ಕೇಂದ್ರ ಸರ್ಕಾರದ ಕೃಷಿ ಕಾನೂನುಗಳ ವಿರುದ್ಧ ರೈತರು ದೆಹಲಿಯ ಸಿಂಘು ಗಡಿಯಲ್ಲಿ ಸುಮಾರು ಎರಡು ತಿಂಗಳಿನಿಂದ ಪ್ರತಿಭಟನೆ ನಡೆಸುತ್ತಿದ್ದು, ಅವರಲ್ಲಿ 40 ವರ್ಷದ ರೈತರೊಬ್ಬರು ಶನಿವಾರ ವಿಷ ಸೇವಿಸಿ ಪ್ರಾಣತ್ಯಾಗ ಮಾಡಿದ್ದಾರೆ.
ಅಮರಿಂದರ್ ಸಿಂಗ್ ಎಂದು ಗುರುತಿಸಲಾಗಿರುವ ರೈತ, ಕೇಂದ್ರ ಸರ್ಕಾರವು ರೈತರ ಬೇಡಿಕೆಗಳನ್ನು ಆಲಿಸುತ್ತಿಲ್ಲ. ನನ್ನ ಸಾವು ರೈತ ಆಂದೋಲನಕ್ಕೆ ಯಶಸ್ಸನ್ನು ತರುತ್ತದೆ ಎನ್ನುವ ಕಾರಣಕ್ಕೆ ಪ್ರಾಣತ್ಯಾಗ ಮಾಡುವುದಾಗಿ ತನ್ನ ಸ್ನೇಹಿತರ ಬಳಿ ಹೇಳಿಕೊಂಡಿದ್ದರು ಎಂದು ಮೂಲಗಳು ತಿಳಿಸಿವೆ.
“ವಿಷ ಸೇವಿಸಿದ ನಂತರ ಅಮರಿಂದರ್ ಸಿಂಗ್ ಅವರನ್ನು ಸೋನಿಪತ್ನ ಫಿಮ್ಸ್ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ನಿಧನರಾದರು. ಅವರ ಶವವನ್ನು ಸರ್ಕಾರಿ ಆಸ್ಪತ್ರೆಯ ಶವಾಗಾರಕ್ಕೆ ಕಳುಹಿಸಲಾಗಿದ್ದು, ಭಾನುವಾರ ಬೆಳಿಗ್ಗೆ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ಅಮರಿಂದರ್ ಸಿಂಗ್ ಅವರ ಕುಟುಂಬವನ್ನು ಪತ್ತೆಹಚ್ಚಲು ಸಾಧ್ಯವಾಗದ ಕಾರಣ, ಶವವನ್ನು ಪ್ರತಿಭಟನಾ ಸ್ಥಳದಲ್ಲಿನ ಇತರ ರೈತರಿಗೆ ಹಸ್ತಾಂತರಿಸಲಾಗುತ್ತದೆ” ಎಂದು ಎನ್ಡಿಟಿವಿ ವರದಿ ಮಾಡಿದೆ.
ರೈತರ ಈ ಸಾವಿಗೆ ತೀವ್ರ ಸಂತಾಪ ವ್ಯಕ್ತಪಡಿಸಿರುವ ರೈತ ಒಕ್ಕೂಟ, ಕೇಂದ್ರ ಸರ್ಕಾರ ಮತ್ತು ಮೋದಿಯ ಮೌನವನ್ನು ಪ್ರಶ್ನಿಸಿ #FarmerSuicideModiQuiet ಎನ್ನುವ ಟ್ವಿಟರ್ ಅಭಿಯಾನಕ್ಕೆ ಕರೆ ನೀಡಿದೆ. ಈ ಹ್ಯಾಶ್ಟ್ಯಾಗ್ ಬಳಸಿ 1,00,000 ಕ್ಕೂ ಅಧಿಕ ಜನ ಟ್ವೀಟ್ ಮಾಡಿದ್ದು, ಟ್ವಿಟರ್ ಟ್ರೆಂಡಿಂಗ್ನಲ್ಲಿ ಮೂರನೇ ಸ್ಥಾನದಲ್ಲಿದೆ.
No. Of Farmers, losing their lives steadily increase with the passage of every single day just to get back their rights.
Why is the Center leaving deep scars on farmers?
Why is the govt. mum?? #FarmerSuicideModiQuiet pic.twitter.com/3MOKwAOpLh— Kisan Ekta Morcha (@Kisanektamorcha) January 10, 2021
ರೈತರ ಕರೆಗೆ ಓಗೊಟ್ಟು ಲಕ್ಷಾಂತರ ಟ್ವಿಟರ್ ಬಳಕೆದಾರರು ಟ್ವೀಟ್ ಮಾಡಿದ್ದಾರೆ.
ಮಂದೀಪ್ ಜಸ್ಸಿ ಎಂಬುವವರು ಟ್ವೀಟ್ ಮಾಡಿ, “ಮೋದೀಜಿ, ಇದು ವಿನಯಪೂರ್ವಕ ವಿನಂತಿ. ದಯವಿಟ್ಟು ರೈತರ ಸಮಸ್ಯೆಯನ್ನು ಬಗೆಹರಿಸಿ” ಎಂದು ಬರೆದುಕೊಂಡಿದ್ದಾರೆ.
Modi ji it’s humble Request
Please solve farmers problem #FarmerSuicideModiQuiet pic.twitter.com/4sxkb2LMbJ
— Mandeep jassi (@mandeepjassi1) January 10, 2021
ಮೊಹಮ್ಮದ್ ಎಂಬುವವರು ಟ್ವೀಟ್ ಮಾಡಿ, “ರೈತರು ಬೀದಿಯಲ್ಲಿ ಸಾಯುತ್ತಿದ್ದರೆ, ಸಂವಿಧಾನ ಸಂಸತ್ತಿನಲ್ಲಿ ಸಾಯುತ್ತಿದೆ. ದೇಶ ಎಚ್ಚರಗೊಳ್ಳಬೇಕಿದೆ” ಎಂದು ಬರೆದುಕೊಂಡಿದ್ದಾರೆ.
The farmers are dying on the roads and the constitution is dying inside the parliament.
The nation needs to wake up ! #FarmerSuicideModiQuiet pic.twitter.com/9CuXpFSpVi— Muhammad (@MohdBM793) January 10, 2021
ಸಿಮ್ರನ್ ಸಂಧು ಎಂಬುವವರು, “ಭಾರತ ಮತ್ತೊಮ್ಮೊ ಒಂದಾಗಬೇಕಿದೆ. ಆದರೆ ಈ ಬಾರಿ ಬ್ರಿಟಿಷರ ವಿರುದ್ಧವಲ್ಲ. ಬದಲಿಗೆ ಮೋದಿ ಸರ್ಕಾರದ ವಿರುದ್ಧ” ಎಂದು ಟ್ವೀಟ್ ಮಾಡಿದ್ದಾರೆ.
#FarmerSuicideModiQuiet India is united again, and this time not against British, this time against Modi government #FarmerSuicideModiQuiet pic.twitter.com/8gQwxDIL04
— Simran Sandhu (@Simsandhu3) January 10, 2021
ಹೀಗೆ ಲಕ್ಷಕ್ಕೂ ಹೆಚ್ಚು ಜನ ಮೋದಿ ಸರ್ಕಾರದ ವಿರುದ್ಧ ತಮ್ಮ ಅಕ್ರೋಶವನ್ನು ಹೊರಹಾಕಿದ್ದಾರೆ.
ಇದನ್ನೂ ಓದಿ: ಮೋದಿ -ಶಾ ರೇ ಜವಾಬ್ದಾರರು: ಮತ್ತೊಬ್ಬ ರೈತನ ಆತ್ಮಹತ್ಯೆ ಯತ್ನ
ಈ ತಿಂಗಳು ವರದಿಯಾದ ಎರಡನೇ ರೈತ ಸಾವು ಇದು. ಕಳೆದ ವಾರ ದೆಹಲಿ-ಗಾಜಿಯಾಬಾದ್ ಗಡಿ ಬಳಿ ಪ್ರತಿಭಟನಾ ಸ್ಥಳದಲ್ಲಿ 75 ವರ್ಷದ ರೈತ ಪ್ರಾಣತ್ಯಾಗ ಮಾಡಿದ್ದರು.
ರೈತ ಹೋರಾಟವನ್ನು ಬೆಂಬಲಿಸಿ ಡಿಸಂಬರ್ನಲ್ಲಿ ಸಿಖ್ ಧರ್ಮಗುರು ಬಾಬಾ ರಾಮ್ ಸಿಂಗ್ ಜಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ಅವರು ತಮ್ಮ ಆತ್ಮಹತ್ಯಾ ಬರಹದಲ್ಲಿ “ರೈತರು ತಮ್ಮ ಹಕ್ಕುಗಳನ್ನು ಪಡೆದುಕೊಳ್ಳಲು ಹೋರಾಡುತ್ತಿದ್ದಾರೆ. ಆ ನೋವನ್ನು ನಾನೂ ಅನುಭವಿಸುತ್ತಿದ್ದೇನೆ… ಸರ್ಕಾರವು ಅವರಿಗೆ ನ್ಯಾಯ ಒದಗಿಸದ ಕಾರಣ ನಾನೂ ಅವರ ನೋವನ್ನು ಹಂಚಿಕೊಳ್ಳುತ್ತೇನೆ. ಅನ್ಯಾಯವನ್ನು ಮಾಡುವುದು ಪಾಪ, ಆದರೆ ಅನ್ಯಾಯವನ್ನು ಸಹಿಸುವುದು ಕೂಡಾ ಪಾಪವಾಗಿದೆ. ರೈತರನ್ನು ಬೆಂಬಲಿಸಲು, ಕೆಲವರು ತಮ್ಮ ಪ್ರಶಸ್ತಿಗಳನ್ನು ಸರ್ಕಾರಕ್ಕೆ ಹಿಂದಿರುಗಿಸಿದ್ದಾರೆ. ನಾನು ನನ್ನ ಪ್ರಾಣವನ್ನು ತ್ಯಾಗ ಮಾಡಲು ನಿರ್ಧರಿಸಿದ್ದೇನೆ” ಎಂದು ಬರೆದುಕೊಂಡಿದ್ದರು.
ದೆಹಲಿಯಲ್ಲಿ ಹೋರಾಟ ಆರಂಭವಾದಾಗಿನಿಂದ ಚಳಿಗಾಳಿ, ಅನಾರೋಗ್ಯ, ಆತ್ಮಹತ್ಯೆ ಸೇರಿದಂತೆ ಹಲವು ಕಾರಣಗಳಿಂದ 60 ಹೆಚ್ಚು ರೈತರು ಸಾವನಪ್ಪಿದ್ದಾರೆ ಎಂದು ರೈತ ಮುಖಂಡರು ತಿಳಿಸಿದ್ದಾರೆ. ಡಿಸೆಂಬರ್ 20ರ ಭಾನುವಾರ ಮಡಿದವರ ನೆನಪಿನಲ್ಲಿ ಶ್ರದ್ಧಾಂಜಲಿ ದಿವಸ್ ಆಚರಿಸಲಾಗಿತ್ತು.
ಇದನ್ನೂ ಓದಿ: ರೈತ ಹೋರಾಟವನ್ನು ಬೆಂಬಲಿಸಿ ಆತ್ಮಹತ್ಯೆ ಮಾಡಿಕೊಂಡ ಸಿಖ್ ಧರ್ಮಗುರು!
ವಿವಾದಾತ್ಮಕ ಕೃಷಿ ಕಾನೂನುಗಳನ್ನು ಹಿಂತೆಗೆದುಕೊಳ್ಳುವವರೆಗೂ ತಮ್ಮ ಪ್ರತಿಭಟನೆಯನ್ನು ಹಿಂತೆಗೆದುಕೊಳ್ಳುವುದಿಲ್ಲ ಎಂದು ರೈತರು ಪಟ್ಟು ಹಿಡಿದಿದ್ದಾರೆ. ಇತ್ತ ಸರ್ಕಾರವು ತನ್ನ ನಿರ್ಧಾರದಿಂದ ಹಿಂದೆ ಸರಿಯುವುದಿಲ್ಲ ಎಂದು ಪದೇ ಪದೇ ಹೇಳುತ್ತಲೇ ಇದೆ. ಇದರ ಭಾಗವಾಗಿ ಇದುವರೆಗೂ 8 ಸುತ್ತಿನ ಮಾತುಕತೆಗಳು ನಡೆದಿದ್ದು, ಅವುಗಳೆಲ್ಲವೂ ವಿಫಲವಾಗಿವೆ.
ಈ ಹಿನ್ನೆಲೆಯಲ್ಲಿ ಗಣರಾಜ್ಯೋತ್ಸವ ದಿನದಂದು ದೆಹಲಿಯಲ್ಲಿ ಬೃಹತ್ ಟ್ರ್ಯಾಕ್ಟರ್ ರ್ಯಾಲಿಯನ್ನು ನಡೆಸುವುದಾಗಿ ರೈತರು ಹೇಳಿದ್ದಾರೆ. ಇದರ ಬೆನ್ನಲ್ಲೇ ಕೇಂದ್ರ ಸರ್ಕಾರ ಮತ್ತೊಂದು ಸುತ್ತಿನ ಮಾತುಕತೆಗೆ ಜನವರಿ 15 ರಂದು ರೈತರನ್ನು ಆಹ್ವಾನಿಸಿದೆ.
ಜೀವ ಅಮೂಲ್ಯವಾಗಿದೆ. ಮಾನಸಿಕ ಒತ್ತಡಗಳಿದ್ದರೆ ಇಲ್ಲಿ ಸಂಪರ್ಕಿಸಿ:
ಬೆಂಗಳೂರು ಸಹಾಯವಾಣಿ – 080-25497777, ಬೆಳಿಗ್ಗೆ 10 ರಿಂದ ಸಂಜೆ 8 ರವರೆಗೆ
ಕರ್ನಾಟಕ ಆರೋಗ್ಯ ಸಹಾಯವಾಣಿ: 104
ಇದನ್ನೂ ಓದಿ: ತಮಿಳುನಾಡು ಶಾಸಕನ ಅಂತರ್ಜಾತಿ ವಿವಾಹದ ವಿಡಿಯೋ ವೈರಲ್: ಯುವತಿಯ ತಂದೆ ಆತ್ಮಹತ್ಯೆಗೆ ಯತ್ನ!