Homeಮುಖಪುಟಮತ್ತೆ ಹೆಚ್ಚಾದ LPG ದರ : ಇದು ಜನರ ನಿಷ್ಕ್ರಿಯತೆಯ ಕೊಡುಗೆ!

ಮತ್ತೆ ಹೆಚ್ಚಾದ LPG ದರ : ಇದು ಜನರ ನಿಷ್ಕ್ರಿಯತೆಯ ಕೊಡುಗೆ!

ಬಿಜೆಪಿಯ ವಕ್ತಾರರಾದ "ವಾಮನಾಚಾರ್ಯ'ರನ್ನು ನಾನುಗೌರಿ.ಕಾಂ ಮಾತನಾಡಿಸಿ ಈ ಬಗ್ಗೆ ಪ್ರತಿಕ್ರಿಯೆ ಕೇಳಿದಾಗ ಬೆಲೆ ಏರಿಕೆಯಿಂದ ಜನರಿಗೆ ಆಗುವ ಸಮಸ್ಯೆಯನ್ನು ಒಪ್ಪುತ್ತಲೇ, ಈ ಬಗ್ಗೆ ಪ್ರತಿಕ್ರಿಯೆ ನೀಡಲು ನಿರಾಕರಿಸಿದರು.

- Advertisement -
- Advertisement -

LPG ಸಿಲಿಂಡೆರ್ ರೇಟು ಮತ್ತೇ ಜಾಸ್ತಿಯಾಗಿದೆ. ಕೇಂದ್ರ ಸರ್ಕಾರ ದೆಹಲಿ ಚುನಾವಣೆ ಮುಗಿಯಲು ಕಾಯುತ್ತಿತ್ತೋ ಎಂಬಂತೆ ಫಲಿತಾಂಶದ ಮರುದಿನವೇ ದರವನ್ನು ಹೆಚ್ಚಿಸಿದೆ. ಈ ಮೂಲಕ ಸರಕಾರ ಜನರ ಕಿಸೆಗೆ ಕೈ ಹಾಕಿದೆ. ದೇಶದಲ್ಲಿ ಆರ್ಥಿಕ ಸ್ಥಿತಿ ಹದಗೆಟ್ಟಿರುವ ಪರಿಸ್ಥಿತಿಯಲ್ಲಿ ಜನರನ್ನು ಲೂಟಿ ಮಾಡಿಯಾದರೂ ಸರಿ ಬೊಕ್ಕಸ ತುಂಬಿಕೊಳ್ಳಲು ಹೊರಟಂತಿದೆ ಸರಕಾರದ ನಡೆ. ಸರಕಾರದ ನೀತಿಯನ್ನು ಟೀಕಿಸಿದರೆಂದು ಜನರ ಬಾಯಿಯನ್ನು ಮುಚ್ಚಿಸಲು ಶತಾಯುಗತ ಪ್ರಯತ್ನಿಸುವ ಸರಕಾರ ತನ್ನ ಜನ ವಿರೋಧಿ ನೀತಿಯ ಕಡೆಗೆ ನೋಡಿ ಯಾವುದೇ ಸುಧಾರಣೆಯನ್ನು ಮಾಡುವ ಸಣ್ಣ ಪ್ರಯತ್ನ ಕೂಡಾ ಮಾಡುತ್ತಿಲ್ಲ.

ಈಗ ಎಲ್‌ಪಿಗಿ ಗ್ಯಾಸ್‌ಗೆ ಬರೋಬ್ಬರಿ 145ರೂ ಏರಿಸಲಾಗಿದೆ. 2014 ರ ನಂತರ ಬಾರಿಗೆ ಇದು ಅತೀ ಹೆಚ್ಚು ಏರಿಕೆಯಾಗಿದೆ. ಸಬ್ಸಿಡಿ ರಹಿತ ಸಿಲಿಂಡರಿನ ದರ ದೆಹಲಿಯಲ್ಲಿ 858.50 ರೂ, ಮುಂಬೈಯಲ್ಲಿ 829.50 ರೂ., ಕೋಲ್ಕೊತ್ತಾದಲ್ಲಿ 896 ರೂ., ಹಾಗೂ ಚೆನ್ನೈಯಲ್ಲಿ 734 ರೂ. ಆಗಲಿದೆ.  2009 ಜನವರಿಯಲ್ಲಿ ದೆಹಲಿಯಲ್ಲಿ 279.70 ರೂ ಸಿಗುತ್ತಿದ್ದ ಸಿಲಿಂಡರ್‌ ಈಗ ಬೆಲೆ 858.50 ರೂಗೇರಿದೆ ಅಂದರೆ ಅದರ ಪ್ರಮಾಣ ನೀವೇ ಊಹಿಸಿ.

ಈ ಹಿಂದೆ ಎಲ್‌ಪಿಜಿ ದರದ ಪಟ್ಟಿ ನೋಡಿ.. 

ಕೃಪೆ: ರಾಯ್ಟರ್ಸ್‌

ತನ್ನ ತಪ್ಪುಗಳ ಬಗ್ಗೆ ಪ್ರಶ್ನೆಗಳು ಎದ್ದಾಗ ಕೇಂದ್ರದ ಬಿಜೆಪಿ ಸರ್ಕಾರ ಪ್ರತಿಬಾರಿಯೂ ಹಿಂದಿನ ಕಾಂಗ್ರೆಸ್ ಸರಕಾರವನ್ನು ಬೊಟ್ಟು ಮಾಡಿ ತೋರಿಸಿ ನುಣುಚಿಕೊಳ್ಳುತ್ತದೆ. ಅದರ ಮೇಲೆ ಸಣ್ಣ ಪ್ರಶ್ನೆಯನ್ನೂ ಹಾಕದೇ ಬಹು ಪರಾಕ್ ಹಾಕಿ ಸಮರ್ಥಿಸಿಕೊಳ್ಳುವ ಭಕ್ತಗಣವೂ ಈ ಸರ್ಕಾರಕ್ಕೆ ಇದೆ. ಹಿಂದೆಯೆಲ್ಲಾ ಒಂದು ಪೈಸೆ ಹೆಚ್ಚಾದರೂ ಜನರು ಪ್ರತಿಭಟನೆ ನಡೆಸುತ್ತಿದ್ದರು. ಈಗ ಪೆಟ್ರೋಲಿಗೆ ಐನೂರಾದರೂ ನಡೆದುಕೊಂಡೇ ಹೋಗಿ ಮೋದಿಗೆ ಮತ ಹಾಕುತ್ತೇವೆ ಎನ್ನುವವರು ಹುಟ್ಟಿಕೊಂಡಿದ್ದಾರೆ. ಇಂತಹ  ಜನರಿರುವ ಕಾರಣದಿಂದಲೇ ಸರಕಾರ ಸರ್ವಾಧಿಕಾರಿಯಂತೆ ಮೆರೆಯುತ್ತಿದೆ. ಆದರೆ ಇದ್ಯಾವುದೂ ತಿಳಿಯದ ಸಾಮಾನ್ಯ ಜನರು ಇಲ್ಲಿ ಬಲಿಪಶುಗಳಾಗುತ್ತಾರೆ.

ಈಗ ಹೆಚ್ಚಾಗಿರುವ ಎಲ್‌ಪಿಜಿ ದರ

 

ಈ ಬಗ್ಗೆ ಮಂಗಳೂರಿನ ಗ್ರಾಹಕರ ವೇದಿಕೆ ಧರ್ಮೇಂದ್ರರವರನ್ನು ನಾನುಗೌರಿ.ಕಾಂ ಮಾತನಾಡಿಸಿತು. ಅವರು “ಬದುಕು ಕಟ್ಟಿಕೊಳ್ಳುವುದೇ ಕಷ್ಟವಾಗಿರುವ ಈ ಸಮಯದಲ್ಲಿ ದಿನನಿತ್ಯದ ಅನಿವಾರ್ಯ ಮತ್ತು ಅಗತ್ಯ ವಸ್ತುಗಳ ಬೆಲೆಏರಿಕೆಯ ಪ್ರಶ್ನೆಗಳಿಗೆ ಉತ್ತರ ಸಿಗುವುದೇ ಕಷ್ಟಕರವಾಗಿದೆ. ದೇಶದ ತಾಯಂದಿರು ಬೀದಿಗಿಳಿಯಬೇಕಾದ ಅನಿವಾರ್ಯತೆ ಇದೆ. ಪುರುಷರು ಹೇಗಾದರೂ ಬದುಕಿಕೊಳ್ಳಬಹುದೇನೊ ಆದರೆ ದೇಶದ ಮಹಿಳೆಯರು ಇದರ ಹೊಡೆತ ತಿನ್ನಬೇಕಾಗುತ್ತದೆ. ಇದು ದೇಶದ ಮೇಲೆ ಗಂಭೀರ ಪರಿಣಾಮ ಬೀರುತ್ತದೆ”  ಎಂದಿದ್ದಾರೆ.

ಕಾಂಗ್ರೆಸ್ ಪಕ್ಷದ ವಕ್ತಾರರಾದ ಎ.ಎನ್ ನಟರಾಜೇಗೌಡರು “ಬಿಜೆಪಿ ಪಕ್ಷವು ಸೂಕ್ಷ್ಮತೆಯಿಲ್ಲದೇ ಸಂವೇದನಾಹೀನತೆಯಿಂದೆ ಬಳಲುತ್ತಿದೆ. ಅವರು ‌ಎಲ್ಲಾ ರಾಜ್ಯ ಚುನಾವಣೆಗಳಲ್ಲಿ ಸೋಲುತ್ತಿರುವುದರಿಂದ ಜನರ ಮೇಲೆ ದ್ವೇಷ ಸಾಧಿಸುತ್ತಿದೆ. ಹಾಗಾಗಿ ಈ ರೀತಿ ಜನ ಬಳಕೆಯ ವಸ್ತುಗಳ ಬೆಲೆ ಏರಿಕೆ ಮಾಡುತ್ತಿದ್ದಾರೆ. ಜನರು ಅಕ್ರೋಶಗೊಂಡಿದ್ದಾರೆ, ಇದು ಯಾವ ಸಮಯದಲ್ಲಾದರೂ ಸ್ಪೋಟಗೊಳ್ಳಬಹುದು. ಹಾಗಾಗಿ ಕೇಂದ್ರದ ಮೋದಿ ಸರ್ಕಾರ ತಕ್ಷಣವೇ ಇದನ್ನು ಹಿಂಪಡೆಯಬೇಕಿದೆ. ಕಾಂಗ್ರೆಸ್ ಪಕ್ಷದ ರಾಜ್ಯ ಮಹಿಳಾ ಘಟಕದಿಂದ ಇದರ ವಿರುದ್ಧ ರಾಜ್ಯ ವ್ಯಾಪಿ ಪ್ರತಿಭಟನೆ ನಡೆಸಲಿದ್ದೇವೆ” ಎಂದಿದ್ದಾರೆ.

ಬಿಜೆಪಿಯ ವಕ್ತಾರರಾದ “ವಾಮನಾಚಾರ್ಯ”ರನ್ನು ನಾನುಗೌರಿ.ಕಾಂ ಮಾತನಾಡಿಸಿ ಈ ಬಗ್ಗೆ ಪ್ರತಿಕ್ರಿಯೆ ಕೇಳಿದಾಗ ಬೆಲೆ ಏರಿಕೆಯಿಂದ ಜನರಿಗೆ ಆಗುವ ಸಮಸ್ಯೆಯನ್ನು ಒಪ್ಪುತ್ತಲೇ, ಈ ಬಗ್ಗೆ ಪ್ರತಿಕ್ರಿಯೆ ನೀಡಲು ನಿರಾಕರಿಸಿದರು.

ಒಟ್ಟಾರೆಯಾಗಿ ಹೀಗೆ ದಿನೇ ದಿನೇ ಅಗತ್ಯ ವಸ್ತುಗಳ ಬೆಲೆ ಹೆಚ್ಚಾಗುತ್ತಿರುವುದಕ್ಕೆ ಜನರ ನಿಷ್ಕ್ರಿಯತೆಯೇ ಕಾರಣವಾಗಿದೆ ಹೊರತು ಮತ್ತೇನಲ್ಲ ಎನಿಸುತ್ತದೆ. ಜನರು ಬೀದಿಗಿಳಿದಾಗ ಮಾತ್ರ ಸರ್ಕಾರ ಎಚ್ಚೆತ್ತುಕೊಳ್ಳುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗಾಝಾ ನರಮೇಧ : ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ಇಸ್ರೇಲ್‌ ಪರ ಅಮೆರಿಕ ವಕಾಲತ್ತು

ಗಾಝಾ ನರಮೇಧಕ್ಕೆ ಸಂಬಂಧಿಸಿದಂತೆ ಇಸ್ರೇಲ್ ವಿರುದ್ದ ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ದಕ್ಷಿಣ ಆಫ್ರಿಕಾ ಹೂಡಿರುವ ಪ್ರಕರಣದಲ್ಲಿ ಅಮೆರಿಕ ಸೇರಿದಂತೆ ಕೆಲ ರಾಷ್ಟ್ರಗಳು ಮಧ್ಯ ಪ್ರವೇಶಿಸಿದ್ದು, ಇಸ್ರೇಲ್ ಪರ ವಕಾಲತ್ತು ವಹಿಸಲು ಮುಂದಾಗಿವೆ ಎಂದು ವರದಿಯಾಗಿದೆ. ದಿ...

ಇರಾನ್‌ನ ಕಿರೀಟ ರತ್ನ ಖಾರ್ಗ್ ದ್ವೀಪದ ಮೇಲೆ ಅಮೆರಿಕದಿಂದ ಬಾಂಬ್ ದಾಳಿ : ಟ್ರಂಪ್ ಹೇಳಿಕೆ

ಇರಾನ್‌ನ ಖಾರ್ಗ್ ದ್ವೀಪದ ಮೇಲೆ ಅಮೆರಿಕ 'ಅತ್ಯಂತ ಶಕ್ತಿಶಾಲಿ ಬಾಂಬ್ ದಾಳಿ' ನಡೆಸಿದೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ. ದ್ವೀಪದಲ್ಲಿರುವ ತೈಲ ಮೂಲಸೌಕರ್ಯಗಳನ್ನು ನಾಶಪಡಿಸದೆ ಇರಲು ನಿರ್ಧರಿಸಿದ ಅಮೆರಿಕ ಪಡೆಗಳು, ಅಲ್ಲಿನ ಮಿಲಿಟರಿ ಕೇಂದ್ರಗಳನ್ನು...

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...