Homeಮುಖಪುಟಮತ್ತೆ ಹೆಚ್ಚಾದ LPG ದರ : ಇದು ಜನರ ನಿಷ್ಕ್ರಿಯತೆಯ ಕೊಡುಗೆ!

ಮತ್ತೆ ಹೆಚ್ಚಾದ LPG ದರ : ಇದು ಜನರ ನಿಷ್ಕ್ರಿಯತೆಯ ಕೊಡುಗೆ!

ಬಿಜೆಪಿಯ ವಕ್ತಾರರಾದ "ವಾಮನಾಚಾರ್ಯ'ರನ್ನು ನಾನುಗೌರಿ.ಕಾಂ ಮಾತನಾಡಿಸಿ ಈ ಬಗ್ಗೆ ಪ್ರತಿಕ್ರಿಯೆ ಕೇಳಿದಾಗ ಬೆಲೆ ಏರಿಕೆಯಿಂದ ಜನರಿಗೆ ಆಗುವ ಸಮಸ್ಯೆಯನ್ನು ಒಪ್ಪುತ್ತಲೇ, ಈ ಬಗ್ಗೆ ಪ್ರತಿಕ್ರಿಯೆ ನೀಡಲು ನಿರಾಕರಿಸಿದರು.

- Advertisement -
- Advertisement -

LPG ಸಿಲಿಂಡೆರ್ ರೇಟು ಮತ್ತೇ ಜಾಸ್ತಿಯಾಗಿದೆ. ಕೇಂದ್ರ ಸರ್ಕಾರ ದೆಹಲಿ ಚುನಾವಣೆ ಮುಗಿಯಲು ಕಾಯುತ್ತಿತ್ತೋ ಎಂಬಂತೆ ಫಲಿತಾಂಶದ ಮರುದಿನವೇ ದರವನ್ನು ಹೆಚ್ಚಿಸಿದೆ. ಈ ಮೂಲಕ ಸರಕಾರ ಜನರ ಕಿಸೆಗೆ ಕೈ ಹಾಕಿದೆ. ದೇಶದಲ್ಲಿ ಆರ್ಥಿಕ ಸ್ಥಿತಿ ಹದಗೆಟ್ಟಿರುವ ಪರಿಸ್ಥಿತಿಯಲ್ಲಿ ಜನರನ್ನು ಲೂಟಿ ಮಾಡಿಯಾದರೂ ಸರಿ ಬೊಕ್ಕಸ ತುಂಬಿಕೊಳ್ಳಲು ಹೊರಟಂತಿದೆ ಸರಕಾರದ ನಡೆ. ಸರಕಾರದ ನೀತಿಯನ್ನು ಟೀಕಿಸಿದರೆಂದು ಜನರ ಬಾಯಿಯನ್ನು ಮುಚ್ಚಿಸಲು ಶತಾಯುಗತ ಪ್ರಯತ್ನಿಸುವ ಸರಕಾರ ತನ್ನ ಜನ ವಿರೋಧಿ ನೀತಿಯ ಕಡೆಗೆ ನೋಡಿ ಯಾವುದೇ ಸುಧಾರಣೆಯನ್ನು ಮಾಡುವ ಸಣ್ಣ ಪ್ರಯತ್ನ ಕೂಡಾ ಮಾಡುತ್ತಿಲ್ಲ.

ಈಗ ಎಲ್‌ಪಿಗಿ ಗ್ಯಾಸ್‌ಗೆ ಬರೋಬ್ಬರಿ 145ರೂ ಏರಿಸಲಾಗಿದೆ. 2014 ರ ನಂತರ ಬಾರಿಗೆ ಇದು ಅತೀ ಹೆಚ್ಚು ಏರಿಕೆಯಾಗಿದೆ. ಸಬ್ಸಿಡಿ ರಹಿತ ಸಿಲಿಂಡರಿನ ದರ ದೆಹಲಿಯಲ್ಲಿ 858.50 ರೂ, ಮುಂಬೈಯಲ್ಲಿ 829.50 ರೂ., ಕೋಲ್ಕೊತ್ತಾದಲ್ಲಿ 896 ರೂ., ಹಾಗೂ ಚೆನ್ನೈಯಲ್ಲಿ 734 ರೂ. ಆಗಲಿದೆ.  2009 ಜನವರಿಯಲ್ಲಿ ದೆಹಲಿಯಲ್ಲಿ 279.70 ರೂ ಸಿಗುತ್ತಿದ್ದ ಸಿಲಿಂಡರ್‌ ಈಗ ಬೆಲೆ 858.50 ರೂಗೇರಿದೆ ಅಂದರೆ ಅದರ ಪ್ರಮಾಣ ನೀವೇ ಊಹಿಸಿ.

ಈ ಹಿಂದೆ ಎಲ್‌ಪಿಜಿ ದರದ ಪಟ್ಟಿ ನೋಡಿ.. 

ಕೃಪೆ: ರಾಯ್ಟರ್ಸ್‌

ತನ್ನ ತಪ್ಪುಗಳ ಬಗ್ಗೆ ಪ್ರಶ್ನೆಗಳು ಎದ್ದಾಗ ಕೇಂದ್ರದ ಬಿಜೆಪಿ ಸರ್ಕಾರ ಪ್ರತಿಬಾರಿಯೂ ಹಿಂದಿನ ಕಾಂಗ್ರೆಸ್ ಸರಕಾರವನ್ನು ಬೊಟ್ಟು ಮಾಡಿ ತೋರಿಸಿ ನುಣುಚಿಕೊಳ್ಳುತ್ತದೆ. ಅದರ ಮೇಲೆ ಸಣ್ಣ ಪ್ರಶ್ನೆಯನ್ನೂ ಹಾಕದೇ ಬಹು ಪರಾಕ್ ಹಾಕಿ ಸಮರ್ಥಿಸಿಕೊಳ್ಳುವ ಭಕ್ತಗಣವೂ ಈ ಸರ್ಕಾರಕ್ಕೆ ಇದೆ. ಹಿಂದೆಯೆಲ್ಲಾ ಒಂದು ಪೈಸೆ ಹೆಚ್ಚಾದರೂ ಜನರು ಪ್ರತಿಭಟನೆ ನಡೆಸುತ್ತಿದ್ದರು. ಈಗ ಪೆಟ್ರೋಲಿಗೆ ಐನೂರಾದರೂ ನಡೆದುಕೊಂಡೇ ಹೋಗಿ ಮೋದಿಗೆ ಮತ ಹಾಕುತ್ತೇವೆ ಎನ್ನುವವರು ಹುಟ್ಟಿಕೊಂಡಿದ್ದಾರೆ. ಇಂತಹ  ಜನರಿರುವ ಕಾರಣದಿಂದಲೇ ಸರಕಾರ ಸರ್ವಾಧಿಕಾರಿಯಂತೆ ಮೆರೆಯುತ್ತಿದೆ. ಆದರೆ ಇದ್ಯಾವುದೂ ತಿಳಿಯದ ಸಾಮಾನ್ಯ ಜನರು ಇಲ್ಲಿ ಬಲಿಪಶುಗಳಾಗುತ್ತಾರೆ.

ಈಗ ಹೆಚ್ಚಾಗಿರುವ ಎಲ್‌ಪಿಜಿ ದರ

 

ಈ ಬಗ್ಗೆ ಮಂಗಳೂರಿನ ಗ್ರಾಹಕರ ವೇದಿಕೆ ಧರ್ಮೇಂದ್ರರವರನ್ನು ನಾನುಗೌರಿ.ಕಾಂ ಮಾತನಾಡಿಸಿತು. ಅವರು “ಬದುಕು ಕಟ್ಟಿಕೊಳ್ಳುವುದೇ ಕಷ್ಟವಾಗಿರುವ ಈ ಸಮಯದಲ್ಲಿ ದಿನನಿತ್ಯದ ಅನಿವಾರ್ಯ ಮತ್ತು ಅಗತ್ಯ ವಸ್ತುಗಳ ಬೆಲೆಏರಿಕೆಯ ಪ್ರಶ್ನೆಗಳಿಗೆ ಉತ್ತರ ಸಿಗುವುದೇ ಕಷ್ಟಕರವಾಗಿದೆ. ದೇಶದ ತಾಯಂದಿರು ಬೀದಿಗಿಳಿಯಬೇಕಾದ ಅನಿವಾರ್ಯತೆ ಇದೆ. ಪುರುಷರು ಹೇಗಾದರೂ ಬದುಕಿಕೊಳ್ಳಬಹುದೇನೊ ಆದರೆ ದೇಶದ ಮಹಿಳೆಯರು ಇದರ ಹೊಡೆತ ತಿನ್ನಬೇಕಾಗುತ್ತದೆ. ಇದು ದೇಶದ ಮೇಲೆ ಗಂಭೀರ ಪರಿಣಾಮ ಬೀರುತ್ತದೆ”  ಎಂದಿದ್ದಾರೆ.

ಕಾಂಗ್ರೆಸ್ ಪಕ್ಷದ ವಕ್ತಾರರಾದ ಎ.ಎನ್ ನಟರಾಜೇಗೌಡರು “ಬಿಜೆಪಿ ಪಕ್ಷವು ಸೂಕ್ಷ್ಮತೆಯಿಲ್ಲದೇ ಸಂವೇದನಾಹೀನತೆಯಿಂದೆ ಬಳಲುತ್ತಿದೆ. ಅವರು ‌ಎಲ್ಲಾ ರಾಜ್ಯ ಚುನಾವಣೆಗಳಲ್ಲಿ ಸೋಲುತ್ತಿರುವುದರಿಂದ ಜನರ ಮೇಲೆ ದ್ವೇಷ ಸಾಧಿಸುತ್ತಿದೆ. ಹಾಗಾಗಿ ಈ ರೀತಿ ಜನ ಬಳಕೆಯ ವಸ್ತುಗಳ ಬೆಲೆ ಏರಿಕೆ ಮಾಡುತ್ತಿದ್ದಾರೆ. ಜನರು ಅಕ್ರೋಶಗೊಂಡಿದ್ದಾರೆ, ಇದು ಯಾವ ಸಮಯದಲ್ಲಾದರೂ ಸ್ಪೋಟಗೊಳ್ಳಬಹುದು. ಹಾಗಾಗಿ ಕೇಂದ್ರದ ಮೋದಿ ಸರ್ಕಾರ ತಕ್ಷಣವೇ ಇದನ್ನು ಹಿಂಪಡೆಯಬೇಕಿದೆ. ಕಾಂಗ್ರೆಸ್ ಪಕ್ಷದ ರಾಜ್ಯ ಮಹಿಳಾ ಘಟಕದಿಂದ ಇದರ ವಿರುದ್ಧ ರಾಜ್ಯ ವ್ಯಾಪಿ ಪ್ರತಿಭಟನೆ ನಡೆಸಲಿದ್ದೇವೆ” ಎಂದಿದ್ದಾರೆ.

ಬಿಜೆಪಿಯ ವಕ್ತಾರರಾದ “ವಾಮನಾಚಾರ್ಯ”ರನ್ನು ನಾನುಗೌರಿ.ಕಾಂ ಮಾತನಾಡಿಸಿ ಈ ಬಗ್ಗೆ ಪ್ರತಿಕ್ರಿಯೆ ಕೇಳಿದಾಗ ಬೆಲೆ ಏರಿಕೆಯಿಂದ ಜನರಿಗೆ ಆಗುವ ಸಮಸ್ಯೆಯನ್ನು ಒಪ್ಪುತ್ತಲೇ, ಈ ಬಗ್ಗೆ ಪ್ರತಿಕ್ರಿಯೆ ನೀಡಲು ನಿರಾಕರಿಸಿದರು.

ಒಟ್ಟಾರೆಯಾಗಿ ಹೀಗೆ ದಿನೇ ದಿನೇ ಅಗತ್ಯ ವಸ್ತುಗಳ ಬೆಲೆ ಹೆಚ್ಚಾಗುತ್ತಿರುವುದಕ್ಕೆ ಜನರ ನಿಷ್ಕ್ರಿಯತೆಯೇ ಕಾರಣವಾಗಿದೆ ಹೊರತು ಮತ್ತೇನಲ್ಲ ಎನಿಸುತ್ತದೆ. ಜನರು ಬೀದಿಗಿಳಿದಾಗ ಮಾತ್ರ ಸರ್ಕಾರ ಎಚ್ಚೆತ್ತುಕೊಳ್ಳುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...