Homeಮುಖಪುಟಪ್ರಾಣತ್ಯಾಗ ಮಾಡಿದ ಮತ್ತೊಬ್ಬ ರೈತ: ಮೋದಿ ಮೌನದ ವಿರುದ್ಧ ಆಕ್ರೋಶ- #FarmerSuicideModiQuiet ಟ್ರೆಂಡಿಂಗ್

ಪ್ರಾಣತ್ಯಾಗ ಮಾಡಿದ ಮತ್ತೊಬ್ಬ ರೈತ: ಮೋದಿ ಮೌನದ ವಿರುದ್ಧ ಆಕ್ರೋಶ- #FarmerSuicideModiQuiet ಟ್ರೆಂಡಿಂಗ್

ರೈತರ ಈ ಸಾವಿಗೆ ತೀವ್ರ ಸಂತಾಪ ವ್ಯಕ್ತಪಡಿಸಿರುವ ರೈತ ಒಕ್ಕೂಟ, ಕೇಂದ್ರ ಸರ್ಕಾರ ಮತ್ತು ಮೋದಿಯ ಮೌನವನ್ನು ಪ್ರಶ್ನಿಸಿ #FarmerSuicideModiQuiet ಎನ್ನುವ ಟ್ವಿಟರ್ ಅಭಿಯಾನಕ್ಕೆ ಕರೆ ನೀಡಿದ್ದು, ಈ ಹ್ಯಾಶ್‌ಟ್ಯಾಗ್ ಬಳಸಿ 1,00,000 ಕ್ಕೂ ಅಧಿಕ ಜನ ಟ್ವೀಟ್ ಮಾಡಿದ್ದಾರೆ.

- Advertisement -
- Advertisement -

ಕೇಂದ್ರ ಸರ್ಕಾರದ ಕೃಷಿ ಕಾನೂನುಗಳ ವಿರುದ್ಧ ರೈತರು ದೆಹಲಿಯ ಸಿಂಘು ಗಡಿಯಲ್ಲಿ ಸುಮಾರು ಎರಡು ತಿಂಗಳಿನಿಂದ ಪ್ರತಿಭಟನೆ ನಡೆಸುತ್ತಿದ್ದು, ಅವರಲ್ಲಿ 40 ವರ್ಷದ ರೈತರೊಬ್ಬರು ಶನಿವಾರ ವಿಷ ಸೇವಿಸಿ ಪ್ರಾಣತ್ಯಾಗ ಮಾಡಿದ್ದಾರೆ.

ಅಮರಿಂದರ್ ಸಿಂಗ್ ಎಂದು ಗುರುತಿಸಲಾಗಿರುವ ರೈತ, ಕೇಂದ್ರ ಸರ್ಕಾರವು ರೈತರ ಬೇಡಿಕೆಗಳನ್ನು ಆಲಿಸುತ್ತಿಲ್ಲ. ನನ್ನ ಸಾವು ರೈತ ಆಂದೋಲನಕ್ಕೆ ಯಶಸ್ಸನ್ನು ತರುತ್ತದೆ ಎನ್ನುವ ಕಾರಣಕ್ಕೆ ಪ್ರಾಣತ್ಯಾಗ ಮಾಡುವುದಾಗಿ ತನ್ನ ಸ್ನೇಹಿತರ ಬಳಿ ಹೇಳಿಕೊಂಡಿದ್ದರು ಎಂದು ಮೂಲಗಳು ತಿಳಿಸಿವೆ.

“ವಿಷ ಸೇವಿಸಿದ ನಂತರ ಅಮರಿಂದರ್ ಸಿಂಗ್ ಅವರನ್ನು ಸೋನಿಪತ್‌ನ ಫಿಮ್ಸ್ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ನಿಧನರಾದರು. ಅವರ ಶವವನ್ನು ಸರ್ಕಾರಿ ಆಸ್ಪತ್ರೆಯ ಶವಾಗಾರಕ್ಕೆ ಕಳುಹಿಸಲಾಗಿದ್ದು, ಭಾನುವಾರ ಬೆಳಿಗ್ಗೆ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ಅಮರಿಂದರ್ ಸಿಂಗ್ ಅವರ ಕುಟುಂಬವನ್ನು ಪತ್ತೆಹಚ್ಚಲು ಸಾಧ್ಯವಾಗದ ಕಾರಣ, ಶವವನ್ನು ಪ್ರತಿಭಟನಾ ಸ್ಥಳದಲ್ಲಿನ ಇತರ ರೈತರಿಗೆ ಹಸ್ತಾಂತರಿಸಲಾಗುತ್ತದೆ” ಎಂದು ಎನ್‌ಡಿಟಿವಿ ವರದಿ ಮಾಡಿದೆ.

ರೈತರ ಈ ಸಾವಿಗೆ ತೀವ್ರ ಸಂತಾಪ ವ್ಯಕ್ತಪಡಿಸಿರುವ ರೈತ ಒಕ್ಕೂಟ, ಕೇಂದ್ರ ಸರ್ಕಾರ ಮತ್ತು ಮೋದಿಯ ಮೌನವನ್ನು ಪ್ರಶ್ನಿಸಿ #FarmerSuicideModiQuiet ಎನ್ನುವ ಟ್ವಿಟರ್ ಅಭಿಯಾನಕ್ಕೆ ಕರೆ ನೀಡಿದೆ. ಈ ಹ್ಯಾಶ್‌ಟ್ಯಾಗ್ ಬಳಸಿ 1,00,000 ಕ್ಕೂ ಅಧಿಕ ಜನ ಟ್ವೀಟ್ ಮಾಡಿದ್ದು, ಟ್ವಿಟರ್ ಟ್ರೆಂಡಿಂಗ್‌ನಲ್ಲಿ ಮೂರನೇ ಸ್ಥಾನದಲ್ಲಿದೆ.

ರೈತರ ಕರೆಗೆ ಓಗೊಟ್ಟು ಲಕ್ಷಾಂತರ ಟ್ವಿಟರ್ ಬಳಕೆದಾರರು ಟ್ವೀಟ್ ಮಾಡಿದ್ದಾರೆ.

ಮಂದೀಪ್ ಜಸ್ಸಿ ಎಂಬುವವರು ಟ್ವೀಟ್ ಮಾಡಿ, “ಮೋದೀಜಿ, ಇದು ವಿನಯಪೂರ್ವಕ ವಿನಂತಿ. ದಯವಿಟ್ಟು ರೈತರ ಸಮಸ್ಯೆಯನ್ನು ಬಗೆಹರಿಸಿ” ಎಂದು ಬರೆದುಕೊಂಡಿದ್ದಾರೆ.

ಮೊಹಮ್ಮದ್ ಎಂಬುವವರು ಟ್ವೀಟ್ ಮಾಡಿ, “ರೈತರು ಬೀದಿಯಲ್ಲಿ ಸಾಯುತ್ತಿದ್ದರೆ, ಸಂವಿಧಾನ ಸಂಸತ್ತಿನಲ್ಲಿ ಸಾಯುತ್ತಿದೆ. ದೇಶ ಎಚ್ಚರಗೊಳ್ಳಬೇಕಿದೆ” ಎಂದು ಬರೆದುಕೊಂಡಿದ್ದಾರೆ.

ಸಿಮ್ರನ್ ಸಂಧು ಎಂಬುವವರು, “ಭಾರತ ಮತ್ತೊಮ್ಮೊ ಒಂದಾಗಬೇಕಿದೆ. ಆದರೆ ಈ ಬಾರಿ ಬ್ರಿಟಿಷರ ವಿರುದ್ಧವಲ್ಲ. ಬದಲಿಗೆ ಮೋದಿ ಸರ್ಕಾರದ ವಿರುದ್ಧ” ಎಂದು ಟ್ವೀಟ್ ಮಾಡಿದ್ದಾರೆ.

ಹೀಗೆ ಲಕ್ಷಕ್ಕೂ ಹೆಚ್ಚು ಜನ ಮೋದಿ ಸರ್ಕಾರದ ವಿರುದ್ಧ ತಮ್ಮ ಅಕ್ರೋಶವನ್ನು ಹೊರಹಾಕಿದ್ದಾರೆ.

ಇದನ್ನೂ ಓದಿ: ಮೋದಿ -ಶಾ ರೇ ಜವಾಬ್ದಾರರು: ಮತ್ತೊಬ್ಬ ರೈತನ ಆತ್ಮಹತ್ಯೆ ಯತ್ನ

ಈ ತಿಂಗಳು ವರದಿಯಾದ ಎರಡನೇ ರೈತ ಸಾವು ಇದು. ಕಳೆದ ವಾರ ದೆಹಲಿ-ಗಾಜಿಯಾಬಾದ್ ಗಡಿ ಬಳಿ ಪ್ರತಿಭಟನಾ ಸ್ಥಳದಲ್ಲಿ 75 ವರ್ಷದ ರೈತ ಪ್ರಾಣತ್ಯಾಗ ಮಾಡಿದ್ದರು.

ರೈತ ಹೋರಾಟವನ್ನು ಬೆಂಬಲಿಸಿ ಡಿಸಂಬರ್‌ನಲ್ಲಿ ಸಿಖ್ ಧರ್ಮಗುರು ಬಾಬಾ ರಾಮ್ ಸಿಂಗ್ ಜಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ಅವರು ತಮ್ಮ ಆತ್ಮಹತ್ಯಾ ಬರಹದಲ್ಲಿ “ರೈತರು ತಮ್ಮ ಹಕ್ಕುಗಳನ್ನು ಪಡೆದುಕೊಳ್ಳಲು ಹೋರಾಡುತ್ತಿದ್ದಾರೆ. ಆ ನೋವನ್ನು ನಾನೂ ಅನುಭವಿಸುತ್ತಿದ್ದೇನೆ… ಸರ್ಕಾರವು ಅವರಿಗೆ ನ್ಯಾಯ ಒದಗಿಸದ ಕಾರಣ ನಾನೂ ಅವರ ನೋವನ್ನು ಹಂಚಿಕೊಳ್ಳುತ್ತೇನೆ. ಅನ್ಯಾಯವನ್ನು ಮಾಡುವುದು ಪಾಪ, ಆದರೆ ಅನ್ಯಾಯವನ್ನು ಸಹಿಸುವುದು ಕೂಡಾ ಪಾಪವಾಗಿದೆ. ರೈತರನ್ನು ಬೆಂಬಲಿಸಲು, ಕೆಲವರು ತಮ್ಮ ಪ್ರಶಸ್ತಿಗಳನ್ನು ಸರ್ಕಾರಕ್ಕೆ ಹಿಂದಿರುಗಿಸಿದ್ದಾರೆ. ನಾನು ನನ್ನ ಪ್ರಾಣವನ್ನು ತ್ಯಾಗ ಮಾಡಲು ನಿರ್ಧರಿಸಿದ್ದೇನೆ” ಎಂದು ಬರೆದುಕೊಂಡಿದ್ದರು.

ದೆಹಲಿಯಲ್ಲಿ ಹೋರಾಟ ಆರಂಭವಾದಾಗಿನಿಂದ ಚಳಿಗಾಳಿ, ಅನಾರೋಗ್ಯ, ಆತ್ಮಹತ್ಯೆ ಸೇರಿದಂತೆ ಹಲವು ಕಾರಣಗಳಿಂದ 60 ಹೆಚ್ಚು ರೈತರು ಸಾವನಪ್ಪಿದ್ದಾರೆ ಎಂದು ರೈತ ಮುಖಂಡರು ತಿಳಿಸಿದ್ದಾರೆ. ಡಿಸೆಂಬರ್ 20ರ ಭಾನುವಾರ ಮಡಿದವರ ನೆನಪಿನಲ್ಲಿ ಶ್ರದ್ಧಾಂಜಲಿ ದಿವಸ್ ಆಚರಿಸಲಾಗಿತ್ತು.

ಇದನ್ನೂ ಓದಿ: ರೈತ ಹೋರಾಟವನ್ನು ಬೆಂಬಲಿಸಿ ಆತ್ಮಹತ್ಯೆ ಮಾಡಿಕೊಂಡ ಸಿಖ್ ಧರ್ಮಗುರು!

ವಿವಾದಾತ್ಮಕ ಕೃಷಿ ಕಾನೂನುಗಳನ್ನು ಹಿಂತೆಗೆದುಕೊಳ್ಳುವವರೆಗೂ ತಮ್ಮ ಪ್ರತಿಭಟನೆಯನ್ನು ಹಿಂತೆಗೆದುಕೊಳ್ಳುವುದಿಲ್ಲ ಎಂದು ರೈತರು ಪಟ್ಟು ಹಿಡಿದಿದ್ದಾರೆ. ಇತ್ತ ಸರ್ಕಾರವು ತನ್ನ ನಿರ್ಧಾರದಿಂದ ಹಿಂದೆ ಸರಿಯುವುದಿಲ್ಲ ಎಂದು ಪದೇ ಪದೇ ಹೇಳುತ್ತಲೇ ಇದೆ. ಇದರ ಭಾಗವಾಗಿ ಇದುವರೆಗೂ 8 ಸುತ್ತಿನ ಮಾತುಕತೆಗಳು ನಡೆದಿದ್ದು, ಅವುಗಳೆಲ್ಲವೂ ವಿಫಲವಾಗಿವೆ.

ಈ ಹಿನ್ನೆಲೆಯಲ್ಲಿ ಗಣರಾಜ್ಯೋತ್ಸವ ದಿನದಂದು ದೆಹಲಿಯಲ್ಲಿ ಬೃಹತ್ ಟ್ರ್ಯಾಕ್ಟರ್ ರ್ಯಾಲಿಯನ್ನು ನಡೆಸುವುದಾಗಿ ರೈತರು ಹೇಳಿದ್ದಾರೆ. ಇದರ ಬೆನ್ನಲ್ಲೇ ಕೇಂದ್ರ ಸರ್ಕಾರ ಮತ್ತೊಂದು ಸುತ್ತಿನ ಮಾತುಕತೆಗೆ ಜನವರಿ 15 ರಂದು ರೈತರನ್ನು ಆಹ್ವಾನಿಸಿದೆ.


ಜೀವ ಅಮೂಲ್ಯವಾಗಿದೆ. ಮಾನಸಿಕ ಒತ್ತಡಗಳಿದ್ದರೆ ಇಲ್ಲಿ ಸಂಪರ್ಕಿಸಿ:

ಬೆಂಗಳೂರು ಸಹಾಯವಾಣಿ – 080-25497777, ಬೆಳಿಗ್ಗೆ 10 ರಿಂದ ಸಂಜೆ 8 ರವರೆಗೆ

ಕರ್ನಾಟಕ ಆರೋಗ್ಯ ಸಹಾಯವಾಣಿ: 104


ಇದನ್ನೂ ಓದಿ: ತಮಿಳುನಾಡು ಶಾಸಕನ ಅಂತರ್ಜಾತಿ ವಿವಾಹದ ವಿಡಿಯೋ ವೈರಲ್: ಯುವತಿಯ ತಂದೆ ಆತ್ಮಹತ್ಯೆಗೆ ಯತ್ನ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಗಲಕೋಟೆಯ ವಿವಿಧ ಪ್ರದೇಶಗಳಲ್ಲಿ ಎಸ್‌ಐಆರ್‌ ವಿರುದ್ಧ ಜನಜಾಗೃತಿ ಜಾಥಾ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬಾಗಲಕೋಟೆ ನಗರದ ವಿವಿಧ ಭಾಗಗಳಲ್ಲಿ ಭಾನುವಾರ (ಜೂ.14) ಜಾಗೃತಿ ಜಾಥಾ ನಡೆಯಿತು. ನವನಗರದ ವಿದ್ಯಾಗಿರಿ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜು ಸರ್ಕಲ್‌ನಿಂದ ಪ್ರಾರಂಭವಾದ ಜಾಥಾ...

SIR ವಿರೋಧಿ ಜನಜಾಗೃತಿ ಜಾಥಾ: ಕಾಫಿ ನಾಡು ಚಿಕ್ಕಮಗಳೂರಲ್ಲಿ ಅದ್ದೂರಿ ಸ್ವಾಗತ

ಚಿಕ್ಕಮಗಳೂರು: ರಾಜ್ಯಾದ್ಯಂತ ಐದು ವಿಭಾಗಗಳಲ್ಲಿ ಸಂಚರಿಸುತ್ತಿರುವ 'SIR ವಿರೋಧಿ ಜನಜಾಗೃತಿ ಜಾಥಾ'ದ 3ನೇ ಮಾರ್ಗದ ತಂಡಕ್ಕೆ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಅದ್ದೂರಿ ಸ್ವಾಗತ ದೊರೆಯಿತು. ಭಾನುವಾರ ಬೆಳಗ್ಗೆ ಜಿಲ್ಲೆಯ ಕೊಪ್ಪ ತಾಲ್ಲೂಕಿಗೆ ಆಗಮಿಸಿದ ಜಾಥಾ...

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...