Homeಮುಖಪುಟಮತ್ತೆ ಹೆಚ್ಚಾದ LPG ದರ : ಇದು ಜನರ ನಿಷ್ಕ್ರಿಯತೆಯ ಕೊಡುಗೆ!

ಮತ್ತೆ ಹೆಚ್ಚಾದ LPG ದರ : ಇದು ಜನರ ನಿಷ್ಕ್ರಿಯತೆಯ ಕೊಡುಗೆ!

ಬಿಜೆಪಿಯ ವಕ್ತಾರರಾದ "ವಾಮನಾಚಾರ್ಯ'ರನ್ನು ನಾನುಗೌರಿ.ಕಾಂ ಮಾತನಾಡಿಸಿ ಈ ಬಗ್ಗೆ ಪ್ರತಿಕ್ರಿಯೆ ಕೇಳಿದಾಗ ಬೆಲೆ ಏರಿಕೆಯಿಂದ ಜನರಿಗೆ ಆಗುವ ಸಮಸ್ಯೆಯನ್ನು ಒಪ್ಪುತ್ತಲೇ, ಈ ಬಗ್ಗೆ ಪ್ರತಿಕ್ರಿಯೆ ನೀಡಲು ನಿರಾಕರಿಸಿದರು.

- Advertisement -
- Advertisement -

LPG ಸಿಲಿಂಡೆರ್ ರೇಟು ಮತ್ತೇ ಜಾಸ್ತಿಯಾಗಿದೆ. ಕೇಂದ್ರ ಸರ್ಕಾರ ದೆಹಲಿ ಚುನಾವಣೆ ಮುಗಿಯಲು ಕಾಯುತ್ತಿತ್ತೋ ಎಂಬಂತೆ ಫಲಿತಾಂಶದ ಮರುದಿನವೇ ದರವನ್ನು ಹೆಚ್ಚಿಸಿದೆ. ಈ ಮೂಲಕ ಸರಕಾರ ಜನರ ಕಿಸೆಗೆ ಕೈ ಹಾಕಿದೆ. ದೇಶದಲ್ಲಿ ಆರ್ಥಿಕ ಸ್ಥಿತಿ ಹದಗೆಟ್ಟಿರುವ ಪರಿಸ್ಥಿತಿಯಲ್ಲಿ ಜನರನ್ನು ಲೂಟಿ ಮಾಡಿಯಾದರೂ ಸರಿ ಬೊಕ್ಕಸ ತುಂಬಿಕೊಳ್ಳಲು ಹೊರಟಂತಿದೆ ಸರಕಾರದ ನಡೆ. ಸರಕಾರದ ನೀತಿಯನ್ನು ಟೀಕಿಸಿದರೆಂದು ಜನರ ಬಾಯಿಯನ್ನು ಮುಚ್ಚಿಸಲು ಶತಾಯುಗತ ಪ್ರಯತ್ನಿಸುವ ಸರಕಾರ ತನ್ನ ಜನ ವಿರೋಧಿ ನೀತಿಯ ಕಡೆಗೆ ನೋಡಿ ಯಾವುದೇ ಸುಧಾರಣೆಯನ್ನು ಮಾಡುವ ಸಣ್ಣ ಪ್ರಯತ್ನ ಕೂಡಾ ಮಾಡುತ್ತಿಲ್ಲ.

ಈಗ ಎಲ್‌ಪಿಗಿ ಗ್ಯಾಸ್‌ಗೆ ಬರೋಬ್ಬರಿ 145ರೂ ಏರಿಸಲಾಗಿದೆ. 2014 ರ ನಂತರ ಬಾರಿಗೆ ಇದು ಅತೀ ಹೆಚ್ಚು ಏರಿಕೆಯಾಗಿದೆ. ಸಬ್ಸಿಡಿ ರಹಿತ ಸಿಲಿಂಡರಿನ ದರ ದೆಹಲಿಯಲ್ಲಿ 858.50 ರೂ, ಮುಂಬೈಯಲ್ಲಿ 829.50 ರೂ., ಕೋಲ್ಕೊತ್ತಾದಲ್ಲಿ 896 ರೂ., ಹಾಗೂ ಚೆನ್ನೈಯಲ್ಲಿ 734 ರೂ. ಆಗಲಿದೆ.  2009 ಜನವರಿಯಲ್ಲಿ ದೆಹಲಿಯಲ್ಲಿ 279.70 ರೂ ಸಿಗುತ್ತಿದ್ದ ಸಿಲಿಂಡರ್‌ ಈಗ ಬೆಲೆ 858.50 ರೂಗೇರಿದೆ ಅಂದರೆ ಅದರ ಪ್ರಮಾಣ ನೀವೇ ಊಹಿಸಿ.

ಈ ಹಿಂದೆ ಎಲ್‌ಪಿಜಿ ದರದ ಪಟ್ಟಿ ನೋಡಿ.. 

ಕೃಪೆ: ರಾಯ್ಟರ್ಸ್‌

ತನ್ನ ತಪ್ಪುಗಳ ಬಗ್ಗೆ ಪ್ರಶ್ನೆಗಳು ಎದ್ದಾಗ ಕೇಂದ್ರದ ಬಿಜೆಪಿ ಸರ್ಕಾರ ಪ್ರತಿಬಾರಿಯೂ ಹಿಂದಿನ ಕಾಂಗ್ರೆಸ್ ಸರಕಾರವನ್ನು ಬೊಟ್ಟು ಮಾಡಿ ತೋರಿಸಿ ನುಣುಚಿಕೊಳ್ಳುತ್ತದೆ. ಅದರ ಮೇಲೆ ಸಣ್ಣ ಪ್ರಶ್ನೆಯನ್ನೂ ಹಾಕದೇ ಬಹು ಪರಾಕ್ ಹಾಕಿ ಸಮರ್ಥಿಸಿಕೊಳ್ಳುವ ಭಕ್ತಗಣವೂ ಈ ಸರ್ಕಾರಕ್ಕೆ ಇದೆ. ಹಿಂದೆಯೆಲ್ಲಾ ಒಂದು ಪೈಸೆ ಹೆಚ್ಚಾದರೂ ಜನರು ಪ್ರತಿಭಟನೆ ನಡೆಸುತ್ತಿದ್ದರು. ಈಗ ಪೆಟ್ರೋಲಿಗೆ ಐನೂರಾದರೂ ನಡೆದುಕೊಂಡೇ ಹೋಗಿ ಮೋದಿಗೆ ಮತ ಹಾಕುತ್ತೇವೆ ಎನ್ನುವವರು ಹುಟ್ಟಿಕೊಂಡಿದ್ದಾರೆ. ಇಂತಹ  ಜನರಿರುವ ಕಾರಣದಿಂದಲೇ ಸರಕಾರ ಸರ್ವಾಧಿಕಾರಿಯಂತೆ ಮೆರೆಯುತ್ತಿದೆ. ಆದರೆ ಇದ್ಯಾವುದೂ ತಿಳಿಯದ ಸಾಮಾನ್ಯ ಜನರು ಇಲ್ಲಿ ಬಲಿಪಶುಗಳಾಗುತ್ತಾರೆ.

ಈಗ ಹೆಚ್ಚಾಗಿರುವ ಎಲ್‌ಪಿಜಿ ದರ

 

ಈ ಬಗ್ಗೆ ಮಂಗಳೂರಿನ ಗ್ರಾಹಕರ ವೇದಿಕೆ ಧರ್ಮೇಂದ್ರರವರನ್ನು ನಾನುಗೌರಿ.ಕಾಂ ಮಾತನಾಡಿಸಿತು. ಅವರು “ಬದುಕು ಕಟ್ಟಿಕೊಳ್ಳುವುದೇ ಕಷ್ಟವಾಗಿರುವ ಈ ಸಮಯದಲ್ಲಿ ದಿನನಿತ್ಯದ ಅನಿವಾರ್ಯ ಮತ್ತು ಅಗತ್ಯ ವಸ್ತುಗಳ ಬೆಲೆಏರಿಕೆಯ ಪ್ರಶ್ನೆಗಳಿಗೆ ಉತ್ತರ ಸಿಗುವುದೇ ಕಷ್ಟಕರವಾಗಿದೆ. ದೇಶದ ತಾಯಂದಿರು ಬೀದಿಗಿಳಿಯಬೇಕಾದ ಅನಿವಾರ್ಯತೆ ಇದೆ. ಪುರುಷರು ಹೇಗಾದರೂ ಬದುಕಿಕೊಳ್ಳಬಹುದೇನೊ ಆದರೆ ದೇಶದ ಮಹಿಳೆಯರು ಇದರ ಹೊಡೆತ ತಿನ್ನಬೇಕಾಗುತ್ತದೆ. ಇದು ದೇಶದ ಮೇಲೆ ಗಂಭೀರ ಪರಿಣಾಮ ಬೀರುತ್ತದೆ”  ಎಂದಿದ್ದಾರೆ.

ಕಾಂಗ್ರೆಸ್ ಪಕ್ಷದ ವಕ್ತಾರರಾದ ಎ.ಎನ್ ನಟರಾಜೇಗೌಡರು “ಬಿಜೆಪಿ ಪಕ್ಷವು ಸೂಕ್ಷ್ಮತೆಯಿಲ್ಲದೇ ಸಂವೇದನಾಹೀನತೆಯಿಂದೆ ಬಳಲುತ್ತಿದೆ. ಅವರು ‌ಎಲ್ಲಾ ರಾಜ್ಯ ಚುನಾವಣೆಗಳಲ್ಲಿ ಸೋಲುತ್ತಿರುವುದರಿಂದ ಜನರ ಮೇಲೆ ದ್ವೇಷ ಸಾಧಿಸುತ್ತಿದೆ. ಹಾಗಾಗಿ ಈ ರೀತಿ ಜನ ಬಳಕೆಯ ವಸ್ತುಗಳ ಬೆಲೆ ಏರಿಕೆ ಮಾಡುತ್ತಿದ್ದಾರೆ. ಜನರು ಅಕ್ರೋಶಗೊಂಡಿದ್ದಾರೆ, ಇದು ಯಾವ ಸಮಯದಲ್ಲಾದರೂ ಸ್ಪೋಟಗೊಳ್ಳಬಹುದು. ಹಾಗಾಗಿ ಕೇಂದ್ರದ ಮೋದಿ ಸರ್ಕಾರ ತಕ್ಷಣವೇ ಇದನ್ನು ಹಿಂಪಡೆಯಬೇಕಿದೆ. ಕಾಂಗ್ರೆಸ್ ಪಕ್ಷದ ರಾಜ್ಯ ಮಹಿಳಾ ಘಟಕದಿಂದ ಇದರ ವಿರುದ್ಧ ರಾಜ್ಯ ವ್ಯಾಪಿ ಪ್ರತಿಭಟನೆ ನಡೆಸಲಿದ್ದೇವೆ” ಎಂದಿದ್ದಾರೆ.

ಬಿಜೆಪಿಯ ವಕ್ತಾರರಾದ “ವಾಮನಾಚಾರ್ಯ”ರನ್ನು ನಾನುಗೌರಿ.ಕಾಂ ಮಾತನಾಡಿಸಿ ಈ ಬಗ್ಗೆ ಪ್ರತಿಕ್ರಿಯೆ ಕೇಳಿದಾಗ ಬೆಲೆ ಏರಿಕೆಯಿಂದ ಜನರಿಗೆ ಆಗುವ ಸಮಸ್ಯೆಯನ್ನು ಒಪ್ಪುತ್ತಲೇ, ಈ ಬಗ್ಗೆ ಪ್ರತಿಕ್ರಿಯೆ ನೀಡಲು ನಿರಾಕರಿಸಿದರು.

ಒಟ್ಟಾರೆಯಾಗಿ ಹೀಗೆ ದಿನೇ ದಿನೇ ಅಗತ್ಯ ವಸ್ತುಗಳ ಬೆಲೆ ಹೆಚ್ಚಾಗುತ್ತಿರುವುದಕ್ಕೆ ಜನರ ನಿಷ್ಕ್ರಿಯತೆಯೇ ಕಾರಣವಾಗಿದೆ ಹೊರತು ಮತ್ತೇನಲ್ಲ ಎನಿಸುತ್ತದೆ. ಜನರು ಬೀದಿಗಿಳಿದಾಗ ಮಾತ್ರ ಸರ್ಕಾರ ಎಚ್ಚೆತ್ತುಕೊಳ್ಳುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...