Homeಮುಖಪುಟಪ್ರಾಣತ್ಯಾಗ ಮಾಡಿದ ಮತ್ತೊಬ್ಬ ರೈತ: ಮೋದಿ ಮೌನದ ವಿರುದ್ಧ ಆಕ್ರೋಶ- #FarmerSuicideModiQuiet ಟ್ರೆಂಡಿಂಗ್

ಪ್ರಾಣತ್ಯಾಗ ಮಾಡಿದ ಮತ್ತೊಬ್ಬ ರೈತ: ಮೋದಿ ಮೌನದ ವಿರುದ್ಧ ಆಕ್ರೋಶ- #FarmerSuicideModiQuiet ಟ್ರೆಂಡಿಂಗ್

ರೈತರ ಈ ಸಾವಿಗೆ ತೀವ್ರ ಸಂತಾಪ ವ್ಯಕ್ತಪಡಿಸಿರುವ ರೈತ ಒಕ್ಕೂಟ, ಕೇಂದ್ರ ಸರ್ಕಾರ ಮತ್ತು ಮೋದಿಯ ಮೌನವನ್ನು ಪ್ರಶ್ನಿಸಿ #FarmerSuicideModiQuiet ಎನ್ನುವ ಟ್ವಿಟರ್ ಅಭಿಯಾನಕ್ಕೆ ಕರೆ ನೀಡಿದ್ದು, ಈ ಹ್ಯಾಶ್‌ಟ್ಯಾಗ್ ಬಳಸಿ 1,00,000 ಕ್ಕೂ ಅಧಿಕ ಜನ ಟ್ವೀಟ್ ಮಾಡಿದ್ದಾರೆ.

- Advertisement -
- Advertisement -

ಕೇಂದ್ರ ಸರ್ಕಾರದ ಕೃಷಿ ಕಾನೂನುಗಳ ವಿರುದ್ಧ ರೈತರು ದೆಹಲಿಯ ಸಿಂಘು ಗಡಿಯಲ್ಲಿ ಸುಮಾರು ಎರಡು ತಿಂಗಳಿನಿಂದ ಪ್ರತಿಭಟನೆ ನಡೆಸುತ್ತಿದ್ದು, ಅವರಲ್ಲಿ 40 ವರ್ಷದ ರೈತರೊಬ್ಬರು ಶನಿವಾರ ವಿಷ ಸೇವಿಸಿ ಪ್ರಾಣತ್ಯಾಗ ಮಾಡಿದ್ದಾರೆ.

ಅಮರಿಂದರ್ ಸಿಂಗ್ ಎಂದು ಗುರುತಿಸಲಾಗಿರುವ ರೈತ, ಕೇಂದ್ರ ಸರ್ಕಾರವು ರೈತರ ಬೇಡಿಕೆಗಳನ್ನು ಆಲಿಸುತ್ತಿಲ್ಲ. ನನ್ನ ಸಾವು ರೈತ ಆಂದೋಲನಕ್ಕೆ ಯಶಸ್ಸನ್ನು ತರುತ್ತದೆ ಎನ್ನುವ ಕಾರಣಕ್ಕೆ ಪ್ರಾಣತ್ಯಾಗ ಮಾಡುವುದಾಗಿ ತನ್ನ ಸ್ನೇಹಿತರ ಬಳಿ ಹೇಳಿಕೊಂಡಿದ್ದರು ಎಂದು ಮೂಲಗಳು ತಿಳಿಸಿವೆ.

“ವಿಷ ಸೇವಿಸಿದ ನಂತರ ಅಮರಿಂದರ್ ಸಿಂಗ್ ಅವರನ್ನು ಸೋನಿಪತ್‌ನ ಫಿಮ್ಸ್ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ನಿಧನರಾದರು. ಅವರ ಶವವನ್ನು ಸರ್ಕಾರಿ ಆಸ್ಪತ್ರೆಯ ಶವಾಗಾರಕ್ಕೆ ಕಳುಹಿಸಲಾಗಿದ್ದು, ಭಾನುವಾರ ಬೆಳಿಗ್ಗೆ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ಅಮರಿಂದರ್ ಸಿಂಗ್ ಅವರ ಕುಟುಂಬವನ್ನು ಪತ್ತೆಹಚ್ಚಲು ಸಾಧ್ಯವಾಗದ ಕಾರಣ, ಶವವನ್ನು ಪ್ರತಿಭಟನಾ ಸ್ಥಳದಲ್ಲಿನ ಇತರ ರೈತರಿಗೆ ಹಸ್ತಾಂತರಿಸಲಾಗುತ್ತದೆ” ಎಂದು ಎನ್‌ಡಿಟಿವಿ ವರದಿ ಮಾಡಿದೆ.

ರೈತರ ಈ ಸಾವಿಗೆ ತೀವ್ರ ಸಂತಾಪ ವ್ಯಕ್ತಪಡಿಸಿರುವ ರೈತ ಒಕ್ಕೂಟ, ಕೇಂದ್ರ ಸರ್ಕಾರ ಮತ್ತು ಮೋದಿಯ ಮೌನವನ್ನು ಪ್ರಶ್ನಿಸಿ #FarmerSuicideModiQuiet ಎನ್ನುವ ಟ್ವಿಟರ್ ಅಭಿಯಾನಕ್ಕೆ ಕರೆ ನೀಡಿದೆ. ಈ ಹ್ಯಾಶ್‌ಟ್ಯಾಗ್ ಬಳಸಿ 1,00,000 ಕ್ಕೂ ಅಧಿಕ ಜನ ಟ್ವೀಟ್ ಮಾಡಿದ್ದು, ಟ್ವಿಟರ್ ಟ್ರೆಂಡಿಂಗ್‌ನಲ್ಲಿ ಮೂರನೇ ಸ್ಥಾನದಲ್ಲಿದೆ.

ರೈತರ ಕರೆಗೆ ಓಗೊಟ್ಟು ಲಕ್ಷಾಂತರ ಟ್ವಿಟರ್ ಬಳಕೆದಾರರು ಟ್ವೀಟ್ ಮಾಡಿದ್ದಾರೆ.

ಮಂದೀಪ್ ಜಸ್ಸಿ ಎಂಬುವವರು ಟ್ವೀಟ್ ಮಾಡಿ, “ಮೋದೀಜಿ, ಇದು ವಿನಯಪೂರ್ವಕ ವಿನಂತಿ. ದಯವಿಟ್ಟು ರೈತರ ಸಮಸ್ಯೆಯನ್ನು ಬಗೆಹರಿಸಿ” ಎಂದು ಬರೆದುಕೊಂಡಿದ್ದಾರೆ.

ಮೊಹಮ್ಮದ್ ಎಂಬುವವರು ಟ್ವೀಟ್ ಮಾಡಿ, “ರೈತರು ಬೀದಿಯಲ್ಲಿ ಸಾಯುತ್ತಿದ್ದರೆ, ಸಂವಿಧಾನ ಸಂಸತ್ತಿನಲ್ಲಿ ಸಾಯುತ್ತಿದೆ. ದೇಶ ಎಚ್ಚರಗೊಳ್ಳಬೇಕಿದೆ” ಎಂದು ಬರೆದುಕೊಂಡಿದ್ದಾರೆ.

ಸಿಮ್ರನ್ ಸಂಧು ಎಂಬುವವರು, “ಭಾರತ ಮತ್ತೊಮ್ಮೊ ಒಂದಾಗಬೇಕಿದೆ. ಆದರೆ ಈ ಬಾರಿ ಬ್ರಿಟಿಷರ ವಿರುದ್ಧವಲ್ಲ. ಬದಲಿಗೆ ಮೋದಿ ಸರ್ಕಾರದ ವಿರುದ್ಧ” ಎಂದು ಟ್ವೀಟ್ ಮಾಡಿದ್ದಾರೆ.

ಹೀಗೆ ಲಕ್ಷಕ್ಕೂ ಹೆಚ್ಚು ಜನ ಮೋದಿ ಸರ್ಕಾರದ ವಿರುದ್ಧ ತಮ್ಮ ಅಕ್ರೋಶವನ್ನು ಹೊರಹಾಕಿದ್ದಾರೆ.

ಇದನ್ನೂ ಓದಿ: ಮೋದಿ -ಶಾ ರೇ ಜವಾಬ್ದಾರರು: ಮತ್ತೊಬ್ಬ ರೈತನ ಆತ್ಮಹತ್ಯೆ ಯತ್ನ

ಈ ತಿಂಗಳು ವರದಿಯಾದ ಎರಡನೇ ರೈತ ಸಾವು ಇದು. ಕಳೆದ ವಾರ ದೆಹಲಿ-ಗಾಜಿಯಾಬಾದ್ ಗಡಿ ಬಳಿ ಪ್ರತಿಭಟನಾ ಸ್ಥಳದಲ್ಲಿ 75 ವರ್ಷದ ರೈತ ಪ್ರಾಣತ್ಯಾಗ ಮಾಡಿದ್ದರು.

ರೈತ ಹೋರಾಟವನ್ನು ಬೆಂಬಲಿಸಿ ಡಿಸಂಬರ್‌ನಲ್ಲಿ ಸಿಖ್ ಧರ್ಮಗುರು ಬಾಬಾ ರಾಮ್ ಸಿಂಗ್ ಜಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ಅವರು ತಮ್ಮ ಆತ್ಮಹತ್ಯಾ ಬರಹದಲ್ಲಿ “ರೈತರು ತಮ್ಮ ಹಕ್ಕುಗಳನ್ನು ಪಡೆದುಕೊಳ್ಳಲು ಹೋರಾಡುತ್ತಿದ್ದಾರೆ. ಆ ನೋವನ್ನು ನಾನೂ ಅನುಭವಿಸುತ್ತಿದ್ದೇನೆ… ಸರ್ಕಾರವು ಅವರಿಗೆ ನ್ಯಾಯ ಒದಗಿಸದ ಕಾರಣ ನಾನೂ ಅವರ ನೋವನ್ನು ಹಂಚಿಕೊಳ್ಳುತ್ತೇನೆ. ಅನ್ಯಾಯವನ್ನು ಮಾಡುವುದು ಪಾಪ, ಆದರೆ ಅನ್ಯಾಯವನ್ನು ಸಹಿಸುವುದು ಕೂಡಾ ಪಾಪವಾಗಿದೆ. ರೈತರನ್ನು ಬೆಂಬಲಿಸಲು, ಕೆಲವರು ತಮ್ಮ ಪ್ರಶಸ್ತಿಗಳನ್ನು ಸರ್ಕಾರಕ್ಕೆ ಹಿಂದಿರುಗಿಸಿದ್ದಾರೆ. ನಾನು ನನ್ನ ಪ್ರಾಣವನ್ನು ತ್ಯಾಗ ಮಾಡಲು ನಿರ್ಧರಿಸಿದ್ದೇನೆ” ಎಂದು ಬರೆದುಕೊಂಡಿದ್ದರು.

ದೆಹಲಿಯಲ್ಲಿ ಹೋರಾಟ ಆರಂಭವಾದಾಗಿನಿಂದ ಚಳಿಗಾಳಿ, ಅನಾರೋಗ್ಯ, ಆತ್ಮಹತ್ಯೆ ಸೇರಿದಂತೆ ಹಲವು ಕಾರಣಗಳಿಂದ 60 ಹೆಚ್ಚು ರೈತರು ಸಾವನಪ್ಪಿದ್ದಾರೆ ಎಂದು ರೈತ ಮುಖಂಡರು ತಿಳಿಸಿದ್ದಾರೆ. ಡಿಸೆಂಬರ್ 20ರ ಭಾನುವಾರ ಮಡಿದವರ ನೆನಪಿನಲ್ಲಿ ಶ್ರದ್ಧಾಂಜಲಿ ದಿವಸ್ ಆಚರಿಸಲಾಗಿತ್ತು.

ಇದನ್ನೂ ಓದಿ: ರೈತ ಹೋರಾಟವನ್ನು ಬೆಂಬಲಿಸಿ ಆತ್ಮಹತ್ಯೆ ಮಾಡಿಕೊಂಡ ಸಿಖ್ ಧರ್ಮಗುರು!

ವಿವಾದಾತ್ಮಕ ಕೃಷಿ ಕಾನೂನುಗಳನ್ನು ಹಿಂತೆಗೆದುಕೊಳ್ಳುವವರೆಗೂ ತಮ್ಮ ಪ್ರತಿಭಟನೆಯನ್ನು ಹಿಂತೆಗೆದುಕೊಳ್ಳುವುದಿಲ್ಲ ಎಂದು ರೈತರು ಪಟ್ಟು ಹಿಡಿದಿದ್ದಾರೆ. ಇತ್ತ ಸರ್ಕಾರವು ತನ್ನ ನಿರ್ಧಾರದಿಂದ ಹಿಂದೆ ಸರಿಯುವುದಿಲ್ಲ ಎಂದು ಪದೇ ಪದೇ ಹೇಳುತ್ತಲೇ ಇದೆ. ಇದರ ಭಾಗವಾಗಿ ಇದುವರೆಗೂ 8 ಸುತ್ತಿನ ಮಾತುಕತೆಗಳು ನಡೆದಿದ್ದು, ಅವುಗಳೆಲ್ಲವೂ ವಿಫಲವಾಗಿವೆ.

ಈ ಹಿನ್ನೆಲೆಯಲ್ಲಿ ಗಣರಾಜ್ಯೋತ್ಸವ ದಿನದಂದು ದೆಹಲಿಯಲ್ಲಿ ಬೃಹತ್ ಟ್ರ್ಯಾಕ್ಟರ್ ರ್ಯಾಲಿಯನ್ನು ನಡೆಸುವುದಾಗಿ ರೈತರು ಹೇಳಿದ್ದಾರೆ. ಇದರ ಬೆನ್ನಲ್ಲೇ ಕೇಂದ್ರ ಸರ್ಕಾರ ಮತ್ತೊಂದು ಸುತ್ತಿನ ಮಾತುಕತೆಗೆ ಜನವರಿ 15 ರಂದು ರೈತರನ್ನು ಆಹ್ವಾನಿಸಿದೆ.


ಜೀವ ಅಮೂಲ್ಯವಾಗಿದೆ. ಮಾನಸಿಕ ಒತ್ತಡಗಳಿದ್ದರೆ ಇಲ್ಲಿ ಸಂಪರ್ಕಿಸಿ:

ಬೆಂಗಳೂರು ಸಹಾಯವಾಣಿ – 080-25497777, ಬೆಳಿಗ್ಗೆ 10 ರಿಂದ ಸಂಜೆ 8 ರವರೆಗೆ

ಕರ್ನಾಟಕ ಆರೋಗ್ಯ ಸಹಾಯವಾಣಿ: 104


ಇದನ್ನೂ ಓದಿ: ತಮಿಳುನಾಡು ಶಾಸಕನ ಅಂತರ್ಜಾತಿ ವಿವಾಹದ ವಿಡಿಯೋ ವೈರಲ್: ಯುವತಿಯ ತಂದೆ ಆತ್ಮಹತ್ಯೆಗೆ ಯತ್ನ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...