Homeಕರ್ನಾಟಕಮತ್ತೊಂದು ಹೋರಾಟ ಕೈಗೆತ್ತಿಕೊಂಡ ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ!

ಮತ್ತೊಂದು ಹೋರಾಟ ಕೈಗೆತ್ತಿಕೊಂಡ ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ!

- Advertisement -
- Advertisement -

ದಕ್ಷಿಣ ಕನ್ನಡ ಜಿಲ್ಲೆಯನ್ನು ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿಯ ಸಮಸ್ಯೆಗಳನ್ನು ಬಗೆಹರಿಸಲು ಹಾಗೂ ಜಿಲ್ಲೆಯ ಬಂಟ್ವಾಳ ಬಳಿಯ ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವು ಮಾಡಬೇಕು ಎಂದು ಒತ್ತಾಯಿಸಿ, ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ – ಸುರತ್ಕಲ್ ಹಾಗೂ ಸಮಾನ ಮನಸ್ಕ ಸಂಘಟನೆಗಳು ಬುಧವಾರ ಮಂಗಳೂರಿನ ನಂತೂರಿನಲ್ಲಿ ಸಾಮೂಹಿಕ ಧರಣಿ ನಡೆಸಲಿದೆ. ಮತ್ತೊಂದು ಹೋರಾಟ

ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಸಮಾನ ಮನಸ್ಕ ಸಂಘಟನೆಗಳು ಹಾಗೂ ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ ಸುರತ್ಕಲ್ ಈ ಧರಣಿಯ ನೇತೃತ್ವ ವಹಿಸಿಕೊಂಡಿದೆ. ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿಯು ಮಂಗಳೂರಿನ ಸುರತ್ಕಲ್ ಬಳಿಯಿದ್ದ ಟೋಲ್‌ಗೇಟ್ ವಿರುದ್ಧ ಹಲವು ವರ್ಷಗಳ ಕಾಲ ಹೋರಾಟ ನಡೆಸಿತ್ತು. ಈ ಹೋರಾಟವು ಐತಿಹಾಸಿಕವಾಗಿದ್ದು, ದೇಶದ ಇತಿಹಾಸದಲ್ಲೆ ಮೊದಲ ಬಾರಿಗೆ ಟೋಲ್‌ಗೇಟ್ ಒಂದನ್ನು ತೆರವು ಮಾಡಿಸುವಲ್ಲಿ ಯಶಸ್ವಿಯಾಗಿತ್ತು. ಮತ್ತೊಂದು ಹೋರಾಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಬುಧವಾರ ಬೆಳಿಗ್ಗೆ 10 ರಿಂದ ಮಧ್ಯಾಹ್ನ 1 ಗಂಟೆಯ ವರೆಗೆ ಮಂಗಳೂರಿನ ನಂತೂರು ಜಂಕ್ಷನ್ ಬಳಿ ಸಾಮೂಹಿಕ ಧರಣಿ ನಡೆಯಲಿದ್ದು, ಧರಣಿಯ ಉದ್ಘಾಟನೆ ಮಾಜಿ ಸಚಿವ ರಮಾನಾಥ ರೈ ಅವರು ನಡೆಸಲಿದ್ದಾರೆ.

ಜಿಲ್ಲೆಯಲ್ಲಿ ಹೊಸದಾಗಿ ಟೋಲ್ ಗೇಟ್ ಗಳ ಅಳವಡಿಕೆ ಸಂದರ್ಭ ಅಂತರದ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಲು ಕೂಡಾ ಧರಣಿಯು ಒತ್ತಾಯಿಸಲಿದ್ದು, ಮಂಗಳೂರಿನ ನಂತೂರು ಮೇಲ್ಸೇತುವೆ, ಕೂಳೂರು ನೂತನ ಸೇತುವೆಯ ಕಾಮಗಾರಿಯನ್ನು ಕಾಲಮಿತಿಯಲ್ಲಿ ಪೂರ್ಣಗೊಳಿಸಲು ಕೂಡಾ ಆಗ್ರಹಿಸಿ ಈ ಧರಣಿ ನಡೆಯಲಿದೆ.

ನೂತನವಾಗಿ ಟೋಲ್ ಗೇಟ್ ನಿರ್ಮಿಸುವ ಸಂದರ್ಭ ಅಂತರದ ಸಹಿತ ಎಲ್ಲಾ ನಿಯಮಗಳನ್ನು ಸರಿಯಾಗಿ ಪಾಲಿಸುವಂತೆ ಸಂಘಟನೆಯು ಒತ್ತಾಯಿಸಿದೆ. ಅಲ್ಲದೆ, ನಿರ್ಮಿಸಲು ಉದ್ದೇಶಿಸಿರುವ ಟೋಲ್‌ಗೇಟ್ ಅನ್ನು ಗಂಜಿಮಠದ ಬದಲಿಗೆ ನಿಯಮಗಳ ಅನ್ವಯ ಸೂಕ್ತ ಸ್ಥಳಕ್ಕೆ ಸ್ಥಳಾಂತರಿಸುವಂತೆ ಆಗ್ರಹ ವ್ಯಕ್ತವಾಗಿದ್ದು, ಜೊತೆಗೆ ಸ್ಥಳೀಯರಿಗೆ ವಿನಾಯತಿಯನ್ನು ಖಾತರಿ ಪಡಿಸುವಂತೆ ಒತ್ತಾಯಿಸಲಾಗಿದೆ.

ಧರಣಿಯು ಜಿಲ್ಲೆಯ ಬಿ.ಸಿ. ರೋಡ್ – ಗುಂಡ್ಯ ಹೆದ್ದಾರಿ ಕಾಮಗಾರಿ ವೇಗವಾಗಿ ಪೂರ್ಣಗೊಳಿಸುವಂತೆ ಕೂಡಾ ಆಗ್ರಹಿಸಲಿದ್ದು, ಬ್ರಹ್ಮರ ಕೂಟ್ಲು – ಕಲ್ಲಡ್ಕ – ಮಾಣಿ ಮೇಲ್ಸೇತುವೆ, ಅಂಡರ್ ಪಾಸ್ ಕಾಮಗಾರಿಗಳನ್ನು ಮಳೆಗಾಲಕ್ಕೆ ಮುಂಚಿತವಾಗಿ ಪೂರ್ಣಗೊಳಿಸಿ ಅದನ್ನು ಸಂಚಾರಕ್ಕೆ ಬಿಟ್ಟುಕೊಡುವಂತೆ ಆಗ್ರಹಿಸಲಿದೆ.

ಇದನ್ನೂಓದಿ:  ಗೋ ಕಳ್ಳತನ ಆರೋಪಿಗಳಿಗೆ ಸ್ಥಳದಲ್ಲೇ ಗುಂಡು ಹಾರಿಸಲಾಗುವುದು: ಕಾಂಗ್ರೆಸ್ ಸಚಿವ ಮಂಕಾಳ್ ವೈದ್ಯ

ಗೋ ಕಳ್ಳತನ ಆರೋಪಿಗಳಿಗೆ ಸ್ಥಳದಲ್ಲೇ ಗುಂಡು ಹಾರಿಸಲಾಗುವುದು: ಕಾಂಗ್ರೆಸ್ ಸಚಿವ ಮಂಕಾಳ್ ವೈದ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...

ಪಶ್ಚಿಮ ಬಂಗಾಳ: ಬಿಜೆಪಿಗೆ ಉಲ್ಟಾ ಹೊಡೆಯುತ್ತಾ ಗೋ-ಹತ್ಯೆ ನಿಷೇಧ ಕಾಯ್ದೆ?

ಬಕ್ರೀದ್ (ಈದ್-ಉಲ್-ಅದ್ಹಾ) ಹಬ್ಬ ಹತ್ತಿರ ಬರುತ್ತಿದ್ದಂತೆ, ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಯಂತ್ರಣ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುತ್ತಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಈ ಆಕ್ರೋಶ ಕೇವಲ ಧಾರ್ಮಿಕ ಕಾರಣಗಳಿಗಷ್ಟೇ ಸೀಮಿತವಾಗಿಲ್ಲ, ಬದಲಿಗೆ ವ್ಯಾಪಾರಿಗಳು,...

ಪ.ಬಂಗಾಳ: ಮಮತಾ ಸರ್ಕಾರ ಜಾರಿ ಮಾಡಿದ್ದ OBC ಮೀಸಲಾತಿಯನ್ನು ಕಿತ್ತೆಸೆದ ಸುವೇಂದು ನೇತೃತ್ವದ ಬಿಜೆಪಿ ಸರ್ಕಾರ

ಪಶ್ಚಿಮ ಬಂಗಾಳದ ಒಬಿಸಿ (ಇತರ ಹಿಂದುಳಿದ ವರ್ಗಗಳು) ಪಟ್ಟಿಯಲ್ಲಿದ್ದ ಮುಸ್ಲಿಂ ಸಮುದಾಯಗಳನ್ನು ಕೈಬಿಡುವ ಮೂಲಕ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರವು ಭಾರಿ ರಾಜಕೀಯ ಸಂಚಲನ ಸೃಷ್ಟಿಸಿದೆ. ಈ ಹಿಂದೆ...

ಸಾಮಾಜಿಕ ಹೋರಾಟಗಾರ ‘ಫರಿದುಲ್ ಇಸ್ಲಾಂ’ರನ್ನು ಸುಳ್ಳು ಪ್ರಕರಣದಲ್ಲಿ ಬಂಧಿಸಿದ ಕೋಲ್ಕತ್ತಾ ಪೊಲೀಸರು

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಇನ್ನು ಹತ್ತು ದಿನಗಳು ಕಳೆಯುವಷ್ಟರಲ್ಲೇ, ಸರ್ಕಾರದ ಆಡಳಿತವನ್ನು ಪ್ರಶ್ನಿಸುವವರ ಹಾಗೂ ಹೋರಾಟಗಾರರ ಧ್ವನಿಯನ್ನು ಹತ್ತಿಕ್ಕುವ ಕೆಲಸ ಆರಂಭವಾಗಿದೆ ಎಂಬ...

ಉಪ್ಪಿನಂಗಡಿ: ಸೂರ್ಯ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ, ಚಿಕಿತ್ಸೆಗೆಂದು ತೆರಳಿ ಶವವಾಗಿ ಮರಳಿದ ಬೀದಿಬದಿ ವ್ಯಾಪಾರಿ!

ಖಾಸಗಿ ಆಸ್ಪತ್ರೆಗಳ ಹಣದ ದಾಹ ಮತ್ತು ವೈದ್ಯಕೀಯ ಸಿಬ್ಬಂದಿಯ ಘೋರ ನಿರ್ಲಕ್ಷ್ಯಕ್ಕೆ ಮತ್ತೊಂದು ಬಡ ಜೀವ ಬಲಿಯಾಗಿದೆ. ಉಪ್ಪಿನಂಗಡಿಯ ಸೂರ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ ಮೊಹಮ್ಮದ್ ಶರೀಫ್ (35) ಎಂಬ ಬೀದಿ ಬದಿ...

ಬಿಸಿಲಿನ ಬೆಂಕಿಗೆ ‘ಎಲ್ ನಿನೊ’ ತುಪ್ಪ: 2026ರ ಮುಂಗಾರು ಕಥೆ ಏನು?

ದೇಶಾದ್ಯಂತ ತಾಪಮಾನ ದಿನೇ ದಿನೇ ಏರುತ್ತಿದ್ದು, ಭೀಕರ ಶಾಖದ ಅಲೆಗಳಿಗೆ (Heatwaves) ಜನ ತತ್ತರಿಸಿ ಹೋಗಿದ್ದಾರೆ. ಈ ಹೊತ್ತಿನಲ್ಲಿ ಎಲ್ಲರ ಕಣ್ಣುಗಳು ಸಾವಿರಾರು ಕಿಲೋಮೀಟರ್ ದೂರದ ಪೆಸಿಫಿಕ್ ಮಹಾಸಾಗರದಲ್ಲಿ ಸಂಭವಿಸುತ್ತಿರುವ ಹವಾಮಾನ ಬದಲಾವಣೆಯ...

ಸುಮಾರು 1 ಲಕ್ಷ ಶಾಲೆಗಳಲ್ಲಿ ಬಾಲಕಿಯರಿಗೆ ಶೌಚಾಲಯವಿಲ್ಲ, 61,000 ಶಾಲೆಗಳಲ್ಲಿ ಕ್ರಿಯಾತ್ಮಕ ಶೌಚಾಲಯಗಳಿಲ್ಲ: ನೀತಿ ಆಯೋಗ

ಶಿಕ್ಷಣವು ಒಂದು ದೇಶದ ಅಭಿವೃದ್ಧಿಯ ಬೆನ್ನೆಲುಬು ಅಂತಲೇ ಹೇಳಲಾಗುತ್ತದೆ. ಆದರೆ, ಭಾರತದ ಶಾಲಾ ಶಿಕ್ಷಣದ ಮೂಲಭೂತ ಸೌಕರ್ಯಗಳು ಮತ್ತು ವ್ಯವಸ್ಥೆಯ ಕುರಿತಾಗಿ ನೀತಿ ಆಯೋಗ ಹಾಗೂ ಯುಡಿಐಎಸ್ಇ+ (UDISE+ 2024–25) ಇತ್ತೀಚೆಗೆ ಬಿಡುಗಡೆ...

CJI ಹೇಳಿಕೆಯಿಂದ ರಾತ್ರೋರಾತ್ರಿ ಹುಟ್ಟಿಕೊಂಡ ‘ಕಾಕ್‌ರೋಚ್ ಜನತಾ ಪಾರ್ಟಿ’

ಒಂದು ರಾಜಕೀಯ ಪಕ್ಷವನ್ನು ಕಟ್ಟಿ, ಅದಕ್ಕೊಂದು ರೂಪ ಕೊಡಲು ಎಷ್ಟು ಸಮಯ ಬೇಕಾಗಬಹುದು? ಕೇವಲ 48 ಗಂಟೆಗಳು! ಹೌದು, ಕಳೆದ ಭಾನುವಾರ ನೀವು ಸಾಮಾಜಿಕ ಜಾಲತಾಣಗಳಲ್ಲಿ ಸ್ವಲ್ಪ ಸಮಯ ಕಳೆದಿದ್ದರೆ ನಿಮಗಿದು ಖಂಡಿತ...

ಬೆಂಗಳೂರು: ಗಂಗಸಂದ್ರ ದಲಿತರ ಭೂಮಿ ಕಿತ್ತುಕೊಳ್ಳಲು ಮುಗಿಬಿದ್ದ ಅರಣ್ಯ ಇಲಾಖೆ: ಮಿತಿಮೀರಿದ ಅಧಿಕಾರಿಗಳ ದರ್ಪ

ಕೆಂಗೇರಿ ಬಳಿಯ ಗಂಗಸಂದ್ರ ಗ್ರಾಮದಲ್ಲಿನ ದಲಿತರ ಭೂಮಿಯನ್ನು ಅರಣ್ಯ ಭೂಮಿಯೆಂದು ಅರಣ್ಯ ಇಲಾಖೆಯ ವಶಕ್ಕೆ ಪಡೆಯಲು ಅಧಿಕಾರಿಗಳು ಮುಂದಾಗಿದ್ದಾರೆ. 2026 ಮೇ 19ರ, ಮಂಗಳವಾರ  ಬೆಳ್ಳಂಬೆಳಗ್ಗೆಯೇ ಅಧಿಕಾರಿಗಳ ದರ್ಪ ತಾರಕಕ್ಕೇರಿದೆ. ದಲಿತ ನಿವಾಸಿಗಳ...