Homeಮುಖಪುಟಮತ್ತೆ ಹೆಚ್ಚಾದ LPG ದರ : ಇದು ಜನರ ನಿಷ್ಕ್ರಿಯತೆಯ ಕೊಡುಗೆ!

ಮತ್ತೆ ಹೆಚ್ಚಾದ LPG ದರ : ಇದು ಜನರ ನಿಷ್ಕ್ರಿಯತೆಯ ಕೊಡುಗೆ!

ಬಿಜೆಪಿಯ ವಕ್ತಾರರಾದ "ವಾಮನಾಚಾರ್ಯ'ರನ್ನು ನಾನುಗೌರಿ.ಕಾಂ ಮಾತನಾಡಿಸಿ ಈ ಬಗ್ಗೆ ಪ್ರತಿಕ್ರಿಯೆ ಕೇಳಿದಾಗ ಬೆಲೆ ಏರಿಕೆಯಿಂದ ಜನರಿಗೆ ಆಗುವ ಸಮಸ್ಯೆಯನ್ನು ಒಪ್ಪುತ್ತಲೇ, ಈ ಬಗ್ಗೆ ಪ್ರತಿಕ್ರಿಯೆ ನೀಡಲು ನಿರಾಕರಿಸಿದರು.

- Advertisement -
- Advertisement -

LPG ಸಿಲಿಂಡೆರ್ ರೇಟು ಮತ್ತೇ ಜಾಸ್ತಿಯಾಗಿದೆ. ಕೇಂದ್ರ ಸರ್ಕಾರ ದೆಹಲಿ ಚುನಾವಣೆ ಮುಗಿಯಲು ಕಾಯುತ್ತಿತ್ತೋ ಎಂಬಂತೆ ಫಲಿತಾಂಶದ ಮರುದಿನವೇ ದರವನ್ನು ಹೆಚ್ಚಿಸಿದೆ. ಈ ಮೂಲಕ ಸರಕಾರ ಜನರ ಕಿಸೆಗೆ ಕೈ ಹಾಕಿದೆ. ದೇಶದಲ್ಲಿ ಆರ್ಥಿಕ ಸ್ಥಿತಿ ಹದಗೆಟ್ಟಿರುವ ಪರಿಸ್ಥಿತಿಯಲ್ಲಿ ಜನರನ್ನು ಲೂಟಿ ಮಾಡಿಯಾದರೂ ಸರಿ ಬೊಕ್ಕಸ ತುಂಬಿಕೊಳ್ಳಲು ಹೊರಟಂತಿದೆ ಸರಕಾರದ ನಡೆ. ಸರಕಾರದ ನೀತಿಯನ್ನು ಟೀಕಿಸಿದರೆಂದು ಜನರ ಬಾಯಿಯನ್ನು ಮುಚ್ಚಿಸಲು ಶತಾಯುಗತ ಪ್ರಯತ್ನಿಸುವ ಸರಕಾರ ತನ್ನ ಜನ ವಿರೋಧಿ ನೀತಿಯ ಕಡೆಗೆ ನೋಡಿ ಯಾವುದೇ ಸುಧಾರಣೆಯನ್ನು ಮಾಡುವ ಸಣ್ಣ ಪ್ರಯತ್ನ ಕೂಡಾ ಮಾಡುತ್ತಿಲ್ಲ.

ಈಗ ಎಲ್‌ಪಿಗಿ ಗ್ಯಾಸ್‌ಗೆ ಬರೋಬ್ಬರಿ 145ರೂ ಏರಿಸಲಾಗಿದೆ. 2014 ರ ನಂತರ ಬಾರಿಗೆ ಇದು ಅತೀ ಹೆಚ್ಚು ಏರಿಕೆಯಾಗಿದೆ. ಸಬ್ಸಿಡಿ ರಹಿತ ಸಿಲಿಂಡರಿನ ದರ ದೆಹಲಿಯಲ್ಲಿ 858.50 ರೂ, ಮುಂಬೈಯಲ್ಲಿ 829.50 ರೂ., ಕೋಲ್ಕೊತ್ತಾದಲ್ಲಿ 896 ರೂ., ಹಾಗೂ ಚೆನ್ನೈಯಲ್ಲಿ 734 ರೂ. ಆಗಲಿದೆ.  2009 ಜನವರಿಯಲ್ಲಿ ದೆಹಲಿಯಲ್ಲಿ 279.70 ರೂ ಸಿಗುತ್ತಿದ್ದ ಸಿಲಿಂಡರ್‌ ಈಗ ಬೆಲೆ 858.50 ರೂಗೇರಿದೆ ಅಂದರೆ ಅದರ ಪ್ರಮಾಣ ನೀವೇ ಊಹಿಸಿ.

ಈ ಹಿಂದೆ ಎಲ್‌ಪಿಜಿ ದರದ ಪಟ್ಟಿ ನೋಡಿ.. 

ಕೃಪೆ: ರಾಯ್ಟರ್ಸ್‌

ತನ್ನ ತಪ್ಪುಗಳ ಬಗ್ಗೆ ಪ್ರಶ್ನೆಗಳು ಎದ್ದಾಗ ಕೇಂದ್ರದ ಬಿಜೆಪಿ ಸರ್ಕಾರ ಪ್ರತಿಬಾರಿಯೂ ಹಿಂದಿನ ಕಾಂಗ್ರೆಸ್ ಸರಕಾರವನ್ನು ಬೊಟ್ಟು ಮಾಡಿ ತೋರಿಸಿ ನುಣುಚಿಕೊಳ್ಳುತ್ತದೆ. ಅದರ ಮೇಲೆ ಸಣ್ಣ ಪ್ರಶ್ನೆಯನ್ನೂ ಹಾಕದೇ ಬಹು ಪರಾಕ್ ಹಾಕಿ ಸಮರ್ಥಿಸಿಕೊಳ್ಳುವ ಭಕ್ತಗಣವೂ ಈ ಸರ್ಕಾರಕ್ಕೆ ಇದೆ. ಹಿಂದೆಯೆಲ್ಲಾ ಒಂದು ಪೈಸೆ ಹೆಚ್ಚಾದರೂ ಜನರು ಪ್ರತಿಭಟನೆ ನಡೆಸುತ್ತಿದ್ದರು. ಈಗ ಪೆಟ್ರೋಲಿಗೆ ಐನೂರಾದರೂ ನಡೆದುಕೊಂಡೇ ಹೋಗಿ ಮೋದಿಗೆ ಮತ ಹಾಕುತ್ತೇವೆ ಎನ್ನುವವರು ಹುಟ್ಟಿಕೊಂಡಿದ್ದಾರೆ. ಇಂತಹ  ಜನರಿರುವ ಕಾರಣದಿಂದಲೇ ಸರಕಾರ ಸರ್ವಾಧಿಕಾರಿಯಂತೆ ಮೆರೆಯುತ್ತಿದೆ. ಆದರೆ ಇದ್ಯಾವುದೂ ತಿಳಿಯದ ಸಾಮಾನ್ಯ ಜನರು ಇಲ್ಲಿ ಬಲಿಪಶುಗಳಾಗುತ್ತಾರೆ.

ಈಗ ಹೆಚ್ಚಾಗಿರುವ ಎಲ್‌ಪಿಜಿ ದರ

 

ಈ ಬಗ್ಗೆ ಮಂಗಳೂರಿನ ಗ್ರಾಹಕರ ವೇದಿಕೆ ಧರ್ಮೇಂದ್ರರವರನ್ನು ನಾನುಗೌರಿ.ಕಾಂ ಮಾತನಾಡಿಸಿತು. ಅವರು “ಬದುಕು ಕಟ್ಟಿಕೊಳ್ಳುವುದೇ ಕಷ್ಟವಾಗಿರುವ ಈ ಸಮಯದಲ್ಲಿ ದಿನನಿತ್ಯದ ಅನಿವಾರ್ಯ ಮತ್ತು ಅಗತ್ಯ ವಸ್ತುಗಳ ಬೆಲೆಏರಿಕೆಯ ಪ್ರಶ್ನೆಗಳಿಗೆ ಉತ್ತರ ಸಿಗುವುದೇ ಕಷ್ಟಕರವಾಗಿದೆ. ದೇಶದ ತಾಯಂದಿರು ಬೀದಿಗಿಳಿಯಬೇಕಾದ ಅನಿವಾರ್ಯತೆ ಇದೆ. ಪುರುಷರು ಹೇಗಾದರೂ ಬದುಕಿಕೊಳ್ಳಬಹುದೇನೊ ಆದರೆ ದೇಶದ ಮಹಿಳೆಯರು ಇದರ ಹೊಡೆತ ತಿನ್ನಬೇಕಾಗುತ್ತದೆ. ಇದು ದೇಶದ ಮೇಲೆ ಗಂಭೀರ ಪರಿಣಾಮ ಬೀರುತ್ತದೆ”  ಎಂದಿದ್ದಾರೆ.

ಕಾಂಗ್ರೆಸ್ ಪಕ್ಷದ ವಕ್ತಾರರಾದ ಎ.ಎನ್ ನಟರಾಜೇಗೌಡರು “ಬಿಜೆಪಿ ಪಕ್ಷವು ಸೂಕ್ಷ್ಮತೆಯಿಲ್ಲದೇ ಸಂವೇದನಾಹೀನತೆಯಿಂದೆ ಬಳಲುತ್ತಿದೆ. ಅವರು ‌ಎಲ್ಲಾ ರಾಜ್ಯ ಚುನಾವಣೆಗಳಲ್ಲಿ ಸೋಲುತ್ತಿರುವುದರಿಂದ ಜನರ ಮೇಲೆ ದ್ವೇಷ ಸಾಧಿಸುತ್ತಿದೆ. ಹಾಗಾಗಿ ಈ ರೀತಿ ಜನ ಬಳಕೆಯ ವಸ್ತುಗಳ ಬೆಲೆ ಏರಿಕೆ ಮಾಡುತ್ತಿದ್ದಾರೆ. ಜನರು ಅಕ್ರೋಶಗೊಂಡಿದ್ದಾರೆ, ಇದು ಯಾವ ಸಮಯದಲ್ಲಾದರೂ ಸ್ಪೋಟಗೊಳ್ಳಬಹುದು. ಹಾಗಾಗಿ ಕೇಂದ್ರದ ಮೋದಿ ಸರ್ಕಾರ ತಕ್ಷಣವೇ ಇದನ್ನು ಹಿಂಪಡೆಯಬೇಕಿದೆ. ಕಾಂಗ್ರೆಸ್ ಪಕ್ಷದ ರಾಜ್ಯ ಮಹಿಳಾ ಘಟಕದಿಂದ ಇದರ ವಿರುದ್ಧ ರಾಜ್ಯ ವ್ಯಾಪಿ ಪ್ರತಿಭಟನೆ ನಡೆಸಲಿದ್ದೇವೆ” ಎಂದಿದ್ದಾರೆ.

ಬಿಜೆಪಿಯ ವಕ್ತಾರರಾದ “ವಾಮನಾಚಾರ್ಯ”ರನ್ನು ನಾನುಗೌರಿ.ಕಾಂ ಮಾತನಾಡಿಸಿ ಈ ಬಗ್ಗೆ ಪ್ರತಿಕ್ರಿಯೆ ಕೇಳಿದಾಗ ಬೆಲೆ ಏರಿಕೆಯಿಂದ ಜನರಿಗೆ ಆಗುವ ಸಮಸ್ಯೆಯನ್ನು ಒಪ್ಪುತ್ತಲೇ, ಈ ಬಗ್ಗೆ ಪ್ರತಿಕ್ರಿಯೆ ನೀಡಲು ನಿರಾಕರಿಸಿದರು.

ಒಟ್ಟಾರೆಯಾಗಿ ಹೀಗೆ ದಿನೇ ದಿನೇ ಅಗತ್ಯ ವಸ್ತುಗಳ ಬೆಲೆ ಹೆಚ್ಚಾಗುತ್ತಿರುವುದಕ್ಕೆ ಜನರ ನಿಷ್ಕ್ರಿಯತೆಯೇ ಕಾರಣವಾಗಿದೆ ಹೊರತು ಮತ್ತೇನಲ್ಲ ಎನಿಸುತ್ತದೆ. ಜನರು ಬೀದಿಗಿಳಿದಾಗ ಮಾತ್ರ ಸರ್ಕಾರ ಎಚ್ಚೆತ್ತುಕೊಳ್ಳುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ: ಮದುವೆ ರಿಸೆಪ್ಷನ್‌ನಲ್ಲಿ ಗೋಮಾಂಸ ಬಡಿಸಿದ ಆರೋಪ; ವರನ ತಂದೆ ಸೇರಿ ಏಳು ಮಂದಿ ಬಂಧನ, ಮಂಟಪ ಸೀಲ್

ಶಾಮ್ಲಿ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ಕೈರಾನಾ ಪಟ್ಟಣದಲ್ಲಿ ನಡೆದ ಮದುವೆ ಆರತಕ್ಷತೆ (ವಲೀಮಾ) ಸಮಾರಂಭವೊಂದು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಸಮಾರಂಭದಲ್ಲಿ ಅತಿಥಿಗಳಿಗೆ ಗೋಮಾಂಸವನ್ನು ಬೇಯಿಸಿ ಬಡಿಸಲಾಗಿದೆ ಎಂಬ...

ರಾಮ ಮಂದಿರ ದೇಣಿಗೆ ವಿವಾದ: ಎಫ್‌ಐಆರ್ ದಾಖಲಿಸಿ ತ್ವರಿತ ನ್ಯಾಯಾಲಯದ ವಿಚಾರಣೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ

ರಾಮ ದೇಣಿಗೆ ವಿವಾದ ದುರುಪಯೋಗ ಕುರಿತು ಎಸ್‌ಐಟಿ ತನ್ನ ಪ್ರಾಥಮಿಕ ವರದಿಯನ್ನು ಸಲ್ಲಿಸಿದ ಕೂಡಲೇ, ಬಲಪಂಥೀಯ ಹಿಂದುತ್ವ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಬೇಕೆಂದು ಒತ್ತಾಯಿಸಿದೆ. ವಿಎಚ್‌ಪಿ ಅಂತರರಾಷ್ಟ್ರೀಯ...

ಪಾಸ್‌ಪೋರ್ಟ್ ಪೌರತ್ವದ ದಾಖಲೆಯಲ್ಲ: ವಿದೇಶಾಂಗ ಸಚಿವಾಲಯ

ಪಾಸ್‌ಪೋರ್ಟ್ ಒಂದು ಪ್ರಯಾಣದ ದಾಖಲೆಯಾಗಿದೆಯೇ ಹೊರತು, ಪೌರತ್ವದ ದಾಖಲೆಯಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ (ಎಂಇಎ) ಅಧಿಕಾರಿಗಳು ಬುಧವಾರ (ಜೂನ್ 24) ತಿಳಿಸಿದ್ದಾರೆ. ಈ ಮೂಲಕ ಅವರು ಭಾರತೀಯ ಪೌರತ್ವವನ್ನು ಖಚಿತವಾಗಿ ಸಾಬೀತುಪಡಿಸುವ...

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...

ತಿರುವನಂತಪುರಂ | 20 ಬಿಜೆಪಿ ಕೌನ್ಸಿಲರ್‌ಗಳ ಪ್ರಮಾಣವಚನ ಅಸಿಂಧು : ಹೈಕೋರ್ಟ್ ಮಹತ್ವದ ಆದೇಶ

ತಿರುವನಂತಪುರಂ ಮಹಾನಗರ ಪಾಲಿಕೆಯ 20 ಬಿಜೆಪಿ ಕೌನ್ಸಿಲರ್‌ಗಳಿಗೆ ನಾಲ್ಕು ವಾರಗಳ ಒಳಗೆ ಮತ್ತೊಮ್ಮೆ ಪ್ರಮಾಣವಚನ ಸ್ವೀಕರಿಸುವಂತೆ ಕೇರಳ ಹೈಕೋರ್ಟ್ ಬುಧವಾರ (ಜೂ.24) ಆದೇಶಿಸಿದೆ. ಜನವರಿ ತಿಂಗಳಲ್ಲಿ ಕೌನ್ಸಿಲರ್‌ಗಳ ಪ್ರಮಾಣವಚನ ನಡೆದಿತ್ತು. ಡೆಪ್ಯುಟಿ ಮೇಯರ್...

ಎಸ್‌ಐಆರ್‌ನಿಂದ ಹೊರಗಿಡಲಾದ ಜನರಿಗೆ ಪಡಿತರ ನಿರಾಕರಣೆ ಪ್ರಶ್ನಿಸಿದ ಅರ್ಜಿ ತಿರಸ್ಕರಿಸಿದ ಸುಪ್ರೀಂ; ಕಲ್ಕತ್ತಾ ಹೈಕೋರ್ಟ್‌ಗೆ ಹೋಗಲು ಸೂಚನೆ

ನವದೆಹಲಿ: ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಡಲಾದ ವ್ಯಕ್ತಿಗಳಿಗೆ ಸಾರ್ವಜನಿಕ ವಿತರಣಾ ವ್ಯವಸ್ಥೆಯ (ಪಿಡಿಎಸ್) ಪಡಿತರ ಸೌಲಭ್ಯ ಸೇರಿದಂತೆ ಇತರೆ ಕಲ್ಯಾಣ ಯೋಜನೆಗಳನ್ನು ನಿರಾಕರಿಸುತ್ತಿರುವ ಪಶ್ಚಿಮ ಬಂಗಾಳ...

ಪಶ್ಚಿಮ ಬಂಗಾಳ: ಸರ್ಕಾರಿ ಶಾಲಾ ಬಿಸಿಯೂಟದ ಜವಾಬ್ದಾರಿ ಇಸ್ಕಾನ್‌ಗೆ, ಊಟದಿಂದ ‘ಮೊಟ್ಟೆ’ ಔಟ್

ಪಶ್ಚಿಮ ಬಂಗಾಳದ ಸರ್ಕಾರಿ ಶಾಲೆಗಳ ಬಿಸಿಯೂಟದ ಮೆನುವಿನಲ್ಲಿ ಇನ್ಮೇಲೆ ಮೊಟ್ಟೆಗಳು ಇರುವುದಿಲ್ಲ. ಅವುಗಳ ಬದಲಿಗೆ ಮಕ್ಕಳಿಗೆ ಪನೀರ್ ಮತ್ತು ರಾಜ್ಮಾವನ್ನು ನೀಡಲಾಗುತ್ತದೆ. ಕೋಲ್ಕತ್ತಾ ಮಹಾನಗರ ಪಾಲಿಕೆ ವ್ಯಾಪ್ತಿಯ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ...

ಕಿರಣ್ ರಿಜಿಜು ‘ಸೇಫ್‌’ವಾದ ಅಲ್ಲಗಳೆದ ಸರಣಿ ಮುಸ್ಲಿಂ ವಿರೋಧಿ ಹಿಂಸಾಚಾರಾಗಳು

ಜೂನ್ 15, 2026ರಂದು ಪ್ರಕಟಗೊಂಡ ಇಂಡಿಯನ್ ಎಕ್ಸ್‌ಪ್ರೆಸ್‌ನ 'ಐಡಿಯಾ ಎಕ್ಸ್‌ಚೇಂಜ್' ಕಾರ್ಯಕ್ರಮದ ಸಂದರ್ಶನವೊಂದರಲ್ಲಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು, “ಭಾರತದಲ್ಲಿ ಮುಸ್ಲಿಮರು ಸುರಕ್ಷಿತವಾಗಿಲ್ಲ ಎಂದು ಹೇಳುವ ಮೂಲಕ ನೀವು ದೇಶದ ಚಾರಿತ್ರ್ಯಕ್ಕೆ...