Homeಮುಖಪುಟಮತ್ತೆ ಹೆಚ್ಚಾದ LPG ದರ : ಇದು ಜನರ ನಿಷ್ಕ್ರಿಯತೆಯ ಕೊಡುಗೆ!

ಮತ್ತೆ ಹೆಚ್ಚಾದ LPG ದರ : ಇದು ಜನರ ನಿಷ್ಕ್ರಿಯತೆಯ ಕೊಡುಗೆ!

ಬಿಜೆಪಿಯ ವಕ್ತಾರರಾದ "ವಾಮನಾಚಾರ್ಯ'ರನ್ನು ನಾನುಗೌರಿ.ಕಾಂ ಮಾತನಾಡಿಸಿ ಈ ಬಗ್ಗೆ ಪ್ರತಿಕ್ರಿಯೆ ಕೇಳಿದಾಗ ಬೆಲೆ ಏರಿಕೆಯಿಂದ ಜನರಿಗೆ ಆಗುವ ಸಮಸ್ಯೆಯನ್ನು ಒಪ್ಪುತ್ತಲೇ, ಈ ಬಗ್ಗೆ ಪ್ರತಿಕ್ರಿಯೆ ನೀಡಲು ನಿರಾಕರಿಸಿದರು.

- Advertisement -
- Advertisement -

LPG ಸಿಲಿಂಡೆರ್ ರೇಟು ಮತ್ತೇ ಜಾಸ್ತಿಯಾಗಿದೆ. ಕೇಂದ್ರ ಸರ್ಕಾರ ದೆಹಲಿ ಚುನಾವಣೆ ಮುಗಿಯಲು ಕಾಯುತ್ತಿತ್ತೋ ಎಂಬಂತೆ ಫಲಿತಾಂಶದ ಮರುದಿನವೇ ದರವನ್ನು ಹೆಚ್ಚಿಸಿದೆ. ಈ ಮೂಲಕ ಸರಕಾರ ಜನರ ಕಿಸೆಗೆ ಕೈ ಹಾಕಿದೆ. ದೇಶದಲ್ಲಿ ಆರ್ಥಿಕ ಸ್ಥಿತಿ ಹದಗೆಟ್ಟಿರುವ ಪರಿಸ್ಥಿತಿಯಲ್ಲಿ ಜನರನ್ನು ಲೂಟಿ ಮಾಡಿಯಾದರೂ ಸರಿ ಬೊಕ್ಕಸ ತುಂಬಿಕೊಳ್ಳಲು ಹೊರಟಂತಿದೆ ಸರಕಾರದ ನಡೆ. ಸರಕಾರದ ನೀತಿಯನ್ನು ಟೀಕಿಸಿದರೆಂದು ಜನರ ಬಾಯಿಯನ್ನು ಮುಚ್ಚಿಸಲು ಶತಾಯುಗತ ಪ್ರಯತ್ನಿಸುವ ಸರಕಾರ ತನ್ನ ಜನ ವಿರೋಧಿ ನೀತಿಯ ಕಡೆಗೆ ನೋಡಿ ಯಾವುದೇ ಸುಧಾರಣೆಯನ್ನು ಮಾಡುವ ಸಣ್ಣ ಪ್ರಯತ್ನ ಕೂಡಾ ಮಾಡುತ್ತಿಲ್ಲ.

ಈಗ ಎಲ್‌ಪಿಗಿ ಗ್ಯಾಸ್‌ಗೆ ಬರೋಬ್ಬರಿ 145ರೂ ಏರಿಸಲಾಗಿದೆ. 2014 ರ ನಂತರ ಬಾರಿಗೆ ಇದು ಅತೀ ಹೆಚ್ಚು ಏರಿಕೆಯಾಗಿದೆ. ಸಬ್ಸಿಡಿ ರಹಿತ ಸಿಲಿಂಡರಿನ ದರ ದೆಹಲಿಯಲ್ಲಿ 858.50 ರೂ, ಮುಂಬೈಯಲ್ಲಿ 829.50 ರೂ., ಕೋಲ್ಕೊತ್ತಾದಲ್ಲಿ 896 ರೂ., ಹಾಗೂ ಚೆನ್ನೈಯಲ್ಲಿ 734 ರೂ. ಆಗಲಿದೆ.  2009 ಜನವರಿಯಲ್ಲಿ ದೆಹಲಿಯಲ್ಲಿ 279.70 ರೂ ಸಿಗುತ್ತಿದ್ದ ಸಿಲಿಂಡರ್‌ ಈಗ ಬೆಲೆ 858.50 ರೂಗೇರಿದೆ ಅಂದರೆ ಅದರ ಪ್ರಮಾಣ ನೀವೇ ಊಹಿಸಿ.

ಈ ಹಿಂದೆ ಎಲ್‌ಪಿಜಿ ದರದ ಪಟ್ಟಿ ನೋಡಿ.. 

ಕೃಪೆ: ರಾಯ್ಟರ್ಸ್‌

ತನ್ನ ತಪ್ಪುಗಳ ಬಗ್ಗೆ ಪ್ರಶ್ನೆಗಳು ಎದ್ದಾಗ ಕೇಂದ್ರದ ಬಿಜೆಪಿ ಸರ್ಕಾರ ಪ್ರತಿಬಾರಿಯೂ ಹಿಂದಿನ ಕಾಂಗ್ರೆಸ್ ಸರಕಾರವನ್ನು ಬೊಟ್ಟು ಮಾಡಿ ತೋರಿಸಿ ನುಣುಚಿಕೊಳ್ಳುತ್ತದೆ. ಅದರ ಮೇಲೆ ಸಣ್ಣ ಪ್ರಶ್ನೆಯನ್ನೂ ಹಾಕದೇ ಬಹು ಪರಾಕ್ ಹಾಕಿ ಸಮರ್ಥಿಸಿಕೊಳ್ಳುವ ಭಕ್ತಗಣವೂ ಈ ಸರ್ಕಾರಕ್ಕೆ ಇದೆ. ಹಿಂದೆಯೆಲ್ಲಾ ಒಂದು ಪೈಸೆ ಹೆಚ್ಚಾದರೂ ಜನರು ಪ್ರತಿಭಟನೆ ನಡೆಸುತ್ತಿದ್ದರು. ಈಗ ಪೆಟ್ರೋಲಿಗೆ ಐನೂರಾದರೂ ನಡೆದುಕೊಂಡೇ ಹೋಗಿ ಮೋದಿಗೆ ಮತ ಹಾಕುತ್ತೇವೆ ಎನ್ನುವವರು ಹುಟ್ಟಿಕೊಂಡಿದ್ದಾರೆ. ಇಂತಹ  ಜನರಿರುವ ಕಾರಣದಿಂದಲೇ ಸರಕಾರ ಸರ್ವಾಧಿಕಾರಿಯಂತೆ ಮೆರೆಯುತ್ತಿದೆ. ಆದರೆ ಇದ್ಯಾವುದೂ ತಿಳಿಯದ ಸಾಮಾನ್ಯ ಜನರು ಇಲ್ಲಿ ಬಲಿಪಶುಗಳಾಗುತ್ತಾರೆ.

ಈಗ ಹೆಚ್ಚಾಗಿರುವ ಎಲ್‌ಪಿಜಿ ದರ

 

ಈ ಬಗ್ಗೆ ಮಂಗಳೂರಿನ ಗ್ರಾಹಕರ ವೇದಿಕೆ ಧರ್ಮೇಂದ್ರರವರನ್ನು ನಾನುಗೌರಿ.ಕಾಂ ಮಾತನಾಡಿಸಿತು. ಅವರು “ಬದುಕು ಕಟ್ಟಿಕೊಳ್ಳುವುದೇ ಕಷ್ಟವಾಗಿರುವ ಈ ಸಮಯದಲ್ಲಿ ದಿನನಿತ್ಯದ ಅನಿವಾರ್ಯ ಮತ್ತು ಅಗತ್ಯ ವಸ್ತುಗಳ ಬೆಲೆಏರಿಕೆಯ ಪ್ರಶ್ನೆಗಳಿಗೆ ಉತ್ತರ ಸಿಗುವುದೇ ಕಷ್ಟಕರವಾಗಿದೆ. ದೇಶದ ತಾಯಂದಿರು ಬೀದಿಗಿಳಿಯಬೇಕಾದ ಅನಿವಾರ್ಯತೆ ಇದೆ. ಪುರುಷರು ಹೇಗಾದರೂ ಬದುಕಿಕೊಳ್ಳಬಹುದೇನೊ ಆದರೆ ದೇಶದ ಮಹಿಳೆಯರು ಇದರ ಹೊಡೆತ ತಿನ್ನಬೇಕಾಗುತ್ತದೆ. ಇದು ದೇಶದ ಮೇಲೆ ಗಂಭೀರ ಪರಿಣಾಮ ಬೀರುತ್ತದೆ”  ಎಂದಿದ್ದಾರೆ.

ಕಾಂಗ್ರೆಸ್ ಪಕ್ಷದ ವಕ್ತಾರರಾದ ಎ.ಎನ್ ನಟರಾಜೇಗೌಡರು “ಬಿಜೆಪಿ ಪಕ್ಷವು ಸೂಕ್ಷ್ಮತೆಯಿಲ್ಲದೇ ಸಂವೇದನಾಹೀನತೆಯಿಂದೆ ಬಳಲುತ್ತಿದೆ. ಅವರು ‌ಎಲ್ಲಾ ರಾಜ್ಯ ಚುನಾವಣೆಗಳಲ್ಲಿ ಸೋಲುತ್ತಿರುವುದರಿಂದ ಜನರ ಮೇಲೆ ದ್ವೇಷ ಸಾಧಿಸುತ್ತಿದೆ. ಹಾಗಾಗಿ ಈ ರೀತಿ ಜನ ಬಳಕೆಯ ವಸ್ತುಗಳ ಬೆಲೆ ಏರಿಕೆ ಮಾಡುತ್ತಿದ್ದಾರೆ. ಜನರು ಅಕ್ರೋಶಗೊಂಡಿದ್ದಾರೆ, ಇದು ಯಾವ ಸಮಯದಲ್ಲಾದರೂ ಸ್ಪೋಟಗೊಳ್ಳಬಹುದು. ಹಾಗಾಗಿ ಕೇಂದ್ರದ ಮೋದಿ ಸರ್ಕಾರ ತಕ್ಷಣವೇ ಇದನ್ನು ಹಿಂಪಡೆಯಬೇಕಿದೆ. ಕಾಂಗ್ರೆಸ್ ಪಕ್ಷದ ರಾಜ್ಯ ಮಹಿಳಾ ಘಟಕದಿಂದ ಇದರ ವಿರುದ್ಧ ರಾಜ್ಯ ವ್ಯಾಪಿ ಪ್ರತಿಭಟನೆ ನಡೆಸಲಿದ್ದೇವೆ” ಎಂದಿದ್ದಾರೆ.

ಬಿಜೆಪಿಯ ವಕ್ತಾರರಾದ “ವಾಮನಾಚಾರ್ಯ”ರನ್ನು ನಾನುಗೌರಿ.ಕಾಂ ಮಾತನಾಡಿಸಿ ಈ ಬಗ್ಗೆ ಪ್ರತಿಕ್ರಿಯೆ ಕೇಳಿದಾಗ ಬೆಲೆ ಏರಿಕೆಯಿಂದ ಜನರಿಗೆ ಆಗುವ ಸಮಸ್ಯೆಯನ್ನು ಒಪ್ಪುತ್ತಲೇ, ಈ ಬಗ್ಗೆ ಪ್ರತಿಕ್ರಿಯೆ ನೀಡಲು ನಿರಾಕರಿಸಿದರು.

ಒಟ್ಟಾರೆಯಾಗಿ ಹೀಗೆ ದಿನೇ ದಿನೇ ಅಗತ್ಯ ವಸ್ತುಗಳ ಬೆಲೆ ಹೆಚ್ಚಾಗುತ್ತಿರುವುದಕ್ಕೆ ಜನರ ನಿಷ್ಕ್ರಿಯತೆಯೇ ಕಾರಣವಾಗಿದೆ ಹೊರತು ಮತ್ತೇನಲ್ಲ ಎನಿಸುತ್ತದೆ. ಜನರು ಬೀದಿಗಿಳಿದಾಗ ಮಾತ್ರ ಸರ್ಕಾರ ಎಚ್ಚೆತ್ತುಕೊಳ್ಳುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...