Homeಮುಖಪುಟಪ್ರಾಣತ್ಯಾಗ ಮಾಡಿದ ಮತ್ತೊಬ್ಬ ರೈತ: ಮೋದಿ ಮೌನದ ವಿರುದ್ಧ ಆಕ್ರೋಶ- #FarmerSuicideModiQuiet ಟ್ರೆಂಡಿಂಗ್

ಪ್ರಾಣತ್ಯಾಗ ಮಾಡಿದ ಮತ್ತೊಬ್ಬ ರೈತ: ಮೋದಿ ಮೌನದ ವಿರುದ್ಧ ಆಕ್ರೋಶ- #FarmerSuicideModiQuiet ಟ್ರೆಂಡಿಂಗ್

ರೈತರ ಈ ಸಾವಿಗೆ ತೀವ್ರ ಸಂತಾಪ ವ್ಯಕ್ತಪಡಿಸಿರುವ ರೈತ ಒಕ್ಕೂಟ, ಕೇಂದ್ರ ಸರ್ಕಾರ ಮತ್ತು ಮೋದಿಯ ಮೌನವನ್ನು ಪ್ರಶ್ನಿಸಿ #FarmerSuicideModiQuiet ಎನ್ನುವ ಟ್ವಿಟರ್ ಅಭಿಯಾನಕ್ಕೆ ಕರೆ ನೀಡಿದ್ದು, ಈ ಹ್ಯಾಶ್‌ಟ್ಯಾಗ್ ಬಳಸಿ 1,00,000 ಕ್ಕೂ ಅಧಿಕ ಜನ ಟ್ವೀಟ್ ಮಾಡಿದ್ದಾರೆ.

- Advertisement -
- Advertisement -

ಕೇಂದ್ರ ಸರ್ಕಾರದ ಕೃಷಿ ಕಾನೂನುಗಳ ವಿರುದ್ಧ ರೈತರು ದೆಹಲಿಯ ಸಿಂಘು ಗಡಿಯಲ್ಲಿ ಸುಮಾರು ಎರಡು ತಿಂಗಳಿನಿಂದ ಪ್ರತಿಭಟನೆ ನಡೆಸುತ್ತಿದ್ದು, ಅವರಲ್ಲಿ 40 ವರ್ಷದ ರೈತರೊಬ್ಬರು ಶನಿವಾರ ವಿಷ ಸೇವಿಸಿ ಪ್ರಾಣತ್ಯಾಗ ಮಾಡಿದ್ದಾರೆ.

ಅಮರಿಂದರ್ ಸಿಂಗ್ ಎಂದು ಗುರುತಿಸಲಾಗಿರುವ ರೈತ, ಕೇಂದ್ರ ಸರ್ಕಾರವು ರೈತರ ಬೇಡಿಕೆಗಳನ್ನು ಆಲಿಸುತ್ತಿಲ್ಲ. ನನ್ನ ಸಾವು ರೈತ ಆಂದೋಲನಕ್ಕೆ ಯಶಸ್ಸನ್ನು ತರುತ್ತದೆ ಎನ್ನುವ ಕಾರಣಕ್ಕೆ ಪ್ರಾಣತ್ಯಾಗ ಮಾಡುವುದಾಗಿ ತನ್ನ ಸ್ನೇಹಿತರ ಬಳಿ ಹೇಳಿಕೊಂಡಿದ್ದರು ಎಂದು ಮೂಲಗಳು ತಿಳಿಸಿವೆ.

“ವಿಷ ಸೇವಿಸಿದ ನಂತರ ಅಮರಿಂದರ್ ಸಿಂಗ್ ಅವರನ್ನು ಸೋನಿಪತ್‌ನ ಫಿಮ್ಸ್ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ನಿಧನರಾದರು. ಅವರ ಶವವನ್ನು ಸರ್ಕಾರಿ ಆಸ್ಪತ್ರೆಯ ಶವಾಗಾರಕ್ಕೆ ಕಳುಹಿಸಲಾಗಿದ್ದು, ಭಾನುವಾರ ಬೆಳಿಗ್ಗೆ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ಅಮರಿಂದರ್ ಸಿಂಗ್ ಅವರ ಕುಟುಂಬವನ್ನು ಪತ್ತೆಹಚ್ಚಲು ಸಾಧ್ಯವಾಗದ ಕಾರಣ, ಶವವನ್ನು ಪ್ರತಿಭಟನಾ ಸ್ಥಳದಲ್ಲಿನ ಇತರ ರೈತರಿಗೆ ಹಸ್ತಾಂತರಿಸಲಾಗುತ್ತದೆ” ಎಂದು ಎನ್‌ಡಿಟಿವಿ ವರದಿ ಮಾಡಿದೆ.

ರೈತರ ಈ ಸಾವಿಗೆ ತೀವ್ರ ಸಂತಾಪ ವ್ಯಕ್ತಪಡಿಸಿರುವ ರೈತ ಒಕ್ಕೂಟ, ಕೇಂದ್ರ ಸರ್ಕಾರ ಮತ್ತು ಮೋದಿಯ ಮೌನವನ್ನು ಪ್ರಶ್ನಿಸಿ #FarmerSuicideModiQuiet ಎನ್ನುವ ಟ್ವಿಟರ್ ಅಭಿಯಾನಕ್ಕೆ ಕರೆ ನೀಡಿದೆ. ಈ ಹ್ಯಾಶ್‌ಟ್ಯಾಗ್ ಬಳಸಿ 1,00,000 ಕ್ಕೂ ಅಧಿಕ ಜನ ಟ್ವೀಟ್ ಮಾಡಿದ್ದು, ಟ್ವಿಟರ್ ಟ್ರೆಂಡಿಂಗ್‌ನಲ್ಲಿ ಮೂರನೇ ಸ್ಥಾನದಲ್ಲಿದೆ.

ರೈತರ ಕರೆಗೆ ಓಗೊಟ್ಟು ಲಕ್ಷಾಂತರ ಟ್ವಿಟರ್ ಬಳಕೆದಾರರು ಟ್ವೀಟ್ ಮಾಡಿದ್ದಾರೆ.

ಮಂದೀಪ್ ಜಸ್ಸಿ ಎಂಬುವವರು ಟ್ವೀಟ್ ಮಾಡಿ, “ಮೋದೀಜಿ, ಇದು ವಿನಯಪೂರ್ವಕ ವಿನಂತಿ. ದಯವಿಟ್ಟು ರೈತರ ಸಮಸ್ಯೆಯನ್ನು ಬಗೆಹರಿಸಿ” ಎಂದು ಬರೆದುಕೊಂಡಿದ್ದಾರೆ.

ಮೊಹಮ್ಮದ್ ಎಂಬುವವರು ಟ್ವೀಟ್ ಮಾಡಿ, “ರೈತರು ಬೀದಿಯಲ್ಲಿ ಸಾಯುತ್ತಿದ್ದರೆ, ಸಂವಿಧಾನ ಸಂಸತ್ತಿನಲ್ಲಿ ಸಾಯುತ್ತಿದೆ. ದೇಶ ಎಚ್ಚರಗೊಳ್ಳಬೇಕಿದೆ” ಎಂದು ಬರೆದುಕೊಂಡಿದ್ದಾರೆ.

ಸಿಮ್ರನ್ ಸಂಧು ಎಂಬುವವರು, “ಭಾರತ ಮತ್ತೊಮ್ಮೊ ಒಂದಾಗಬೇಕಿದೆ. ಆದರೆ ಈ ಬಾರಿ ಬ್ರಿಟಿಷರ ವಿರುದ್ಧವಲ್ಲ. ಬದಲಿಗೆ ಮೋದಿ ಸರ್ಕಾರದ ವಿರುದ್ಧ” ಎಂದು ಟ್ವೀಟ್ ಮಾಡಿದ್ದಾರೆ.

ಹೀಗೆ ಲಕ್ಷಕ್ಕೂ ಹೆಚ್ಚು ಜನ ಮೋದಿ ಸರ್ಕಾರದ ವಿರುದ್ಧ ತಮ್ಮ ಅಕ್ರೋಶವನ್ನು ಹೊರಹಾಕಿದ್ದಾರೆ.

ಇದನ್ನೂ ಓದಿ: ಮೋದಿ -ಶಾ ರೇ ಜವಾಬ್ದಾರರು: ಮತ್ತೊಬ್ಬ ರೈತನ ಆತ್ಮಹತ್ಯೆ ಯತ್ನ

ಈ ತಿಂಗಳು ವರದಿಯಾದ ಎರಡನೇ ರೈತ ಸಾವು ಇದು. ಕಳೆದ ವಾರ ದೆಹಲಿ-ಗಾಜಿಯಾಬಾದ್ ಗಡಿ ಬಳಿ ಪ್ರತಿಭಟನಾ ಸ್ಥಳದಲ್ಲಿ 75 ವರ್ಷದ ರೈತ ಪ್ರಾಣತ್ಯಾಗ ಮಾಡಿದ್ದರು.

ರೈತ ಹೋರಾಟವನ್ನು ಬೆಂಬಲಿಸಿ ಡಿಸಂಬರ್‌ನಲ್ಲಿ ಸಿಖ್ ಧರ್ಮಗುರು ಬಾಬಾ ರಾಮ್ ಸಿಂಗ್ ಜಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ಅವರು ತಮ್ಮ ಆತ್ಮಹತ್ಯಾ ಬರಹದಲ್ಲಿ “ರೈತರು ತಮ್ಮ ಹಕ್ಕುಗಳನ್ನು ಪಡೆದುಕೊಳ್ಳಲು ಹೋರಾಡುತ್ತಿದ್ದಾರೆ. ಆ ನೋವನ್ನು ನಾನೂ ಅನುಭವಿಸುತ್ತಿದ್ದೇನೆ… ಸರ್ಕಾರವು ಅವರಿಗೆ ನ್ಯಾಯ ಒದಗಿಸದ ಕಾರಣ ನಾನೂ ಅವರ ನೋವನ್ನು ಹಂಚಿಕೊಳ್ಳುತ್ತೇನೆ. ಅನ್ಯಾಯವನ್ನು ಮಾಡುವುದು ಪಾಪ, ಆದರೆ ಅನ್ಯಾಯವನ್ನು ಸಹಿಸುವುದು ಕೂಡಾ ಪಾಪವಾಗಿದೆ. ರೈತರನ್ನು ಬೆಂಬಲಿಸಲು, ಕೆಲವರು ತಮ್ಮ ಪ್ರಶಸ್ತಿಗಳನ್ನು ಸರ್ಕಾರಕ್ಕೆ ಹಿಂದಿರುಗಿಸಿದ್ದಾರೆ. ನಾನು ನನ್ನ ಪ್ರಾಣವನ್ನು ತ್ಯಾಗ ಮಾಡಲು ನಿರ್ಧರಿಸಿದ್ದೇನೆ” ಎಂದು ಬರೆದುಕೊಂಡಿದ್ದರು.

ದೆಹಲಿಯಲ್ಲಿ ಹೋರಾಟ ಆರಂಭವಾದಾಗಿನಿಂದ ಚಳಿಗಾಳಿ, ಅನಾರೋಗ್ಯ, ಆತ್ಮಹತ್ಯೆ ಸೇರಿದಂತೆ ಹಲವು ಕಾರಣಗಳಿಂದ 60 ಹೆಚ್ಚು ರೈತರು ಸಾವನಪ್ಪಿದ್ದಾರೆ ಎಂದು ರೈತ ಮುಖಂಡರು ತಿಳಿಸಿದ್ದಾರೆ. ಡಿಸೆಂಬರ್ 20ರ ಭಾನುವಾರ ಮಡಿದವರ ನೆನಪಿನಲ್ಲಿ ಶ್ರದ್ಧಾಂಜಲಿ ದಿವಸ್ ಆಚರಿಸಲಾಗಿತ್ತು.

ಇದನ್ನೂ ಓದಿ: ರೈತ ಹೋರಾಟವನ್ನು ಬೆಂಬಲಿಸಿ ಆತ್ಮಹತ್ಯೆ ಮಾಡಿಕೊಂಡ ಸಿಖ್ ಧರ್ಮಗುರು!

ವಿವಾದಾತ್ಮಕ ಕೃಷಿ ಕಾನೂನುಗಳನ್ನು ಹಿಂತೆಗೆದುಕೊಳ್ಳುವವರೆಗೂ ತಮ್ಮ ಪ್ರತಿಭಟನೆಯನ್ನು ಹಿಂತೆಗೆದುಕೊಳ್ಳುವುದಿಲ್ಲ ಎಂದು ರೈತರು ಪಟ್ಟು ಹಿಡಿದಿದ್ದಾರೆ. ಇತ್ತ ಸರ್ಕಾರವು ತನ್ನ ನಿರ್ಧಾರದಿಂದ ಹಿಂದೆ ಸರಿಯುವುದಿಲ್ಲ ಎಂದು ಪದೇ ಪದೇ ಹೇಳುತ್ತಲೇ ಇದೆ. ಇದರ ಭಾಗವಾಗಿ ಇದುವರೆಗೂ 8 ಸುತ್ತಿನ ಮಾತುಕತೆಗಳು ನಡೆದಿದ್ದು, ಅವುಗಳೆಲ್ಲವೂ ವಿಫಲವಾಗಿವೆ.

ಈ ಹಿನ್ನೆಲೆಯಲ್ಲಿ ಗಣರಾಜ್ಯೋತ್ಸವ ದಿನದಂದು ದೆಹಲಿಯಲ್ಲಿ ಬೃಹತ್ ಟ್ರ್ಯಾಕ್ಟರ್ ರ್ಯಾಲಿಯನ್ನು ನಡೆಸುವುದಾಗಿ ರೈತರು ಹೇಳಿದ್ದಾರೆ. ಇದರ ಬೆನ್ನಲ್ಲೇ ಕೇಂದ್ರ ಸರ್ಕಾರ ಮತ್ತೊಂದು ಸುತ್ತಿನ ಮಾತುಕತೆಗೆ ಜನವರಿ 15 ರಂದು ರೈತರನ್ನು ಆಹ್ವಾನಿಸಿದೆ.


ಜೀವ ಅಮೂಲ್ಯವಾಗಿದೆ. ಮಾನಸಿಕ ಒತ್ತಡಗಳಿದ್ದರೆ ಇಲ್ಲಿ ಸಂಪರ್ಕಿಸಿ:

ಬೆಂಗಳೂರು ಸಹಾಯವಾಣಿ – 080-25497777, ಬೆಳಿಗ್ಗೆ 10 ರಿಂದ ಸಂಜೆ 8 ರವರೆಗೆ

ಕರ್ನಾಟಕ ಆರೋಗ್ಯ ಸಹಾಯವಾಣಿ: 104


ಇದನ್ನೂ ಓದಿ: ತಮಿಳುನಾಡು ಶಾಸಕನ ಅಂತರ್ಜಾತಿ ವಿವಾಹದ ವಿಡಿಯೋ ವೈರಲ್: ಯುವತಿಯ ತಂದೆ ಆತ್ಮಹತ್ಯೆಗೆ ಯತ್ನ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...