ್ವಯ) ಕಬ್ಬು ಖರೀದಿಸಿದ್ದು, ಇನ್ನೂ 2019-20 ರ ಸಾಲಿನ 2,470 ಕೋಟಿ ರೂ. ಬಾಕಿ ಪಾವತಿಸಿಲ್ಲ. ಈ ಹಂಗಾಮಿನಲ್ಲಿ ಅವು ಈಗಾಗಲೇ 363.20 ಲಕ್ಷ ಟನ್ ಕಬ್ಬನ್ನೂ ಅರೆದಿವೆ.

ಈಗಲೂ ಎಸ್‌ಎಪಿ ಘೋಷಣೆಯಾಗದ ನೆಪದಲ್ಲಿ ರೈತರಿಗೆ ಹಣ ಪಾವತಿ ಮಾಡುತ್ತಿಲ್ಲ. ಹೋದ ವರ್ಷದ ಎಸ್‌ಎಪಿ ಆಧಾರದಲ್ಲಿ ಹೇಳುವುದಾದರೆ, 11,660 ಕೋಟಿ ರೂ. ಮೌಲ್ಯದ ಕಬ್ಬನ್ನೂ ಈಗಾಗಲೇ ಅರೆಯಲು ಆರಂಭಿಸಿವೆ. ಇಲ್ಲಿವರೆಗೆ ಅವು 11,660 ಕೋಟಿ ರೂ. ಪೈಕಿ ಕೇವಲ 2,427 ಕೋಟಿ ರೂ ಪಾವತಿಸಿದ್ದು, ಎಸ್‌ಎಪಿ ಘೋಷಣೆ ನಂತರ ಉಳಿದ ಹಣ ಪಾವತಿಸುವ ಭರವಸೆ ನೀಡಿವೆ. ಆದರೆ ಕಳೆದ ಹಂಗಾಮಿನ ಬಾಕಿಯನ್ನೂ ಇನ್ನೂ ಕೊಡದ ಪರಿಣಾಮ ಕಬ್ಬು ಬೆಳೆಗಾರರು ಯುಪಿ ಸರ್ಕಾರ ಮತ್ತು ಕಾರ್ಖಾನೆಗಳ ವಿರುದ್ಧ ದೆಹಲಿಯ ಪೂರ್ವ ಗಡಿಯ ಘಾಜಿಪುರ್‌ನಲ್ಲಿ ಪ್ರತಿಭಟನೆ ಹಮ್ಮಿಕೊಂಡಿದ್ದಾರೆ.

ಇದನ್ನೂ ಓದಿ: ದೆಹಲಿ ಹೋರಾಟದಲ್ಲಿ ರೈತರ ಜೊತೆ ಬುದ್ದ, ಅಂಬೇಡ್ಕರ್‌, ಭಗತ್‌ಸಿಂಗ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...

‘ನಿಮ್ಮನ್ನು ನಂಬಿ ಬಂದ ನಕ್ಸಲ್ ಕಾರ್ಯಕರ್ತರಿಗೆ ಕೊಟ್ಟ ಮಾತು ಉಳಿಸಿಕೊಳ್ಳಿ’: ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ ಶಾಂತಿಗಾಗಿ ನಾಗರೀಕ ವೇದಿಕೆ

ಬೆಂಗಳೂರು: ‘ಮುಖ್ಯವಾಹಿನಿಗೆ ಬಂದ ಏಳೂ ಜನ ನಕ್ಸಲೀಯರು ಜೈಲಿನಲ್ಲೇ ಇದ್ದಾರೆ. ಬಹಳ ಸೊರಗಿದ್ದಾರೆ. ತೀವ್ರ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರನ್ನು ಹೋಗಿ ಕಾಣುವುದೇ ನಮ್ಮ ಪಾಲಿಗೆ ದೊಡ್ಡ ಹಿಂಸೆಯಾಗಿದೆ ಎಂದು...

ಕೋಗಿಲು ಮನೆಗಳ ನೆಲಸಮ : ಪ್ರತಿಭಟಿಸಿದ ಹೋರಾಟಗಾರರ ಮೇಲೆ ಎಫ್‌ಐಆರ್

ಕೋಗಿಲು ಬಡಾವಣೆಯಲ್ಲಿ ಬಡವರ ಮನೆಗಳ ನೆಲಸಮ ವೇಳೆ ಬಿಗುವಿನ ವಾತಾವರಣ ಸೃಷ್ಟಿಸಿದ್ದಾರೆ ಎಂಬ ಆರೋಪದ ಮೇಲೆ ಹೋರಾಟಗಾರರ ವಿರುದ್ದ ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಜನಪರ ವೇದಿಕೆಯ ಮುಖಂಡರಾದ ಗೌರಮ್ಮ ಮತ್ತು ಮನೋಹರ್,...

17 ವರ್ಷದ ಮಹಿಳಾ ಅಥ್ಲೀಟ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಮಾನತು

ಫರಿದಾಬಾದ್‌ನ ಹೋಟೆಲ್‌ನಲ್ಲಿ 17 ವರ್ಷದ ರಾಷ್ಟ್ರಮಟ್ಟದ ಮಹಿಳಾ ಶೂಟರ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಹರಿಯಾಣ ಪೊಲೀಸರು ಪ್ರಕರಣ ದಾಖಲಿಸಿದ ನಂತರ ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಂಕುಶ್ ಭಾರದ್ವಾಜ್ ಅವರನ್ನು...

ಸುಪ್ರೀಂ ಕೋರ್ಟ್‌ನಿಂದ ಜಾಮೀನು : ಗುಲ್ಫಿಶಾ ಫಾತಿಮಾ ಸೇರಿದಂತೆ ನಾಲ್ವರು ಜೈಲಿನಿಂದ ಬಿಡುಗಡೆ

ಈಶಾನ್ಯ ದೆಹಲಿಯ 2020ರ ಗಲಭೆ ಪಿತೂರಿ ಆರೋಪದಲ್ಲಿ ಬಂಧಿತರಾಗಿದ್ದ ನಾಲ್ವರು ವಿದ್ಯಾರ್ಥಿ ಹೋರಾಟಗಾರರು ಬುಧವಾರ (ಜ.7) ಜೈಲಿನಿಂದ ಹೊರ ಬಂದಿದ್ದಾರೆ. ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್ ಮತ್ತು ಮೊಹಮ್ಮದ್ ಸಲೀಮ್...

ಖ್ಯಾತ ಪರಿಸರ ವಿಜ್ಞಾನಿ ಮಾಧವ ಗಾಡ್ಗೀಳ್ ನಿಧನ

ಖ್ಯಾತ ಪರಿಸರ ವಿಜ್ಞಾನಿ ಮಾಧವ ಗಾಡ್ಗೀಳ್ (82 ವರ್ಷ) ಅವರು ಬುಧವಾರ (ಜನವರಿ 7, 2026) ತಡರಾತ್ರಿ ಪುಣೆಯಲ್ಲಿರುವ ತಮ್ಮ ಮನೆಯಲ್ಲಿ ಅಲ್ಪಕಾಲದ ಅನಾರೋಗ್ಯದ ನಂತರ ನಿಧನರಾದರು. ಈ ಕುರಿತು ಗಾಡ್ಗೀಳ್ ಅವರ...

ಅಪರಾಧದ ಸ್ವರೂಪ ಏನೇ ಇರಲಿ, ತ್ವರಿತ ವಿಚಾರಣೆಯ ಹಕ್ಕು ಅನ್ವಯಿಸುತ್ತದೆ: ಸುಪ್ರೀಂ ಕೋರ್ಟ್

ಸಂವಿಧಾನದ 21 ನೇ ವಿಧಿಯ ಅಡಿಯಲ್ಲಿ ತ್ವರಿತ ವಿಚಾರಣೆಯ ಹಕ್ಕು ಅಪರಾಧದ ಗಂಭೀರತೆ ಅಥವಾ ಸ್ವರೂಪವನ್ನು ಲೆಕ್ಕಿಸದೆ ಅನ್ವಯಿಸುತ್ತದೆ ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಪುನರುಚ್ಚರಿಸಿದೆ. 2002 ರ ಹಣ ವರ್ಗಾವಣೆ ತಡೆ ಕಾಯ್ದೆಯ...

ಬಾಂಗ್ಲಾದೇಶ: ಗುಂಪು ದಾಳಿಯಿಂದ ತಪ್ಪಿಸಿಕೊಳ್ಳಲು ಕಾಲುವೆಗೆ ಹಾರಿದ ಹಿಂದೂ ವ್ಯಕ್ತಿ ಸಾವು

ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತರ ವಿರುದ್ಧ ಹಿಂಸಾಚಾರ ಸುದ್ದಿಗಳು ನಿರಂತರವಾಗಿ ವರದಿಯಾಗುತ್ತಿರುವ ನಡುವೆಯೇ, ನೌಗಾಂವ್ ಜಿಲ್ಲೆಯ ಮೊಹದೇವ್‌ಪುರ ಉಪಜಿಲ್ಲಾದಲ್ಲಿ ದರೋಡೆ ಆರೋಪ ಹೊರಿಸಿದ ಗುಂಪಿನಿಂದ ತಪ್ಪಿಸಿಕೊಳ್ಳಲು ಯತ್ನಿಸುತ್ತಿದ್ದ 25 ವರ್ಷದ ಹಿಂದೂ ವ್ಯಕ್ತಿ ಕಾಲುವೆಗೆ ಹಾರಿ...