Homeಅಂತರಾಷ್ಟ್ರೀಯಬಾಂಗ್ಲಾದಲ್ಲಿ ಮತ್ತೊಬ್ಬ ಹಿಂದೂ ವ್ಯಕ್ತಿಯ ಗುಂಪು ಹತ್ಯೆ : ಘಟನೆಗೆ ಕೋಮು ಆಯಾಮವಿಲ್ಲ ಎಂದ ಮಧ್ಯಂತರ...

ಬಾಂಗ್ಲಾದಲ್ಲಿ ಮತ್ತೊಬ್ಬ ಹಿಂದೂ ವ್ಯಕ್ತಿಯ ಗುಂಪು ಹತ್ಯೆ : ಘಟನೆಗೆ ಕೋಮು ಆಯಾಮವಿಲ್ಲ ಎಂದ ಮಧ್ಯಂತರ ಸರ್ಕಾರ

- Advertisement -
- Advertisement -

ಬಾಂಗ್ಲಾದೇಶದ ರಾಜ್‌ಬರಿ ಜಿಲ್ಲೆಯಲ್ಲಿ ಸುಲಿಗೆ ಯತ್ನದ ಆರೋಪದ ಮೇಲೆ ವ್ಯಕ್ತಿಯೊಬ್ಬರನ್ನು ಗುಂಪೊಂದು ಥಳಿಸಿ ಕೊಂದಿದೆ. ಇದು ಇತ್ತೀಚೆಗೆ ಹಿಂದೂ ವ್ಯಕ್ತಿಯನ್ನು ಗುಂಪು ಹತ್ಯೆ ನಡೆಸಿರುವ ಎರಡನೇ ಘಟನೆಯಾಗಿದೆ. ಆದರೆ, ಅಲ್ಲಿನ ಮಧ್ಯಂತರ ಸರ್ಕಾರ ಈ ಘಟನೆಗೆ ಯಾವುದೇ ಕೋಮು ಆಯಾಮವಿಲ್ಲ, ಇದು ಸಾಮಾನ್ಯ ಅಪರಾಧ ಸ್ವರೂಪದ ಘಟನೆ ಎಂದು ಹೇಳಿದೆ.

ದಿ ಡೈಲಿ ಸ್ಟಾರ್ ವರದಿಯ ಪ್ರಕಾರ, ಡಿಸೆಂಬರ್ 24 ರಂದು ರಾತ್ರಿ 11 ಗಂಟೆ ಸುಮಾರಿಗೆ ರಾಜ್‌ಬರಿಯ ಪಂಗ್ಶಾ ಉಪಜಿಲ್ಲಾದ ಪಂಗ್ಶಾ ಪೊಲೀಸ್ ಠಾಣೆ ವ್ಯಾಪ್ತಿಯ ಹೊಸೆಂದಂಗಾ ಗ್ರಾಮದಲ್ಲಿ ‘ಸಾಮ್ರಾಟ್’ ಎಂದೂ ಕರೆಯಲ್ಪಡುವ ಅಮೃತ್ ಮೊಂಡಲ್ ಎಂಬ ವ್ಯಕ್ತಿಯನ್ನು ಸ್ಥಳೀಯರು ಥಳಿಸಿದ್ದಾರೆ. ಸುಲಿಗೆ ಹಣವನ್ನು ಸಂಗ್ರಹಿಸಲು ಮೊಂಡಲ್ ಈ ಪ್ರದೇಶಕ್ಕೆ ಹೋಗಿದ್ದರು ಎಂಬ ಆರೋಪದ ನಂತರ ಹಿಂಸಾಚಾರ ನಡೆಯಿತು ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆಯ ಮಾಹಿತಿ ಪಡೆದ ನಂತರ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಗಂಭೀರ ಸ್ಥಿತಿಯಲ್ಲಿದ್ದ ಮೊಂಡಲ್ ಅವರನ್ನು ರಕ್ಷಿಸಿದರು. ಅವರನ್ನು ಪಂಗ್ಶಾ ಉಪಜಿಲ್ಲಾ ಆರೋಗ್ಯ ಸಂಕೀರ್ಣಕ್ಕೆ ಕರೆದೊಯ್ಯಲಾಯಿತು, ಅಲ್ಲಿ ವೈದ್ಯರು ಅವರು ಮೃತಪಟ್ಟಿದ್ದಾರೆ ಎಂದು ಘೋಷಿಸಿದರು ಎಂದು ಸಹಾಯಕ ಪೊಲೀಸ್ ವರಿಷ್ಠಾಧಿಕಾರಿ ದೇಬ್ರತಾ ಸರ್ಕಾರ್ ಸುದ್ದಿಗಾರರಿಗೆ ಮಾಹಿತಿ ನೀಡಿದ್ದಾರೆ.

ಪೊಲೀಸರು ಮೊಂಡಲ್ ಅವರ ಸಹಚರರಲ್ಲಿ ಒಬ್ಬರಾದ ಮೊಹಮ್ಮದ್ ಸೆಲೀಮ್ ಅವರನ್ನು ಸ್ಥಳದಿಂದ ಬಂಧಿಸಿದ್ದಾರೆ ಮತ್ತು ಪಿಸ್ತೂಲ್, ಪೈಪ್ ಗನ್ ಸೇರಿದಂತೆ ಎರಡು ಬಂದೂಕುಗಳನ್ನು ವಶಪಡಿಸಿಕೊಂಡಿದ್ದಾರೆ. ಮೊಂಡಲ್ ವಿರುದ್ಧ ಪಂಗ್ಶಾ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ಸೇರಿದಂತೆ ಕನಿಷ್ಠ ಎರಡು ಪ್ರಕರಣಗಳು ದಾಖಲಾಗಿವೆ ಮತ್ತು 2023 ರಲ್ಲಿ ದಾಖಲಾದ ಹಲವಾರು ಸುಲಿಗೆ ಸಂಬಂಧಿತ ಪ್ರಕರಣಗಳಲ್ಲಿ ಆರೋಪಿಯಾಗಿದ್ದ ಎಂದು ಸರ್ಕಾರ್ ಹೇಳಿದ್ದಾರೆ.

ಸ್ಥಳೀಯ ನಿವಾಸಿಗಳು ದಿ ಡೈಲಿ ಸ್ಟಾರ್‌ಗೆ ನೀಡಿದ ಮಾಹಿತಿಯ ಪ್ರಕಾರ, ಮೊಂಡಲ್ ಸುಲಿಗೆ ಮತ್ತು ಇತರ ಅಪರಾಧ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದಾನೆ ಮತ್ತು ಇತ್ತೀಚೆಗೆ ಭಾರತದಿಂದ ಹಿಂದಿರುಗಿದ್ದ. ಬಳಿಕ ಸ್ವಲ್ಪ ಸಮಯ ಸುಮ್ಮನಿದ್ದ. ಹತ್ಯೆಯಾದ ರಾತ್ರಿ, ಆತ ಮತ್ತು ಆತನ ಹಲವಾರು ಸಹಚರರು ಹಣ ಸಂಗ್ರಹಿಸಲು ಗ್ರಾಮಸ್ಥರ ಮನೆಗೆ ಹೋಗಿದ್ದರು ಎನ್ನಲಾಗಿದೆ. ನಿವಾಸಿಗಳು ಎಚ್ಚರಿಕೆ ನೀಡಿದಾಗ, ಸ್ಥಳೀಯರು ಒಟ್ಟುಗೂಡಿ ಆತನ ಮೇಲೆ ಹಲ್ಲೆ ನಡೆಸಿದ್ದಾರೆ. ಆತನ ಗುಂಪಿನ ಇತರರು ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

ಗುರುವಾರ (ಡಿಸೆಂಬರ್ 25) ಬಿಡುಗಡೆ ಮಾಡಿದ ಹೇಳಿಕೆಯಲ್ಲಿ, ಬಾಂಗ್ಲಾದೇಶದ ಮಧ್ಯಂತರ ಸರ್ಕಾರವು ಹತ್ಯೆಯನ್ನು ಖಂಡಿಸಿದೆ. ಆದರೆ, ಸಾರ್ವಜನಿಕರು ಮತ್ತು ಅಂತಾರಾಷ್ಟ್ರೀಯ ವೀಕ್ಷಕರು ಈ ಘಟನೆಯನ್ನು ಧಾರ್ಮಿಕ ದೃಷ್ಟಿಕೋನದಿಂದ ನೋಡಿದ್ದಾರೆ.

“ಪೊಲೀಸರ ಮಾಹಿತಿ ಮತ್ತು ಪ್ರಾಥಮಿಕ ತನಿಖೆಯ ಆಧಾರದ ಮೇಲೆ, ಈ ಘಟನೆಯು ಯಾವುದೇ ರೀತಿಯಲ್ಲಿ ಕೋಮು ದಾಳಿಯಲ್ಲ ಎಂಬುದು ಸ್ಪಷ್ಟವಾಗಿದೆ. ಇದು ಸುಲಿಗೆ ಮತ್ತು ಅಪರಾಧ ಚಟುವಟಿಕೆಗಳ ಹಿನ್ನೆಲೆ ನಡೆದಿದೆ” ಎಂದು ಸರ್ಕಾರ ಹೇಳಿಕೆಯಲ್ಲಿ ತಿಳಿಸಿದೆ.

ಮೊಂಡಲ್‌ ಹಲವಾರು ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದ. ಆತನ ವಿರುದ್ದ 2023ರಿಂದ ಹಲವಾರು ವಾರೆಂಟ್‌ಗಳನ್ನು ಹೊರಡಿಸಲಾಗಿದೆ. ಕೆಲವು ಗುಂಪುಗಳು ಮೃತನ ಧಾರ್ಮಿಕ ಗುರುತನ್ನು ಮುಂದಿಟ್ಟುಕೊಂಡು ಈ ಘಟನೆಯನ್ನು ಕೋಮು ದಾಳಿ ಎಂದು ಬಿಂಬಿಸಲು ಪ್ರಯತ್ನಿಸುತ್ತಿವೆ ಎಂದು ಕಳವಳ ವ್ಯಕ್ತಪಡಿಸಿದೆ. ಅಂತಹ ಪ್ರಯತ್ನವು ಸಂಪೂರ್ಣ ಆಧಾರರಹಿತ ಮತ್ತು ದುರುದ್ದೇಶಪೂರಿತ ಎಂದು ಹೇಳಿದೆ.

ಗುಂಪು ಹಿಂಸಾಚಾರದಲ್ಲಿ ಭಾಗಿಯಾಗಿರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿ ಸರ್ಕಾರ ಭರವಸೆ ನೀಡಿದೆ. ಯಾವುದೇ ರೀತಿಯ ಕಾನೂನುಬಾಹಿರ ಚಟುವಟಿಕೆ ಅಥವಾ ಗುಂಪು ಹಿಂಸಾಚಾರವನ್ನು ಬೆಂಬಲಿಸುವುದಿಲ್ಲ ಎಂದು ಪುನರುಚ್ಚರಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...