Homeಮುಖಪುಟಮತ್ತೆ ಹೆಚ್ಚಾದ LPG ದರ : ಇದು ಜನರ ನಿಷ್ಕ್ರಿಯತೆಯ ಕೊಡುಗೆ!

ಮತ್ತೆ ಹೆಚ್ಚಾದ LPG ದರ : ಇದು ಜನರ ನಿಷ್ಕ್ರಿಯತೆಯ ಕೊಡುಗೆ!

ಬಿಜೆಪಿಯ ವಕ್ತಾರರಾದ "ವಾಮನಾಚಾರ್ಯ'ರನ್ನು ನಾನುಗೌರಿ.ಕಾಂ ಮಾತನಾಡಿಸಿ ಈ ಬಗ್ಗೆ ಪ್ರತಿಕ್ರಿಯೆ ಕೇಳಿದಾಗ ಬೆಲೆ ಏರಿಕೆಯಿಂದ ಜನರಿಗೆ ಆಗುವ ಸಮಸ್ಯೆಯನ್ನು ಒಪ್ಪುತ್ತಲೇ, ಈ ಬಗ್ಗೆ ಪ್ರತಿಕ್ರಿಯೆ ನೀಡಲು ನಿರಾಕರಿಸಿದರು.

- Advertisement -
- Advertisement -

LPG ಸಿಲಿಂಡೆರ್ ರೇಟು ಮತ್ತೇ ಜಾಸ್ತಿಯಾಗಿದೆ. ಕೇಂದ್ರ ಸರ್ಕಾರ ದೆಹಲಿ ಚುನಾವಣೆ ಮುಗಿಯಲು ಕಾಯುತ್ತಿತ್ತೋ ಎಂಬಂತೆ ಫಲಿತಾಂಶದ ಮರುದಿನವೇ ದರವನ್ನು ಹೆಚ್ಚಿಸಿದೆ. ಈ ಮೂಲಕ ಸರಕಾರ ಜನರ ಕಿಸೆಗೆ ಕೈ ಹಾಕಿದೆ. ದೇಶದಲ್ಲಿ ಆರ್ಥಿಕ ಸ್ಥಿತಿ ಹದಗೆಟ್ಟಿರುವ ಪರಿಸ್ಥಿತಿಯಲ್ಲಿ ಜನರನ್ನು ಲೂಟಿ ಮಾಡಿಯಾದರೂ ಸರಿ ಬೊಕ್ಕಸ ತುಂಬಿಕೊಳ್ಳಲು ಹೊರಟಂತಿದೆ ಸರಕಾರದ ನಡೆ. ಸರಕಾರದ ನೀತಿಯನ್ನು ಟೀಕಿಸಿದರೆಂದು ಜನರ ಬಾಯಿಯನ್ನು ಮುಚ್ಚಿಸಲು ಶತಾಯುಗತ ಪ್ರಯತ್ನಿಸುವ ಸರಕಾರ ತನ್ನ ಜನ ವಿರೋಧಿ ನೀತಿಯ ಕಡೆಗೆ ನೋಡಿ ಯಾವುದೇ ಸುಧಾರಣೆಯನ್ನು ಮಾಡುವ ಸಣ್ಣ ಪ್ರಯತ್ನ ಕೂಡಾ ಮಾಡುತ್ತಿಲ್ಲ.

ಈಗ ಎಲ್‌ಪಿಗಿ ಗ್ಯಾಸ್‌ಗೆ ಬರೋಬ್ಬರಿ 145ರೂ ಏರಿಸಲಾಗಿದೆ. 2014 ರ ನಂತರ ಬಾರಿಗೆ ಇದು ಅತೀ ಹೆಚ್ಚು ಏರಿಕೆಯಾಗಿದೆ. ಸಬ್ಸಿಡಿ ರಹಿತ ಸಿಲಿಂಡರಿನ ದರ ದೆಹಲಿಯಲ್ಲಿ 858.50 ರೂ, ಮುಂಬೈಯಲ್ಲಿ 829.50 ರೂ., ಕೋಲ್ಕೊತ್ತಾದಲ್ಲಿ 896 ರೂ., ಹಾಗೂ ಚೆನ್ನೈಯಲ್ಲಿ 734 ರೂ. ಆಗಲಿದೆ.  2009 ಜನವರಿಯಲ್ಲಿ ದೆಹಲಿಯಲ್ಲಿ 279.70 ರೂ ಸಿಗುತ್ತಿದ್ದ ಸಿಲಿಂಡರ್‌ ಈಗ ಬೆಲೆ 858.50 ರೂಗೇರಿದೆ ಅಂದರೆ ಅದರ ಪ್ರಮಾಣ ನೀವೇ ಊಹಿಸಿ.

ಈ ಹಿಂದೆ ಎಲ್‌ಪಿಜಿ ದರದ ಪಟ್ಟಿ ನೋಡಿ.. 

ಕೃಪೆ: ರಾಯ್ಟರ್ಸ್‌

ತನ್ನ ತಪ್ಪುಗಳ ಬಗ್ಗೆ ಪ್ರಶ್ನೆಗಳು ಎದ್ದಾಗ ಕೇಂದ್ರದ ಬಿಜೆಪಿ ಸರ್ಕಾರ ಪ್ರತಿಬಾರಿಯೂ ಹಿಂದಿನ ಕಾಂಗ್ರೆಸ್ ಸರಕಾರವನ್ನು ಬೊಟ್ಟು ಮಾಡಿ ತೋರಿಸಿ ನುಣುಚಿಕೊಳ್ಳುತ್ತದೆ. ಅದರ ಮೇಲೆ ಸಣ್ಣ ಪ್ರಶ್ನೆಯನ್ನೂ ಹಾಕದೇ ಬಹು ಪರಾಕ್ ಹಾಕಿ ಸಮರ್ಥಿಸಿಕೊಳ್ಳುವ ಭಕ್ತಗಣವೂ ಈ ಸರ್ಕಾರಕ್ಕೆ ಇದೆ. ಹಿಂದೆಯೆಲ್ಲಾ ಒಂದು ಪೈಸೆ ಹೆಚ್ಚಾದರೂ ಜನರು ಪ್ರತಿಭಟನೆ ನಡೆಸುತ್ತಿದ್ದರು. ಈಗ ಪೆಟ್ರೋಲಿಗೆ ಐನೂರಾದರೂ ನಡೆದುಕೊಂಡೇ ಹೋಗಿ ಮೋದಿಗೆ ಮತ ಹಾಕುತ್ತೇವೆ ಎನ್ನುವವರು ಹುಟ್ಟಿಕೊಂಡಿದ್ದಾರೆ. ಇಂತಹ  ಜನರಿರುವ ಕಾರಣದಿಂದಲೇ ಸರಕಾರ ಸರ್ವಾಧಿಕಾರಿಯಂತೆ ಮೆರೆಯುತ್ತಿದೆ. ಆದರೆ ಇದ್ಯಾವುದೂ ತಿಳಿಯದ ಸಾಮಾನ್ಯ ಜನರು ಇಲ್ಲಿ ಬಲಿಪಶುಗಳಾಗುತ್ತಾರೆ.

ಈಗ ಹೆಚ್ಚಾಗಿರುವ ಎಲ್‌ಪಿಜಿ ದರ

 

ಈ ಬಗ್ಗೆ ಮಂಗಳೂರಿನ ಗ್ರಾಹಕರ ವೇದಿಕೆ ಧರ್ಮೇಂದ್ರರವರನ್ನು ನಾನುಗೌರಿ.ಕಾಂ ಮಾತನಾಡಿಸಿತು. ಅವರು “ಬದುಕು ಕಟ್ಟಿಕೊಳ್ಳುವುದೇ ಕಷ್ಟವಾಗಿರುವ ಈ ಸಮಯದಲ್ಲಿ ದಿನನಿತ್ಯದ ಅನಿವಾರ್ಯ ಮತ್ತು ಅಗತ್ಯ ವಸ್ತುಗಳ ಬೆಲೆಏರಿಕೆಯ ಪ್ರಶ್ನೆಗಳಿಗೆ ಉತ್ತರ ಸಿಗುವುದೇ ಕಷ್ಟಕರವಾಗಿದೆ. ದೇಶದ ತಾಯಂದಿರು ಬೀದಿಗಿಳಿಯಬೇಕಾದ ಅನಿವಾರ್ಯತೆ ಇದೆ. ಪುರುಷರು ಹೇಗಾದರೂ ಬದುಕಿಕೊಳ್ಳಬಹುದೇನೊ ಆದರೆ ದೇಶದ ಮಹಿಳೆಯರು ಇದರ ಹೊಡೆತ ತಿನ್ನಬೇಕಾಗುತ್ತದೆ. ಇದು ದೇಶದ ಮೇಲೆ ಗಂಭೀರ ಪರಿಣಾಮ ಬೀರುತ್ತದೆ”  ಎಂದಿದ್ದಾರೆ.

ಕಾಂಗ್ರೆಸ್ ಪಕ್ಷದ ವಕ್ತಾರರಾದ ಎ.ಎನ್ ನಟರಾಜೇಗೌಡರು “ಬಿಜೆಪಿ ಪಕ್ಷವು ಸೂಕ್ಷ್ಮತೆಯಿಲ್ಲದೇ ಸಂವೇದನಾಹೀನತೆಯಿಂದೆ ಬಳಲುತ್ತಿದೆ. ಅವರು ‌ಎಲ್ಲಾ ರಾಜ್ಯ ಚುನಾವಣೆಗಳಲ್ಲಿ ಸೋಲುತ್ತಿರುವುದರಿಂದ ಜನರ ಮೇಲೆ ದ್ವೇಷ ಸಾಧಿಸುತ್ತಿದೆ. ಹಾಗಾಗಿ ಈ ರೀತಿ ಜನ ಬಳಕೆಯ ವಸ್ತುಗಳ ಬೆಲೆ ಏರಿಕೆ ಮಾಡುತ್ತಿದ್ದಾರೆ. ಜನರು ಅಕ್ರೋಶಗೊಂಡಿದ್ದಾರೆ, ಇದು ಯಾವ ಸಮಯದಲ್ಲಾದರೂ ಸ್ಪೋಟಗೊಳ್ಳಬಹುದು. ಹಾಗಾಗಿ ಕೇಂದ್ರದ ಮೋದಿ ಸರ್ಕಾರ ತಕ್ಷಣವೇ ಇದನ್ನು ಹಿಂಪಡೆಯಬೇಕಿದೆ. ಕಾಂಗ್ರೆಸ್ ಪಕ್ಷದ ರಾಜ್ಯ ಮಹಿಳಾ ಘಟಕದಿಂದ ಇದರ ವಿರುದ್ಧ ರಾಜ್ಯ ವ್ಯಾಪಿ ಪ್ರತಿಭಟನೆ ನಡೆಸಲಿದ್ದೇವೆ” ಎಂದಿದ್ದಾರೆ.

ಬಿಜೆಪಿಯ ವಕ್ತಾರರಾದ “ವಾಮನಾಚಾರ್ಯ”ರನ್ನು ನಾನುಗೌರಿ.ಕಾಂ ಮಾತನಾಡಿಸಿ ಈ ಬಗ್ಗೆ ಪ್ರತಿಕ್ರಿಯೆ ಕೇಳಿದಾಗ ಬೆಲೆ ಏರಿಕೆಯಿಂದ ಜನರಿಗೆ ಆಗುವ ಸಮಸ್ಯೆಯನ್ನು ಒಪ್ಪುತ್ತಲೇ, ಈ ಬಗ್ಗೆ ಪ್ರತಿಕ್ರಿಯೆ ನೀಡಲು ನಿರಾಕರಿಸಿದರು.

ಒಟ್ಟಾರೆಯಾಗಿ ಹೀಗೆ ದಿನೇ ದಿನೇ ಅಗತ್ಯ ವಸ್ತುಗಳ ಬೆಲೆ ಹೆಚ್ಚಾಗುತ್ತಿರುವುದಕ್ಕೆ ಜನರ ನಿಷ್ಕ್ರಿಯತೆಯೇ ಕಾರಣವಾಗಿದೆ ಹೊರತು ಮತ್ತೇನಲ್ಲ ಎನಿಸುತ್ತದೆ. ಜನರು ಬೀದಿಗಿಳಿದಾಗ ಮಾತ್ರ ಸರ್ಕಾರ ಎಚ್ಚೆತ್ತುಕೊಳ್ಳುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...