Homeಮುಖಪುಟಮತ್ತೆ ಹೆಚ್ಚಾದ LPG ದರ : ಇದು ಜನರ ನಿಷ್ಕ್ರಿಯತೆಯ ಕೊಡುಗೆ!

ಮತ್ತೆ ಹೆಚ್ಚಾದ LPG ದರ : ಇದು ಜನರ ನಿಷ್ಕ್ರಿಯತೆಯ ಕೊಡುಗೆ!

ಬಿಜೆಪಿಯ ವಕ್ತಾರರಾದ "ವಾಮನಾಚಾರ್ಯ'ರನ್ನು ನಾನುಗೌರಿ.ಕಾಂ ಮಾತನಾಡಿಸಿ ಈ ಬಗ್ಗೆ ಪ್ರತಿಕ್ರಿಯೆ ಕೇಳಿದಾಗ ಬೆಲೆ ಏರಿಕೆಯಿಂದ ಜನರಿಗೆ ಆಗುವ ಸಮಸ್ಯೆಯನ್ನು ಒಪ್ಪುತ್ತಲೇ, ಈ ಬಗ್ಗೆ ಪ್ರತಿಕ್ರಿಯೆ ನೀಡಲು ನಿರಾಕರಿಸಿದರು.

- Advertisement -
- Advertisement -

LPG ಸಿಲಿಂಡೆರ್ ರೇಟು ಮತ್ತೇ ಜಾಸ್ತಿಯಾಗಿದೆ. ಕೇಂದ್ರ ಸರ್ಕಾರ ದೆಹಲಿ ಚುನಾವಣೆ ಮುಗಿಯಲು ಕಾಯುತ್ತಿತ್ತೋ ಎಂಬಂತೆ ಫಲಿತಾಂಶದ ಮರುದಿನವೇ ದರವನ್ನು ಹೆಚ್ಚಿಸಿದೆ. ಈ ಮೂಲಕ ಸರಕಾರ ಜನರ ಕಿಸೆಗೆ ಕೈ ಹಾಕಿದೆ. ದೇಶದಲ್ಲಿ ಆರ್ಥಿಕ ಸ್ಥಿತಿ ಹದಗೆಟ್ಟಿರುವ ಪರಿಸ್ಥಿತಿಯಲ್ಲಿ ಜನರನ್ನು ಲೂಟಿ ಮಾಡಿಯಾದರೂ ಸರಿ ಬೊಕ್ಕಸ ತುಂಬಿಕೊಳ್ಳಲು ಹೊರಟಂತಿದೆ ಸರಕಾರದ ನಡೆ. ಸರಕಾರದ ನೀತಿಯನ್ನು ಟೀಕಿಸಿದರೆಂದು ಜನರ ಬಾಯಿಯನ್ನು ಮುಚ್ಚಿಸಲು ಶತಾಯುಗತ ಪ್ರಯತ್ನಿಸುವ ಸರಕಾರ ತನ್ನ ಜನ ವಿರೋಧಿ ನೀತಿಯ ಕಡೆಗೆ ನೋಡಿ ಯಾವುದೇ ಸುಧಾರಣೆಯನ್ನು ಮಾಡುವ ಸಣ್ಣ ಪ್ರಯತ್ನ ಕೂಡಾ ಮಾಡುತ್ತಿಲ್ಲ.

ಈಗ ಎಲ್‌ಪಿಗಿ ಗ್ಯಾಸ್‌ಗೆ ಬರೋಬ್ಬರಿ 145ರೂ ಏರಿಸಲಾಗಿದೆ. 2014 ರ ನಂತರ ಬಾರಿಗೆ ಇದು ಅತೀ ಹೆಚ್ಚು ಏರಿಕೆಯಾಗಿದೆ. ಸಬ್ಸಿಡಿ ರಹಿತ ಸಿಲಿಂಡರಿನ ದರ ದೆಹಲಿಯಲ್ಲಿ 858.50 ರೂ, ಮುಂಬೈಯಲ್ಲಿ 829.50 ರೂ., ಕೋಲ್ಕೊತ್ತಾದಲ್ಲಿ 896 ರೂ., ಹಾಗೂ ಚೆನ್ನೈಯಲ್ಲಿ 734 ರೂ. ಆಗಲಿದೆ.  2009 ಜನವರಿಯಲ್ಲಿ ದೆಹಲಿಯಲ್ಲಿ 279.70 ರೂ ಸಿಗುತ್ತಿದ್ದ ಸಿಲಿಂಡರ್‌ ಈಗ ಬೆಲೆ 858.50 ರೂಗೇರಿದೆ ಅಂದರೆ ಅದರ ಪ್ರಮಾಣ ನೀವೇ ಊಹಿಸಿ.

ಈ ಹಿಂದೆ ಎಲ್‌ಪಿಜಿ ದರದ ಪಟ್ಟಿ ನೋಡಿ.. 

ಕೃಪೆ: ರಾಯ್ಟರ್ಸ್‌

ತನ್ನ ತಪ್ಪುಗಳ ಬಗ್ಗೆ ಪ್ರಶ್ನೆಗಳು ಎದ್ದಾಗ ಕೇಂದ್ರದ ಬಿಜೆಪಿ ಸರ್ಕಾರ ಪ್ರತಿಬಾರಿಯೂ ಹಿಂದಿನ ಕಾಂಗ್ರೆಸ್ ಸರಕಾರವನ್ನು ಬೊಟ್ಟು ಮಾಡಿ ತೋರಿಸಿ ನುಣುಚಿಕೊಳ್ಳುತ್ತದೆ. ಅದರ ಮೇಲೆ ಸಣ್ಣ ಪ್ರಶ್ನೆಯನ್ನೂ ಹಾಕದೇ ಬಹು ಪರಾಕ್ ಹಾಕಿ ಸಮರ್ಥಿಸಿಕೊಳ್ಳುವ ಭಕ್ತಗಣವೂ ಈ ಸರ್ಕಾರಕ್ಕೆ ಇದೆ. ಹಿಂದೆಯೆಲ್ಲಾ ಒಂದು ಪೈಸೆ ಹೆಚ್ಚಾದರೂ ಜನರು ಪ್ರತಿಭಟನೆ ನಡೆಸುತ್ತಿದ್ದರು. ಈಗ ಪೆಟ್ರೋಲಿಗೆ ಐನೂರಾದರೂ ನಡೆದುಕೊಂಡೇ ಹೋಗಿ ಮೋದಿಗೆ ಮತ ಹಾಕುತ್ತೇವೆ ಎನ್ನುವವರು ಹುಟ್ಟಿಕೊಂಡಿದ್ದಾರೆ. ಇಂತಹ  ಜನರಿರುವ ಕಾರಣದಿಂದಲೇ ಸರಕಾರ ಸರ್ವಾಧಿಕಾರಿಯಂತೆ ಮೆರೆಯುತ್ತಿದೆ. ಆದರೆ ಇದ್ಯಾವುದೂ ತಿಳಿಯದ ಸಾಮಾನ್ಯ ಜನರು ಇಲ್ಲಿ ಬಲಿಪಶುಗಳಾಗುತ್ತಾರೆ.

ಈಗ ಹೆಚ್ಚಾಗಿರುವ ಎಲ್‌ಪಿಜಿ ದರ

 

ಈ ಬಗ್ಗೆ ಮಂಗಳೂರಿನ ಗ್ರಾಹಕರ ವೇದಿಕೆ ಧರ್ಮೇಂದ್ರರವರನ್ನು ನಾನುಗೌರಿ.ಕಾಂ ಮಾತನಾಡಿಸಿತು. ಅವರು “ಬದುಕು ಕಟ್ಟಿಕೊಳ್ಳುವುದೇ ಕಷ್ಟವಾಗಿರುವ ಈ ಸಮಯದಲ್ಲಿ ದಿನನಿತ್ಯದ ಅನಿವಾರ್ಯ ಮತ್ತು ಅಗತ್ಯ ವಸ್ತುಗಳ ಬೆಲೆಏರಿಕೆಯ ಪ್ರಶ್ನೆಗಳಿಗೆ ಉತ್ತರ ಸಿಗುವುದೇ ಕಷ್ಟಕರವಾಗಿದೆ. ದೇಶದ ತಾಯಂದಿರು ಬೀದಿಗಿಳಿಯಬೇಕಾದ ಅನಿವಾರ್ಯತೆ ಇದೆ. ಪುರುಷರು ಹೇಗಾದರೂ ಬದುಕಿಕೊಳ್ಳಬಹುದೇನೊ ಆದರೆ ದೇಶದ ಮಹಿಳೆಯರು ಇದರ ಹೊಡೆತ ತಿನ್ನಬೇಕಾಗುತ್ತದೆ. ಇದು ದೇಶದ ಮೇಲೆ ಗಂಭೀರ ಪರಿಣಾಮ ಬೀರುತ್ತದೆ”  ಎಂದಿದ್ದಾರೆ.

ಕಾಂಗ್ರೆಸ್ ಪಕ್ಷದ ವಕ್ತಾರರಾದ ಎ.ಎನ್ ನಟರಾಜೇಗೌಡರು “ಬಿಜೆಪಿ ಪಕ್ಷವು ಸೂಕ್ಷ್ಮತೆಯಿಲ್ಲದೇ ಸಂವೇದನಾಹೀನತೆಯಿಂದೆ ಬಳಲುತ್ತಿದೆ. ಅವರು ‌ಎಲ್ಲಾ ರಾಜ್ಯ ಚುನಾವಣೆಗಳಲ್ಲಿ ಸೋಲುತ್ತಿರುವುದರಿಂದ ಜನರ ಮೇಲೆ ದ್ವೇಷ ಸಾಧಿಸುತ್ತಿದೆ. ಹಾಗಾಗಿ ಈ ರೀತಿ ಜನ ಬಳಕೆಯ ವಸ್ತುಗಳ ಬೆಲೆ ಏರಿಕೆ ಮಾಡುತ್ತಿದ್ದಾರೆ. ಜನರು ಅಕ್ರೋಶಗೊಂಡಿದ್ದಾರೆ, ಇದು ಯಾವ ಸಮಯದಲ್ಲಾದರೂ ಸ್ಪೋಟಗೊಳ್ಳಬಹುದು. ಹಾಗಾಗಿ ಕೇಂದ್ರದ ಮೋದಿ ಸರ್ಕಾರ ತಕ್ಷಣವೇ ಇದನ್ನು ಹಿಂಪಡೆಯಬೇಕಿದೆ. ಕಾಂಗ್ರೆಸ್ ಪಕ್ಷದ ರಾಜ್ಯ ಮಹಿಳಾ ಘಟಕದಿಂದ ಇದರ ವಿರುದ್ಧ ರಾಜ್ಯ ವ್ಯಾಪಿ ಪ್ರತಿಭಟನೆ ನಡೆಸಲಿದ್ದೇವೆ” ಎಂದಿದ್ದಾರೆ.

ಬಿಜೆಪಿಯ ವಕ್ತಾರರಾದ “ವಾಮನಾಚಾರ್ಯ”ರನ್ನು ನಾನುಗೌರಿ.ಕಾಂ ಮಾತನಾಡಿಸಿ ಈ ಬಗ್ಗೆ ಪ್ರತಿಕ್ರಿಯೆ ಕೇಳಿದಾಗ ಬೆಲೆ ಏರಿಕೆಯಿಂದ ಜನರಿಗೆ ಆಗುವ ಸಮಸ್ಯೆಯನ್ನು ಒಪ್ಪುತ್ತಲೇ, ಈ ಬಗ್ಗೆ ಪ್ರತಿಕ್ರಿಯೆ ನೀಡಲು ನಿರಾಕರಿಸಿದರು.

ಒಟ್ಟಾರೆಯಾಗಿ ಹೀಗೆ ದಿನೇ ದಿನೇ ಅಗತ್ಯ ವಸ್ತುಗಳ ಬೆಲೆ ಹೆಚ್ಚಾಗುತ್ತಿರುವುದಕ್ಕೆ ಜನರ ನಿಷ್ಕ್ರಿಯತೆಯೇ ಕಾರಣವಾಗಿದೆ ಹೊರತು ಮತ್ತೇನಲ್ಲ ಎನಿಸುತ್ತದೆ. ಜನರು ಬೀದಿಗಿಳಿದಾಗ ಮಾತ್ರ ಸರ್ಕಾರ ಎಚ್ಚೆತ್ತುಕೊಳ್ಳುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...