Homeಮುಖಪುಟಮತ್ತೆ ಹೆಚ್ಚಾದ LPG ದರ : ಇದು ಜನರ ನಿಷ್ಕ್ರಿಯತೆಯ ಕೊಡುಗೆ!

ಮತ್ತೆ ಹೆಚ್ಚಾದ LPG ದರ : ಇದು ಜನರ ನಿಷ್ಕ್ರಿಯತೆಯ ಕೊಡುಗೆ!

ಬಿಜೆಪಿಯ ವಕ್ತಾರರಾದ "ವಾಮನಾಚಾರ್ಯ'ರನ್ನು ನಾನುಗೌರಿ.ಕಾಂ ಮಾತನಾಡಿಸಿ ಈ ಬಗ್ಗೆ ಪ್ರತಿಕ್ರಿಯೆ ಕೇಳಿದಾಗ ಬೆಲೆ ಏರಿಕೆಯಿಂದ ಜನರಿಗೆ ಆಗುವ ಸಮಸ್ಯೆಯನ್ನು ಒಪ್ಪುತ್ತಲೇ, ಈ ಬಗ್ಗೆ ಪ್ರತಿಕ್ರಿಯೆ ನೀಡಲು ನಿರಾಕರಿಸಿದರು.

- Advertisement -
- Advertisement -

LPG ಸಿಲಿಂಡೆರ್ ರೇಟು ಮತ್ತೇ ಜಾಸ್ತಿಯಾಗಿದೆ. ಕೇಂದ್ರ ಸರ್ಕಾರ ದೆಹಲಿ ಚುನಾವಣೆ ಮುಗಿಯಲು ಕಾಯುತ್ತಿತ್ತೋ ಎಂಬಂತೆ ಫಲಿತಾಂಶದ ಮರುದಿನವೇ ದರವನ್ನು ಹೆಚ್ಚಿಸಿದೆ. ಈ ಮೂಲಕ ಸರಕಾರ ಜನರ ಕಿಸೆಗೆ ಕೈ ಹಾಕಿದೆ. ದೇಶದಲ್ಲಿ ಆರ್ಥಿಕ ಸ್ಥಿತಿ ಹದಗೆಟ್ಟಿರುವ ಪರಿಸ್ಥಿತಿಯಲ್ಲಿ ಜನರನ್ನು ಲೂಟಿ ಮಾಡಿಯಾದರೂ ಸರಿ ಬೊಕ್ಕಸ ತುಂಬಿಕೊಳ್ಳಲು ಹೊರಟಂತಿದೆ ಸರಕಾರದ ನಡೆ. ಸರಕಾರದ ನೀತಿಯನ್ನು ಟೀಕಿಸಿದರೆಂದು ಜನರ ಬಾಯಿಯನ್ನು ಮುಚ್ಚಿಸಲು ಶತಾಯುಗತ ಪ್ರಯತ್ನಿಸುವ ಸರಕಾರ ತನ್ನ ಜನ ವಿರೋಧಿ ನೀತಿಯ ಕಡೆಗೆ ನೋಡಿ ಯಾವುದೇ ಸುಧಾರಣೆಯನ್ನು ಮಾಡುವ ಸಣ್ಣ ಪ್ರಯತ್ನ ಕೂಡಾ ಮಾಡುತ್ತಿಲ್ಲ.

ಈಗ ಎಲ್‌ಪಿಗಿ ಗ್ಯಾಸ್‌ಗೆ ಬರೋಬ್ಬರಿ 145ರೂ ಏರಿಸಲಾಗಿದೆ. 2014 ರ ನಂತರ ಬಾರಿಗೆ ಇದು ಅತೀ ಹೆಚ್ಚು ಏರಿಕೆಯಾಗಿದೆ. ಸಬ್ಸಿಡಿ ರಹಿತ ಸಿಲಿಂಡರಿನ ದರ ದೆಹಲಿಯಲ್ಲಿ 858.50 ರೂ, ಮುಂಬೈಯಲ್ಲಿ 829.50 ರೂ., ಕೋಲ್ಕೊತ್ತಾದಲ್ಲಿ 896 ರೂ., ಹಾಗೂ ಚೆನ್ನೈಯಲ್ಲಿ 734 ರೂ. ಆಗಲಿದೆ.  2009 ಜನವರಿಯಲ್ಲಿ ದೆಹಲಿಯಲ್ಲಿ 279.70 ರೂ ಸಿಗುತ್ತಿದ್ದ ಸಿಲಿಂಡರ್‌ ಈಗ ಬೆಲೆ 858.50 ರೂಗೇರಿದೆ ಅಂದರೆ ಅದರ ಪ್ರಮಾಣ ನೀವೇ ಊಹಿಸಿ.

ಈ ಹಿಂದೆ ಎಲ್‌ಪಿಜಿ ದರದ ಪಟ್ಟಿ ನೋಡಿ.. 

ಕೃಪೆ: ರಾಯ್ಟರ್ಸ್‌

ತನ್ನ ತಪ್ಪುಗಳ ಬಗ್ಗೆ ಪ್ರಶ್ನೆಗಳು ಎದ್ದಾಗ ಕೇಂದ್ರದ ಬಿಜೆಪಿ ಸರ್ಕಾರ ಪ್ರತಿಬಾರಿಯೂ ಹಿಂದಿನ ಕಾಂಗ್ರೆಸ್ ಸರಕಾರವನ್ನು ಬೊಟ್ಟು ಮಾಡಿ ತೋರಿಸಿ ನುಣುಚಿಕೊಳ್ಳುತ್ತದೆ. ಅದರ ಮೇಲೆ ಸಣ್ಣ ಪ್ರಶ್ನೆಯನ್ನೂ ಹಾಕದೇ ಬಹು ಪರಾಕ್ ಹಾಕಿ ಸಮರ್ಥಿಸಿಕೊಳ್ಳುವ ಭಕ್ತಗಣವೂ ಈ ಸರ್ಕಾರಕ್ಕೆ ಇದೆ. ಹಿಂದೆಯೆಲ್ಲಾ ಒಂದು ಪೈಸೆ ಹೆಚ್ಚಾದರೂ ಜನರು ಪ್ರತಿಭಟನೆ ನಡೆಸುತ್ತಿದ್ದರು. ಈಗ ಪೆಟ್ರೋಲಿಗೆ ಐನೂರಾದರೂ ನಡೆದುಕೊಂಡೇ ಹೋಗಿ ಮೋದಿಗೆ ಮತ ಹಾಕುತ್ತೇವೆ ಎನ್ನುವವರು ಹುಟ್ಟಿಕೊಂಡಿದ್ದಾರೆ. ಇಂತಹ  ಜನರಿರುವ ಕಾರಣದಿಂದಲೇ ಸರಕಾರ ಸರ್ವಾಧಿಕಾರಿಯಂತೆ ಮೆರೆಯುತ್ತಿದೆ. ಆದರೆ ಇದ್ಯಾವುದೂ ತಿಳಿಯದ ಸಾಮಾನ್ಯ ಜನರು ಇಲ್ಲಿ ಬಲಿಪಶುಗಳಾಗುತ್ತಾರೆ.

ಈಗ ಹೆಚ್ಚಾಗಿರುವ ಎಲ್‌ಪಿಜಿ ದರ

 

ಈ ಬಗ್ಗೆ ಮಂಗಳೂರಿನ ಗ್ರಾಹಕರ ವೇದಿಕೆ ಧರ್ಮೇಂದ್ರರವರನ್ನು ನಾನುಗೌರಿ.ಕಾಂ ಮಾತನಾಡಿಸಿತು. ಅವರು “ಬದುಕು ಕಟ್ಟಿಕೊಳ್ಳುವುದೇ ಕಷ್ಟವಾಗಿರುವ ಈ ಸಮಯದಲ್ಲಿ ದಿನನಿತ್ಯದ ಅನಿವಾರ್ಯ ಮತ್ತು ಅಗತ್ಯ ವಸ್ತುಗಳ ಬೆಲೆಏರಿಕೆಯ ಪ್ರಶ್ನೆಗಳಿಗೆ ಉತ್ತರ ಸಿಗುವುದೇ ಕಷ್ಟಕರವಾಗಿದೆ. ದೇಶದ ತಾಯಂದಿರು ಬೀದಿಗಿಳಿಯಬೇಕಾದ ಅನಿವಾರ್ಯತೆ ಇದೆ. ಪುರುಷರು ಹೇಗಾದರೂ ಬದುಕಿಕೊಳ್ಳಬಹುದೇನೊ ಆದರೆ ದೇಶದ ಮಹಿಳೆಯರು ಇದರ ಹೊಡೆತ ತಿನ್ನಬೇಕಾಗುತ್ತದೆ. ಇದು ದೇಶದ ಮೇಲೆ ಗಂಭೀರ ಪರಿಣಾಮ ಬೀರುತ್ತದೆ”  ಎಂದಿದ್ದಾರೆ.

ಕಾಂಗ್ರೆಸ್ ಪಕ್ಷದ ವಕ್ತಾರರಾದ ಎ.ಎನ್ ನಟರಾಜೇಗೌಡರು “ಬಿಜೆಪಿ ಪಕ್ಷವು ಸೂಕ್ಷ್ಮತೆಯಿಲ್ಲದೇ ಸಂವೇದನಾಹೀನತೆಯಿಂದೆ ಬಳಲುತ್ತಿದೆ. ಅವರು ‌ಎಲ್ಲಾ ರಾಜ್ಯ ಚುನಾವಣೆಗಳಲ್ಲಿ ಸೋಲುತ್ತಿರುವುದರಿಂದ ಜನರ ಮೇಲೆ ದ್ವೇಷ ಸಾಧಿಸುತ್ತಿದೆ. ಹಾಗಾಗಿ ಈ ರೀತಿ ಜನ ಬಳಕೆಯ ವಸ್ತುಗಳ ಬೆಲೆ ಏರಿಕೆ ಮಾಡುತ್ತಿದ್ದಾರೆ. ಜನರು ಅಕ್ರೋಶಗೊಂಡಿದ್ದಾರೆ, ಇದು ಯಾವ ಸಮಯದಲ್ಲಾದರೂ ಸ್ಪೋಟಗೊಳ್ಳಬಹುದು. ಹಾಗಾಗಿ ಕೇಂದ್ರದ ಮೋದಿ ಸರ್ಕಾರ ತಕ್ಷಣವೇ ಇದನ್ನು ಹಿಂಪಡೆಯಬೇಕಿದೆ. ಕಾಂಗ್ರೆಸ್ ಪಕ್ಷದ ರಾಜ್ಯ ಮಹಿಳಾ ಘಟಕದಿಂದ ಇದರ ವಿರುದ್ಧ ರಾಜ್ಯ ವ್ಯಾಪಿ ಪ್ರತಿಭಟನೆ ನಡೆಸಲಿದ್ದೇವೆ” ಎಂದಿದ್ದಾರೆ.

ಬಿಜೆಪಿಯ ವಕ್ತಾರರಾದ “ವಾಮನಾಚಾರ್ಯ”ರನ್ನು ನಾನುಗೌರಿ.ಕಾಂ ಮಾತನಾಡಿಸಿ ಈ ಬಗ್ಗೆ ಪ್ರತಿಕ್ರಿಯೆ ಕೇಳಿದಾಗ ಬೆಲೆ ಏರಿಕೆಯಿಂದ ಜನರಿಗೆ ಆಗುವ ಸಮಸ್ಯೆಯನ್ನು ಒಪ್ಪುತ್ತಲೇ, ಈ ಬಗ್ಗೆ ಪ್ರತಿಕ್ರಿಯೆ ನೀಡಲು ನಿರಾಕರಿಸಿದರು.

ಒಟ್ಟಾರೆಯಾಗಿ ಹೀಗೆ ದಿನೇ ದಿನೇ ಅಗತ್ಯ ವಸ್ತುಗಳ ಬೆಲೆ ಹೆಚ್ಚಾಗುತ್ತಿರುವುದಕ್ಕೆ ಜನರ ನಿಷ್ಕ್ರಿಯತೆಯೇ ಕಾರಣವಾಗಿದೆ ಹೊರತು ಮತ್ತೇನಲ್ಲ ಎನಿಸುತ್ತದೆ. ಜನರು ಬೀದಿಗಿಳಿದಾಗ ಮಾತ್ರ ಸರ್ಕಾರ ಎಚ್ಚೆತ್ತುಕೊಳ್ಳುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...